ಕನ್ನಡ ಪತ್ರಕರ್ತರ ಸಂಘ ಮಹಾರಾಷ್ಟ್ರ:ಯಕ್ಷಗಾನ ಪ್ರದರ್ಶನಕ್ಕೆ ಮುಹೂರ್ತ


Team Udayavani, Jun 26, 2018, 12:22 PM IST

2406mum10.jpg

ಮುಂಬಯಿ: ಪತ್ರ ಕರ್ತರು ವಿಶೇಷವಾಗಿ ಭಾಷೆ, ಸಂಸ್ಕೃತಿ, ಕಲೆಯ ಉಳಿವಿಗಾಗಿ ಬಹಳಷ್ಟು ಶ್ರಮ ವ್ಯಯಿಸುತ್ತಿದ್ದಾರೆ. ಅದರಲ್ಲೂ ಮುಂಬಯಿಯ  ಕನ್ನಡಿಗ ಪತ್ರಕರ್ತರು ಹಗಳಿರುಲು ಎನ್ನದೆ ಯಾವುದೇ ಅಪೇಕ್ಷೆಯನ್ನಿರಿಸದೆ ಕಲಾ ಕಾರ್ಯಕ್ರಮಗಳಲ್ಲಿ ಭಾಗ ವಹಿಸಿ ಪ್ರಚಾರದ ಮೂಲಕ ಕಲಾ ರಾಧನೆಗೈದು ಕಲೆಯನ್ನು ಉಳಿಸಿ ಬೆಳೆಸಿದ್ದಾರೆ. ಇಂತಹ ಪತ್ರಕರ್ತರು ಪ್ರತಿಭಾನ್ವಿತ ಹುಟ್ಟು ಕಲಾವಿದರೇ  ಸರಿ. ಆದರೆ ಸಮಯದಿಂದ ವಂಚಿತರಾಗಿ ತಮ್ಮ ಕಲಾ ಪ್ರತಿಭಾ ಪ್ರದರ್ಶನದಿಂದ ದೂರ ಉಳಿದಿದ್ದಾರೆ. ಸದ್ಯ ಸಂಘದ ದಶಸಂಭ್ರಮದಲ್ಲಾದರೂ ಒಗ್ಗೂಡಿ ಯಕ್ಷಗಾನ ಪ್ರದರ್ಶನಕ್ಕೆ ಸಜ್ಜಾಗಿರುವುದು ಅಭಿನಂದನೀಯ ಎಂದು ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಸ್ಥಾಪಕಾಧ್ಯಕ್ಷ ಯಕ್ಷಗುರು ಅಜೆಕಾರು ಬಾಲಕೃಷ್ಣ ಶೆಟ್ಟಿ ತಿಳಿಸಿದರು.

ಜೂ. 24ರಂದು ವಿಕ್ರೋಲಿ ಕನ್ನಡ ಸಂಘ ಸಂಚಾಲಕತ್ವದ ವಿಕ್ರೋಲಿ ಪೂರ್ವ ಠಾಗೋರ್‌ ನಗರ ವೀಕೇಸ್‌ ಇಂಗ್ಲಿಷ್‌ ಹೈಸ್ಕೂಲ್‌ ಸಭಾಗೃಹದಲ್ಲಿ ನಡೆದ ದಶಮಾನೋತ್ಸವ ಸಂಭ್ರಮ ದಲ್ಲಿರುವ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಕಲಾವಿದರಿಂದ ನಡೆಯಲಿರುವ ಮಹಿಷ ಮರ್ದಿನಿ ಯಕ್ಷಗಾನ ಪ್ರಸಂಗದ ತರಬೇತಿಗೆ ದೀಪ ಪ್ರಜ್ವಲಿಸಿ ಚಾಲನೆ ನೀಡಿ ಮಾತನಾಡಿದ ಅವರು, ಕಳೆದೆರಡು ದಶಕಗಳಿಂದ ಮುಂಬಯಿ ಪತ್ರ ಕರ್ತರು ನನ್ನ ಕಲಾಸೇವೆಗೆ ಬಹಳಷ್ಟು ಸಹಕರಿಸುತ್ತಿದ್ದಾರೆ. ಅವರ ಈ ಸಣ್ಣ ಪ್ರಯತ್ನಕ್ಕೆ ನನ್ನ ಸಹಕಾರ, ಪ್ರೋತ್ಸಾಹ ಸದಾಯಿದೆ. ಇದು ನನ್ನ ಪಾಲಿಗೆ ಒದಗಿ ಬಂದ ಸುವರ್ಣ ಅವಕಾಶವಾಗಿದ್ದು, ಯಾವುದೇ ರೀತಿಯ ಫಲಾಪೇಕ್ಷೆಯಿ ಲ್ಲದೆ  ಸಹಕರಿಸುತ್ತೇನೆ ಎಂದು ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ವಿಕ್ರೋಲಿ ಕನ್ನಡ ಸಂಘದ ಅಧ್ಯಕ್ಷ ಶ್ಯಾಮ್‌ಸುಂದರ್‌ ಎಸ್‌. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಉದಯ ಶೆಟ್ಟಿ ಪೇಜಾವರ, ಕೋಶಾಧಿಕಾರಿ ಉಮೇಶ್‌ ಪೂಜಾರಿ, ವಿಕ್ರೋಲಿ ಬಂಟ್ಸ್‌ ಅಧ್ಯಕ್ಷ ಗಣೇಶ್‌ ಶೆಟ್ಟಿ, ಕೋಶಾಧಿಕಾರಿ ಯುಗಾನಂದ ಶೆಟ್ಟಿ, ಪ್ರವೀಣ್‌ ಶೆಟ್ಟಿ ಅವರು  ಉಪಸ್ಥಿತರಿದ್ದು ಶುಭಹಾರೈಸಿದರು. 

ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದರುಗಳಾದ ನ್ಯಾಯವಾದಿ  ಗುಣಕರ್‌ ಡಿ. ಶೆಟ್ಟಿ, ಸರಳಾ  ಬಿ. ಶೆಟ್ಟಿ, ನಂದಳಿಕೆ ಶಾಂತಾ ಎನ್‌. ಶೆಟ್ಟಿ, ಮೋಹನದಾಸ್‌ ರೈ ನೆರೂಲ್‌, ಪತ್ರಕರ್ತರ ಸಂಘದ ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ ಜಯ ಸಿ. ಪೂಜಾರಿ, ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯ ವಿಶ್ವನಾಥ್‌ ಅಮೀನ್‌ ನಿಡ್ಡೋಡಿ, ಪತ್ರಕರ್ತ ರಮೇಶ್‌ ಬಿರ್ತಿ, ವಿಶೇಷ ಆಮಂತ್ರಿತ ಸದಸ್ಯ ಸುರೇಶ್‌ ಶೆಟ್ಟಿ ಯೆಯ್ನಾಡಿ ಸೇರಿದಂತೆ ಸದಸ್ಯರು ಹೆಚ್ಚಿನ ಸಂಖ್ಯೆ ಯಲ್ಲಿ ಉಪಸ್ಥಿತರಿದ್ದರು.

ಯಕ್ಷಗಾನ ಪ್ರಸಂಗದ ಸಿದ್ಧತೆ ನಡೆಸಿ ಬಾಲಕೃಷ್ಣ ಶೆಟ್ಟಿ ಅವರು ಕಲಾವಿದ ಸದಸ್ಯರುಗಳಿಗೆ ಪಾತ್ರ ಗಳನ್ನು ನೀಡಿದ‌ರು. ಗೌರವ ಪ್ರಧಾನ ಕಾರ್ಯದರ್ಶಿ ರೋನ್ಸ್‌ ಬಂಟ್ವಾಳ್‌ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮ ನಿರೂಪಿಸಿ ದರು. ಜತೆ ಕಾರ್ಯದರ್ಶಿ ಹಾಗೂ ದಶಸಂಭ್ರಮ ಸಾಂಸ್ಕೃತಿಕ ಸಂಚಾಲಕ ಬಾಬು ಕೆ. ಬೆಳ್ಚಡ ವಂದಿಸಿದರು. 

ಜಾಗತಿಕವಾಗಿ ಪತ್ರಕರ್ತರ ಕೊಡುಗೆ ಅಮೂಲ್ಯವಾದುದು. ಭೌಗೋಳಿಕ ವಿಚಾರಗಳನ್ನು ಜನರತ್ತ ಮನವೊಲಿಸುವಲ್ಲಿ ಶ್ರಮಿಸುವಲ್ಲಿ ಪತ್ರಕರ್ತರ ಪಾತ್ರ ಮಹತ್ತರವಾದುದು ಮಾಧ್ಯಮಗಳ ಮೂಲಕ ಆಚಾರ-ವಿಚಾರಗಳನ್ನು ವಿನಿ ಯೋಗಿಸಿಕೊಳ್ಳುವ ಪತ್ರಕರ್ತರ ಸಾಂಘಿಕತೆ ಅವಶ್ಯವಾಗಿದೆ.  ನಮ್ಮ ಪತ್ರಕರ್ತರು ದಶ ಸಂಭ್ರಮದಲ್ಲಿದ್ದು ಅವರೆಲ್ಲರ ಸೇವೆ ಫಲ ಪ್ರದವಾಗಲಿ. ಸಂಘದ ವತಿ ಯಿಂದ ನಿಮ್ಮ ಈ ಕಲಾ ಸೇವೆಗೆ ಪ್ರೋತ್ಸಾಹ, ಸಹಕಾರ ಸದಾಯಿದೆ.
-ಶ್ಯಾಮ್‌ಸುಂದರ್‌ ಶೆಟ್ಟಿ, ಅಧ್ಯಕ್ಷರು, ವಿಕ್ರೋಲಿ ಕನ್ನಡ ಸಂಘ

ಸಂಘವು 10 ವರ್ಷ ಪೂರೈಸುತ್ತಿದ್ದು ಇದರ ದಶಮಾನೋತ್ಸವವನ್ನು ಸಾಂಕೇ ತಿಕವಾಗಿ ಆಚರಣೆ ಮಾಡುವ ನಿರ್ಣಯ ಮಾಡಿದ್ದೇವೆ. ಅದಕ್ಕಾಗಿ ಮನೋ ರಂಜನೆ, ನೃತ್ಯ, ಯಕ್ಷಗಾನ ಇತ್ಯಾದಿಗಳ ಸಮ್ಮಿಲನದೊಂದಿಗೆ ದಶ ಸಂಭ್ರಮಕ್ಕೆ ಸಿದ್ಧರಾಗಿದ್ದೇವೆ. ಕಲಾ ಉಳಿವಿಗಾಗಿ ಅಜೆಕಾರು ಬಾಲಕೃಷ್ಣರು ಸ್ವಾರ್ಥ ಕಂಡವರಲ್ಲ. ಹಣವನ್ನೂ ಬಯಸಿದವರಲ್ಲ. ಗಳಿಕೆಯನ್ನೇ ಆಯ್ಕೆ ಮಾಡಿದ್ದರೆ ಇವರು ದೊಡ್ಡ ಯಕ್ಷಗಾನ ಅಕಾಡೆಮಿಯನ್ನೇ ಹುಟ್ಟುಹಾಕಬಹುದಿತ್ತು. ಅದನ್ನೆಲ್ಲಾ ಬದಿಗೊತ್ತಿ ಅವರು ಸಾವಿರಾರು ಕಲಾವಿದರನ್ನು ರೂಪಿಸುತ್ತಿರುವುದು ಸ್ತುತ್ಯರ್ಹ. ಇಂತಹ ಕಲಾಪೋಷಕರಿಂದ ಪತ್ರಕರ್ತ ಕಲಾವಿದರು ಯಕ್ಷಗಾನ ತರಬೇತಿ ಪಡೆಯುತ್ತಿರುವುದು ಕಲಾ ಶ್ರೀಮಂತಿಕೆಯಾಗಿದೆ.
-ಚಂದ್ರಶೇಖರ ಪಾಲೆತ್ತಾಡಿ, ಅಧ್ಯಕ್ಷರು, ಕನ್ನಡಿಗ ಪತ್ರಕರ್ತರ ಸಂಘ

ಚಿತ್ರ-ವರದಿ: ರೊನಿಡಾ ಮುಂಬಯಿ

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.