ಜಯಲಕ್ಷ್ಮೀ ಕೋ. ಆಪರೇಟಿವ್ ಕ್ರೆಡಿಟ್ ಸೊಸೈಟಿ:18ನೇ ವಾರ್ಷಿಕ ಮಹಾಸಭೆ
Team Udayavani, Jul 24, 2018, 4:37 PM IST
ಮುಂಬಯಿ: ಮಹಾ ಶಿವರಾತ್ರಿಯ ಶುಭಾವಸರದಿ ಶ್ರೀ ಮಹಾಲಕ್ಷ್ಮೀ ಆಶೀರ್ವಾದದಿಂದ ಚಾಲನೆ ನೀಡಲ್ಪಟ್ಟ ಈ ಸೊಸೈಟಿಯು ಪ್ರಸ್ತುತ ಎಲ್ಲರ ಪಾಲಿನ ಆಶಾದಾಯಕವಾಗಿದೆ. ಇದು ನಿಮ್ಮೆಲ್ಲರ ಸಹಯೋಗದಿಂದ ಶ್ರೇಯಸ್ಸು ಪಡೆಯಲು ಸಾಧ್ಯವಾಗಿದೆ. ಉದರ ಪೋಷಣೆಗಾಗಿ ಕರ್ಮಭೂಮಿಗೆ ಬಂದ ನಮ್ಮವರಿಗೆ ಮುಂಬಾದೇವಿ, ವಿಜಯಲಕ್ಷ್ಮೀ ಕರುಣಿಸಿದ್ದಾಳೆ ಇದು ನಾವು ಗರ್ವಪಡುಂತಾಗಬೇಕು. ಮುಂದಿನ ಕಾಲಾವಧಿಯೊಳಗೆ ಈ ಸೊಸೈಟಿಯಲ್ಲಿ 100 ಕೋ. ರೂ. ಠೇವಣೆಯನ್ನಾಗಿಸುವ ಕನಸನ್ನು ನನಸಾಗಿಸುವಲ್ಲಿ ಪ್ರಯತ್ನಿಸಲಾಗುವುದು. ಜನಸಾಮಾನ್ಯರ ಉನ್ನತೀಕರಣದಿಂದ ಪಥಸಂಸ್ಥೆಗಳ ಸಾರ್ಥಕತೆ ಸಾಧ್ಯ. ವೈಚಾರಿಕ ಪ್ರಗತಿಯ ಜೊತೆಗೆ ಸಮಾಜೋನ್ನತಿಯ ಕೆಲಸವನ್ನು ತಮ್ಮ ಕಾಯಕ ಎನ್ನುವಂತೆ ಸಂಸ್ಥೆಗಳು ರೂಢಿಸಿಕೊಂಡರೆ ಒಟ್ಟು ರಾಷ್ಟ್ರದ ಬಡತನ ನಿವಾರಣೆಯೂ ಸಾಧ್ಯವಾಗಬಲ್ಲದು. ನಾನೂ ಅಷ್ಟೇ ಎಂದಿಗೂ ಗಳಿಸುವ ಉದ್ದೇಶ ಇರಿಸದೆ ಕೊಡುವುದನ್ನು ಧರ್ಮವಾಗಿಸಿದ ಕಾರಣ ಎರಡನೇ ಬಾರಿ ಶಾಸಕನಾಗಲು ಸಾಧ್ಯವಾಗಿದೆ ಎಂದು ಕರ್ನಾಟಕ ಮಂಡ್ಯ ಕೆ. ಆರ್. ಪೇಟೆ ಶಾಸಕ, ಒಕ್ಕಲಿಗ ಸಂಘ ಮಹಾರಾಷ್ಟ್ರ ಇದರ ಸಂಸ್ಥಾಪಕಾಧ್ಯಕ್ಷ, ಜಯಲಕ್ಷ್ಮೀ ಕ್ರೆಡಿಟ್ ಸೊಸೈಟಿಯ ಸ್ಥಾಪಕ ನಿರ್ದೇಶಕ ನಾರಾಯಣ ಆರ್. ಗೌಡ ಅವರು ಅಭಿಪ್ರಾಯಿಸಿದರು.
ಜು. 22 ರಂದು ಪೂರ್ವಾಹ್ನ ಅಂಧೇರಿ ಪೂರ್ವದ ಜೆ.ಬಿ ನಗರದಲ್ಲಿನ ಸತ್ಯನಾರಾಯಣ ಗೋಯೆಂಕಾ ಭವನದಲ್ಲಿ ಜರುಗಿದ ಜಯಲಕ್ಷ್ಮೀ ಪಥಸಂಸ್ಥೆಯ 18 ನೇ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಭವಿಷ್ಯದಲ್ಲಿ ಸಂಸ್ಥೆಯು ಇನ್ನಷ್ಟು ಅಭಿವೃದ್ಧಿಯ ಪಥದತ್ತ ಸಾಗಲು ತುಳು-ಕನ್ನಡಿಗರ ಪ್ರೋತ್ಸಾಹ, ಸಹಕಾರ ಸದಾಯಿರಲಿ ಎಂದರು.
ಮಲ್ಲಿಕಾರ್ಜುನ ಸ್ವಾಮೀಜಿ ಕಾಂಜೂರ್ಮಾರ್ಗ್ ಅವರು ಒಕ್ಕಲಿಗರ ಧೀಶಕ್ತಿ ದೈವೈಕ್ಯ ಮಹಾಗುರು ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮತ್ತು ಧನಲಕ್ಷ್ಮೀ ಮಾತೆಗೆ ಪೂಜೆ ನೆರವೇರಿಸಿದರು. ಮಹಿಳಾ ನಿರ್ದೇಶಕಿಯರು ಮಾತೆ ಜಯಲಕ್ಷ್ಮೀಗೆ ಆರತಿ ಬೆಳಗಿಸಿ ಸಭೆಗೆ ಸಾಂಕೇತಿಕವಾಗಿ ಚಾಲನೆ ನೀಡಿದರು. ರಂಗಪ್ಪ ಗೌಡ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಸಂಸ್ಥೆಯ ಶೇರುದಾರರಿಗೆ ಶೇ. 9 ರಷ್ಟು ಡಿವಿಡೆಂಡ್ ಘೋಷಿಸಲಾಯಿತು.
ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ. ರಾಜೇ ಗೌಡ ಅವರು ಮಾತನಾಡಿ, ಷೇರುದಾರರು ಮೂರು ವರ್ಷದೊಳಗೆ ತಮ್ಮ ಡಿವಿಡೆಂಡ್ ಮೊತ್ತವನ್ನು ತಮ್ಮ ಖಾತೆಗೆ ಜಮಾಯಿಸತಕ್ಕದ್ದು. ಇಲ್ಲವಾದಲ್ಲಿ ಸರಕಾರದ ಪಾಲಾಗುತ್ತದೆ. ಒವರ್ ಡ್ರಾಫ್ಟ್ ಮೊತ್ತವೂ (ಓಡಿ) ಸಮಯೋಚಿತವಾಗಿ ಭರಿಸತಕ್ಕದ್ದು. ಇಲ್ಲವಾದಲ್ಲಿ ಎನ್ಪಿಎ ಹೆಚ್ಚಾಗುತ್ತದೆ. ಸೊಸೈಟಿ ರಿಜಿಸ್ತ್ರಾರ್ ಇದೀಗಲೇ ನಮ್ಮ ಸೊಸೈಟಿಗೆ ರಾಯಗಾಢ ಮತ್ತು ಪಾಲ^ರ್ ಜಿಲ್ಲೆಗಳಲ್ಲೂ ಶಾಖೆ ತೆರೆಯಲು ಪರವಾನಿಗೆ ಪ್ರಾಪ್ತಿಸಿದೆ ಎಂದು ತಿಳಿಸಿದರು.
ಮುಖ್ಯ ಅತಿಥಿಯಾಗಿ ಸರಕಾರಿ ಅಧಿಕಾರಿ ರಂಗನಾಥ್ ಥಾವೆÛ, ಅಭ್ಯಾಗತರುಗಳಾಗಿ ಕಾಂಗ್ರೇಸ್ ನೇತಾರ ಚಂದ್ರ ಶೆಟ್ಟಿ, ರವೀಂದ್ರ ಎನ್. ಗೌಡ, ಸಿಎ ಮಂಜುನಾಥ ಕೆ. ಗೌಡ ಸಂದಭೋìಚಿತವಾಗಿ ಮಾತನಾಡಿ, ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ ಸೊಸೈಟಿಯ ಯಶಸ್ಸಿಗೆ ಶುಭಕೋರಿದರು. ಕೆ. ಆರ್. ಪೇಟೆ ಶಾಸಕರಾಗಿ ದ್ವಿತೀಯ ಬಾರಿಗೆ ಆಯ್ಕೆಯಾದ ಸೊಸೈಟಿಯ ಸ್ಥಾಪಕ ನಿರ್ದೇಶಕ ಡಾ| ನಾರಾಯಣ ಆರ್. ಗೌಡ ಅವರಿಗೆ ಸಮ್ಮಾನಿಸಿ ಗೌರವಿಸಲಾಯಿತು.
ಒಕ್ಕಲಿಗರ ಸಂಘ ಮಹಾರಾಷ್ಟ್ರ ಅಧ್ಯಕ್ಷ ಜಿತೇಂದ್ರ ಜೆ. ಗೌಡ, ಉದ್ಯಮಿಗಳಾದ ಸದಾನಂದ ಗಾಯಕ್ವಾಡ್, ಪುರುಷೋತ್ತಮ ಗೌಡ, ನಾಗರಾಜ ಗೌಡ, ರಮೇಶ್ ಗೌಡ, ಕರಿಯಪ್ಪ ಗೌಡ, ಪುಟ್ಟಪ್ಪ ಗೌಡ ಹಾಗೂ ಸೊಸೈಟಿಯ ಉಪಾಧ್ಯಕ್ಷ ಎ. ಕೆಂಪೇಗೌಡ, ಕಾರ್ಯದರ್ಶಿ ಕೆ. ರಾಜೇ ಗೌಡ, ನಿರ್ದೇಶಕರಾದ ಮುತ್ತೇ ಎಸ್. ಗೌಡ, ಅನುಸೂಯಾ ಆರ್. ಗೌಡ, ದೇವಕಿ ನಾರಾಯಣ ಗೌಡ, ಸುನಂದಾ ಆರ್. ಗೌಡ, ರಾಹುಲ್ ಯು. ಲಗಡೆ, ಭಾರತಿ ಎಸ್. ಗಾಯಕ್ವಾಡ್ ವೇದಿಕೆಯಲ್ಲಿ ಆಸೀನರಾಗಿದ್ದರು.
ಸೊಸೈಟಿಯ ಪ್ರಬಂಧಕ ಪಶುìರಾಮ್ ಕೆ. ದೌಂಡ್ ಸ್ವಾಗತಿಸಿ ಸಭಾ ಕಲಾಪ ನಡೆಸಿ ಮಾತನಾಡಿ, ಸೊಸೈಟಿಯ ಗತ ಕ್ಯಾಲೆಂಡರ್ ವರ್ಷದಲ್ಲಿ 4,726 ಸದಸ್ಯರನ್ನೊಳಗೊಂಡಿದೆ. 2.77 ಕೋ. ರೂ. ಶೇರ್ ಕ್ಯಾಪಿಟಲ್, 2.82 ಕೋ. ರೂ. ರಿಝರ್ವ್ ಫಂಡ್, 33.56 ಕೋ. ರೂ. ಠೇವಣಾತಿ ಹೊಂದಿದ್ದು 41.64 ಕೋ. ರೂ. ಕಾರ್ಯಮಾನ ಬಂಡವಾಳ ವ್ಯವಹರಿಸಿದೆ ಎಂದರು.
ಹಾಗೂ ಗತ ಸಾಲಿನ ವಾರ್ಷಿಕ ಮಹಾಸಭೆಯ ವರದಿ ವಾಚಿಸಿ ಸೊಸೈಟಿಯ ಈ ಬಾರಿಯೂ ಲೆಕ್ಕ ಶೋಧನಾ ಶ್ರೇಣೀಕರಣ ಪ್ರಕಾರ “ಎ’ ದರ್ಜೆ ಸ್ಥಾನದೊಂದಿಗೆ ದೃಢೀಕೃತಗೊಂಡಿದೆ ಎಂದರು. ಕಾರ್ಯಾಧ್ಯಕ್ಷರು ಸದಸ್ಯರ ಮಕ್ಕಳಿಗೆ ಪಠ್ಯಪುಸ್ತಕ, ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ ಪ್ರದಾನಿಸಿ ಗೌರವಿಸಿ ವಿತರಿಸಿದರು. ಸೊಸೈಟಿಯ ಉನ್ನತಿಗಾಗಿ ಶ್ರಮಿಸಿದ ಸರ್ವರ ಅನನ್ಯ ಸೇವೆ ಶ್ಲಾಘಿಸಿ ಅಭಿವಂದಿಸಿದರು. ಸೊಸೈಟಿಯ ಗ್ರಾಹಕರು, ಶೇರುದಾರರು, ಹಿತೈಷಿಗಳು, ಸೊಸೈಟಿಯ ಕರ್ಮಚಾರಿಗಳು, ಪಿಗ್ಮಿà ಸಂಗ್ರಹದಾರರು, ಸಭೆಯಲ್ಲಿ ಹಾಜರಿದ್ದರು. ಮಾ| ನಿಖೀಲ್ ರವಿ ಕುಮಾರ್ ಗೌಡ, ಕು| ಭೂಮಿಕಾ ಜೆ. ಗೌಡ, ಮಾ| ಪ್ರಜ್ವಲ್ ಜಿ. ಗೌಡ ಹಾಗೂ ಕು| ಸುರûಾ ಆರ್. ಗೌಡ ಅವರ ಗಣೇಶ ವಂದನೆಯೊಂದಿಗೆ ಸಭೆ ಪ್ರಾರಂಭಗೊಂಡಿತು.
ಕಚೇರಿ ಅಧಿಕಾರಿಗಳಾದ ಆಶಾರಾಣಿ ಬಿ. ಗೌಡ ಗತವಾರ್ಷಿಕ ಮಹಾಸಭೆಯ ವರದಿ ಮಂಡಿಸಿದರು. ಪ್ರಕಾಶ್ ಎನ್. ವಾಡ್ಕರ್ ಅಂತರಿಕ ಲೆಕ್ಕಪತ್ರಗಳ ಮಾಹಿತಿ ಮತ್ತು ರವಿ ಸುಭಾಷ್ ಗೌಡ ವಾರ್ಷಿಕ ವ್ಯವಹಾರದ ಮಾಹಿತಿ ನೀಡಿದರು. ಪ್ರದೀಪ್ಕುಮಾರ್ ಆರ್. ಗೌಡ ವಾರ್ಷಿಕ ಕಾರ್ಯ ಚಟುವಟಿಕೆಗಳನ್ನು ಬಿತ್ತರಿಸಿದರು. ಲೆಕ್ಕಾಧಿಕಾರಿ ಶಿಲ್ಪಾ ಸಂತೋಷ್ ಮಾಂಡವಾRರ್ ಲೆಕ್ಕಪತ್ರಗಳ ಮಾಹಿತಿ ನೀಡಿದರು. ಶಿವಕುಮಾರ್ ಎಚ್. ಗೌಡ ವಾರ್ಷಿಕ ಬಜೆಟ್ ಮಂಡಿಸಿದರು. ಕೆ. ರಾಜೇ ಗೌಡ ಅತಿಥಿಗಳನ್ನು ಪರಿಚಯಿಸಿ ವಂದಿಸಿದರು.
ನಮ್ಮ ಪಥಸಂಸ್ಥೆಯು ಆರ್ಥಿಕವಾಗಿ ಹಿಂದುಳಿದ ಶ್ರೀಸಾಮಾನ್ಯರ ಬಾಳಿಗೆ ಆಶಾಕಿರಣವಾಗಿ ಅನೇಕರಿಗೆ ಆರ್ಥಿಕ ಸೇವೆ ಒದಗಿಸಿದ ವಿಶ್ವಾಸ ನಮಗಿದೆೆ. ಗ್ರಾಹಕರ ಮತ್ತು ಶೇರುದಾರದ ವಿಶ್ವಾಸ ಗಳಿಸಿ ಸೊಸೈಟಿಯನ್ನು ಮುನ್ನಡೆಸಿದ್ದು, ಸೊಸೈಟಿಯ ನಿವ್ವಳ ಲಾಭಕ್ಕಿಂತ ಗ್ರಾಹಕರ, ಜನಪರ ಲಾಭ ಎಷ್ಟು ಎನ್ನುವುದೇ ನಮ್ಮ ಉದ್ದೇಶವಾಗಿದೆ. ಪಥಸಂಸ್ಥೆಯು ವ್ಯವಹಾರ ದಕ್ಷತೆಗೆ ಮಹತ್ವವನ್ನು ನೀಡುತ್ತಿದೆ. ಹಣಕಾಸು ಸಂಸ್ಥೆಗಳು ತಮ್ಮ ಸಹಭಾಗಿತ್ವದಿಂದ ಯುವ ಜನಾಂಗದೊಡನೆ ಉದಾರತೆ ತೋರಬೇಕು. ಇಂತಹ ಉಚ್ಚ ಸೇವಾಧರ್ಮ, ಸಕಾರಾತ್ಮಕ ಸ್ಪಂದನೆ ಅಗತ್ಯ ಎನ್ನುವುದು ನಮ್ಮ ಅಭಿಮತವಾಗಿದೆ. ಪ್ರಸಕ್ತ ವರ್ಷದಲ್ಲಿ ನಿರ್ದೇಶಕ ಮಂಡಳಿಯ ದಕ್ಷ ನೇತೃತ್ವದಲ್ಲಿ ಮತ್ತು ನೌಕರವೃಂದದ ಸಹಯೋಗದೊಂದಿಗೆ ಸೊಸೈಟಿಯು ಪ್ರಗತಿಯತ್ತ ಸಾಗುತ್ತಿದೆ.
– ರಂಗಪ್ಪ ಸಿ. ಗೌಡ
ಕಾರ್ಯಾಧ್ಯಕ್ಷರು: ಜಯಲಕ್ಷ್ಮೀ ಕೋ.ಆಪರೇಟಿವ್ ಕ್ರೆಡಿಟ್ ಸೊಸೈಟಿ
ಚಿತ್ರ-ವರದಿ : ರೋನ್ಸ್ ಬಂಟ್ವಾಳ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ