ಯುವ ವಿಭಾಗದಿಂದ ಒಳಾಂಗಣ ಕ್ರೀಡಾ ಸ್ಪರ್ಧೆ
Team Udayavani, Jan 12, 2022, 9:19 AM IST
ಡೊಂಬಿವಲಿ: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಡೊಂಬಿವಲಿ ವತಿಯಿಂದ ಒಳಾಂಗಣ ಕ್ರೀಡಾಕೂಟವು ಸ್ಥಳೀಯ ಕಚೇರಿಯ ಸಭಾಂಗಣದಲ್ಲಿ ಜ. 2ರಂದು ವೈವಿಧ್ಯಮಯ ಕ್ರೀಡಾ ಸ್ಪರ್ಧೆಗಳೊಂದಿಗೆ ಜರಗಿತು.
ಪೂರ್ವಾಹ್ನ 9.30ರಿಂದ ಅಪರಾಹ್ನ 2ರ ವರೆಗೆ ಡೊಂಬಿವಲಿ ಸ್ಥಳೀಯ ಸಮಿತಿಯ ಯುವ ವಿಭಾಗದ ವತಿಯಿಂದ ನಡೆದ ಈ ಒಳಾಂಗಣ ಕ್ರೀಡಾ ಸ್ಪರ್ಧೆಯಲ್ಲಿ ಕೇರಂ, ಚೆಸ್ ಮತ್ತು ಚಿತ್ರಕಲೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಪ್ರಾರಂಭದಲ್ಲಿ ಪುರೋಹಿತ ಐತಪ್ಪ ಸುವರ್ಣ ಅವರು ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶಾರದಾ ದೇವಿಯ ಭಾವಚಿತ್ರವನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಿ ಪೂಜಾ ವಿಧಿವಿಧಾನಗಳನ್ನು ಪೂರೈಸಿದರು.
ಒಳಾಂಗಣ ಕ್ರೀಡಾಕೂಟವನ್ನು ಗೌರವ ಕಾರ್ಯಾಧ್ಯಕ್ಷ ದೇವರಾಜ್ ಪೂಜಾರಿ, ಮಾಜಿ ಕಾರ್ಯಾಧ್ಯಕ್ಷ ರವಿ ಸನಿಲ್, ಉಪಾಧ್ಯಕ್ಷ ಶ್ರೀಧರ್ ಅಮೀನ್ ಹಾಗೂ ಪುರಂದರ ಪೂಜಾರಿ, ಗೌರವ ಕಾರ್ಯದರ್ಶಿ ಸಚಿನ್ ಪೂಜಾರಿ, ಗೌರವ ಕೋಶಾಧಿಕಾರಿ ಆನಂದ್ ಪೂಜಾರಿ ಅವರು ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.
ಸುಮಾರು 50ಕ್ಕೂ ಹೆಚ್ಚಿನ ಸ್ಪರ್ಧಾಳು ಗಳು ಭಾಗವಹಿ ಸುವುದರ ಜತೆಗೆ ಬಿಲ್ಲವ ಸಮಾಜದ ಹೆಚ್ಚಿನ ಸದ್ಯಸರು ಭಾಗವಹಿಸಿ ಕ್ರೀಡಾಕೂಟದ ಯಶಸ್ಸಿಗೆ ಸಹಕರಿಸಿದರು. ಕ್ರೀಡಾಕೂಟದ ಆಯೋಜನೆಯ ಸಂಪೂರ್ಣ ಮುಂದಾ ಳತ್ವವನ್ನು ರವಿ ಸನಿಲ್ ವಹಿಸಿಕೊಂಡಿದ್ದರು. ಯುವ ವಿಭಾಗದ ಮತ್ತು ಕಾರ್ಯಕಾರಿ ಸಮಿತಿಯ ಸಹಕಾರದೊಂದಿಗೆ ಕ್ರೀಡಾ ಸ್ಪರ್ಧೆಗಳು ಯಶಸ್ವಿಯಾಗಿ ನಡೆದವು.
ಚಿತ್ರಕಲೆ ಸ್ಪರ್ಧೆಯ ತೀರ್ಪುಗಾರರಾಗಿ ಜಯ ಸಾಲ್ಯಾನ್ ಮತ್ತು ಕೇರಂ ಸ್ಪರ್ಧೆಯ ತೀರ್ಪುಗಾರರಾಗಿ ಕೆ. ಜಿ. ಸಾಲ್ಯಾನ್ ಸಹಕರಿಸಿದರು. ಸ್ಥಳೀಯ ಕಚೇರಿಯ ಕಾರ್ಯಾಧ್ಯಕ್ಷ ಚಂದ್ರಹಾಸ್ ಪಾಲನ್ ಅವರು ಬೆಳಗ್ಗಿನ ಉಪಾಹಾರ ಮತ್ತು ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿ ಸಹಕರಿಸಿದರು.
ಕಾರ್ಯಕ್ರಮದಲ್ಲಿ ಕಲ್ಯಾಣ್ ಸ್ಥಳೀಯ ಕಚೇರಿಯ ಗೌರವ ಕಾರ್ಯದರ್ಶಿ ನಂದೀಶ್ ಪೂಜಾರಿ ಹಾಗೂ ಕೇಂದ್ರ ಕಾರ್ಯಾಲಯದ ಜತೆ ಕೋಶಾಧಿಕಾರಿ ಶರತ್ ಜಿ. ಪೂಜಾರಿ ಉಪಸ್ಥಿತರಿದ್ದರು.
ಕ್ರೀಡಾಕೂಟದ ಕೊನೆಯಲ್ಲಿ ಚಿತ್ರಕಲೆ ಸ್ಪರ್ಧೆಯ ತೀರ್ಪುಗಾರರಾಗಿ ಸಹಕರಿಸಿದ ಜಯ ಸಾಲ್ಯಾನ್ ಅವರನ್ನು ಸ್ಥಳೀಯ ಕಚೇರಿಯ ಗೌರವ ಕಾರ್ಯಾಧ್ಯಕ್ಷ ದೇವರಾಜ್ ಪೂಜಾರಿ ಗೌರವಿಸಿದರು. ಕ್ರೀಡಾಕೂಟದ ಮುಂದಾಳತ್ವವನ್ನು ವಹಿಸಿ ಉತ್ತಮ ರೀತಿಯಲ್ಲಿ ನೆರವೇರಿಸಿದ ರವಿ ಸನಿಲ್ ಅವರನ್ನು ಸ್ಥಳೀಯ ಕಚೇರಿಯ ಉಪಾಧ್ಯಕ್ಷ ಪುರಂದರ ಪೂಜಾರಿ ಗೌರವಿಸಿದರು.
ಕಲ್ಯಾಣ್ ಸ್ಥಳೀಯ ಕಚೇರಿಯ ಗೌರವ ಕಾರ್ಯದರ್ಶಿ ನಂದೀಶ್ ಪೂಜಾರಿ ಅವರನ್ನು ಸ್ಥಳೀಯ ಕಚೇರಿಯ ಕಾರ್ಯದರ್ಶಿ ಸಚಿನ್ ಪೂಜಾರಿ ಮತ್ತು ಕೆ. ಜಿ. ಸಾಲ್ಯಾನ್ ಅವರನ್ನು ಕೋಶಾಧಿಕಾರಿ ಆನಂದ್ ಪೂಜಾರಿ ಗೌರವಿಸಿದರು. ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಸದಸ್ಯೆಯರು, ಯುವ ವಿಭಾಗದ ಸದಸ್ಯರು ಕಾರ್ಯ ಕ್ರಮದ ಯಶಸ್ಸಿಗೆ ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ