ಸಾಹಿತಿ, ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಅವರ 38ನೇ ಕೃತಿ ಬಿಡುಗಡೆ


Team Udayavani, Jan 22, 2021, 4:14 PM IST

journalist-srinivas-jokattes-38th-book-release

ಮುಂಬಯಿ: ಸಾಹಿತಿ, ಪತ್ರಕರ್ತ ಶ್ರೀನಿವಾಸ ಜೋಕಟ್ಟೆ ಅವರ 38ನೇ ಕೃತಿ “ಸಮಾಜ ಬಂಧು ಆಯುರ್ವೇದ ಭೂಷಣ ಡಾಕ್ಟರ್‌ ಐ. ವಿ. ರಾವ್‌ ಜೋಕಟ್ಟೆ’ ಎಂಬ ಕೃತಿಯು ಜ. 24ರಂದು ಅಪರಾಹ್ನ 2.30ರಿಂದ ಕನ್ನಡ ಸಂಘ ಕಾಂತಾವರದ ಕೆ. ಬಿ. ಜಿನರಾಜ ಹೆಗ್ಡೆ ಸ್ಮಾರಕ ಕನ್ನಡ ಭವನದಲ್ಲಿ ಜರಗುವ ಸಮಾರಂಭದಲ್ಲಿ ಬಿಡುಗಡೆಗೊಳ್ಳಲಿದೆ.

ಕಾಂತಾವರ ಕನ್ನಡ ಸಂಘದ ನಾಡಿಗೆ ನಮಸ್ಕಾರ ಗ್ರಂಥಮಾಲೆಯ ನೂತನ ಕೃತಿಗಳಲ್ಲಿ ಇದು 305ನೇ ಕುಸುಮ ಆಗಿದೆ. ಮುದ್ದಣ ಸಾಹಿತ್ಯೋತ್ಸವ 2021 ಮತ್ತು ನಾಡಿಗೆ ನಮಸ್ಕಾರ ಗ್ರಂಥಮಾಲೆಯ ನೂತನ ನಾಲ್ಕು ಕೃತಿಗಳ ಅನಾವರಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮದರ್ಶಿ ಹರಿಕೃಷ್ಣ ಪುನರೂರು ವಹಿಸಲಿದ್ದಾರೆ.

2020ನೇ ಸಾಲಿನ ಮುದ್ದಣ ಕಾವ್ಯ ಪ್ರಶಸ್ತಿಯನ್ನು ಡಾ| ಚಿಂತಾಮಣಿ ಕೊಡ್ಲೆಕೆರೆ ಅವರ “ಮೈಮರೆತು ಕುಣಿವೆ’ ಕೃತಿಗೆ ಪ್ರದಾನ ಮಾಡಲಿದ್ದಾರೆ. ಪ್ರಶಸ್ತಿ ಪುರಸ್ಕೃತರ ಅಭಿನಂದನೆಯನ್ನು ಡಾ| ರಾಜಶೇಖರ ಹಳೆಮನೆ, ಉಜಿರೆ ಮಾಡಲಿರುವರು. ಕೃತಿಗಳ ಬಿಡುಗಡೆಯನ್ನು ಎಂಸಿಸಿ ಬ್ಯಾಂಕ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ಚಂದ್ರಶೇಖರ್‌ ಮಾಡಲಿದ್ದಾರೆ. ನಾಡಿಗೆ ನಮಸ್ಕಾರ ಗ್ರಂಥ ಮಾಲೆಯ ಸಂಪಾದಕ ಡಾ| ಬಿ. ಜನಾರ್ದನ್‌ ಭಟ್‌ ಉಪಸ್ಥಿತರಿರುವರು.

ಡಾ| ಐ. ವಿ. ರಾವ್‌ ಜೋಕಟ್ಟೆ

ಡಾ| ಐ. ವಿ. ರಾವ್‌ ಜೋಕಟ್ಟೆ ಅವರು ವೈದ್ಯ ಗುರು ಡಾ| ಎಂ. ಆರ್‌. ಭಟ್‌ ಅವರ ಶಿಷ್ಯ. ಕೇಳು ನಂಬಿಯಾರ್‌ ಮತ್ತು ಡಾ| ಎಂ. ಗೋಪಾಲಕೃಷ್ಣರಾಯರ ಜತೆಗೆ ಹಲವು ವರ್ಷ ದುಡಿದು ಆಯುರ್ವೇದದ ಸೂಕ್ಷ್ಮಗಳನ್ನು ಅರಿತು ಸಂಶೋಧನೆಗಳನ್ನು ಮಾಡುತ್ತಿದ್ದರು. ಕಲಿಯುಗ ಪತ್ರಿಕೆಯಲ್ಲಿ ಲೇಖನಗಳನ್ನು ಬರೆಯುತ್ತಿದ್ದರು. ಜಪ್ಪುನಲ್ಲಿ ಪ್ರೇಮ ಆಯುರ್ವೇದಿಕ್‌ ಫಾರ್ಮಸಿ ಮೂಲಕ ಆರೋಗ್ಯದ ಕಾಳಜಿಯನ್ನು ಜನರಲ್ಲಿ ಹುಟ್ಟಿಸುತ್ತಿದ್ದರು. ಐವತ್ತರ ದಶಕದಲ್ಲಿ ಕರ್ನಾಟಕ ಮತ್ತು ಕೇರಳ ಪ್ರಾಂತೀಯ ಗವರ್ನ್ ಮೆಂಟ್‌ ಟ್ರೈನ್‌ ಗ್ರಾಮ ವೈದ್ಯರ ಸಂಘ ಮಂಗಳೂರು ಇದರ ಕಾರ್ಯ ದರ್ಶಿಯಾಗಿದ್ದರು ಇವರ ಆನೆಕಾಲು ರೋಗ ಚಿಕಿತ್ಸೆಗೆ ಸಂಶೋಧಿಸಿದ ಔಷಧಕ್ಕೆ ಅಖೀಲ ಕರ್ನಾಟಕಆಯುರ್ವೇದ ಸಮ್ಮೇಳ  ನದಲ್ಲಿ ಚಿನ್ನದ ಪದಕ ದೊರೆತಿದೆ.

ಇದನ್ನೂ ಓದಿ:ನಮ್ಮದು ನ್ಯಾಯೋಚಿತ ಹೋರಾಟ: ಕನಕ ಶ್ರೀ

ಐವತ್ತರ ದಶಕದ ಕೊನೆಗೆ ಜೋಕಟ್ಟೆ ಎಂಬ ಕುಗ್ರಾಮಕ್ಕೆ ಆಗಮಿಸಿ ನಾಲ್ಕು ದಶಕಗಳ ಕಾಲ ಇಲ್ಲಿ ತಮ್ಮದೇ ಆದ ದುರ್ಗಾ ಕ್ಲಿನಿಕ್‌ ಮೂಲಕ ಆಯುರ್ವೇದ ಸೇವೆ, ಕೆಂಜಾರು ಗ್ರಾ.ಪಂ.ನ ವೈಸ್‌ ಚೇರ್ಮನ್‌ ಆಗಿ, ಯುವಕ ಮಂಡಲ ಜೋಕಟ್ಟೆಯ ಸ್ಥಾಪಕ ಸದಸ್ಯರಾಗಿಆಯುರ್ವೇದ  ಸೇವೆ ಮತ್ತು ಸಮಾಜಸೇವೆಯನ್ನು ಕೈಗೊಂಡಿದ್ದು, 1999ರಲ್ಲಿ ನಿಧನ ಹೊಂದಿದರು. ಸಮಾರಂಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮವಾಗಿ ಶ್ರೀರಾಮ ನಿರ್ಯಾಣ ತಾಳಮದ್ದಳೆಯನ್ನು ಧೀ ಶಕ್ತಿ ಮಹಿಳಾ ಯಕ್ಷ ಬಳಗ ಪುತ್ತೂರು ಪ್ರಸ್ತುತಪಡಿಸಲಿದ್ದಾರೆ ಎಂದು ಸಾಹಿತಿ ಡಾ| ನಾ. ಮೊಗಸಾಲೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.