ಕನ್ನಡ ಸಂಘ ಪುಣೆ: ಗಮನ ಸೆಳೆದ ವಾರ್ಷಿಕ ಪ್ರತಿಭಾ ಪ್ರದರ್ಶನ


Team Udayavani, Mar 6, 2020, 6:42 PM IST

ಕನ್ನಡ ಸಂಘ ಪುಣೆ: ಗಮನ ಸೆಳೆದ ವಾರ್ಷಿಕ ಪ್ರತಿಭಾ ಪ್ರದರ್ಶನ

ಪುಣೆ, ಮಾ. 5: ಕನ್ನಡ ಸಂಘ ಪುಣೆ ವತಿಯಿಂದ ದಿ ಡಾ| ಶಾಮರಾವ್‌ ಕಲ್ಮಾಡಿ ಅವರ 101ನೆಯ ಜನ್ಮದಿನಾಚರಣೆಯನ್ನು ಮಾ. 1ರಂದು ಪ್ರತಿವರ್ಷದಂತೆ ಸಂಘದ ಕನ್ನಡ ಮಾಧ್ಯಮ ಹೈಸ್ಕೂಲ್‌ ಸಭಾಂಗಣದಲ್ಲಿ ಪ್ರತಿಭಾ ಪ್ರದರ್ಶನವನ್ನು ಹಮ್ಮಿಕೊಳ್ಳುವ ಮೂಲಕ ಆಚರಿಸಲಾಯಿತು.

ಸಂಘದ ಸದಸ್ಯರು ಹಾಗೂ ಪರಿವಾರದ ಸದಸ್ಯರಿಗೆ ತಮ್ಮ ಸುಪ್ತ ಪ್ರತಿಭೆಗಳನ್ನು ಪ್ರದರ್ಶಿಸಲು ಸೂಕ್ತ ವೇದಿಕೆ ಒದಗಿಸಿದ್ದಲ್ಲದೆ ನೆರೆದಿದ್ದ ಪ್ರೇಕ್ಷಕರು ಭರ್ಜರಿ ಮನೋರಂಜನೆಯನ್ನು ಪಡೆದರು. ಸಂಘದ ಕಾರ್ಯದರ್ಶಿ ಮಾಲತಿ ಕಲ್ಮಾಡಿ, ಉಪ ಕೋಶಾಧಿಕಾರಿ ರಾಧಿಕಾ ಶರ್ಮ, ಜನಸಂಪರ್ಕಾಧಿರಿ ರಾಮದಾಸ್‌ ಆಚಾರ್ಯ, ಕವಿ ಪಾಂಗಾಳ ವಿಶ್ವನಾಥ್‌ ಶೆಟ್ಟಿ, ಕನ್ನಡ ಶಾಲಾ ಹೈಸ್ಕೂಲ್‌ ಮುಖ್ಯೋಪಾಧ್ಯಾಯರಾದ ಚಂದ್ರಕಾಂತ ಹಾರಕುಡೆ, ಹಿರಿಯ ಸದಸ್ಯೆ ರತ್ನಾ ಆಚಾರ್ಯ, ಪ್ರಾಥಮಿಕ ಶಾಲಾ ಪ್ರಾಧ್ಯಾಪಕಿ ಜ್ಯೋತಿ ಕಡಕೊಲ್‌ ಉಪಸ್ಥಿತರಿದ್ದು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಜನ ಸಂಪರ್ಕಾಧಿಕಾರಿ ರಾಮದಾಸ್‌ ಆಚಾರ್ಯರು ಸ್ವಾಗತಿಸಿ ಮಾತನಾಡಿ, ಕನ್ನಡ ಸಂಘ ಇತ್ತೀಚಿನ ದಿನಗಳಲ್ಲಿ ಪುಣೆಯಲ್ಲಿ ಅಭೂತಪೂರ್ವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಖ್ಯವಾಗಿ ಎಸ್‌. ಎಲ್‌. ಬೈರಪ್ಪನವರ ಕನ್ನಡ ನಾಟಕ ಮಂದ್ರ,ಗಾನ, ನೃತ್ಯ ಮತ್ತು ಮೂರು ಭಾಷೆಗಳಲ್ಲಿ ನಿರೂಪಣೆಯೊಂದಿಗೆ ನಡೆದ ದಾಸ ಮಂಜರಿ ಭಾರತ ರತ್ನ ಪಂಡಿತ್‌ ಭೀಮಸೇನ್‌ ಜೋಷಿಯವರ ಅಭಿವಂದನಾ ಸಂಗೀತ ಇವು ಪುಣೆಯ ರಸಿಕರ ಮನ ಸೂರೆಗೊಂಡು ಪ್ರಶಂಸೆಗೆ ಪಾತ್ರವಾದವು ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ನಾಲ್ಕು ವರ್ಷದ ಚಿಕ್ಕ ಮಕ್ಕಳಿಂದ ಹಿಡಿದು ಎಂಬತ್ತು ವರ್ಷದ ಹಿರಿಯ ನಾಗರಿಕರು ತಮ್ಮ ಅಪೂರ್ವ ಪ್ರತಿಭೆಗಳನ್ನು ಪ್ರದರ್ಶಿಸಿ ಪ್ರೇಕ್ಷಕರನ್ನು ಅಚ್ಚರಿಗೊಳಿಸಿ ಪ್ರಶಂಸೆಗೆ ಪಾತ್ರರಾದರು. ನಾಲ್ಕು ವರ್ಷದ ಸಾರಾ ಭಟ್‌ ಸುಶ್ರಾವ್ಯ ಸಂಸ್ಕೃತ ಶ್ಲೋಕ, 10 ವರ್ಷದ ಶ್ರೀಜಾ ಆಚಾರ್ಯಳ ಮನಮೋಹಕ ಮಾಕನ್‌ ಕಥಕ್‌ ನೃತ್ಯ, ಮೇಘ ಮತ್ತು ಮೇಧಾ ಅವಳಿ ಸಹೋದರಿಯರ ಅಮೋಘ ಕಥಕ್‌ ನೃತ್ಯ, ಜ್ಯೇಷ್ಠ ನಾಗರಿಕರಾದ ವಿಶ್ವನಾಥ್‌ ಶೆಟ್ಟಿ ಅವರಿಂದ ಕಾವ್ಯ ವಾಚನ ನಡೆಯಿತು.

ಅನಂತ್‌ ನಾರಾಯಣ್‌ ಅವರ ಮೌತ್‌ ಆರ್ಗನ್‌ ವಾದನ ರಾಮದಾಸ್‌ ಆಚಾರ್ಯ ರಿಂದ ಮಂಕುತಿಮ್ಮನ ಕಗ್ಗ ವಿಶ್ಲೇಷಣೆ, ಕನ್ನಡ ಸಂಘದ ಆಫೀಸಿನ ಮಹಾರಾಷ್ಟ್ರೀಯ ಉದ್ಯೋಗಿಗಳ ಮಕ್ಕಳಿಂದ ಸುಶ್ರಾವ್ಯ ಕನ್ನಡ ಗೀತೆಗಳು, ಶ್ಲೋಕಗಳು ನೆರೆದ ಪ್ರೇಕ್ಷಕರ ಮನರಂಜಿಸಿದವು ಸಭಾಗೃಹ ಪ್ರೇಕ್ಷಕರಿಂದ ತುಂಬಿತ್ತು. ಕನ್ನಡ ಮಾಧ್ಯಮ ಶಾಲಾ ಶಿಕ್ಷಕಿ ಪೂಜಾ ಪೂಜಾರಿ ಕಾರ್ಯಕ್ರಮವನ್ನು ನಿರೂಪಿಸಿದರು. ವರ್ಷ ಪೂರ್ತಿ ಹತ್ತು ಹಲವು ಕಾರ್ಯಕ್ರಮಗಳು ಸಂಘದ ವತಿಯಿಂದ ಆಯೋಜನೆ ಗೊಳ್ಳುತ್ತಿದ್ದು ವೈಶಿಷ್ಟಪೂರ್ಣ ಸಾಂಸ್ಕೃತಿಕ ಕಾರ್ಯ ಕ್ರಮಗಳಿಗೆ ಕನ್ನಡಿಗರು ಮಾತ್ರವಲ್ಲದೆ ಸ್ಥಳೀಯ ಮರಾಠಿ ಭಾಷಿಕರೂ ತುಂಬು ಹೃದಯದಿಂದ ಭಾಗವಹಿಸಿ ಕನ್ನಡ-ಮರಾಠಿ ಸಾಂಸ್ಕೃತಿಕ ಬಾಂಧವ್ಯ ವೃದ್ಧಿಸುವಲ್ಲಿ ಸಹಕರಿಸುತ್ತಿದ್ದಾರೆ.

 

ಚಿತ್ರ-ವರದಿ: ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.