ಕಾಂದಿವಲಿ ಕನ್ನಡ ಸಂಘ: ಮಹಿಳಾ ವಿಭಾಗದಿಂದ ವಿಶೇಷ ಭಜನೆ
Team Udayavani, Sep 6, 2017, 11:34 AM IST
ಮುಂಬಯಿ: ಕಾಂದಿವಲಿ ಕನ್ನಡ ಸಂಘದ ಮಹಿಳಾ ವಿಭಾಗದ ವತಿಯಿಂದ ಗಣೇಶೋತ್ಸವದ ಅಂಗವಾಗಿ ಮಹಿಳಾ ಸದಸ್ಯೆಯರಿಂದ ಹಾಗೂ ಸದಸ್ಯರಿಂದ ವಿಶೇಷ ಭಜನ ಕಾರ್ಯಕ್ರಮವು ಸೆ. 2ರಂದು ಕಾಂದಿವಲಿ ಪಶ್ಚಿಮದ ಪೊಯಿಸಾರ್ ಜಿಮಾVನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನೆರವೇರಿತು.
ಸಂಜೆ 4ರಿಂದ ಪ್ರಾರಂಭಗೊಂಡ ಧಾರ್ಮಿಕ ಭಜನ ಕಾರ್ಯಕ್ರಮವನ್ನು ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸರೋಜಾ ಎಸ್. ಶೆಟ್ಟಿ ಅವರು ಉದ್ಘಾಟಿಸಿದರು. ಅನಂತರ ಮಹಿಳಾ ವಿಭಾಗದವರಿಂದ ಸುಮಾರು ಮೂರು ಗಂಟೆಗಳ ಕಾಲ ಭಜನ ಕಾರ್ಯಕ್ರಮ ನೆರವೇರಿತು. ಸಂಘದ ಸದಸ್ಯ ಬಾಂಧವರು ಭಜನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಮಹಾ ಮಂಗಳಾರತಿಯೊಂದಿಗೆ ಕಾರ್ಯಕ್ರಮವು ಕೊನೆಗೊಂಡಿತು. ಮಹಿಳೆಯರು ಗಣಪತಿಗೆ ಮಹಾಮಂಗಳಾರತಿಗೈದರು.
ಕೊನೆಯಲ್ಲಿ ಪ್ರಸಾದ ವಿತರಣೆ ನಡೆಯಿತು. ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಜಿ. ಟಿ. ಪೂಜಾರಿ, ಉಪಾಧ್ಯಕ್ಷ ಪ್ರೇಮನಾಥ್ ಕೋಟ್ಯಾನ್, ಜತೆ ಕಾರ್ಯದರ್ಶಿ ಉಮೇಶ್ ಸುರತ್ಕಲ್, ಸಬಿತಾ ಜಿ. ಪೂಜಾರಿ, ಗೌರವ ಕೋಶಾಧಿಕಾರಿ ಸುಂದರ ಎಸ್. ಶೆಟ್ಟಿ, ಮಾಜಿ ಅಧ್ಯಕ್ಷ ಶ್ಯಾಮರಾಜ್ ಶೆಟ್ಟಿ, ಕೃಷ್ಣ ಉದ್ಯಾವರ್, ವಾರಿಜಾ ಎಸ್. ಕರ್ಕೇರ, ಗೀತಾ ಜೆ. ಶೆಟ್ಟಿ, ಜಯಶ್ರೀ ಆಳ್ವ, ಕಾಂತಿ ಶೆಟ್ಟಿಗಾರ್, ಉಪ ಕಾರ್ಯಾಧ್ಯಕ್ಷೆ ಯಶೋಧಾ ಎಸ್. ಶೆಟ್ಟಿ, ಸಲಹೆಗಾರ ಮಂಜಯ್ಯ ಸಿ. ಅಮೀನ್, ಹಿನ್ನೆಲೆ ಗಾಯನದಲ್ಲಿ ವಾಸು ಪೂಜಾರಿ ಮತ್ತು ಬಳಗದವರು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ