ಸಮಾಜದ ಹಿತಕ್ಕೆ ಪ್ರತಿಯೊಬ್ಬರೂ ಶ್ರಮಿಸಬೇಕು:ಮುದ್ರಾಡಿ ದಿವಾಕರ ಶೆಟ್ಟಿ


Team Udayavani, Mar 21, 2017, 4:33 PM IST

18-Mum06.jpg

ಮುಂಬಯಿ: ನಾವೆಲ್ಲರೂ ಸಮಾಜದ ಅಂಗವೇ ಆಗಿದ್ದೇವೆ. ಸಮಾಜದ ಸುತ್ತಮುತ್ತಲಿನ ಕಷ್ಟ ಸುಖಗಳಿಗೆ ಸ್ಪಂದಿಸುವುದು ನಮ್ಮ ಕರ್ತವ್ಯ. ಸಮಾಜ ಸೇವೆ ಅದು ಪ್ರಚಾರದ ವಸ್ತುವಲ್ಲ ಎಂದು ಹಿರಿಯ ಉದ್ಯಮಿ, ಸಮಾಜ ಸೇವಕ ಮುದ್ರಾಡಿ ದಿವಾಕರ ಶೆಟ್ಟಿ ಅವರು ಅಭಿಪ್ರಾಯಪಟ್ಟರು.

ಅವರು ಇತ್ತೀಚೆಗೆ ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯ ಆಯೋಜಿಸಿದ ಡಾ| ವಿಶ್ವನಾಥ ಕಾರ್ನಾಡ್‌ ಅಭಿನಂದನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಇಂಗ್ಲೀಷ್‌ ವ್ಯಾಮೋಹದಿಂದ ಇವತ್ತು ಕನ್ನಡ ಮೂಲೆ ಪಾಲಾಗುತ್ತಿದೆ. ಗ್ರಾಮೀಣ ಭಾಗದಲ್ಲೂ ಪಾಲಕರು ಇಂಗ್ಲಿಷ್‌ ಮಾಧ್ಯಮ ಶಾಲೆಗೆ ತಮ್ಮ ಮಕ್ಕಳನ್ನು ಕಳುಹಿಸುತ್ತಿದ್ದಾರೆ. ನನ್ನ ಊರಿನಲ್ಲೂ ಇಂತಹ ಪರಿಸ್ಥಿತಿ ಉಂಟಾಗಿ ಕನ್ನಡ ಶಾಲೆ ಮುಚ್ಚುವ ಹಂತಕ್ಕೆ ಬಂದಾಗ ನಾನೇ ಮುಂದೆ ಹೋಗಿ ಕನ್ನಡ ಮಾಧ್ಯಮದಲ್ಲಿ ಓದುವ ಮಕ್ಕಳಿಗೆ ವಿದ್ಯಾರ್ಥಿ ವೇತನ ಹಾಗೂ ಬಹುಮಾನವನ್ನು ಪ್ರಾಯೋಜಿಸಿದೆ. ಪರಿಣಾಮವಾಗಿ ಮುದ್ರಾಡಿಯಲ್ಲಿ ಕನ್ನಡ ಶಾಲೆ ಚೆನ್ನಾಗಿ ನಡೆಯುತ್ತಿದೆ. ಯಾವುದೇ ಪ್ರಚಾರಕ್ಕಾಗಿ ನಾನು ಈ ಕಾರ್ಯವನ್ನು ಮಾಡಿದ್ದಲ್ಲ. ನನ್ನ ಕರ್ತವ್ಯವೆಂದು ಮಾಡಿದ್ದೇನೆ ಎಂದು ನುಡಿದು ಡಾ| ಕಾರ್ನಾಡರಿಗೆ ಶುಭ ಹಾರೈಸಿದರು.

ಇನ್ನೋರ್ವ ಮುಖ್ಯ ಅತಿಥಿ ಕವಿ, ಸಂಘಟಕ ಪೇತ್ರಿ ವಿಶ್ವನಾಥ ಶೆಟ್ಟಿ ಅವರು ಮಾತನಾಡಿ, ನಾನು ಕಾರ್ನಾಡರ ಕಥೆಗಳಿಗೆ ಮಾರು ಹೋಗಿದ್ದೇನೆ. ಕಾರ್ನಾಡರ ಕಥೆಗಳಲ್ಲಿ ಬರುವ ಪಾತ್ರಗಳು ನನ್ನನ್ನೇ ಉದ್ದೇಶಿಸಿ ಬರೆದಂತೆ ಭಾಸವಾಗುತ್ತಿತ್ತು. ಅವರ ಕಥೆಗಳು ನನ್ನನ್ನು ಬಹುವಾಗಿ ಕಾಡಿವೆ. ಇನ್ನಷ್ಟು ಸಾಹಿತ್ಯ ಕೃಷಿ ಅವರಿಂದ ಮೂಡಿಬರಲಿ ಎಂದು ಅವರು ಹಾರೈಸಿದರು.

ವಿಭಾಗದ ಸಹ ಪ್ರಾಧ್ಯಾಪಕರಾದ ಡಾ| ಪೂರ್ಣಿಮಾ ಸುಧಾಕರ ಶೆಟ್ಟಿ ಅವರು ಮಾತನಾಡಿ, ಇಂದಿನ ಈ ವೇದಿಕೆ ನನ್ನ ಪಾಲಿಗೆ ತುಂಬಾ ವಿಶೇಷವಾದುದು. ಯಾಕೆಂದರೆ  ಡಾ| ಜಿ. ಎನ್‌. ಉಪಾಧ್ಯ ಅವರು ನನ್ನ ಗುರುಗಳೂ, ಮಾರ್ಗದರ್ಶಕರಾದರೆ ಡಾ| ವಿಶ್ವನಾಥ ಕಾರ್ನಾಡ್‌ ಜೊತೆಯಲ್ಲಿ ಮುದ್ರಾಡಿ ದಿವಾಕರ ಶೆಟ್ಟಿ, ಪೇತ್ರಿ ವಿಶ್ವನಾಥ ಶೆಟ್ಟಿ ಇವರೆಲ್ಲರೂ ನನಗೆ ಗುರುಸಮಾನರು. ನನ್ನನ್ನು ಸಾಹಿತ್ಯಿಕವಾಗಿ ಸಾಂಸ್ಕೃತಿಕವಾಗಿ ಬೆಳೆಸಿದವರು. ಡಾ| ವಿಶ್ವನಾಥ ಕಾರ್ನಾಡರು ಮುಂಬಯಿಯಲ್ಲಿ ಸಾಹಿತ್ಯಲೋಕದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದವರು. ಅವರ ಮುಂದಿನ ಜೀವನ ಸುಖಮಯವಾಗಿರಲಿ ಎಂದು ಅಭಿನಂದಿಸಿ ಶುಭಾಶಯವನ್ನು ಕೋರಿದರು.

ಇಂದು ವಿಶೇಷ ತರಗತಿಗಾಗಿ ವಿಭಾಗಕ್ಕೆ ಬಂದಿದ್ದೆ. ಇಲ್ಲಿ ವಿದ್ಯಾರ್ಥಿಗಳು ಹುಟ್ಟುಹಬ್ಬವನ್ನು ಆಚರಿಸಿದ್ದು ನನ್ನ ಪಾಲಿನ ಅವಿಸ್ಮರಣೀಯ ಗಳಿಗೆ. ನಾನು ನನ್ನ  ಶ್ರೀಮತಿಯ ಅಗಲುವಿಕೆಯ ನಂತರ ಹುಟ್ಟುಹಬ್ಬವನ್ನು ಆಚರಿಸಿರಲಿಲ್ಲ. 

ಆದರೆ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ| ಜಿ. ಎನ್‌. ಉಪಾಧ್ಯ ಹಾಗೂ ನನ್ನ ವಿದ್ಯಾರ್ಥಿಗಳು ಮತ್ತೆ ಆ ದಿನಗಳನ್ನು ಮೆಲುಕು ಹಾಕುವಂತೆ ಮಾಡಿದ್ದಾರೆ. ನಿಮ್ಮೆಲ್ಲರ ಪ್ರೀತಿಗೆ ನಾನು ಋಣಿಯಾಗಿದ್ದೇನೆ. ಇಂದು ಮುಂಬಯಿಯ ಉದ್ಯಮಿ, ಸಮಾಜಸೇವಕ, ಸಾಹಿತ್ಯ ಪ್ರೇಮಿ ಮುದ್ರಾಡಿ ದಿವಾಕರ ಶೆಟ್ಟಿ, ಕವಿ, ಸಂಘಟಕ ಪೇತ್ರಿ ವಿಶ್ವನಾಥ ಶೆಟ್ಟಿ ಇವರು ಅಕಸ್ಮಿಕವಾಗಿ ವಿಭಾಗಕ್ಕೆ ಭೇಟಿಕೊಟ್ಟು ನನ್ನನ್ನು ಅಭಿನಂದಿಸಿರುವುದು ನನ್ನ ಭಾಗ್ಯ ಎಂದು ನುಡಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ವಿಭಾಗದ ಮುಖ್ಯಸ್ಥರಾದ ಡಾ| ಜಿ. ಎನ್‌. ಉಪಾಧ್ಯ 
ಅವರು ಮುಂಬಯಿಯಲ್ಲಿ ಕನ್ನಡವನ್ನು ಮುನ್ನಡೆಸುವ ಮಹನೀಯರಲ್ಲಿ ಕಾರ್ನಾಡರೂ ಒಬ್ಬರು. ಕಥೆ ಗಾರರಾಗಿ, ಅನುವಾದಕರಾಗಿ, ಸಂಶೋ ಧಕರಾಗಿ ಅವರು ಹೆಸರು ಮಾಡಿದ್ದಾರೆ. ಮುಂಬಯಿ ವಿಶ್ವ ವಿದ್ಯಾಲಯದಲ್ಲಿ ಕಳೆದ 4 ದಶಕಗಳಿಂದ ಸಂಪರ್ಕದಲ್ಲಿದ್ದುಕೊಂಡು ಮಾರ್ಗ ದರ್ಶನವನ್ನು ಮಾಡುತ್ತಾ ಬಂದಿದ್ದಾರೆ. ಕಾರ್ನಾಡರು ಕರ್ನಾಟಕ ಮಹಾರಾಷ್ಟ್ರದಲ್ಲಿನ ಸಾಂಸ್ಕೃತಿಕ ಕೊಂಡಿಯಾಗಿಯೂ ಮುಖ್ಯ ರಾಗುತ್ತಾರೆ. ಎಲ್ಲವನ್ನೂ ಸರಕಾರವೇ ಮಾಡಬೇಕು ಎಂದು ಭಾವಿಸುವುದು ತರವಲ್ಲ. 

ಪ್ರತಿಯೊಬ್ಬರು ತಮ್ಮ ಕೈಲಾದ ಸೇವೆ ಮಾಡಿದಾಗ ದೇಶದ ಅಭಿವೃದ್ಧಿ ಸಾಧ್ಯ. ಮುದ್ರಾಡಿಯವರು ಎಲೆ ಮರೆಯ ಕಾಯಿಯಂತೆ ಮಾಡುವ ಕಾರ್ಯ, ಅವರ ಸಮಾಜ ಸೇವೆ, ಪೇತ್ರಿ ವಿಶ್ವನಾಥ ಶೆಟ್ಟಿಯವರ ಕನ್ನಡ ಪ್ರೀತಿ ನಮಗೆಲ್ಲ ಮಾದರಿ ಎಂದು ನುಡಿದು ಡಾ|  ವಿಶ್ವನಾಥ  ಕಾರ್ನಾಡರಿಗೆ ಶುಭ ಹಾರೈಸಿದರು.

ಕನ್ನಡ ವಿಭಾಗದ ಎಂ.ಎ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ಕುಮುದಾ ಆಳ್ವ, ಗೀತಾ ಆರ್‌.ಎಸ್‌, ಸುರೇಖಾ ದೇವಾಡಿಗ, ಅನಿತಾ ಶೆಟ್ಟಿ, ಹೇಮಾ ಸದಾನಂದ ಅಮೀನ್‌, ಸಂಶೋಧನ ಸಹಾಯಕರಾದ ಪರಸಪ್ಪ ಹರಿಜನ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.