ನೂತನ ಮುಖ್ಯಸ್ಥರಾಗಿ ಇಕ್ಬಾಲ್ ಸಿಂಗ್ ಚಹಲ್ ನೇಮಕ
Team Udayavani, May 10, 2020, 6:37 PM IST
ಮುಂಬಯಿ, ಮೇ 9: ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಬೃಹನ್ಮುಂ ಬಯಿ ಮಹಾನಗರ ಪಾಲಿಕೆಯ ಕಮಿಷನರ್ ಪ್ರವೀಣ್ ಪರದೇಶಿ ಮತ್ತು ಇತರ ಇಬ್ಬರು ಹೆಚ್ಚುವರಿ ಆಯುಕ್ತರನ್ನು ಶುಕ್ರವಾರ ವರ್ಗಾವಣೆ ಮಾಡಿದ್ದಾರೆ. ಮುಂಬಯಿ ಮಹಾನಗರ ಪಾಲಿಕೆಯ ನೂತನ ಮುಖ್ಯಸ್ಥರನ್ನಾಗಿ ಐ. ಎಸ್. ಚಹಲ್ ಅವರನ್ನು ನೇಮಿಸಲಾಗಿದೆ.
ರಾಜ್ಯ ಸರ್ಕಾರವು ಸಂಜೀವ್ ಜೈಸ್ವಾಲ್ ಮತ್ತು ಅಶ್ವಿನಿ ಭಿಡೆ ಅವರನ್ನು ಬಿಎಂಸಿಯ ಹೆಚ್ಚುವರಿ ಪುರಸಭೆ ಆಯುಕ್ತರನ್ನಾಗಿ ನೇಮಕ ಮಾಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಮೊದಲು ಚಹಲ್ ನಗರಾಭಿವೃದ್ಧಿ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ನಗರ ಅಭಿವೃದ್ಧಿ ಅಥವಾ ಗೃಹ ಇಲಾಖೆಯಲ್ಲಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಪರದೇಶಿ ಅವರನ್ನು ನೇಮಕ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಕೋವಿಡ್ -19 ಪ್ರಕರಣಗಳು ವಿಶೇಷವಾಗಿ ಮುಂಬಯಿಯಲ್ಲಿ ಶೀಘ್ರವಾಗಿ ಏರಿಕೆಯಾಗಿದ್ದು ಈ ಬಗ್ಗೆ ರಾಜ್ಯ ಸರ್ಕಾರ ಟೀಕೆಗಳನ್ನು ಎದುರಿಸುತ್ತಿದೆ. ಆರ್ಥಿಕ ರಾಜಧಾನಿಯಲ್ಲಿನ ಪರಿಸ್ಥಿತಿಯನ್ನು ನಿಯಂತ್ರಿಸಲು ಕೇಂದ್ರದ ಒತ್ತಡಕ್ಕೂ ಇದು ಒಳಗಾಯಿತು ಎನ್ನಲಾಗಿದೆ. ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಇತ್ತೀಚೆಗೆ ರಾಜ್ಯದಲ್ಲಿ ಸಕಾರಾತ್ಮಕ ಪ್ರಕರಣಗಳ ಬೆಳವಣಿಗೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು