ಡಾ| ವಿಜಯ ಎಂ. ಶೆಟ್ಟಿಯವರ ವೈದ್ಯಕೀಯ ಸೇವೆ ಮಾದರಿ: ಚವಾಣ್‌

ಸಿಟಿ ಹಾಸ್ಪಿಟಲ್‌ ಮತ್ತು ಪಾಲಿ ಕ್ಲಿನಿಕ್‌ನಿಂದ ಕೃತಕ ಮಂಡಿ ಜೋಡಣೆಯ ಬಗ್ಗೆ ಮಾಹಿತಿ ಶಿಬಿರ

Team Udayavani, Apr 4, 2019, 12:28 PM IST

0204mum01

ಡೊಂಬಿವಲಿ: ವೈದ್ಯೋ ನಾರಾಯಣ ಹರಿ ಎಂಬಂತೆ ರೋಗಿಗಳು ವೈದ್ಯರನ್ನು ದೇವರಂತೆ ಕಾಣುತ್ತಾರೆ. ಇಂತಹ ಓರ್ವ ದೇವರು ಡೊಂಬಿವಲಿಕರ್‌ ಎನ್ನಲು ನನಗೆ ಹೆಮ್ಮೆ ಯಾಗುತ್ತಿದೆ. ನಾನು ರಾಜ್ಯದ ಮಂತ್ರಿಯಾಗಿ ಮಹಾರಾಷ್ಟ್ರ ಸರಕಾರದಲ್ಲಿ ಸೇವೆ ಸಲ್ಲಿಸುತ್ತಿದ್ದು, ನನ್ನ ವಿಭಾಗದಲ್ಲಿ ಸುಮಾರು 14 ಮೆಡಿಕಲ್‌ ಕಾಲೇಜುಗಳಿದ್ದು, ಅಲ್ಲಿ 4500 ವೈದ್ಯರಿದ್ದಾರೆ. ಒಂದು ಕಾಲದಲ್ಲಿ ವೈದ್ಯಕೀಯ ಪದವಿ ಮಾಡಲು ಸುಮಾರು ಒಂದು ಕೋ. ರೂ. ವೆಚ್ಚ ತಗಲುತ್ತಿತ್ತು. ಸರಕಾರದ ಹೊಸ ನೀತಿ ಯಿಂದಾಗಿ ನೀಟ್‌ ಪರೀಕ್ಷೆಯಲ್ಲಿ ಪಾಸಾದವರು ವೈದ್ಯರಾಗಬಹುದು. ಇದರಿಂದಾಗಿ ಸಾಮಾನ್ಯ ವಿದ್ಯಾರ್ಥಿಯ ಕನಸು ನನಸಾಗುತ್ತಿದೆ. ಹೃದಯ
ರೋಗಿಗಳಿಗೆ ಉಪಯೋಗಿಸುವ ಉಪಕರಣ ಒಂದು ಲಕ್ಷದವರೆಗೆ ಇತ್ತು. ಆದರೆ ಈಗ 18 ಸಾವಿರ ರೂ. ಗಳಿಗೆ ಲಭ್ಯವಿದೆ. ಮಂಡಿ ಚಿಕಿತ್ಸೆಗೆ ಸುಮಾರು 4 ಲಕ್ಷ ರೂ. ವೆಚ್ಚ ತಗುಲಲಿದ್ದು, ಇಂದು ಡಾ| ವಿ. ಎಂ. ಶೆಟ್ಟಿ ಅವರ ಸಮಾಜ ಸೇವೆಯಿಂದಾಗಿ 99,000 ರೂ. ಗಳಿಗೆ ಲಭ್ಯ ವಾಗಿದ್ದು. ಗ್ರಾಮೀಣ ಭಾಗದ ಜನರಿಗೆ ಉತ್ತಮ ವೈದ್ಯಕೀಯ ಸೇವೆ ಸಿಗಬೇಕೆಂಬ ಉದ್ದೇಶವನ್ನು ಸರಕಾರ ಹೊಂದಿದೆ ಎಂದು ರಾಜ್ಯ ಆರೋಗ್ಯ ಸಚಿವ ರವೀಂದ್ರ ಚವಾಣ್‌ ನುಡಿದರು.

ಮಾ. 31ರಂದು ಡೊಂಬಿವಲಿ ಪೂರ್ವದ ಠಾಕೂರ್‌ ಸಭಾಗೃಹದಲ್ಲಿ ಸಿಟಿ ಆಸ್ಪತ್ರೆಯ ಡಾ| ವಿಜಯ ಎಂ. ಶೆಟ್ಟಿ ಅವರ ವೈದ್ಯಕೀಯ ಸೇವೆಯ 20ನೇ ವರ್ಷಾಚರಣೆಯ ಅಂಗವಾಗಿ ನಡೆದ ಕೃತಕ ಮಂಡಿ ಜೋಡಣೆ ಮಾಹಿತಿ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದು ಮಾತನಾಡಿದ ಅವರು, ಪ್ರಧಾನಮಂತ್ರಿ ಆಯುಷ್ಮಾನ್‌ ಯೋಜನೆಯಡಿ ಆರ್ಥಿಕವಾಗಿ ಹಿಂದುಳಿದವರಿಗೆ ಶಸ್ತ್ರ ಚಿಕಿತ್ಸೆಗಳು ಉಚಿತವಾಗಿ ಜರಗಲಿದೆ. ಡಾ| ವಿ. ಎಂ. ಶೆಟ್ಟಿ ಅವರಂತೆ ವೈದ್ಯಕೀಯ ರಂಗದ ಸಮಾಜ ಸೇವೆ ಇತರ ವೈದ್ಯರಿಗೆ ಮಾದರಿಯಾಗಲಿ ಎಂದು ಅಭಿಪ್ರಾಯಿಸಿದರು.

ಅತಿಥಿಯಾಗಿ ಆಗಮಿಸಿದ ಡಾ| ರಾಮ್‌ ಪ್ರಭು ಮಾತನಾಡಿ, ಡಾ| ವಿ. ಎಂ. ಶೆಟ್ಟಿ ಅವರು ತನ್ನ ನಗುವಿನಲ್ಲೇ ರೋಗಿಗಳ ಸಮಸ್ಯೆಯನ್ನು ದೂರ ಮಾಡುತ್ತಾರೆ. ಹಿರಿಯ ನಾಗರಿಕರ ಸಮಸ್ಯೆಯನ್ನು ಮನಗಂಡು 99 ಸಾವಿರ ರೂ. ಗಳಲ್ಲಿ ಒಂದು ಕಾಲಿನ ಮಂಡಿ ಶಸ್ತ್ರ ಚಿಕಿತ್ಸೆಯನ್ನು ಮಾಡುವ ಮೂಲಕ ವೈದ್ಯಕೀಯ ರಂಗದಲ್ಲಿ ಕ್ರಾಂತಿಯನ್ನು ತಂದಿದ್ದಾರೆ.

ಡೊಂಬಿವಲಿ ಸಿಟಿ ಆಸ್ಪತ್ರೆಯಲ್ಲಿ ಉತ್ತಮ ಗುಣ ಮಟ್ಟದ ಸಲಕರಣೆಯೊಂದಿಗೆ ಸೇವೆ ಸಿಗುವಾಗ ಮುಂಬಯಿ ಮಹಾನಗರಕ್ಕೆ ಯಾರು ಹೋಗು ತ್ತಾರೆ. ನಿಮ್ಮ ಯೋಜನೆ ಒಂದು ಸಾವಿರ ಗಡಿಯನ್ನು ದಾಟಲಿ ಎಂದು ಹಾರೈಸಿದರು.

ಇನ್ನೋರ್ವ ಅತಿಥಿ ಡಾ| ಸುರೇಶ್‌ ಶೆಟ್ಟಿ ಅವರು ಮಾತನಾಡಿ, ಡಾ| ವಿಜಯ ಶೆಟ್ಟಿ ಅವರು ಕಠಿನ ಪರಿಶ್ರಮದ ಮೂಲಕ ಉತ್ತಮ ಗುಣಮಟ್ಟದ ಸೇವೆಯಿಂದಾಗಿ ಉನ್ನತ ಮಟ್ಟಕ್ಕೆ ಬೆಳೆದಿದ್ದಾರೆ. ಕಳೆದ 20 ವರ್ಷಗಳಿಂದ ಡೊಂಬಿವಲಿ ಪರಿಸರದಲ್ಲಿ ಒಬ್ಬ ಉತ್ತಮ ಅಥೋìಪೆಡಿಕ್‌ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದಾರೆ. ಅವರಿಂದ ನಿಜವಾದ ಸಮಾಜ ಸೇವೆ ನಡೆಯುತ್ತಿದೆ ಎಂದು ನುಡಿದರು.

ಅತಿಥಿಯಾಗಿ ಪಾಲ್ಗೊಂಡ ಡಾ| ಅರುಣ್‌ ಪಾಟೀಲ್‌ ಅವರು, ಡಾ| ವಿ. ಎಂ. ಶೆಟ್ಟಿ ಅವರ ಯಶಸ್ಸಿನ ಹಿಂದೆ ಅವರ ಪತ್ನಿ ಹಾಗೂ ಆಸ್ಪತ್ರೆಯ ಸಿಬಂದಿಗಳ ಪಾಲು ಬಹಳಷ್ಟಿದೆ. ಇಂದು ಡೊಂಬಿವಲಿಕರ್‌ ಅವರು ಮಂಡಿ ನೋವಿನ ಬಗ್ಗೆ ಒಳ್ಳೆಯ ಉಪನ್ಯಾಸವನ್ನು ನೀಡಿದ್ದಾರೆ. ಇದರ ಪ್ರಯೋಜನವನ್ನು ಪ್ರತಿಯೊಬ್ಬರೂ ಪಡೆಯಬೇಕು. ಇಂತಹ ಸೇವೆ ರಾಜ್ಯದ ಆದಿವಾಸಿ ಕ್ಷೇತ್ರಗಳಲ್ಲಿ ಬಹಳಷ್ಟು ಅಗತ್ಯವಿದೆ. ಡೊಂಬಿವಲಿಯಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಡಾ| ವಿ. ಎಂ. ಶೆಟ್ಟಿ ಸಂತರಾಗಿ ಮೂಡಿಬರಲಿ ಎಂದರು.

ಅತಿಥಿಗಳಾಗಿ ಆಗಮಿಸಿದ ವಿಶ್ವ ಬಂಟರಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಮಾತನಾಡಿ, ಆರ್ಥಿಕವಾಗಿ ಹಿಂದುಳಿದ ವರಿಗೆ ಮಂಡಿ ನೋವಿನ ಸಮಸ್ಯೆಯನ್ನು ಮನಗಂಡ ಡಾ| ವಿ. ಎಂ. ಶೆಟ್ಟಿ ಅವರು ಕಡಿಮೆ ವೆಚ್ಚದಲ್ಲಿ ಶಸ್ತ್ರಚಿಕಿತ್ಸೆಯನ್ನು ಮಾಡಿ ನೋವು ನಿವಾರಿಸುವ ಕಾರ್ಯಕ್ಕೆ ಮುಂದಾಗಿರುವುದು ಅಭಿನಂದನೀಯವಾಗಿದೆ ಎಂದು ನುಡಿದು ಶುಭ ಹಾರೈಸಿದರು.

ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಇವರು ಮಾತನಾಡಿ, ಉತ್ತಮ ಗುಣಮಟ್ಟದ ಸಲಕರಣೆಯೊಂದಿಗೆ ಗುಣಮಟ್ಟದ ಸೇವೆ ನೀಡುತ್ತಿರುವ ಡಾ| ವಿ. ಎಂ. ಶೆಟ್ಟಿ ಅವರು ಅಭಿನಂದನಾರ್ಹರು. ಬಂಟರ ಸಂಘ ಈ ಸೇವೆಗೆ ಸಹಕರಿಸಲಿದೆ. ಬಂಟರ ಸಂಘ ಪ್ರತಿ ತಿಂಗಳು 3 ಲಕ್ಷ ರೂ.ಗಳನ್ನು ಆರೋಗ್ಯ ಸಂಬಂಧಿ ಚಿಕಿತ್ಸೆೆಗಳಿಗೆ ವಿತರಿಸುತ್ತಿದೆ. ಪ್ರತೀ ವರ್ಷದ ಸುಮಾರು 5 ಕೋ. ರೂ. ಸಮಾಜ ಕಲ್ಯಾಣಕ್ಕಾಗಿ ವಿತರಿಸುತ್ತಿರುವುದು ಅಭಿಮಾನದ ಸಂಗತಿಯಾಗಿದೆ ಎಂದರು.

ಕರ್ನಾಟಕ ಸಂಘ ಡೊಂಬಿವಲಿ ಅಧ್ಯಕ್ಷ ಇಂದ್ರಾಳಿ ದಿವಾಕರ ಶೆಟ್ಟಿ ಮಾತನಾಡಿ, ಡಾ| ವಿ. ಎಂ. ಶೆಟ್ಟಿ ಅವರು ಕೇವಲ ವೈದ್ಯರಾಗಿರದೆ ಓರ್ವ ಸಮಾಜ ಸೇವಕರಾಗಿದ್ದಾರೆ. ಕಳೆದ 20 ವರ್ಷಗಳಿಂದ ಕಷ್ಟಪಟ್ಟು ಪ್ರಾಮಾಣಿಕ ಸೇವೆಯಿಂದಾಗಿ ತನ್ನನ್ನು ತಾನು ಗುರುತಿಸಿ ಕೊಂಡು ಡೊಂಬಿವಲಿಯಲ್ಲಿ ಓರ್ವ ಉತ್ತಮ ವೈದ್ಯರಾಗಿ ಪ್ರಸಿದ್ಧರಾಗಿದ್ದಾರೆ ಎಂದರು.

ಬಂಟರ ಸಂಘ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ ಮಾತನಾಡಿ, ವೈದ್ಯರು ದೇವರ ಪ್ರತಿರೂಪ. ಡಾ| ವಿ. ಎಂ. ಶೆಟ್ಟಿ ಆರ್ಥಿಕ ವಾಗಿ ಹಿಂದುಳಿದ ಹಿರಿಯರ ಕಣ್ಣೀರೊರೆಸುವ ದೇವತಾ ಕಾರ್ಯವನ್ನು ಮಾಡುತ್ತಿದ್ದಾರೆ ಎಂದರು.

ಅತಿಥಿಯಾಗಿ ಪಾಲ್ಗೊಂಡ ಉಮೇಶ್‌ ಶೆಣೈ ಅವರು ಮಾತನಾಡಿ, ಹಿರಿಯರ ಮಂಡಿ ನೋವಿನ ಸಮಸ್ಯೆಗೆ ಡಾ| ವಿ. ಎಂ. ಶೆಟ್ಟಿ ಅವರಿಂದ ನಗೆಯ ಪರಿಹಾರ ಅಭಿನಂದನೀಯವಾಗಿದೆ ಎಂದರು. ನಗರ ಸೇವಕ ದಯಾಶಂಕರ್‌ ಶೆಟ್ಟಿ ಅವರು ಮಾತನಾಡಿ, ಡಾ| ಶೆಟ್ಟಿ ಅವರು ಡೊಂಬಿವಲಿ ಪರಿಸರದಲ್ಲಿ ವೈದ್ಯಕೀಯ ಸೇವೆಯನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದಾರೆ ಎಂದು ನುಡಿದು ಶುಭ ಹಾರೈಸಿದರು.

ಡಾ| ಯೋಗಿನಿ ಶೆಟ್ಟಿ, ಸುನಂದಾ ಶೆಟ್ಟಿ ಪ್ರಾರ್ಥನೆಗೈದರು. ಗಣ್ಯರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವೇದಿಕೆಯಲ್ಲಿ ಡಾ| ರಾಮ ಪ್ರಭು, ಡಾ| ಸುರೇಶ್‌ ಶೆಟ್ಟಿ, ಡಾ| ಅರುಣ್‌ ಪಾಟೀಲ್‌, ಸಚಿವ ರವೀಂದ್ರ ಚವಾಣ್‌, ಐಕಳ ಹರೀಶ್‌ ಶೆಟ್ಟಿ, ಪದ್ಮನಾಭ ಪಯ್ಯಡೆ, ಭಾಸ್ಕರ ಶೆಟ್ಟಿ ಗುರುದೇವ್‌, ದಿವಾಕರ ಶೆಟ್ಟಿ ಇಂದ್ರಾಳಿ, ಸುಕುಮಾರ್‌ ಶೆಟ್ಟಿ, ಕಲ್ಲಡ್ಕ ಕರುಣಾಕರ್‌ ಶೆಟ್ಟಿ, ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಉಮೇಶ್‌ ಪೈ, ಪ್ರಜ್ಞಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಕಳೆದ ಇಪ್ಪತ್ತು ವರ್ಷಗಳ ಹಿಂದೆ ಹೊಸ ಭಾಷೆ, ವಿಭಿನ್ನ ಜನರ ನಡುವೆ ಹೊಸ ಸಂಸ್ಕೃತಿಯೊಂದಿಗೆ ವೈದ್ಯಕೀಯ ರಂಗವನ್ನು ಪ್ರಾರಂಭಿಸಿ ನಿಮ್ಮೆಲ್ಲರ ಪ್ರೀತಿ, ವಿಶ್ವಾಸದಿಂದ ಯಶಸ್ಸನ್ನು ಕಂಡಿದ್ದೇನೆ. ಹಲವಾರು ಏರುಪೇರು ಈ ವೈದ್ಯಕೀಯ ರಂಗದಲ್ಲಿ ಕಂಡಿದ್ದೇನೆ. ಡಾ| ಸುರೇಶ್‌ ಶೆಟ್ಟಿ ಅವರ ಸಹಕಾರ ಎಂದೆಂದಿಗೂ ಮರೆಯುವಂತಿಲ್ಲ. ಕಳೆದ 12 ವರ್ಷಗಳಿಂದ ಹಲವಾರು ಶಸ್ತ್ರಚಿಕಿತ್ಸೆಗಳನ್ನು ಮಾಡಿ ರೋಗಿಗಳ ಮುಖದಲ್ಲಿ ನಗುವನ್ನು ಕಂಡಿದ್ದೇನೆ. ಆಸ್ಪತ್ರೆಯ 20 ವರ್ಷದ ಸವಿನೆನಪಿಗಾಗಿ ಈ ಹೊಸ ಯೋಜನೆಯನ್ನು ಜಾರಿಗೆ ತಂದಿದ್ದೇನೆ. ಸುಮಾರು 2 ಲಕ್ಷ ದಿಂದ 4 ಲಕ್ಷ ರೂ. ಗಳ ವರೆಗೆ ತಗಲುತ್ತಿದ್ದ ವೆಚ್ಚವನ್ನು ಕಡಿಮೆ ಮಾಡಿ ಉತ್ತಮ ಗುಣಮಟ್ಟದ ಉಪಕರಣದೊಂದಿಗೆ ನನ್ನ ಹಾಗೂ ಇತರರ ವೆಚ್ಚವನ್ನು ಕಡಿಮೆ ಮಾಡಿ ಕೇವಲ 99 ಸಾವಿರ ರೂ. ಗಳಲ್ಲಿ ಈ ಶಸ್ತ್ರಚಿಕಿತ್ಸೆಯನ್ನು ಮಾಡಲು ನಾವು ಸದಾ ತಯಾರಿದ್ದೇವೆ. 60 ವರ್ಷಗಳ ಅನಂತರ ಕಾಲಿನ ಮೇಲೆ ಹೆಚ್ಚಿನ ಭಾರ ಬಿದ್ದು ಸಂಧಿಗಳು ಸವೆದು ಮಂಡಿನೋವಿನ ಸಮಸ್ಯೆ ಕಾಡುತ್ತದೆ. ಇದರ ನೋವು ಸಹಿಸಲು ಆಗುವುದಿಲ್ಲ. ಹಣದ ಕೊರತೆಯಿಂದಾಗಿ ಹೆಚ್ಚಿನವರು ಈ ಶಸ್ತ್ರ ಚಿಕಿತ್ಸೆಯನ್ನು ಮಾಡುವುದಿಲ್ಲ. ಇದನ್ನು ಮನಗಂಡು ನಾನು ಕರ್ಮಭೂಮಿಯಲ್ಲಿ ಈ ತರಹದ ಸಮಾಜ ಸೇವೆಗೆ ನಾಂದಿ ಹಾಡಿದ್ದೇನೆ. ನನಗೆ ಅಮಿತಾಭ್‌ ಬಚ್ಚನ್‌ ರೋಲ್‌ ಮಾಡೆಲ್‌ ಆಗಿದ್ದು, ನಿಮ್ಮೆಲ್ಲರ ಪ್ರೀತಿ, ವಿಶ್ವಾಸಕ್ಕೆ ಋಣಿಯಾಗಿದ್ದೇನೆ
– ಡಾ| ವಿಜಯ್‌ ಎಂ. ಶೆಟ್ಟಿ (ಸಿಟಿ ಹಾಸ್ಪಿಟಲ್‌ ಡೊಂಬಿವಲಿ ಪಶ್ಚಿಮ).

ಚಿತ್ರ-ವರದಿ: ಗುರುರಾಜ ಪೋತನೀಸ್‌

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.