ಜೋಗೇಶ್ವರಿ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಅಷ್ಟಾಕ್ಷರ ಮಹಾಹೋಮ


Team Udayavani, Mar 14, 2019, 3:12 PM IST

98.jpg

ಮುಂಬಯಿ: ಸತ್ಯ, ಧರ್ಮಗಳ ಪ್ರತಿರೂಪ ಎಂದೇ ಹೇಳುವುದಾದರೆ ಮಂತ್ರಾಲಯದ ಶ್ರೀ ಗುರುರಾಘವೇಂದ್ರರಿಗೆ ಮಾತ್ರ. ಜೀವನದಲ್ಲಿ ಎದುರಾಗುವ ಕಷ್ಟಗಳಿಂದ ಬಿಡುಗಡೆ ಮಾಡಿ ಸುಖಮಯ ಜೀವನವನ್ನು ಸಾಗಿಸಲು ಬೇಕಾಗುವ ಶಕ್ತಿ ಮತ್ತು ಚೈತನ್ಯಗಳನ್ನು ಅವರು ನಮಗೆ ಪ್ರಸಾದಿಸುತ್ತಾರೆ ಎಂಬ ನಂಬಿಕೆ ರಾಯರ ಭಕ್ತಾದಿಗಳಲ್ಲಿ ಅಪಾರವಾಗಿದೆ. ಶ್ರೀ ಗುರು ಸಾರ್ವಭೌಮರನ್ನು ಪೂಜಿಸಿದವರಿಗೆ ಸಿರಿ, ಸಂಪತ್ತಿನ ಕೊರತೆ ಇರದು. ಮಂತ್ರಾಲಯ ಎಂಬ ಪುಣ್ಯಕ್ಷೇತ್ರದ ಬೃಂದಾನವನದಲ್ಲಿ ನೆಲೆಸಿರುವ ಯತಿವರ್ಯರನ್ನು ಧ್ಯಾನಿಸಿ, ಸ್ಮರಿಸಿ ಮುಕ್ತಿ ಹೊಂದಬಹುದು. ಗುರುರಾಯರ ಸಿದ್ಧಿಯನ್ನು ಪಡೆದ ಕ್ಷೇತ್ರವೇ ಮಂತ್ರಾಲಯವಾಗಿದೆ. ರಾಯರನ್ನು ಭಕ್ತಿ, ಶ್ರದ್ಧೆಯಿಂದ  ನಂಬಿ ಸೇವೆಗೈದರೆ ಎಂದಿಗೂ ಕೈಬಿಡಲಾರರು ಎಂದು ಜೋಗೇಶ್ವರಿ ರಾಘವೇಂದ್ರ ಸ್ವಾಮಿ ಮಠದ ಪ್ರಹ್ಲಾದಾಚಾರ್ಯರು ನುಡಿದರು.

ಮಾ. 13ರಂದು ಜೋಗೇಶ್ವರಿ ಪಶ್ಚಿಮದ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ನಡೆದ ಶ್ರೀ ರಾಘವೇಂದ್ರ ಅಷ್ಟಾಕ್ಷರ ಮಹಾಹೋಮ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಅವರು, ನಮ್ಮ ಭಕ್ತಿ ಪರಿಶುದ್ಧವಾಗಿರಬೇಕು. ಭಕ್ತಿಯಲ್ಲಿ ಏಕಭಾವ, ಧೃಡತೆ ಇರಬೇಕು. ಆಗ ನಮ್ಮ ಸಮಸ್ಯೆಗಳಿಗೆ ಗುರುರಾಯರು ಯಾವುದೇ ಒಂದು ರೀತಿಯಲ್ಲಿ ಪರಿಹಾರವನ್ನು ನೀಡುತ್ತಾರೆ. ಎಷ್ಟೇ ಸಂವತ್ಸರ ಕಳೆದರೂ ಭಕ್ತರ ಭಕ್ತಿಯ ತೀವ್ರತೆ, ಸಡಗರ, ಶ್ರದ್ಧೆ, ಭಕ್ತಿ ಕಡಿಮೆಯಾಗುವುದಿಲ್ಲ. ಈ ಪರಮ ಪುಣ್ಯ ದಿನವಾದ ರಾಯರ ಹುಟ್ಟುಹಬ್ಬದ ಶುಭ ದಿನದಲ್ಲಿ ಭಕ್ತಿಯಿಂದ ರಾಯರ ಸ್ಮರಣೆ ಮಾಡಿ ಧನ್ಯರಾಗೋಣ ಎಂದರು.

ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ 7 ರಿಂದ ಗುರುರಾಯರಿಗೆ ವಿಶೇಷ ಪಂಚಾಮೃತ ಅಭಿಷೇಕ, ವಿಶೇಷ ಪುಷ್ಪಾರ್ಚನೆ, ಅನಂತರ ಶ್ರೀಮತಿ ಸಾಬಕ್ಕ ಅವರ ನೇತೃತ್ವದಲ್ಲಿ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿಯವರಿಂದ ಭಜನಾ ಕಾರ್ಯಕ್ರಮ ನೆರವೇರಿತು. ಪೂರ್ವಾಹ್ನ 9.30ರಿಂದ ರಾಯರ ಹುಟ್ಟು ಹಬ್ಬದ ಪ್ರಯುಕ್ತ ರಾಘವೇಂದ್ರ ಅಷ್ಟಾಕ್ಷರ ಮಹಾಹೋಮವು ಮಠದ ಪ್ರಧಾನ ಅರ್ಚಕರಾದ ಗುರುರಾಜಾಚಾರ್ಯ, ಪ್ರಹ್ಲಾದಾಚಾರ್ಯಾ, ರಾಘವೇಂದ್ರಾಚಾರ್ಯ ಮತ್ತು  ವ್ಯಾಸರಾಜಾಚಾರ್ಯರ ಪೌರೋ ಹಿತ್ಯದಲ್ಲಿ ಜರಗಿತು.

ಪೂರ್ವಾಹ್ನ 11ರಿಂದ ಭಜನಕಾರ, ಹಾರ್ಮೋನಿಯಂ ವಾದಕ ಕಿಶೋರ್‌ ಕರ್ಕೇರ  ಹೆಜಮಾಡಿ ಇವರ ನೇತೃತ್ವದಲ್ಲಿ ರಾಯರ ಬಳಗ ಮೀರಾರೋಡ್‌ ಇವರಿಂದ ಭಜನಾ ಸಂಕೀರ್ತನೆ ನಡೆಯಿತು. ರಾಯರ ಬಳಗ ಮೀರಾರೋಡ್‌ ಇವರಿಂದ ವಿಶೇಷ ಅಲಂಕಾರ ಸೇವೆಯನ್ನು ಆಯೋಜಿಸಲಾಗಿತ್ತು.

ಭಜನಾ ಸೇವೆಯಲ್ಲಿ ಹಾರ್ಮೋನಿಯಂನಲ್ಲಿ ಕಿಶೋರ್‌ ಕರ್ಕೇರ, ತಬಲಾದಲ್ಲಿ ಗಗನ್‌ ಮೆಂಡನ್‌, ಮಾಧವ ಮೊಗವೀರ, ಗಿರೀಶ್‌ ಕರ್ಕೇರ, ಸುರೇಶ್‌ ಸಾಲ್ಯಾನ್‌, ಪುರುಷೋತ್ತಮ ಮಂಚಿ, ಕೃಷ್ಣ ಬಂಗೇರ, ವಿನೋದ್‌ ಸಾಲ್ಯಾನ್‌, ದೇವದಾಸ್‌ ಕರ್ಕೇರ, ಚೇತನ್‌ ಸಾಲ್ಯಾನ್‌ ಇವರು ಸಹಕರಿಸಿದರು. ರಾಯರ ಬಳಗದ ಸದಸ್ಯರ ವತಿಯಿಂದ ಗುರುರಾಯರಿಗೆ ವಿಶೇಷ ಅಲಂಕಾರ ಸೇವೆ ನಡೆಯಿತು. ಅನಂತರ ರಥೋತ್ಸವ, ಮಂಗಳಾರತಿ, ಅನ್ನದಾನ ನೆರವೇರಿತು. ಸಾವಿರಾರು ಭಕ್ತಾದಿಗಳು ಫಲಮಂತ್ರಾಕ್ಷತೆ ಸ್ವೀಕರಿಸಿ ಗುರುರಾಯರ ಬೃಂದಾವನದ ದರ್ಶನ ಪಡೆದರು. ವಿಶೇಷ ಭಜನಾ ಕಾರ್ಯಕ್ರಮ ನೀಡಿದ ರಾಯರ ಬಳಗದ ಸದಸ್ಯರನ್ನು ಮಠದ ಪ್ರಬಂಧಕ ಪ್ರಹ್ಲಾದಾಚಾರ್ಯ ಅಭಿನಂದಿಸಿದರು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.