ಜು.3:ಪನ್ವೇಲ್ ಶ್ರೀ ಕಾಳಿಕಾಂಬಾ ವಿನಾಯಕ ಮಂದಿರಕ್ಕೆ ಕಾಳಹಸ್ತೇಂದ್ರ ಶ್ರೀ ಭೇಟಿ
Team Udayavani, Jul 2, 2019, 10:07 AM IST
ನವಿಮುಂಬಯಿ; ಶ್ರೀಮದ್ ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠ, ಕಟಪಾಡಿ ಪೀಠಾಧೀಶರಾದ ಅನಂತ ವಿಭೂಷಿತ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿ ಅವರು ಜು. 3ರಂದು ಸಂಜೆ 7ರಿಂದ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ ಪನ್ವೇಲ್ ಇಲ್ಲಿಗೆ ಆಗಮಿಸಲಿದ್ದಾರೆ.
ಈ ಶತಮಾನದ ಪವಿತ್ರ ವಿಕಾರಿನಾಮ ಸಂವತ್ಸರ ಚಾತುರ್ಮಾಸ ವ್ರತ ಆರಂಭಿಸುವ ಪೂರ್ವಭಾವಿಯಾಗಿ ವಿಶ್ವಕರ್ಮ ಸಮಾಜ ಬಾಂಧವರ ಆರಾಧ್ಯ ಮಾತೆ ಶ್ರೀ ಕಾಳಿಕಾಂಬಾ ದೇವಿಯ ಅನುಗ್ರಹ ಪಡೆಯುವ ಸಲುವಾಗಿ ಸ್ವಾಮೀಜಿಯರು ಆಗಮಿಸಲಿದ್ದು, ಈ ಸಂದರ್ಭದಲ್ಲಿ ಸಂಜೆ 7ರಿಂದ ಸಾಮೂಹಿಕ ಗುರುಪಾದ ಪೂಜೆ ಹಮ್ಮಿಕೊಳ್ಳಲಾಗಿದೆ. ಆ ಬಳಿಕ ಶ್ರೀ ದೇವಿಗೆ ರಂಗ ಪೂಜೆ ಮತ್ತು ರಾತ್ರಿ ಅನ್ನಸಂತರ್ಪಣೆ ನಡೆಯಲಿದೆ.
ಸಾಮೂಹಿಕ ಗುರುಪಾದ ಪೂಜೆಯಲ್ಲಿ ಭಾಗವಹಿಸಲು ಇಚ್ಛಿಸುವ ಭಕ್ತರು 500 ರೂ. ಗಳನ್ನು ಮಂದಿರದ ಕಚೇರಿಯಲ್ಲಿ ಪಾವತಿಸಿ ಹೆಸರು ನೋಂದಾಯಿಸಿಕೊಳ್ಳಬಹುದು. ಈ ಧಾರ್ಮಿಕ ಸಮಾರಂಭದಲ್ಲಿ ಸಮಾಜ ಬಾಂಧವರು ಮತ್ತು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ದೇವಸ್ಥಾನದ ಆಡಳಿತ ಮಂಡಳಿ ಶ್ರೀ ಕಾಳಿಕಾಂಬಾ ವಿಶ್ವಕರ್ಮ ಸೇವಾ ಸಂಘ ಪನ್ವೇಲ್ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil