ಇದು ಬಾಂಧವ್ಯ ಬೆಸೆಯುವ ಕೂಟ; ಸ್ಪರ್ಧೆಯಲ್ಲ : ಪಯ್ಯಡೆ


Team Udayavani, Jan 11, 2020, 6:12 PM IST

Untitled-30

ಮುಂಬಯಿ, ಜ. 10: ಬಂಟರ ಸಂಘ ಮುಂಬಯಿ ಇದರ ಕ್ರೀಡಾ ಸಮಿತಿಯ ಆಶ್ರಯದಲ್ಲಿ ಫೆ. 2 ರಂದು ಕಾಂದಿವಲಿ ಪಶ್ಚಿಮದ ರಘುವೀರ್‌ ಮಾಲ್‌ ಸಮೀಪದ ಪೋಯಿಸರ್‌ ಜಿಮ್ಖಾನ, ನೇತಾಜಿ ಸುಭಾಶ್ಚಂದ್ರ ಭೋಸ್‌ ಕ್ರೀಡಾಂಗಣದಲ್ಲಿ ಜರಗಲಿರುವ ಸಂಘದ 33ನೇ ವಾರ್ಷಿಕ ಕ್ರೀಡಾಕೂಟ-2020 ಆಯೋಜನೆಯ ಬಗ್ಗೆ ವಿಶೇಷ ಸಭೆ ಜ. 8 ರಂದು ಬಂಟರ ಭವನದ ಕಾಶಿ ಸಿದ್ದು ಶೆಟ್ಟಿ ಸಭಾಗೃಹದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರ ಅಧ್ಯಕ್ಷತೆಯಲ್ಲಿ ಸಂಘದ ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ  ವಿಟಲ ಎಸ್‌. ಆಳ್ವ ಇವರ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್‌ ಬಿ. ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್‌ ಎಸ್‌. ಶೆಟ್ಟಿ, ಜತೆ ಕೋಶಾಧಿಕಾರಿ ಗುಣಪಾಲ್‌ ಆರ್‌. ಶೆಟ್ಟಿ ಐಕಳ, ಕ್ರೀಡಾ ಮೇಲ್ವಿಚಾರಕರಾದ ಜಯ ಎ. ಶೆಟ್ಟಿ ಉಪಸ್ಥಿತರಿದ್ದರು.

ಅಧ್ಯಕ್ಷ ಪಯ್ಯಡೆ ಅವರು ಮಾತನಾಡಿ, ಬಂಟರ ಸಂಘವು ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ಹೀಗೆ ಹಲವಾರು ಕ್ಷೇತ್ರಗಳ ಜೊತೆ ಕ್ರೀಡಾ ಕ್ಷೇತ್ರಕ್ಕೂ ಹೆಚ್ಚಿನ ಬೆಂಬಲ ಪ್ರೋತ್ಸಾಹ ನೀಡುತ್ತಾ ಬಂದಿದೆ. ಸಂಘದ ಕ್ರೀಡಾಕೂಟವು ಸಂಘದ ಮಹತ್ವದ ಕಾರ್ಯಚಟುವಟಿಕೆಗಳಲ್ಲಿ ಒಂದಾಗಿದ್ದು, ಅದನ್ನು ಪ್ರತೀ ವರ್ಷ ಊರಿನ ಉತ್ಸವದಂತೆ ಆಯೋಜಿಸ ಲಾಗುತ್ತಿದೆ. ಬಂಟ ಬಾಂಧವರಿಗೆಲ್ಲ ಸ್ಫೂರ್ತಿ ತುಂಬುವ ಈ ಕ್ರೀಡಾಕೂಟವು ಬಂಟರ ಬಾಂಧವ್ಯವನ್ನು ಬೆಸೆ ಯುವ ಕೂಟವೇ ಹೊರತು ಸ್ಪರ್ಧೆಯಲ್ಲ ಎಂಬುದನ್ನು ಎಲ್ಲರೂ ಅರಿಯಬೇಕು. ವೈಯಕ್ತಿಕ ವೈಮನಸ್ಸು ಮರೆತು ಅನ್ಯೋನ್ಯತೆ, ಸಂಸತದ ಕ್ಷಣದೊಂದಿಗೆ ಕ್ರೀಡಾಕೂಟದಲ್ಲಿ ಭಾಗಿಯಾಗೋಣ ಎಂದರು. ಸಂಘದ ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ ವಿಟಲ ಎಸ್‌. ಆಳ್ವ ಅವರು ಮಾತನಾಡಿ, 33ನೇ ವರ್ಷದ ಕ್ರೀಡಾಕೂಟವನ್ನು ಅತ್ಯಂತ ಶಾಂತ ರೀತಿ ನಡೆಸಲು ಎಲ್ಲರೂ ಸಹಕರಿಸುವಂತೆ ಮನವಿ ಮಾಡಿದರು.

ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸುವವರು ಬೆಳಗ್ಗೆ ಸ್ಪರ್ಧೆ ಆರಂಭವಾಗುವುದಕ್ಕಿಂತ ಮುನ್ನ ವೈಯಕ್ತಿಕ ಸ್ಪರ್ಧಿ ಹಾಗೂ ತಂಡದ ಸ್ಪರ್ಧಾರ್ಥಿಗಳು ತಮ್ಮ ಆಧಾರ್‌ ಕಾರ್ಡ್‌ಗಳನ್ನು ಪರೀಕ್ಷಕರಿಗೆ ತೋರಿಸಿ, ಆಯ್ಕೆಗೊಂಡರೆ ಮಾತ್ರ ಸ್ಪರ್ಧೆಯಲ್ಲಿ ಭಾಗವಹಿಸಬಹು ದಾಗಿದೆ. ಆಧಾರ್‌ ಕಾರ್ಡ್‌ ದಾಖಲೆ ಪತ್ರವಿಲ್ಲದೆ ಸ್ಪರ್ಧೆಯಲ್ಲಿ ಭಾಗವಹಿಸುವಂತಿಲ್ಲ. ಪರೀಕ್ಷಕರ ನಿರ್ಣಯವೇ ಅಂತಿಮ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದರು.

ಕ್ರೀಡಾಕೂಟದ ಮೇಲ್ವಿಚಾರಕ ಜಯ ಎ. ಶೆಟ್ಟಿ ಅವರು ಮಾತನಾಡಿ, ಹಗ್ಗಜಗ್ಗಾಟ ಸ್ಪರ್ಧೆಯು ಬೆಳಗ್ಗೆ 10.30ಕ್ಕೆ ಪ್ರಾರಂಭಗೊಳ್ಳಲಿದೆ. ಒಟ್ಟು ಕ್ರೀಡಾಕೂಟವು ಸಂಜೆ 5ರೊಳಗೆ ಸಮಾಪ್ತಿಗೊಳ್ಳಲಿದ್ದು, ಬಂಟ ಬಾಂಧವರು ಎಂದಿನಂತೆ ಸಹಕರಿಸಬೇಕು. ವೈಯಕ್ತಿಕ ಸ್ಪರ್ಧೆಗಳಲ್ಲಿ ಬಹುಮಾನ ಪಡೆದವರಿಗೆ ಕ್ರೀಡಾ ಮೈದಾನದಲ್ಲೇ ಬಹುಮಾನ ನೀಡಿ ಗೌರವಿಸಲಾಗುವುದು. ಕೇವಲ ತಂಡಗಳಿಗೆ ಮಾತ್ರ ಕಾರ್ಯಕ್ರಮದ ವೇದಿಕೆಯಲ್ಲಿ ಬಹುಮಾನ ವಿತರಿಸ ಲಾಗುವುದು. ಶಿಸ್ತು, ಸಂಯಮದಿಂದಿದ್ದು, ಸಂಘಕ್ಕೆ ಹಾಗೂಕ್ರೀಡಾಕೂಟಕ್ಕೆ ಹೆಚ್ಚಿನ ಗೌರವ ನೀಡೋಣ ಎಂದರು.

ಸ್ವಾಗತ ಸಮಿತಿಯಲ್ಲಿ ಬೆಳಗ್ಗೆ 8 ರಿಂದ ಸಂಜೆ 5 ರವರೆಗೆ ಒಂದು ಗಂಟೆಗಳ ಕಾಲಾವಧಿಗಾಗಿ ಕ್ರಮವಾಗಿ ಜೋಗೇಶ್ವರಿ -ದಹಿಸರ್‌ ಪ್ರಾದೇಶಿಕ ಸಮಿತಿ, ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ, ಡೊಂಬಿವಲಿ ಪ್ರಾದೇಶಿಕ ಸಮಿತಿ, ಮೀರಾ- ಭಾಯಂದರ್‌ ಪ್ರಾದೇಶಿಕ ಸಮಿತಿ, ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿ, ಭಿವಂಡಿ-ಬದ್ಲಾಪುರ ಪ್ರಾದೇಶಿಕ ಸಮಿತಿ, ಕುರ್ಲಾ-ಭಾಂಡೂಪ್‌ ಪ್ರಾದೇಶಿಕ ಸಮಿತಿ, ಸಿಟಿ ಪ್ರಾದೇಶಿಕ ಹಾಗೂ ನವಿಮುಂಬಯಿ ಪ್ರಾದೇಶಿಕ ಸಮಿತಿಗಳು ಕಾರ್ಯ ನಿರ್ವಹಿಸಲಿದ್ದಾರೆ. ತ್ರೋಬಾಲ್‌ನಲ್ಲಿ ಮೀರಾ- ಭಾಯಂದರ್‌, ನವಿಮುಂಬಯಿ, ಜವಾಬ್‌, ಥಾಣೆ ಬಂಟ್ಸ್‌, ಭಿವಂಡಿ-ಬದ್ಲಾಪುರ, ಮುಲುಂಡ್‌ ಬಂಟ್ಸ್‌, ಕುರ್ಲಾ-ಭಾಂಡೂಪ್‌, ವಸಾಯಿ-ಡಹಾಣೂ, ಸಿಟಿ ರೀಜನ್‌, ಜೋಗೇಶ್ವರಿ-ದಹಿಸರ್‌, ಬೋಂಬೆ ಬಂಟ್ಸ್‌ ಅಸೋಸಿಯೇಶನ್‌,ಡೊಂಬಿವಲಿ ಪ್ರಾದೇಶಿಕ ಸಮಿತಿಗಳು ಭಾಗವಹಿಸಲಿವೆ. ಮಹಿಳೆಯರಮತ್ತು ಪುರುಷರ ವಿಭಾಗದ ಹಗ್ಗ ಜಗ್ಗಾಟದಲ್ಲಿ ಸಂಘದ ಒಂಭತ್ತು ಪ್ರಾದೇಶಿಕ ಸಮಿತಿಗಳೊಂದಿಗೆ ಥಾಣೆ ಬಂಟ್ಸ್‌, ಜವಾಬ್‌, ಬೋಂಬೆ ಬಂಟ್ಸ್‌ ಅಸೋಸಿಯೇಶನ್‌, ಮುಲುಂಡ್‌ ಬಂಟ್ಸ್‌ ತಂಡಗಳು ಭಾಗವಹಿಸಲಿವೆ.

 

ಚಿತ್ರ-ವರದಿ:  ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.