ಐರೋಲಿಯ ಹೆಗ್ಗಡೆ ಭವನದಲ್ಲಿ ಕೃತಿ ಬಿಡುಗಡೆ,ಸಮ್ಮಾನ,ಯಕ್ಷಗಾನ 


Team Udayavani, Oct 2, 2018, 4:37 PM IST

0110mum16a.jpg

ನವಿಮುಂಬಯಿ: ಸುರೇಂದ್ರ ಕುಮಾರ್‌ ಹೆಗ್ಡೆ ಅವರ ಸಾಧನೆಗಳನ್ನು ಪಟ್ಟಿ ಮಾಡುವುದು ಬಹಳ ಕಷ್ಟ. ಅವರು ಕೈಯಾಡಿಸದ ಕ್ಷೇತ್ರವಿಲ್ಲ. ಅವರ ಸಾಧನೆಗಳನ್ನು ಗುರುತಿಸಿ ಶ್ರೀಧರ್‌ ಉಚ್ಚಿಲ್‌ ಬರೆದ ಅಪರೂಪದ  ಅಪರಂಜಿ ಕೃತಿಯನ್ನು ಮರು ಬಿಡುಗಡೆಗೊಳಿಸಲು ನನಗೆ ಸಂತೋಷವಾಗುತ್ತಿದೆ ಎಂದು ಹೆಗ್ಗಡೆ ಸೇವಾ ಸಂಘದ ಅಧ್ಯಕ್ಷ ವಿಜಯ ಬಿ. ಹೆಗ್ಡೆ ನುಡಿದರು.

ಸೆ. 30ರಂದು ಐರೋಲಿಯ ಹೆಗ್ಗಡೆ ಭವನ ದಲ್ಲಿ ಹೆಗ್ಗಡೆ ಸೇವಾ ಸಂಘ ಇದರ ಪದಾಧಿಕಾರಿಗಳ ಸಹಕಾರದೊಂದಿಗೆ ಸಂಘಟಕ ರವಿ ಎಸ್‌. ಹೆಗ್ಡೆ ಹೆರ್ಮುಂಡೆ ಇವರ ಸಂಯೋ ಜನೆಯಲ್ಲಿ ಜರಗಿದ ಅಪರೂಪದ ಅಪರಂಜಿ ಶ್ರೀ ಸುರೇಂದ್ರ ಕುಮಾರ್‌ ಹೆಗ್ಡೆ ಕೃತಿ ಬಿಡುಗಡೆ ಗೊಳಿಸಿ ಮಾತನಾಡಿದ ಅವರು, ಸುರೇಂದ್ರ ಕುಮಾರ್‌ ಹೆಗ್ಡೆ ಅವರು ಕೇವಲ ರಂಗಕಲಾವಿದ ಮಾತ್ರವಲ್ಲದೆ ಸಾಮಾಜಿಕ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿರುವುದು ಅಭಿನಂದನೀಯ. ಅವರ ಸಾಧನೆಗಳು ಮುಂದಿನ ಪೀಳಿಗೆಗೆ ಮಾದರಿ ಎಂದರು.

ವೇ|ಮೂ| ಕೆ.ಎಸ್‌. ತಂತ್ರಿ ಮಾತನಾಡಿ, ಸಾಧನೆ ಮಾಡಿದವರನ್ನು ಗುರುತಿಸುವುದು  ಕರ್ತವ್ಯ. ಅಂತಹ ಮಹಾನ್‌ ಸಾಧಕ ಸುರೇಂದ್ರ ಕುಮಾರ್‌ ಹೆಗ್ಡೆ ಅವರನ್ನು ಗುರುತಿಸಿ ಶ್ರೀಧರ್‌ ಉಚ್ಚಿಲ್‌ ಅವರು ಕೃತಿ ಪ್ರಕಟಿಸಿರುವುದು ಅಭಿ ನಂದನೀಯ ಎಂದರು.

ವಿಶೇಷ ಅತಿಥಿಯಾಗಿ ಪಾಲ್ಗೊಂಡ ಕನ್ನಡಿಗ ಕಲಾವಿದರ ಪರಿಷತ್ತು ಮಹಾರಾಷ್ಟ್ರ ಇದರ ಅಧ್ಯಕ್ಷ ಡಾ| ಸುರೇಂದ್ರ ಕುಮಾರ್‌ ಹೆಗ್ಡೆ ಮಾತನಾಡಿ, ನನ್ನ ಸಾಧನೆ ಗರುತಿಸಿ ಗೆಳೆಯ ಶ್ರೀಧರ ಉಚ್ಚಿಲ್‌ ಅವರು ಕೃತಿಯನ್ನು ಬರೆದು ಪ್ರಕಟಿಸಿರುವುದು ಅದು ಕೂಡಾ ಎರಡನೇ ಬಾರಿಗೆ ಮರು ಮುದ್ರಣಗೊಂಡಿರುವುದು ನಿಜವಾಗಿಯೂ ಹೆಮ್ಮೆ ಪಡುವ ವಿಷಯ. ಕೃತಿಯನ್ನು ರವಿ ಎಸ್‌. ಹೆಗ್ಡೆ ಅವರು  ಮರು ಲೋಕಾರ್ಪಣೆ ಗೊಳಿಸಿರುವುದಕ್ಕೆ ನಾನು ಕೃತಜ್ಞ. ಕೃತಿ ಪರಚಯಿಸಿದ ದಯಾ ಸಾಗರ್‌ ಚೌಟ, ಸಮಾಜ ಬಾಂಧವರಿಗೆ ಕೃತಜ್ಞತೆ ಎಂದರು. 

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಘೋಡ್‌ಬಂದರ್‌ ಕನ್ನಡ ಅಸೋಸಿಯೇಶನ್‌ ಗೌರವ ಪ್ರಧಾನ ಕಾರ್ಯದರ್ಶಿ ಹರೀಶ್‌ ಡಿ. ಸಾಲ್ಯಾನ್‌ ಅವರು ಮಾತನಾಡಿ, ಇಂತಹ ಉತ್ತಮ ಕಾರ್ಯಗಳಿಂದ ಕಲಾವಿದರಿಗೆ ಮತ್ತು ಸಮಾಜ ಸೇವಕರಿಗೆ ಪ್ರೇರಣೆ ದೊರೆಯುತ್ತದೆ ಎಂದು ಹೇಳಿದರು.ನವಿಮುಂಬಯಿ ಹೊಟೇಲ್‌ ಓನರ್ ಅಸೋಸಿಯೇಶನ್‌ ಉಪಾಧ್ಯಕ್ಷ ಜಯಪ್ರಕಾಶ್‌ ಆರ್‌. ಶೆಟ್ಟಿ, ಹೆಗ್ಗಡೆ ಸೇವಾ ಸಂಘ ಮುಂಬಯಿ ಉಪಾಧ್ಯಕ್ಷ ಸುರೇಶ್‌ ಎಸ್‌. ಹೆಗ್ಡೆ, ಬಂಟರ ಸಂಘ ನವಿಮುಂಬಯಿ ಪ್ರಾದೇಶಿಕ ಸಮಿತಿಯ ಉಪಾಧ್ಯಕ್ಷ ಹರೀಶ್‌ ಶೆಟ್ಟಿ ಪಡುಬಿದ್ರೆ, ಶ್ರೀ ಶನೀಶ್ವರ ಮಂದಿರ ನೆರೂಲ್‌ ಉಪಾಧ್ಯಕ್ಷ ಪ್ರಭಾಕರ ಹೆಗ್ಡೆ, ಉದ್ಯಮಿಗಳಾದ ಶ್ರೀನಾಥ್‌ ಶೆಟ್ಟಿ, ಜಗದೀಶ್‌ ಶೆಟ್ಟಿ ಮುಲ್ಕಿ, ರತ್ನಾಕರ ಶೆಟ್ಟಿ, ಸಂತೋಷ್‌ ಕುಮಾರ್‌ ಶೆಟ್ಟಿ, ರವಿ ಕೋಟ್ಯಾನ್‌ ಶುಭಹಾರೈಸಿದರು.

ಥಾಣೆ ಬಂಟ್ಸ್‌ ಅಸೋಸಿಯೇಶನ್‌ನ ಉಪಾಧ್ಯಕ್ಷ ವೇಣುಗೋಪಾಲ್‌ ಎಲ್‌. ಶೆಟ್ಟಿ ಅವರು ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸಮಾಜ ಸೇವಕ ಲಕ್ಷ್ಮಣ್‌ ಮಣಿಯಾಣಿ, ಯಕ್ಷಗಾನ ಕಲಾವಿದ ವಿಶ್ವನಾಥ ಆಚಾರ್ಯ ತೊಂಬಟ್ಟು, ಪತ್ರಕರ್ತ ಲೇಖಕ ಶ್ರೀಧರ ಉಚ್ಚಿಲ್‌ ಅವರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಯಿತು. ಕಾರ್ಯಕ್ರಮ ಸಂಯೋಜಕ ರವಿ ಎಸ್‌. ಹೆಗ್ಡೆ ಹೆರ್ಮುಂಡೆ ವಂದಿಸಿದರು. ಸಂಘಟಕ ಕರ್ನೂರು ಮೋಹನ್‌ ರೈ ಕಾರ್ಯಕ್ರಮ ನಿರ್ವಹಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಪೆರ್ಡೂರು ಮೇಳದ ಕಲಾವಿದರಿಂದ ಅಹಂ ಬ್ರಹ್ಮಾಸ್ಮಿ ಯಕ್ಷಗಾನ ಪ್ರದರ್ಶನಗೊಂಡಿತು. ತುಳು-ಕನ್ನಡಿಗರು, ಸಾಹಿತ್ಯಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. 

ಸುರೇಂದ್ರ ಕುಮಾರ್‌ ಹೆಗ್ಡೆ ಅವರ ಬಗ್ಗೆ ಬರೆಯಲು ಹೋದರೆ ಬಹುದೊಡ್ಡ ಗ್ರಂಥವನ್ನೇ ರಚಿಸಬಹುದು. ಅವರ ಬಗ್ಗೆ ಪಿಎಚ್‌ಡಿ ಮಾಡಬಹುದಾದಷ್ಟು ಸಂಗ್ರಹವಿದೆ. ಆದರೆ ನಾನು ನನ್ನ ಕೃತಿಯಲ್ಲಿ ಅವರ ಸ್ವಲ್ಪ ವಿಷಯಗಳನ್ನು ಮಾತ್ರ ಓದುಗರ ಮುಂದೆ ತೆರೆದಿಟ್ಟಿದ್ದೇನೆ. ಇದು ನನ್ನ ಮತ್ತು ಅವರ ಸ್ನೇಹ-ಪ್ರೀತಿಗೆ ನೀಡಿದ ಗೌರವವಾಗಿದೆ. ಕೃತಿಯನ್ನು ಎಲ್ಲರು ಓದಿ ಅವರ ಸಾಧನೆಗಳನ್ನು ತಿಳಿದುಕೊಳ್ಳುವುದು ಅನಿವಾರ್ಯವಾಗಿದೆ.
-ಶ್ರೀಧರ ಉಚ್ಚಿಲ್‌, ಕೃತಿಕಾರರು, ಪತ್ರಕರ್ತರು

ಸುರೇಂದ್ರ ಕುಮಾರ್‌ ಹೆಗ್ಡೆ ಅವರು ಸಾಧನೆ ಮಾಡದ ಕ್ಷೇತ್ರವಿಲ್ಲ. ಎಲ್ಲಾ ಕ್ಷೇತ್ರಗಳಲ್ಲೂ ಅವರು ತಮ್ಮ ಪ್ರತಿಭೆಯನ್ನು ತೋರಿಸಿದ ವ್ಯಕ್ತಿ. ಅವರ ಹಲವು ಸಾಧನೆಗಳನ್ನು  ಓದುಗರ ಮುಂದಿಟ್ಟು ಉಚ್ಚಿಲ್‌ ಅವರು ಹೃದಯ ಗೆದ್ದಿದ್ದಾರೆ. ಇದು ನಿಜವಾಗಿಯೂ ಒಂದು ಅಪರೂಪದ ಅಪರಂಜಿಯಾಗಿದೆ.  ಪ್ರತಿಯೊಬ್ಬರು ಓದಿ ಸಂಗ್ರಹಿಸಿಡತಕ್ಕ ಕೃತಿ ಇದಾಗಿದೆ.  ಸುರೇಂದ್ರ ಕುಮಾರ್‌ ಹೆಗ್ಡೆ ಅವರು ಸಂಘಟಕರಾಗಿ, ಸಾಹಿತಿಯಾಗಿ, ರಂಗಕರ್ಮಿಯಾಗಿ, ಯಶಸ್ವಿ ಉದ್ಯಮಿಯಾಗಿ ಬೆಳೆದಿದ್ದಾರೆ. ಅವರು ಇತರರಿಗೆ ಮಾದರಿ ವ್ಯಕ್ತಿಯಾಗಿದ್ದಾರೆ.
-ದಯಾ ಸಾಗರ್‌ ಚೌಟ, ಪತ್ರಕರ್ತರು

ಚಿತ್ರ-ವರದಿ: ಸುಭಾಶ್‌ ಶಿರಿಯಾ

ಟಾಪ್ ನ್ಯೂಸ್

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.