ಕಲ್ಯಾಣ್‌ ಓಂ ಶಕ್ತಿ ಮಹಿಳಾ ಸಂಸ್ಥೆ: ಗ್ರಾಮೀಣರಿಗೆ ನೆರವು


Team Udayavani, Jun 28, 2019, 5:51 PM IST

2706MUM06

ಕಲ್ಯಾಣ್‌: ಓಂ ಶಕ್ತಿ ಮಹಿಳಾ ಸಂಸ್ಥೆ ಕಲ್ಯಾಣ್‌ ಇದರ ವತಿಯಿಂದ ಸಂಸ್ಥೆಯ ಗೌರವಾಧ್ಯಕ್ಷೆ ಚಿತ್ರಾ ಆರ್‌. ಶೆಟ್ಟಿ ಮುಂದಾಳತ್ವದಲ್ಲಿ ಮೋಹ್‌ವಾಡಿಯ ಮಕ್ಕಳಿಗೆ ಶಾಲಾ ಪರಿಕರಗಳು ಮತ್ತು ಸೈಕಲ್‌ ವಿತರಣೆ ಹಾಗೂ ಗ್ರಾಮೀಣ ಭಾಗದ ಜನತೆಗೆ ಸೇವಾ ಸೌಲಭ್ಯಗಳ ಪೂರೈಕೆ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.

ವಿವಿಧ ಕ್ಷೇತ್ರಗಳಲ್ಲಿ ಸೇವೆಗಳನ್ನು ಮಾಡುತ್ತಾ ಬಂದಿರುವ ಕಲ್ಯಾಣ್‌ ಪರಿಸರದ ಓಂ ಶಕ್ತಿ ಮಹಿಳಾ ಸಂಸ್ಥೆ ವರ್ಷದ ಆದಿಯಲ್ಲಿ ಕಲ್ಯಾಣ್‌ನಿಂದ 60 ಕೀ. ಮೀ. ದೂರದಲ್ಲಿರುವ ಮೋಹ್‌ವಾಡಿಯ ಆದಿವಾಸಿ ಜನಾಂಗದ 50 ಕುಟುಂಬಗಳಿಗೆ ದೈನಂದಿನ ಬದುಕಿಗೆ ಪೂರಕವಾಗಿ, ಅವರಿಗೆ ಹೈನುಗಾರಿಕೆ ಮತ್ತು ಕೋಳಿ ಸಾಕಣೆಯ ಸೌಲಭ್ಯವನ್ನು ಒದಗಿಸಿ ಕೊಟ್ಟು ಮೋಹ್‌ವಾಡಿಯನ್ನು ಒಂದು ಮಾದರಿ ಹಳ್ಳಿಯಾಗಿ ಮಾರ್ಪಡಿ ಸುವಲ್ಲಿ ಯಶಸ್ವಿಯಾಗಿದೆ.

ಇದೇ ಹಳ್ಳಿಯಲ್ಲಿ 5-6 ಕಿ. ಮೀ. ದೂರದ ಹೈಸ್ಕೂಲ್‌ಗೆ ಕಾಲ್ನಡಿಗೆಯಲ್ಲಿಯೇ ತೆರಳುವ ಸುಮಾರು 30 ವಿದ್ಯಾರ್ಥಿಗಳಿಗೆ ಸೈಕಲ್‌ ವ್ಯವಸ್ಥೆ ಹಾಗೂ ಮೋಹ್‌ವಾಡಿಯ ಸುಮಾರು 80 ಮಕ್ಕಳಿಗೆ ಪಾದರಕ್ಷೆ, ಇನ್ನಿತರ ಶಾಲಾ ಪರಿಕರಗಳನ್ನು ವಿತರಿಸಲಾಯಿತು.

ಅಕಾಲಿಕ ಮಳೆಯಿಂದ ಹಾನಿಗೊಳ ಗಾದ ಪ್ರದೇಶಕ್ಕೆ ಶಾಸಕ ಕಿಶನ್‌ಜಿà ಕಕೋರೆ, ತಹಶೀಲ್ದಾರ್‌, ಜಿಲ್ಲಾ ಪರಿಷತ್‌ನ ಉಪ ಸಭಾಪತಿ ಸೀಮಾ ಘರಾಟ್‌, ಜಿಲ್ಲಾ ಪರಿಷತ್‌ನ ಸದಸ್ಯ ಅನಿಲ್‌ ಘರಾಟ್‌ ಮತ್ತಿತರ ಸರಕಾರಿ ಅಧಿಕಾರಿಗಳೊಂದಿಗೆ ಓಂ ಶಕ್ತಿ ಮಹಿಳಾ ಸಂಸ್ಥೆಯ ಮಹಿಳೆಯರು ಭೇಟಿ ನೀಡಿ ಸಂಕಷ್ಟಕ್ಕೊಳಗಾದ ಕುಟುಂಬಗಳಿಗೆ ದಿನನಿತ್ಯದ ಅಗತ್ಯ ಆಹಾರ ಪದಾರ್ಥಗಳು ಮತ್ತು ಇನ್ನಿತರ ಸಾಮಗ್ರಿ ವಿತರಿಸಿದರು.

ಮೂಲ ಸೌಕರ್ಯಗಳಿಂದ ವಂಚಿತರಾದ ಶಾಲಾ ಮಕ್ಕಳ ಜ್ಞಾನ ವಿಕಾಸಕ್ಕಾಗಿ ಶಾರದಾ ವಿದ್ಯಾ ಮಂದಿರ್‌ ವೈಶಾಖರೆ ಶಾಲೆಗೆ 2 ಕಂಪ್ಯೂಟರ್‌ಗಳನ್ನು ಪೂರೈಸಲಾಯಿತು. ಸಂಸ್ಥೆಯ ಅಧ್ಯಕ್ಷೆ ಹರಿಣಿ ಟಿ. ಶೆಟ್ಟಿ, ಉಪಾಧ್ಯಕ್ಷೆ ಜ್ಯೋತಿ ಎಸ್‌. ಶೆಟ್ಟಿ, ಕೋಶಾಧಿಕಾರಿ ಸುರೇಖಾ ಎಚ್‌. ಶೆಟ್ಟಿ, ಜತೆ ಕೋಶಾಧಿಕಾರಿ ಕುಶಲಾ ಜಿ. ಶೆಟ್ಟಿ, ಸಮಾಜ ಕಲ್ಯಾಣ ಸಮಿತಿಯ ಶಶಿ ಪಿ. ಶೆಟ್ಟಿ, ರಜನಿ ಎಸ್‌. ಶೆಟ್ಟಿ, ಉಷಾ ಎ. ಶೆಟ್ಟಿ, ಸುಪ್ರೀತಾ ಎಂ. ಭಂಡಾರಿ, ಶಾಲಿನಿ ಎಸ್‌. ಶೆಟ್ಟಿ, ಯಶೋದಾ ಆರ್‌. ಶೆಟ್ಟಿ, ಪ್ರೇಮಾ ಆಳ್ವ, ಕುಮಾರಿ ವಿ. ಶೆಟ್ಟಿ, ಪ್ರಕೃತಿ ಎಸ್‌. ಶೆಟ್ಟಿ, ಇಂದಿರಾ ಎಲ್‌. ಶೆಟ್ಟಿ, ರಂಜಿತಾ ಆರ್‌. ಶೆಟ್ಟಿ, ಸುಧಾ ಡಿ. ಶೆಟ್ಟಿ, ಆಶಾ ವಿ. ಶೆಟ್ಟಿ, ಆಶ್ನಾ ಪಿ. ಶೆಟ್ಟಿ ಮೊದಲಾದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತ ನಾಡಿದ ಸಂಸ್ಥೆಯ ಗೌರವಾಧ್ಯಕ್ಷೆ ಚಿತ್ರಾ ಆರ್‌. ಶೆಟ್ಟಿ ಅವರು, ಇನ್ನೂ ಹಲವು ಮಕ್ಕಳಿಗೆ ಸಹಾಯ ಮಾಡಲಿದ್ದೇವೆ. ನಮ್ಮ ಈ ಸಮಾಜ ಸೇವೆಗೆ ಶ್ರಮಿಸಿದ ಎಲ್ಲ ದಾನಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇನೆ. ನಮ್ಮ ಸಮಾಜಪರ ಕಾರ್ಯಗಳಿಗೆ ಎಲ್ಲರ ಸಹಕಾರ ಸದಾಯಿರಲಿ ಎಂದು ಆಶಿಸಿದರು. ಹರಿಣಿ ಟಿ. ಶೆಟ್ಟಿ ವಂದಿಸಿದರು.

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.