ಕನ್ನಡ ವಿಭಾಗ ಮುಂಬಯಿ ವಿವಿ, ಮೈಸೂರು ಅ.ದತ್ತಿ ಉಪನ್ಯಾಸ


Team Udayavani, Mar 9, 2018, 4:52 PM IST

0703mum04.jpg

ಮುಂಬಯಿ: ಇಡೀ ಮಹಾಭಾರತದಲ್ಲಿ ಕರ್ಣನ ಪಾತ್ರ ಅನೇಕ ದೃಷ್ಟಿಯಿಂದ ನಮ್ಮ ಗಮನ ಸೆಳೆಯುತ್ತದೆ. ಕರ್ಣನದು ಸಂಕೀರ್ಣವಾದ ಪಾತ್ರ. ತ್ಯಾಗ, ವೀರ, ನಿಷ್ಠೆಗೆ ಹೆಸರಾದ ಕರ್ಣ ಒಬ್ಬ ದುರಂತ ಜೀವಿ. ಹೀಗಾಗಿ ಮಹಾಕವಿ ಪಂಪ ಕರ್ಣರಸಾಯನ ಮಲೆ¤ ಭಾರತ ಎಂದು ಉದ್ಗಾರವೆತ್ತಿದ್ದಾನೆ ಎಂಬುದಾಗಿ ಖ್ಯಾತ ಗಮಕಿ ಹಾಗೂ ವಿದ್ವಾಂಸ ಡಾ| ಜಯರಾಮರಾವ್‌ ಅವರು ಅಭಿಪ್ರಾಯಪಟ್ಟರು.

ಅವರು ಇತ್ತೀಚೆಗೆ ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯ ಹಾಗೂ ಮೈಸೂರು ಅಸೋಸಿಯೇಶನ್‌ ಜಂಟಿಯಾಗಿ ಆಯೋಜಿಸಿದ್ದ ಮೈಸೂರು ಅಸೋಸಿಯೇಶನ್‌ ಬಂಗಾರ ಹಬ್ಬದ ದತ್ತಿ ಉಪನ್ಯಾಸ ಮಾಲಿಕೆ- 2018 ರಲ್ಲಿ  ಮಹಾಭಾರತದ ಕರ್ಣ ಎಂಬ ವಿಷಯದ ಕುರಿತು ಮಾತನಾಡಿ, ವೀರಾಗ್ರಣಿ, ಮಹಾತ್ಯಾಗಿ ಎಂಬ ನಿಲುವು ಪಂಪನದು. ಆತ ಕರ್ಣನ ಕರುಣ ಕಥೆಗೆ ಮರುಗಿದ್ದಾನೆ. ಕರ್ಣನ ನನ್ನಿ, ತ್ಯಾಗ, ಅಣ್ಮುಗಳನ್ನು ಮುಕ್ತ ಕಂಠದಿಂದ ಪ್ರಶಂಸಿದ್ದಾನೆ. ಪಂಪನ ದೃಷ್ಟಿಯಲ್ಲಿ ಕರ್ಣನ ದುರಂತ ಕಥೆಯೇ ಭಾರತ.  ಕರ್ಣಂಗೊಡಿತ್ತು ದಲ್‌ ಭಾರತಂ ಎಂದು ಅರ್ಜುನನ ಬಾಯಿಂದ ಹೇಳಿಸಿದ್ದಾನೆ. ಕರ್ಣ-ದುರ್ಯೋಧನರು ಆಪ್ತ ಸ್ನೇಹಿತರು. ದುರ್ಯೋಧನನ ಸ್ನೇಹ ಸ್ವಾರ್ಥ ಕಲುತ. ಕರ್ಣನದು ನಿರ್ಮಲಾಂತಃಕರಣದಿಂದ ಕೂಡಿದ ಸ್ನೇಹ. ಕರ್ಣನ ವೀರ್ಯ ಕಥನವನ್ನು ಪಂಪನಿಗಿಂತ ಒಂದು ಮುಷ್ಠಿ ಮಿಗಿಲಾಗಿ ಕುಮಾರವ್ಯಾಸ ಚಿತ್ರಿಸಿದ್ದಾನೆ. ತನ್ನ ಧಣಿ ದುರ್ಯೋಧನನಿಗಾಗಿ ದೇಹ ತ್ಯಾಗವನ್ನೂ ಮಾಡಿದ ಮಹಾತ್ಯಾಗಿ ಕರ್ಣನಿಗೆ ಸಮನಾರು ಎಂಬುದನ್ನು ಹತ್ತಾರು ಪದ್ಯಗಳಲ್ಲಿ ರಸಾರ್ದವಾಗಿ ಚಿತ್ರಿಸಿದ್ದಾನೆ ಎಂಬುದನ್ನು ವ್ಯಾಸಭಾರತ- ಪಂಪಭಾರತದ ಹಿನ್ನೆಲೆಯಲ್ಲಿ ಕರ್ಣನ ಪಾತ್ರದ  ವಿಭಿನ್ನ ಮುಖಗಳ ಮೇಲೆ ಬೆಳಕು ಚೆಲ್ಲಿದರು.

ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ| ಜಿ. ಎ. ಉಪಾಧ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡ ಕಾವ್ಯ ಪರಂಪರೆ ಸಮೃದ್ಧವಾದುದು ಹಾಗೂ ಪ್ರಾಚೀನವಾದುದು. ಹಳಗನ್ನಡ ಸಾಹಿತ್ಯದ ಚಿಂತನ ಮಂಥನ ಇಂದಿಗೂ ಅಗತ್ಯವೇ ಆಗಿದೆ. ಡಾ| ಜಯರಾಮ ರಾವ್‌ ಅವರ ವಿದ್ವತ್ತು, ಕಂಠಸಿರಿ, ತೌಲನಿಕ ದೃಷ್ಟಿಕೋನ ಅಪೂರ್ವವಾದುದು. ಮೈಸೂರು ಅಸೋಸಿಯೇಷನ್‌ ದತ್ತಿ ಉಪನ್ಯಾಸ ಕಾರ್ಯಕ್ರಮಕ್ಕೆ ದೊಡ್ಡ ಇತಿಹಾಸವಿದೆ. ಈ ದತ್ತಿ ನಿಧಿಗೆ ಮೈಸೂರು ಅಸೋಸಿಯೇಷನ್‌ ಈ ವರ್ಷ ಮತ್ತೆ ಐವತ್ತು ಸಾವಿರ ರೂಗಳನ್ನು ನೀಡಿ ಆ ಮೊತ್ತವನ್ನು ಹೆಚ್ಚಿಸಿರುವುದು ಪ್ರಶಂಸನೀಯ ಅಂಶ ಎಂದು ಸಂತಸ ವ್ಯಕ್ತ ಪಡಿಸಿ ಕೃತಜ್ಞತೆ ಸಲ್ಲಿಸಿದರು.

ಮೈಸೂರು ಅಸೋಸಿಯೇಶನ್‌ ಅಧ್ಯಕ್ಷರಾದ ಕೆ. ಕಮಲಾ ಹಾಗೂ ಕಾರ್ಯದರ್ಶಿ ಡಾ| ಶಂಕರಲಿಂಗ ಅವರು ವಿಶ್ವವಿದ್ಯಾಲಯಕ್ಕೆ ಐವತ್ತು ಸಾವಿರ ರೂಗಳ ಚೆಕ್‌ನ್ನು ಈ ಸಂದರ್ಭದಲ್ಲಿ ಹಸ್ತಾಂತರಿಸಿದರು. ನೇಸರು ಪತ್ರಿಕೆಯ ಸಂಪಾದಕರಾದ ಡಾ| ಜ್ಯೋತಿ ಸತೀಶ್‌ ಅವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಸಾಹಿತ್ಯಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.