ಜೂ. 9: ಹದಿನೈದನೇ ವಾರ್ಷಿಕ “ಮೆಗಾ ಆರ್ಥಿಕ ಸಹಾಯ ಮೇಳ’ಕ್ಕೆ ಚಾಲನೆ


Team Udayavani, Jun 6, 2019, 4:35 PM IST

3–sa

ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ 15ನೇ ಮೆಗಾ ಆರ್ಥಿಕ ಸಹಾಯ ಮೇಳದ ಉದ್ಘಾಟನಾ ಸಮಾರಂಭ ಜೂ. 9ರಂದು ಬೆಳಗ್ಗೆ 10ರಿಂದ ಬಂಟರ ಭವನದ ಶ್ರೀಮತಿ ರಾಧಾ ಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ದಿ| ವಾಸು ಕೆ. ಶೆಟ್ಟಿ ಅವರ ಸ್ಮರಣಾರ್ಥ ಚರಿಷ್ಮಾ ಬಿಲ್ಡರ್ì ಲಿಮಿಟೆಡ್‌ನ‌ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಸುಧೀರ್‌ ವಿ. ಶೆಟ್ಟಿ ಅವರ ಪ್ರಾಯೋಜಕತ್ವದಲ್ಲಿ ಅದ್ದೂರಿಯಾಗಿ ಜರಗಲಿದೆ.

ಪೂರ್ವಾಹ್ನ 10ರಿಂದ ಸಂಘದ ಪ್ರಾದೇಶಿಕ ಸಮಿತಿಗಳಿಂದ ಸಾಂಸ್ಕೃತಿಕ ವೈವಿಧ್ಯ ಕಾರ್ಯಕ್ರಮ ಜರಗಲಿದ್ದು, ಪೂರ್ವಾಹ್ನ 11ರಿಂದ ಸಂಘದ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಇವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಎಂಆರ್‌ಐ ಹಾಸ್ಪಿಟಾಲಿಟಿ ಆ್ಯಂಡ್‌ ಇನ್‌ಫ್ರಾಸ್ಟ್ರಕ್ಚರ್‌ ಪ್ರೈವೇಟ್‌ ಲಿಮಿಟೆಡ್‌ ಇದರ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಕೆ. ಪ್ರಕಾಶ್‌ ಶೆಟ್ಟಿ ಅವರು ಆರ್ಥಿಕ ಸಹಾಯ ಮೇಳವನ್ನು ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಯಾಗಿ ಫೆಡರೇಶನ್‌ ಆಫ್‌ ವರ್ಲ್ಡ್ ಬಂಟ್ಸ್‌ ಅಸೋಸಿಯೇಶನ್‌ ಇದರ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರು ಆಗಮಿಸಲಿದ್ದಾರೆ. ಗೌರವ ಅತಿಥಿಗಳಾಗಿ ಚರಿಷ್ಮಾ ಬಿಲ್ಡರ್ನ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಸುಧೀರ್‌ ವಿ. ಶೆಟ್ಟಿ, ತುಂಗಾ ಗ್ರೂಪ್‌ ಆಫ್‌ ಹೊಟೇಲ್ಸ್‌ನ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಸುಧಾಕರ ಎಸ್‌. ಹೆಗ್ಡೆ, ಈಸ್ಟ್‌ ಬೆಸ್ಟೋಸ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಇದರ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಪ್ರಭಾಕರ ಜೆ. ಶೆಟ್ಟಿ ಉಲ್ಲಾಸ್‌ನಗರ, ಎಸ್‌ವಿ ಇಂಗ್ಲಿಷ್‌ ಮೀಡಿಯಂ ಸ್ಕೂಲ್‌ ಮುರ್ಬಾಡ್‌ ಇದರ ವಿಶ್ವಸ್ತ ಡಾ| ಸುರೇಂದ್ರ ವಿ. ಶೆಟ್ಟಿ ಇವರು ಆಗಮಿಸಲಿದ್ದಾರೆ. ಸಮಾರಂಭದಲ್ಲಿ ಉತ್ತರ ಮುಂಬಯಿ ಲೋಕಸಭಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಭರ್ಜರಿ ಜಯಭೇರಿ ಗಳಿಸಿದ, ಸಂಘದ ಅಭಿವೃದ್ಧಿಗಾಗಿ ಸ್ಪಂದಿಸುತ್ತಿರುವ ಗೋಪಾಲ್‌ ಸಿ. ಶೆಟ್ಟಿ ಅವರನ್ನು ಬಂಟರ ಸಂಘದ ವತಿಯಿಂದ ಸಮ್ಮಾನಿಸಲಾಗುವುದು.

ಇದೇ ಸಂದರ್ಭದಲ್ಲಿ ಸಂಘದ ನವಿಮುಂಬಯಿ ಪ್ರಾದೇಶಿಕ ಸಮಿತಿ, ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ, ಸಿಟಿ ಪ್ರಾದೇಶಿಕ ಸಮಿತಿ, ಕುರ್ಲಾ-ಭಾಂಡೂಪ್‌ ಪ್ರಾದೇಶಿಕ ಸಮಿತಿ, ಥಾಣೆ-ಮುಲುಂಡ್‌ ವಲಯದ ಸಮಾಜ ಬಾಂಧವರಿಗೆ ಸಹಾಯ ಧನ ವಿತರಿಸಲಾಗುವುದು. ಸಮಾರಂಭದಲ್ಲಿ ಆದಾಯ ತೆರಿಗೆಯ ಅಸಿಸ್ಟೆಂಟ್‌ ಕಮಿಷನರ್‌ ನಿವ್ಯಾ ಪಿ. ಶೆಟ್ಟಿ ಐಆರ್‌ಎಸ್‌ ಇವರನ್ನು ಗಣ್ಯರ ಸಮ್ಮುಖದಲ್ಲಿ ಸಮ್ಮಾನಿಸಲಾಗುವುದು. ಕಾರ್ಯಕ್ರಮದ ಕೊನೆಯಲ್ಲಿ ಭೋಜನದ ವ್ಯವಸ್ಥೆಯನ್ನು ಆಯೋಜಿಸಲಾಗಿದೆ.

ಈ ಎಲ್ಲ ಕಾರ್ಯಕ್ರಮಗಳಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಸಂಘದ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಉಪಾಧ್ಯಕ್ಷ ಚಂದ್ರಹಾಸ್‌ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್‌ ಭೋಜ ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್‌ ಎಸ್‌. ಶೆಟ್ಟಿ, ಜತೆ ಕೋಶಾಧಿಕಾರಿ ಗುಣಪಾಲ್‌ ಆರ್‌. ಶೆಟ್ಟಿ ಐಕಳ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಉಪ ಕಾರ್ಯಾಧ್ಯಕ್ಷ ಸುಬ್ಬಯ್ಯ ಎ. ಶೆಟ್ಟಿ, ಕಾರ್ಯದರ್ಶಿ ಖಾಂದೇಶ್‌ ಭಾಸ್ಕರ್‌ ವೈ. ಶೆಟ್ಟಿ, ಕೋಶಾಧಿಕಾರಿ ಸುರೇಶ್‌ ಬಿ. ಶೆಟ್ಟಿ ಮರಾಠ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಎಸ್‌. ಹೆಗ್ಡೆ, ಯುವ ವಿಭಾಗದ ಕಾರ್ಯಾಧ್ಯಕ್ಷ ಶರತ್‌ ವಿ. ಶೆಟ್ಟಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಿಶೇಷ ಸಮಾಜ ಸೇವೆ
ಸುಮಾರು 92 ವರ್ಷಗಳ ಸುದೀರ್ಘ‌ ಇತಿಹಾಸ ಇರುವ ನಗರದ ಪ್ರತಿಷ್ಠಿತ ಹಿರಿಯ ಸಂಸ್ಥೆ ಬಂಟರ ಸಂಘವು ತನ್ನ ಸಾಮಾಜಿಕ ಕಳಕಳಿಯ ಯೋಜನೆಗಳಿಂದ ಬಂಟ ಸಮುದಾಯದ ಮನೆ-ಮನಗಳನ್ನು ಬೆಳಗುವ ನಿಟ್ಟಿನಲ್ಲಿ ವಿಶೇಷ ಕಾರ್ಯ ನಿರ್ವಹಿಸುತ್ತಿರುವ ಜೊತೆಗೆ ವಿಶ್ವದ ಬಂಟರ ಸಂಘಟನೆಗಳಲ್ಲಿ ಮಾದರಿ ಸಂಸ್ಥೆಯಾಗಿ ಬೆಳೆದು ನಿಂತಿದೆ. ಶಿಕ್ಷಣ ಒಂದೇ ಎಲ್ಲ ಸಮಸ್ಯೆಗಳಿಗೆ ಪರಿಹಾರ ಎನ್ನುವ ಘೋಷ ವಾಕ್ಯದೊಂದಿಗೆ ಪ್ರತಿಭೆ ಇದ್ದೂ ಆರ್ಥಿಕವಾಗಿ ಹಿಂದುಳಿದಿರುವ ಶಿಕ್ಷಣ ವಂಚಿತ ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸಿ, ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹಿಸುತ್ತಿದೆ. ವಿಕಲ ಚೇತನರಿಗೆ, ಆರ್ಥಿಕವಾಗಿ ಹಿಂದುಳಿದ ಸಮಾಜದ ಅಸಹಾಯಕ ಬಂಟ ವಿಧವೆಯರಿಗೆ ಸಹಾಯ ನೀಡುತ್ತಾ ಬರುತ್ತಿದೆ. ಸುಮಾರು ಹದಿನೈದು ವರ್ಷಗಳಿಂದ ನಿರಂತರವಾಗಿ ಆರ್ಥಿಕ ಸಹಾಯ ಮೇಳವನ್ನು ಆಯೋಜಿಸುತ್ತಾ ಬರುತ್ತಿದೆ. ಇತ್ತೀಚೆಗಿನ ದಿನಗಳಲ್ಲಿ ಸುಮಾರು ಒಂದೂವರೆ ಕೋ. ರೂ. ಗಳಷ್ಟು ನಿಧಿಯನ್ನು ವಿತರಿಸಲಾಗುತ್ತಿದೆ. ಪ್ರತಿ ವರ್ಷ ಸುಮಾರು 6 ಸಾವಿರಕ್ಕಿಂತರೂ ಅಧಿಕ ಬಂಟ ಬಾಂಧವರು ಪಾಲ್ಗೊಳ್ಳುತ್ತಿದ್ದಾರೆ.

ಅಧ್ಯಕ್ಷರ ನೂತನ ಯೋಜನೆ ಸಂಘದ ಅಧ್ಯಕ್ಷರಾಗಿ ಪದ್ಮನಾಭ ಎಸ್‌. ಪಯ್ಯಡೆ ಅವರು ಪದವಿ ಪಡೆದ ಸಂದರ್ಭ ದಲ್ಲಿ ಘೋಷಿಸಿದಂತೆ ಈ ವರ್ಷ ಹೊಸ ಯೋಜನೆಯೊಂದನ್ನು ಆರಂಭಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಸುಮಾರು 100 ವಿದ್ಯಾರ್ಥಿಗಳನ್ನು ಪ್ರಾಥಮಿಕ ಹಂತದಿಂದಲೇ ದತ್ತು ಸ್ವೀಕರಿಸಿ ಪ್ರತಿ ವಿದ್ಯಾರ್ಥಿಯ ವಾರ್ಷಿಕ ಶಿಕ್ಷಣದ ಖರ್ಚು ಸುಮಾರು 25 ಸಾವಿರ ರೂ. ಗಳನ್ನು ನೀಡುವ ಯೋಜನೆಗೆ ಪೂರಕವೆಂಬಂತೆ ಸುಮಾರು ನೂರು ದಾನಿಗಳು ತಮ್ಮ ಸ್ವಇಚ್ಛೆಯಿಂದ ಮುಂದೆ ಬಂದಿದ್ದು, ಪ್ರತಿಯೋರ್ವ ದಾನಿ ತಲಾ ಒಂದು ಮತ್ತು ಅದಕ್ಕಿಂತ ಹೆಚ್ಚು ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸಲು ಮುಂದಾಗಿದ್ದಾರೆ.
ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಅವರು ಹಾಗೂ ಪದಾಧಿಕಾರಿಗಳಮಾರ್ಗದರ್ಶನದೊಂದಿಗೆ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ ಮತ್ತು ಪದಾಧಿಕಾರಿಗಳ ನೇತೃತ್ವದಲ್ಲಿ ಈ ಬಾರಿ ವಿಧವಾ ಮಾಸಾಶನ ಮತ್ತು ವಿಕಲ ಚೇತನರಿಗೆ ನೀಡುವ ನಾಲ್ಕು ಸಾವಿರ ರೂ. ಮೊತ್ತವನ್ನು ಏಳು ಸಾವಿರ ರೂ. ಗಳಿಗೆ ಏರಿಸಲಾಗಿದೆ. ಜತೆಗೆ ಪ್ರಮಾಣ ಪತ್ರ ನೀಡುವ ಹೊಸ ಸ್ಕೀಮ್‌ವೊಂದನ್ನು ಆರಂಭಿಸಲಾಗಿದೆ.

ದಾನಿಗಳ ಸಹಕಾರ
ಈ ಬಾರಿಯ ವಾರ್ಷಿಕ ಬಂಟ ಸಾಧಕ ಪ್ರಶಸ್ತಿ ಪುರಸ್ಕೃತರಾದ ಹಿರಿಯ ಮುತ್ಸದ್ಧಿ ಸಂಘದ ಮಾಜಿ ಅಧ್ಯಕ್ಷ ಹಾಗೂ ಮಾಜಿ ವಿಶ್ವಸ್ತ ಎಂ. ಡಿ. ಶೆಟ್ಟಿ ಅವರು ತಮ್ಮ ಪ್ರಶಸ್ತಿ ಗೌರವ ಮೊತ್ತ ಒಂದು ಲಕ್ಷ ರೂ.ಗಳನ್ನು ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಗೆ ದೇಣಿಗೆಯಾಗಿ ನೀಡಿದ್ದಾರೆ. ಜಾಗತಿಕ ಬಂಟರ ಸಂಘ ಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರು ಸಮಿತಿಗೆ ವಿಶೇಷ ದೇಣಿಗೆಯನ್ನು ನೀಡಿ ಸಹಕರಿಸಿದ್ದಾರೆ. ದಾನಿಗಳಾದ ಪ್ರಕಾಶ್‌ ಶೆಟ್ಟಿ ಬಂಜಾರ, ಸುಧೀರ್‌ ವಿ. ಶೆಟ್ಟಿ, ಪ್ರಭಾಕರ ಜೆ. ಶೆಟ್ಟಿ ಅವರು ಪ್ರತಿ ವರ್ಷದಂತೆ ನಿಗದಿತ ಮೊತ್ತವನ್ನು ದೇಣಿಗೆ ರೂಪದಲ್ಲಿ ನೀಡಿ ಸಹಕರಿಸುತ್ತಾ ಬಂದಿದ್ದಾರೆ. ಈ ಬಾರಿ ಬಂದಿರುವ ಎಲ್ಲ ಅರ್ಜಿಗಳ ಪುನರ್‌ ಪರಿಶೀಲನೆಗಾಗಿ ಭಾಸ್ಕರ್‌ ಶೆಟ್ಟಿ ಕಾರ್ನಾಡ್‌ ಇವರ ಮುಂದಾಳತ್ವದಲ್ಲಿ ನೂತನ ಸಮಿತಿಯು ಕಾರ್ಯಪ್ರವೃತ್ತವಾಗಿದ್ದು, ಕಿಶೋರ್‌ ಕುಮಾರ್‌ ಕುತ್ಯಾರ್‌, ಶಿವಪ್ರಸಾದ್‌ ಶೆಟ್ಟಿ, ಗೌತಮ್‌ ಶೆಟ್ಟಿ, ಪ್ರಸನ್ನ ಶೆಟ್ಟಿ, ಸಂಘದ ಮಹಾಪ್ರಬಂಧಕ ಪ್ರವೀಣ್‌ ಶೆಟ್ಟಿ, ಪ್ರಬಂಧಕ ಸುಕುಮಾರ್‌ ಶೆಟ್ಟಿ, ಸಂಘದ ಸಿಬಂದಿಗಳು ಬಹಳಷ್ಟು ಶ್ರಮಿಸಿದ್ದಾರೆ.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.