ಜೋಗೇಶ್ವರಿ ಮಂತ್ರಾಲಯ : ಅಕ್ಷಯ ತೃತೀಯ ಗಂಧಲೇಪನ ಕಾರ್ಯಕ್ರಮ


Team Udayavani, May 9, 2019, 2:45 PM IST

0805MUM04A

ಮುಂಬಯಿ: ಅಕ್ಷಯ ತೃತೀಯ ದಿವಸದ ಪ್ರಯುಕ್ತ ಸರ್ವ ಭಕ್ತರು ವಿಶೇಷವಾಗಿ ದೇವಸ್ಥಾನಗಳಿಗೆ ಹೋಗಿ ರಾಯರ ಅಂತ ರ್ಯಾಮಿಯಾಗಿ ಇರತಕ್ಕಂತಹ ಮೂಲ ರಾಮಚಂದ್ರ ದೇವರು, ಶ್ರೀದೇವಿ-ಭೂದೇವಿ ಸಹಿತನಾದಂತಹ ವೆಂಕಟೇಶ ದೇವರಲ್ಲಿ ನಾವು ಸಾಷ್ಟಾಂಗ ಪ್ರಣಾಮಗಳನ್ನು ಸಲ್ಲಿಸಿ ಪ್ರಾರ್ಥನೆಗೈದಾಗ ನಮಗೆ ಅಕ್ಷಯ ಪುಣ್ಯ ಲಭಿಸುತ್ತದೆ. ಆದ್ದರಿಂದ ಇವತ್ತಿನ ದಿವಸ ಯಾವ ಭಕ್ತರು ದೇವಸ್ಥಾನಗಳಿಗೆ ಹೋಗಿ ವಿಶೇಷವಾಗಿ ದಾನ, ಧರ್ಮ ಮತ್ತು ಪೂಜಾದಿಗಳನ್ನು ಮಾಡುತ್ತಾರೋ ಅವರಿಗೆ ಅಕ್ಷಯ ಪ್ರತಿಫಲ ಸಿಗುತ್ತದೆ ಎಂದು ಜೋಗೇಶ್ವರಿ ಗುಲ್ಶನ್‌ ನಗರದ ಶ್ರೀ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪ್ರಬಂಧಕ, ಅರ್ಚಕ ಶ್ರೀ ಪ್ರಹ್ಲಾದಾಚಾರ್ಯ ಅವರು ನುಡಿದರು.

ಆದರೆ ಕೆಲವು ಜನರಲ್ಲಿ ಒಂದು ಮೂಢನಂಬಿಕೆ ಎಂದರೆ ಅಕ್ಷಯದ ದಿನ ಬಂಗಾರ ಖರೀದಿಸಬೇಕು ಎಂಬುವುದು. ಇದು ನಿಜವಾಗಿಯೂ ಶುದ್ಧ ತಪ್ಪು ಕಲ್ಪನೆಯಾಗಿದೆ. ಇವತ್ತಿನ ದಿನ ನಾವು
ದಾನ, ಧರ್ಮ, ಮಾಡಬೇಕು. ದೇವರಿಗೆ ಸಮರ್ಪಣೆ ಮಾಡುವ ಯಾವುದೇ ಸೇವೆಯಲ್ಲೂ ಅಕ್ಷಯ ಪುಣ್ಯ ಲಭಿಸುತ್ತದೆ ಎಂದವರು ನುಡಿದರು.

ಮೇ 7ರಂದು ಅಕ್ಷಯ ತೃತೀಯ ಅಂಗವಾಗಿ ಜೋಗೇಶ್ವರಿ ಗುಲ್ಶನ್‌ ನಗರದ ಶ್ರೀ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ವಿಶೇಷ ಪೂಜಾ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಅವರು, ಬಂಗಾರದಲ್ಲಿ ಕಲಿ ನೆಲೆಯಾಗಿರುತ್ತಾನೆ. ಆದ್ದರಿಂದ ಕಲಿಯನ್ನು ನಾವು ಮನೆಯಲ್ಲಿ ತಂದು ಇಟ್ಟುಕೊಂಡಂತಾಗುತ್ತದೆ. ಅಕ್ಷಯ ತೃತೀಯ ದಿವಸದಂತೆ ದೇವರ ದರ್ಶನ, ವಿಶೇಷವಾಗಿ ಅರ್ಚನೆ, ಹವನ, ಪೂಜೆ, ಹಿರಿಯರಿಂದ ಆಶೀರ್ವಾದ, ದಾನ-ಧರ್ಮಗೈದಾಗ ಅಕ್ಷಯ ಫಲವನ್ನು ಪಡೆಯಲು ಸಾಧ್ಯವಿದೆ. ಸಕಲ ಭಕ್ತಾದಿಗಳು ಸದಾ ಕಾಲ ಕೂಡಿ ಇಂತಹ ಅವಕಾಶವನ್ನು ಉಪಯೋಗಿಸಿಕೊಂಡು ಎಲ್ಲ ರಿಗೂ ದೇವರ ಅನುಗ್ರಹ ಪ್ರಾಪ್ತಿಯಾಗುವಂತೆ ಮಾಡಬೇಕು ಎಂದು ನುಡಿದರು.

ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆಯಿಂದ ಜೋಗೇಶ್ವರಿ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಗಂಧಲೇಪನ, ವಿವಿಧ ಪೂಜೆಗಳು, ಸೇವಾ ಪೂಜೆಗಳು, ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಮಠದ ಪ್ರಧಾನ ಅರ್ಚಕ ವ್ಯಾಸಾಚಾರ್ಯ, ರಾಘವೇಂದ್ರಾಚಾರ್ಯ ಅವರ ನೇತೃತ್ವದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಇದೇ ಸಂದರ್ಭದಲ್ಲಿ ಮೀರಾರೋಡ್‌ನ‌ ರಾಯರ ಬಳಗದ ಗಿರೀಶ್‌ ಕರ್ಕೇರ ಅವರಿಗೆ ವಿಶೇಷ ಪ್ರಸಾದವನ್ನಿತ್ತು ಗೌರವಿಸಲಾಯಿತು. ವ್ಯಾಸಚಾರ್ಯರು ವಂದಿಸಿದರು. ತುಳು-ಕನ್ನಡಿಗ, ಅನ್ಯಭಾಷಿಕ‌ ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಬಾಲ್ಯದ ನೆನಪು ತಂದ ನೃತ್ಯ

Desi Swara: ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…..

Desi Swara: ಇಮೋಜಿ… ಭಾವನೆಗಳ ನವರೂಪವೋ ಅಥವಾ ಗತ ಕಾಲದ ಭಾಷೆಯೋ…

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಕತಾರ್‌- ಅನಿವಾಸಿ ಕನ್ನಡತಿ ಸುಮಾ ಮಹೇಶ್‌ ಗೌಡ ಅವರಿಗೆ ಸಮ್ಮಾನ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಮೊಗವೀರ್ಸ್‌ ಬಹ್ರೈನ್‌- ನೂತನ ಆಡಳಿತ ಮಂಡಳಿ ಅಸ್ತಿತ್ವಕ್ಕೆ

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

Desi Swara: ಹೊನ್ನುಡಿ-ಒಳಿತಿನ ಭವಿಷ್ಯ ಇಲ್ಲದ ಕಾಲಹರಣವೇ ಮರಣ…

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.