ಕಲ್ಯಾಣ್ ಕರ್ನಾಟಕ ಮಿತ್ರ ಮಂಡಲ: ಶ್ರೀ ಶಾರದಾ ಮಹಾಪೂಜೆ
Team Udayavani, Oct 16, 2019, 5:58 PM IST
ಕಲ್ಯಾಣ್, ಅ. 15: ಕಲ್ಯಾಣ್ ಪೂರ್ವದ ತೀಸ್ಗಾಂವ್ನ ಕರ್ನಾಟಕ ಮಿತ್ರ ಮಂಡಲದ ವತಿಯಿಂದ ನವರಾತ್ರಿ ಅಂಗವಾಗಿ ಶ್ರೀ ಶಾರದಾ ಮಹಾಪೂಜೆಯು ಸೆ. 29ರಂದು ವಿವಿಧ ಧಾರ್ಮಿಕ ಕಾರ್ಯಕ್ರಮ ಗಳೊಂದಿಗೆ ಸಂಘದ ಕಚೇರಿಯಲ್ಲಿ ನಡೆಯಿತು.
ಪೂರ್ವಾಹ್ನ 11ರಿಂದ ಅಪರಾಹ್ನ 2ರವರೆಗೆ ಭಜನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ರಾಜೇಶ್ ಪೂಜಾರಿ ಅವರು ಪೂಜಾ ವಿಧಿ- ವಿಧಾನಗಳನ್ನು ನೆರವೇರಿಸಿ ಸಾಮೂಹಿಕ ಪ್ರಾರ್ಥನೆಗೈದರು. ಕೊನೆಯಲ್ಲಿ ಮಹಾಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಭಕ್ತಾದಿಗಳು ಅಧಿಕ ಸಂಖ್ಯೆಯಲ್ಲಿಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ದಿವಾಕರ ಸಾಲ್ಯಾನ್, ಗೌರವಾಧ್ಯಕ್ಷ ಶ್ರೀಧರ ಪೂಜಾರಿ, ಉಪಾಧ್ಯಕ್ಷ ವಿಶ್ವನಾಥ್ ಅಮೀನ್, ರಮೇಶ್ ಪೂಜಾರಿ, ಕಾರ್ಯದರ್ಶಿ ಪುರುಷೋತ್ತಮ ಪೂಜಾರಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ದೇವಕಿ ಪೂಜಾರಿ, ಪ್ರೀತಿ ಪೂಜಾರಿ, ಸುಜಾತಾ ಕೋಟ್ಯಾನ್, ಶ್ರೀಮತಿ ಕೋಟ್ಯಾನ್, ಸುಶೀಲಾ ಪೂಜಾರಿ, ಆನಂದ ಪೂಜಾರಿ, ರಾಮ ಪೂಜಾರಿ, ಉಮಾನಾಥ್ ಸಫಲಿಗ ಉಪಸ್ಥಿತರಿದ್ದರು. ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗ, ಯುವ ವಿಭಾಗದ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ತುಳು-ಕನ್ನಡಿಗರು, ಸ್ಥಳೀಯ ಉದ್ಯಮಿಗಳು, ವಿವಿಧ ಕ್ಷೇತ್ರಗಳಗಣ್ಯರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದು ಪ್ರಸಾದ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ