ಬೊರಿವಲಿಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವನ್ನು ಹುಡುಕಿಕೊಡುವಂತೆ ಆಗ್ರಹ

ಶಾಸಕರ ಹೇಳಿಕೆಗೆ ಕನ್ನಡಿಗರ ಆಕ್ರೋಶ

Team Udayavani, Dec 9, 2020, 11:39 AM IST

ಬೊರಿವಲಿಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವನ್ನು ಹುಡುಕಿಕೊಡುವಂತೆ ಆಗ್ರಹ

ಮುಂಬಯಿ, ಡಿ. 8: ಎಲ್ಲಿದೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ? ತೋರಿಸಿ ಉಪಕಾರ ಮಾಡುತ್ತೀರಾ ? ಶೀರ್ಷಿಕೆಯಲ್ಲಿ ಮಂಗಳವಾರ ಉದಯವಾಣಿಯ ಮುಖಪುಟದಲ್ಲಿ ಪ್ರಕಟಗೊಂಡ ಸುದ್ದಿಗೆ ಮುಂಬಯಿ ಕನ್ನಡಿಗರು ಅತ್ಯುತ್ತಮ ಅಭಿಪ್ರಾಯ ವ್ಯಕ್ತಪಡಿಸಿರುವು ದಲ್ಲದೇ, ಶಾಸಕರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಬಿಜೆಪಿ ಶಾಸಕ ಬಸನ ಗೌಡ ಪಾಟೀಲ್‌ ಯತ್ನಾಳ್‌ ಅವರು ಕರ್ನಾಟಕ ರಾಜ್ಯ ಸರಕಾರದ ಮರಾಠ ಅಭಿವೃದ್ಧಿ ನಿಗಮ ರಚನೆಯ ನಿರ್ಧಾರವನ್ನು ಸಮರ್ಥಿಸಿಕೊಳ್ಳುವ ಭರದಲ್ಲಿ ಮಹಾರಾಷ್ಟ್ರ ಸರಕಾರವೂ ಬೊರಿವಲಿಯಲ್ಲಿ ಮುಂಬಯಿ ಕನ್ನಡ ಅಭಿವೃದ್ಧಿ  ಪ್ರಾಧಿಕಾರ ರಚಿಸಿದ್ದು, ಅದಕ್ಕೆ ಪ್ರತೀ ವರ್ಷ 10 ಕೋ. ರೂ.ಗಳನ್ನು ನೀಡುತ್ತಿದೆ ಎಂದಿದ್ದರು.

ಸಂಘಟನೆಗಳ ಪರಿಶ್ರಮ :

ಮುಂಬಯಿಯ ಪ್ರತಿ ಭಾಗದಲ್ಲೂ ಹಲವಾರು ಕನ್ನಡಪರ ಸಂಘಟನೆಗಳಿದ್ದು, ದಿನಂಪ್ರತಿ ಕನ್ನಡ ರಾರಾಜಿಸುತ್ತಿದೆ. ಇಲ್ಲಿನ  ಕನ್ನಡಿಗರು ದುಡಿದ ಒಂದಂಶವನ್ನು ಕನ್ನಡ-ಕನ್ನಡಿಗರ ಅಭಿವೃದ್ಧಿಗಾಗಿ ಬಳಸುತ್ತಿದ್ದು, ಅದರಿಂದಲೇ ಇಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಸದಾ ನಳನಳಿಸುತ್ತಿದೆ. ಆದರೆ ಯಾವುದೋ ಪ್ರಾಧಿಕಾರದಿಂದಲ್ಲ ಎಂಬುದು ಇಲ್ಲಿನ ಕನ್ನಡಿಗರ ಅಭಿಪ್ರಾಯ.

ಸಾಮರಸ್ಯ ಮುಖ್ಯ :

ಕಳೆದ ಹಲವು ವರ್ಷಗಳಿಂದ ರಾಜಕೀಯ ಕಾರಣಗಳಿಗೆ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಆಗಾಗ್ಗೆ ವಿವಾದ ಉದ್ಭವಿಸಿದರೂ ಮಹಾರಾಷ್ಟ್ರದಲ್ಲಿನ ಕನ್ನಡಿಗರು ಸಾಮರಸ್ಯವನ್ನು ಕಾಪಾಡಿಕೊಂಡು ಬಂದಿದ್ದಾರೆ. ಜನ್ಮಭೂಮಿ ಎಷ್ಟು ಮುಖ್ಯವೋ ಕರ್ಮಭೂಮಿಯೂ ಅಷ್ಟೇ ಮುಖ್ಯ ಎನ್ನುತ್ತಾ ಕ್ರಿಯಾಶೀಲರಾಗಿದ್ದಾರೆ. ಈ ಮಧ್ಯೆ ಶಾಸಕರ ಇಂತಹ ಹೇಳಿಕೆ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವಂತಿದೆ. ಇಂಥ ಪ್ರಯತ್ನ ಸಲ್ಲದು ಎಂಬುದು ಇಲ್ಲಿನ ಕನ್ನಡಪರ ಸಂಘಟನೆಗಳ ಪ್ರತಿನಿಧಿಗಳ ಅಭಿಪ್ರಾಯ.

ಮುಂಬಯಿಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇದೆ ಎಂಬ ಹೇಳಿಕೆ ಆಶ್ಚರ್ಯಕರ. 20 ಲಕ್ಷ ತುಳು-ಕನ್ನಡಿಗರು ಮುಂಬಯಿಯಲ್ಲಿದ್ದು, ಈವರೆಗೆ ಕರ್ನಾಟಕ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಇಲ್ಲಿನ ಕನ್ನಡದ ಕೆಲಸಗಳಿಗೆ ನೇರವಾಗಿ ನೆರವು ಸಿಕ್ಕಿಲ್ಲ. ಪ್ರಾಧಿಕಾರದಿಂದ ಇಲ್ಲಿನ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಲಭಿಸುತ್ತಿದೆಯಷ್ಟೇ. ಹೀಗಿದ್ದೂ ಇಂಥದೊಂದು ಸುಳ್ಳು ಹೇಳಿದ್ದು ಖೇದಕರ.-ಡಾ| ಜಿ. ಎನ್‌. ಉಪಾಧ್ಯ  ಮುಖ್ಯಸ್ಥರು, ಕನ್ನಡ ವಿಭಾಗ ಮುಂಬಯಿ ವಿವಿ

ನಾನು 1955ರಿಂದ ಮುಂಬಯಿಯಲ್ಲಿ ನೆಲೆಸಿದ್ದು, ಇಲ್ಲಿನ ಬಹತೇಕ ಕನ್ನಡ ಸಂಘ, ಕರ್ನಾಟಕ ಸಂಘಗಳ ಬಗ್ಗೆ ಮಾಹಿತಿ ಇದೆ. ಆದರೆ ಬೊರಿವಿಲಿಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇದೆ ಎಂದು ತಿಳಿದು ಆಶ್ಚರ್ಯವಾಯಿತು. ಇಂತಹ ಹೇಳಿಕೆ ಬದಲು ಈಗಾಗಲೇ ಮುಂಬಯಿ ಆಕಾಶವಾಣಿಯಲ್ಲಿ ಕನ್ನಡ ಭಾಷಾ ಕಾರ್ಯಕ್ರಮಗಳನ್ನು ನಿಲ್ಲಿಸಲಾಗಿದ್ದು, ಮತ್ತೆ ಪ್ರಾರಂಭಿಸುವಂತೆ ಜನಪ್ರತಿನಿಧಿಗಳು ಹೋರಾಟ ನಡೆಸಲಿ. -ಡಾ| ಸುನೀತಾ ಎಂ. ಶೆಟ್ಟಿ, ಹಿರಿಯ ಸಾಹಿತಿ

ಇಲ್ಲದ್ದನ್ನು ಇದೆ ಎಂದು ಹೇಳಿ ತಮ್ಮ ಬೇಳೆಯನ್ನು ಬೇಯಿಸಿಕೊಳ್ಳುವ ರಾಜಕಾರಣಿಗಳು ಒಂದೋ ಅದನ್ನು ತೋರಿಸಲಿ, ಇಲ್ಲವೆ ಅವರು ಹೇಳಿಕೆಯನ್ನು  ವಾಪಸು ಪಡೆಯಬೇಕು. ನಮ್ಮ ಮುಂಬಯಿ ಕನ್ನಡಿಗರು ಮೊದಲಿಗೆ ಅವರನ್ನು ಕರೆದು ಮೆರವಣಿಗೆ ಮಾಡುವುದನ್ನು ನಿಲ್ಲಿಸಬೇಕು. -ಡಾ| ಕೆ. ರಘುನಾಥ್‌, ನಿವೃತ್ತ ಮುಖ್ಯಸ್ಥರು: ಕನ್ನಡ ವಿಭಾಗ ಆರ್‌ಜೆ ಕಾಲೇಜು ಘಾಟ್‌ಕೋಪರ್‌

ಡೊಂಬಿವಲಿ ಕರ್ನಾಟಕ ಸಂಘವು ಐವತ್ತಕ್ಕೂ ಹೆಚ್ಚು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು, ಈವರೆಗೆ ಮುಂಬಯಿಯಲ್ಲಿರುವ ಪ್ರಾಧಿಕಾರದ ಬಗ್ಗೆ ಗೊತ್ತಿಲ್ಲ. ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ಮಾಧ್ಯಮದಲ್ಲಿ ನೂರಾರು ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ. ಕರ್ನಾಟಕ ಸರಕಾರದಿಂದಲೂ ನಮಗೆ ಅನುದಾನ ಸಿಕ್ಕಿಲ್ಲ. ಇಂತಹ ಹೇಳಿಕೆಗಳನ್ನು ನೀಡುವಾಗ ಶಾಸಕರು ಎಚ್ಚರಿಕೆ ವಹಿಸಬೇಕು. -ಇಂದ್ರಾಳಿ ದಿವಾಕರ ಶೆಟ್ಟಿ ಅಧ್ಯಕ್ಷರು, ಡೊಂಬಿವಲಿ ಕರ್ನಾಟಕ ಸಂಘ

ಮಹಾರಾಷ್ಟ್ರ ಸರಕಾರ ಬೊರಿವಲಿಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚಿಸಿ, ಪ್ರತೀವರ್ಷ ಹತ್ತು ಕೋಟಿ ರೂ. ಅನುದಾನವನ್ನು ನೀಡುತ್ತಿದೆ ಎಂಬುದು ಬರೇ ಅಜ್ಞಾನವಲ್ಲ, ಶಾಸಕರೊಬ್ಬರ ಬೇಜವಾಬ್ದಾರಿಯ ಹೇಳಿಕೆ.  ಮಹಾರಾಷ್ಟ್ರ ಸರಕಾರದ ಕಡತದಲ್ಲಿ ಬೊರಿವಲಿಯಲ್ಲಿ (ಇಲ್ಲದ) ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸ್ಥಾಪನೆ ಆಗಿದ್ದು, ಅದಕ್ಕೆ ವರ್ಷಂಪ್ರತಿ ಹತ್ತು ಕೋಟಿ ರೂ. ಅನುದಾನ ಬಿಡುಗಡೆ ಆಗುತ್ತಿದ್ದರೆ ಶೀಘ್ರ ತನಿಖೆ ಆಗಬೇಕು. -ಗೋಪಾಲ ತ್ರಾಸಿ, ಕವಿ, ಸಾಹಿತಿ

ಮೊಗವೀರ ವ್ಯವಸ್ಥಾಪಕ ಮಂಡಳಿಯು ಮುಂಬಯಿಯ ಹಿರಿಯ ಸಮುದಾಯ ಸಂಘಟನೆಯಾಗಿದ್ದು, ಕರ್ನಾಟಕ ರಾಜ್ಯ ಸರಕಾರ ಯಾವುದೇ ಪ್ರಾಧಿಕಾರವನ್ನು ಮುಂಬಯಿಯಲ್ಲಿ ರಚಿಸಿದ ಬಗ್ಗೆ ತಿಳಿದಿಲ್ಲ. ಶಾಸಕರ ಇಂತಹ ಹೇಳಿಕೆಗಳು ಮುಂಬಯಿ ಕನ್ನಡಿಗರನ್ನು ಗಲಿಬಿಲಿಗೊಳ್ಳುವಂತೆ ಮಾಡಿದೆ. -ಅಶೋಕ್‌ ಸುವರ್ಣ, ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ

ಕರ್ನಾಟಕ ಸಂಘ ಮುಂಬಯಿ ಎಂಟೂವರೆ ದಶಕಗಳಿಂದ ಕಾರ್ಯ ನಿರ್ವಹಿಸುತ್ತಿದೆ. ಆದರೆ ಬೊರಿವಲಿಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇರುವುದು ನಮ್ಮ ಗಮನಕ್ಕೆ ಬಂದಿಲ್ಲ. ಕರ್ನಾಟಕ ಸರಕಾರವು ಮುಂಬಯಿಯಲ್ಲಿ  ಅಭಿವೃದ್ಧಿ ಪ್ರಾಧಿಕಾರದ ಶಾಖೆ ತೆರೆದರೆ ಸ್ವಾಗತಾರ್ಹ. -ಓಂದಾಸ್‌ ಕಣ್ಣಂಗಾರ್‌, ಗೌರವ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಸಂಘ ಮುಂಬಯಿ

95 ವರ್ಷಗಳಿಂದ ಮೈಸೂರು ಅಸೋಸಿಯೇಶನ್‌ ಮುಂಬಯಿ ಕನ್ನಡದ ಚಟುವಟಿ ಗಳನ್ನು ಮಾಡುತ್ತಿದೆ. ಆದರೆ ಬೊರಿವಲಿಯಲ್ಲಿ ಮುಂಬಯಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಇದೆ ಎಂಬ ಬಗ್ಗೆ ಮಾಹಿತಿ ನಮಗಿಲ್ಲ. ಒಂದು ಹೊಸದಾಗಿ ಸ್ಥಾಪನೆಯಾದರೆ ಕನ್ನಡಿಗರಿಗೆ ಸಹಕಾರಿಯಾಗುತ್ತದೆ. -ಡಾ| ಮಂಜುನಾಥ್‌, ಟ್ರಸ್ಟಿ, ಮೈಸೂರು ಅಸೋಸಿಯೇಶನ್‌ ಮುಂಬಯಿ

ಟಾಪ್ ನ್ಯೂಸ್

Fraud Case ಶಂಕರಪುರ: ಬ್ಯಾಂಕ್‌ ಕೆವೈಸಿ ಮಾಹಿತಿ ಪಡೆದು ಹಣ ವಂಚನೆ: ದೂರು

Fraud Case ಶಂಕರಪುರ: ಬ್ಯಾಂಕ್‌ ಕೆವೈಸಿ ಮಾಹಿತಿ ಪಡೆದು ಹಣ ವಂಚನೆ: ದೂರು

1-sasadas

Pavagada ; ಹಾವು ಕಡಿದು ಅರು‌ ವರ್ಷದ ಬಾಲಕ ಸಾವು: ಆಸ್ಪತ್ರೆ ಎದುರು ಪ್ರತಿಭಟನೆ

Ullal ನೇತ್ರಾವತಿ ಸೇತುವೆಯಲ್ಲಿ ಮೀನು ಸಾಗಾಟದ ಪಿಕಪ್‌ ವಾಹನ ಪಲ್ಟಿ

Ullal ನೇತ್ರಾವತಿ ಸೇತುವೆಯಲ್ಲಿ ಮೀನು ಸಾಗಾಟದ ಪಿಕಪ್‌ ವಾಹನ ಪಲ್ಟಿ

Belthangady ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

Belthangady ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

Bantwal ಫರಂಗಿಪೇಟೆ: ಟ್ಯಾಂಕರ್‌ ಢಿಕ್ಕಿಯಾಗಿ ಪಾದಚಾರಿ ಗಾಯ

Bantwal ಫರಂಗಿಪೇಟೆ: ಟ್ಯಾಂಕರ್‌ ಢಿಕ್ಕಿಯಾಗಿ ಪಾದಚಾರಿ ಗಾಯ

Fraud Case ಕಸ್ಟಮರ್‌ ಕೇರ್‌ ಸಿಬಂದಿ ಹೆಸರಿನಲ್ಲಿ ಲಕ್ಷಾಂತರ ರೂ.ವಂಚನೆ

Fraud Case ಕಸ್ಟಮರ್‌ ಕೇರ್‌ ಸಿಬಂದಿ ಹೆಸರಿನಲ್ಲಿ ಲಕ್ಷಾಂತರ ರೂ.ವಂಚನೆ

Manipal ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ: ಯುವತಿ ಸಹಿತ ಆರು ಮಂದಿ ವಶಕ್ಕೆ

Manipal ಸಾರ್ವಜನಿಕ ಸ್ಥಳದಲ್ಲಿ ಹೊಡೆದಾಟ: ಯುವತಿ ಸಹಿತ ಆರು ಮಂದಿ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdsad

Kannada in UK ; ಲಂಡನ್ ನಲ್ಲಿ ಮೊಳಗಲಿರುವ ಕನ್ನಡ ಬಳಗದ ಡಿಂಡಿಮ

1—adsad

Goa; ಮಾಪ್ಸಾದಲ್ಲಿ ಕನ್ನಡ ಸಂಘದ ಕನ್ನಡ ಗಣಪನ ಪ್ರತಿಷ್ಠಾಪನೆ

ಆನ್‌ಲೈನ್‌ ಗಣೇಶನ ಆರಾಧನೆ….!

ಆನ್‌ಲೈನ್‌ ಗಣೇಶನ ಆರಾಧನೆ….!

Desi Swara: ಕರಿಮಾಯಿ ಎಂಬ ಅದ್ಭುತ ರಸಾನುಭವ! ಭಾವಕೋಶದಲ್ಲಿ ಅಳಿಯದ ನೆನಪನ್ನಿತ್ತ ಕ್ಷಣ

Desi Swara: ಕರಿಮಾಯಿ ಎಂಬ ಅದ್ಭುತ ರಸಾನುಭವ! ಭಾವಕೋಶದಲ್ಲಿ ಅಳಿಯದ ನೆನಪನ್ನಿತ್ತ ಕ್ಷಣ

Head phone; ಬಿಡುವಿಲ್ಲದ ಕಿವಿಗಳಿಗೆ ಗುಟ್ಟೊಂದ ಹೇಳಬೇಕು…!

Head phone; ಬಿಡುವಿಲ್ಲದ ಕಿವಿಗಳಿಗೆ ಗುಟ್ಟೊಂದ ಹೇಳಬೇಕು…!

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

Fraud Case ಶಂಕರಪುರ: ಬ್ಯಾಂಕ್‌ ಕೆವೈಸಿ ಮಾಹಿತಿ ಪಡೆದು ಹಣ ವಂಚನೆ: ದೂರು

Fraud Case ಶಂಕರಪುರ: ಬ್ಯಾಂಕ್‌ ಕೆವೈಸಿ ಮಾಹಿತಿ ಪಡೆದು ಹಣ ವಂಚನೆ: ದೂರು

1-sasadas

Pavagada ; ಹಾವು ಕಡಿದು ಅರು‌ ವರ್ಷದ ಬಾಲಕ ಸಾವು: ಆಸ್ಪತ್ರೆ ಎದುರು ಪ್ರತಿಭಟನೆ

Ullal ನೇತ್ರಾವತಿ ಸೇತುವೆಯಲ್ಲಿ ಮೀನು ಸಾಗಾಟದ ಪಿಕಪ್‌ ವಾಹನ ಪಲ್ಟಿ

Ullal ನೇತ್ರಾವತಿ ಸೇತುವೆಯಲ್ಲಿ ಮೀನು ಸಾಗಾಟದ ಪಿಕಪ್‌ ವಾಹನ ಪಲ್ಟಿ

1-sasads

Hunsur; ಕಾರು ಢಿಕ್ಕಿಯಾಗಿ ಆಟೋ ಚಾಲಕ ಮೃತ್ಯು: ಪ್ರಯಾಣಿಕರಿಬ್ಬರಿಗೆ ಗಾಯ

Belthangady ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

Belthangady ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಮರ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.