ಮಹೇಶ್‌ ಎಸ್‌.ಶೆಟ್ಟಿ ಹವಾನಿಯಂತ್ರಿತ ಸಭಾಗೃಹ ಉದ್ಘಾಟನೆ


Team Udayavani, Sep 28, 2017, 4:23 PM IST

27-Mum07a.jpg

ಮುಂಬಯಿ: ನಗರದಲ್ಲಿ ತುಳು- ಕನ್ನಡಿಗರ ಸಾಂಸ್ಕೃತಿಕ ಸಂಬಂಧವು ಬಹಳ ಗಟ್ಟಿ ಯಾಗಿದ್ದು, ಇದಕ್ಕೆ ಯಾರದೋ ಪ್ರಮಾಣ ಪತ್ರದ ಅಗತ್ಯವಿಲ್ಲ. ತುಳು-ಕನ್ನಡಿಗರು ಮುಂಬಯಿಯ ಬಂಧುಗಳಾಗಿದ್ದಾರೆ. ಅನೇಕ ವರ್ಷಗಳ ಹಿಂದೆಯೇ ಕನ್ನಡಿಗರು ಇಲ್ಲಿ ನೆಲೆನಿಂತು ಇಲ್ಲಿಯ ಸಂಸ್ಕೃತಿಯೊಂದಿಗೆ ಬೆರೆತು ತಮ್ಮ ಸಂಸ್ಕೃತಿಯನ್ನು ಅಳವಡಿಸಿಕೊಂಡು ಈ ನೆಲದ ಅಭಿವೃದ್ಧಿಗೆ ಕಾರಣೀಭೂತರಾಗಿದ್ದಾರೆ. ಪರಿಸರದ ಕನ್ನಡಿಗರನ್ನು ಒಂದುಗೂಡಿಸಿಕೊಂಡು ಅವರ ಕಷ್ಟಸುಖಗಳಿಗೆ ಸ್ಪಂದಿಸುವ ಹಿತದೃಷ್ಟಿಯಿಂದ  ಹಿರಿಯರು ಸ್ಥಾಪಿಸಿದ ಕನ್ನಡ ವೆಲ್ಫೆàರ್‌ ಸೊಸೈಟಿಯ ಕಾರ್ಯ ನಿಜವಾಗಿಯೂ ಅಭಿನಂದನೀಯವಾಗಿದೆ ಎಂದು ಮಹಾರಾಷ್ಟ್ರ ರಾಜ್ಯ ವಸತಿ ಸಚಿವ ಪ್ರಕಾಶ್‌ ಮೆಹ್ತಾ ಅವರು ನುಡಿದರು.

ಸೆ. 27ರಂದು  ಘಾಟ್‌ಕೋಪರ್‌ ಪೂರ್ವ ಪಂತ್‌ನಗರದ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿರುವ ಕನ್ನಡ ವೆಲ್ಫೇರ್ ಸೊಸೈಟಿ ಇದರ ನೂತನ ಮಹೇಶ್‌ ಎಸ್‌. ಶೆಟ್ಟಿ (ಬಾಬಾಸ್‌ ಗ್ರೂಪ್‌) ಹವಾನಿಯಂತ್ರಿತ ಸಭಾಗೃಹವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಹೇಶ್‌ ಶೆಟ್ಟಿ ಅವರಂತಹ ಕನ್ನಡಿಗ ಮಹಾದಾನಿಗಳು ಇಂತಹ ಸಮಾಜಪರ ಸಂಸ್ಥೆಗಳಿಗೆ ಸಹಾಯ ನೀಡುತ್ತಿ ರುವುದು ಸಂತೋಷದ ಸಂಗತಿಯಾಗಿದೆ. ಕನ್ನಡ ವೆಲ್ಫೆàರ್‌ ಸೊಸೈಟಿಯು ಅನೇಕ ಸಮಾಜಪರ ಕಾರ್ಯಕ್ರಮಗಳನ್ನು ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಕೇಂದ್ರ ಹಾಗೂ ರಾಜ್ಯ ಸರಕಾರಗಳ ಅನೇಕ ಸಮಾಜಪರ ಕಾರ್ಯಗಳಿದ್ದು, ಈ ಸಂಸ್ಥೆಯು ಈ ಯೋಜನೆಗಳತ್ತ ಗಮನಹರಿಸಿ ಯೋಜನೆಗಳ ಉಪಯೋಗವು ಸಮಾಜದ ಜನತೆಗೆ 
ತಲುಪುವಂತೆ ಮಾಡಬೇಕು ಎಂದು ನುಡಿದು ಸಂಸ್ಥೆಗೆ ಶುಭಹಾರೈಸಿದರು.

ಸಹಾಯ  ಮಾಡಲು ಸಿದ್ಧ
ಉದ್ಘಾಟಕರಾಗಿ ಆಗಮಿಸಿದ ಬಾಬಾಸ್‌ ಗ್ರೂಪ್‌ನ ಸಿಎಂಡಿ, ಮಹಾದಾನಿ ಮಹೇಶ್‌ ಶೆಟ್ಟಿ ಅವರು ಮಾತನಾಡಿ, ಕನ್ನಡ ವೆಲ್ಫೆàರ್‌ ಸೊಸೈಟಿಯ ಸಮಾಜಪರ ಕಾರ್ಯಕ್ರಮಗಳನ್ನು ನೋಡಿ ಈ ಸಂಸ್ಥೆಗೆ ತಾನು ಮಾಡಿದ ಸಹಾಯವು ನನಗೆ ಆತ್ಮತೃಪ್ತಿಯನ್ನು ನೀಡಿದೆ. ಭವಿಷ್ಯದಲ್ಲೂ ಸಂಸ್ಥೆಗೆ ತನ್ನಿಂದಾದ ಸಹಾಯ  ಮಾಡಲು ನಾನು ಸಿದ್ಧನಿದ್ದೇನೆ ಎಂದು ನುಡಿದು ಸುವರ್ಣ ಮಹೋತ್ಸವಕ್ಕೆ ಶುಭಕೋರಿದರು.
ಇನ್ನೋರ್ವ ಉದ್ಘಾಟಕ, ದಾನಿ ಮತ್ತು ವೆಲ್‌ಕಂ ಪ್ಯಾಕೇಜಿಂಗ್‌ ಇಂಡಸ್ಟ್ರೀನ್‌ ಮಾಲಕ ರವೀಂದ್ರನಾಥ ಎಂ. ಭಂಡಾರಿ ಅವರು ಮಾತನಾಡಿ, ಹಿರಿಯರು ಸ್ಥಾಪಿಸಿದ ಈ ಸಂಘವು ಇಂದು ಸುವರ್ಣ ಮಹೋತ್ಸವದ ಹೊಸ್ತಿಲಲ್ಲಿದ್ದು, ಹವಾನಿಯಂತ್ರಿತ ಸಭಾಗೃಹವನ್ನು ಸಮಾಜಕ್ಕೆ ನೀಡಿರುವುದು ಅಭಿನಂದನೀಯ. ಸಮಾಜಕ್ಕೆ ಈ ಸಂಸ್ಥೆಯಿಂದ ಇನ್ನಷ್ಟು ಸೇವೆಯು ಸಲ್ಲುತ್ತಿರಲಿ. ಇದರ ಸುವರ್ಣ ಮಹೋತ್ಸವದ ಕಾರ್ಯಯೋಜನೆಗಳು ಯಶಸ್ವಿಯಾಗಲಿ ಎಂದು ಹಾರೈಸಿದರು.

ಯಶಸ್ಸಿಗೆ ಎಲ್ಲರೂ ಸಹಕರಿಸಿ
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ, ಕನ್ನಡ ವೆಲ್ಫೆàರ್‌ ಸೊಸೈಟಿಯ ಅಧ್ಯಕ್ಷ ನವೀನ್‌ ಶೆಟ್ಟಿ ಇನ್ನಬಾಳಿಕೆ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡ ವೆಲ್ಫೆàರ್‌ ಸೊಸೈಟಿಯ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ ಅನೇಕ ಯೋಜನೆಗಳನ್ನು ಆಯೋಜಿಸಿದ್ದು, ಇದರ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು ಎಂದು ನುಡಿದು ಸಂಸ್ಥೆಯ ಸಮಾಜಪರ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಮಹಿಳಾ ವಿಭಾಗದ ಸದಸ್ಯೆಯರು ಪ್ರಾರ್ಥನೆ ಗೈದರು. ರಂಗನಟ ಅಶೋಕ್‌ ಪಕ್ಕಳ, ಜಯ ಶೆಟ್ಟಿ, ರಂಗನಿರ್ದೇಶಕ, ಕವಿ ನಾರಾಯಣ ಶೆಟ್ಟಿ ನಂದಳಿಕೆ ಅವರು ಕಾರ್ಯಕ್ರಮ ನಿರ್ವಹಿಸಿದರು. ವೇದಿಕೆಯಲ್ಲಿ ಅತಿಥಿ ಸ್ಟೀವನ್‌ ಫುರ್ಟಾಡೋ, ಸಂಸ್ಥೆಯ ಉಪಾಧ್ಯಕ್ಷ ಜಯರಾಜ ಜೈನ್‌, ಗೌರವ ಕಾರ್ಯದರ್ಶಿ ಸುಧಾಕರ ಯೆಲ್ಲೂರು, ಕೋಶಾಧಿಕಾರಿ ರಘುನಾಥ್‌ ಶೆಟ್ಟಿ, ಜತೆ ಕಾರ್ಯದರ್ಶಿ ರಮಾನಂದ ಶೆಟ್ಟಿ, ಜತೆ ಕೋಶಾಧಿಕಾರಿ ಪೀಟರ್‌ ರೋಡ್ರಿಗಸ್‌, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಆಶಾ ಜಿ. ಶೆಟ್ಟಿ, ಸಾಂಸ್ಕೃತಿಕ ಸಮಿತಿಯ ನಾರಾಯಣ ಶೆಟ್ಟಿ ನಂದಳಿಕೆ, ಮಾಜಿ ಅಧ್ಯಕ್ಷ ವಿದ್ಯಾನಂದ ರೈ ಮೊದಲಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭ ಅತಿಥಿ-ಗಣ್ಯರು ಸುವರ್ಣ ಮಹೋತ್ಸವದ ವಿಜ್ಞಾಪನಾ ಪತ್ರವನ್ನು ಬಿಡುಗೊಳಿಸಿ ದರು. ವಿಧವಾ ವೇತನವನ್ನು ವಿತರಿಸಲಾಯಿತು. ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಗಣಹೋಮ, ಶ್ರೀ ಸತ್ಯನಾರಾಯಣ ಮಹಾಪೂಜೆ ಜರಗಿತು. ಸಂಸ್ಥೆಯ ಪದಾಧಿಕಾರಿಗಳು, ಮಹಿಳಾ ವಿಭಾಗದ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯೆ ಯರು, ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.   

ಊರಿನಿಂದ ಬಂದ ತುಳು-ಕನ್ನಡಿಗರು ಇಲ್ಲಿ ತಮ್ಮ ಅಸ್ತಿತ್ವವನ್ನು ಬೆಳೆಸುವುದರೊಂದಿಗೆ ಸಂಘಟನೆಗಳ ಮೂಲಕ ತಮ್ಮ ಶಕ್ತಿಯನ್ನು ತೋರಿಸುತ್ತಿದ್ದಾರೆ. ನಾವು ಸಂಘಟಿತರಾದಾಗ ಮಾತ್ರ ನಮಗೆ ಈ ನೆಲದಲ್ಲಿ ಬಲ ಸಿಗುತ್ತದೆ. ನಮ್ಮಲ್ಲಿ ಶಕ್ತಿಯಿರುವ ತನಕ ನಾವು ಸಮಾಜಕ್ಕಾಗಿ ಸೇವೆ ಮಾಡುತ್ತಿರಬೇಕು 
– ಐಕಳ ಹರೀಶ್‌ ಶೆಟ್ಟಿ (ಉಪಾಧ್ಯಕ್ಷರು : ವಿಶ್ವ ಬಂಟರ ಸಂಘಗಳ ಒಕ್ಕೂಟ).

ತುಳುನಾಡಿನ ಜನತೆ ಮುಂಬಯಿಗೆ ಬಂದು ಇಲ್ಲಿ ಸಂಪಾದಿಸಿ ಕೇವಲ ತಮ್ಮ ಕುಟುಂಬವನ್ನು ಮಾತ್ರ ನೋಡದೆ ಸಂಘಟನೆಗಳ ಮೂಲಕ ಜನಸೇವೆಯಲ್ಲಿ ತೊಡಗಿದ್ದಾರೆ. ಇದು ತುಳು-ಕನ್ನಡಿಗರ ಹೆಗ್ಗಳಿಕೆಯಾಗಿದೆ. ಜನಸೇವೆಯೇ ಜನಾರ್ದನ ಸೇವೆ ಎಂದು ತಿಳಿದು, ಇಂತಹ ಸಂಘಟನೆಗಳ ಮೂಲಕ ತಮ್ಮನ್ನು ತೊಡಗಿಸಿಕೊಂಡಿರುವುದಲ್ಲದೆ ಎಲ್ಲಾ ಕ್ಷೇತ್ರಗಳಲ್ಲಿ ಮೇಲುಗೈ ಸಾಧಿಸಿರುವುದು ಹೆಮ್ಮೆಯ ವಿಷಯವಾಗಿದೆ 
– ಕಡಂದಲೆ ಸುರೇಶ್‌ ಭಂಡಾರಿ (ಅಧ್ಯಕ್ಷರು : ಯಕ್ಷಧ್ರುವ ಪಟ್ಲ ಫೌಂಡೇಷನ್‌ ಮುಂಬಯಿ ಘಟಕ).

ತುಳು-ಕನ್ನಡಿಗರು ಯಾವುದೇ ಊರಿಗೆ ಹೋದರೂ ಅಲ್ಲಿ ಸಂಘಟನೆಗಳ ಮೂಲಕ ಸಮಾಜಪರ ಕಾರ್ಯಗಳೊಂದಿಗೆ ತಮ್ಮ ಪ್ರತಿಭೆಗಳನ್ನು ತೋರಿಸುತ್ತಾರೆ. ಕನ್ನಡ ವೆಲ್ಫೆàರ್‌ ಸೊಸೈಟಿಯ ಜನಪರ ಕಾರ್ಯಗಳು ಅಭಿನಂದನೀಯವಾಗಿದೆ 
– ಪ್ರಭಾಕರ ಎಲ್‌. ಶೆಟ್ಟಿ (ಅಧ್ಯಕ್ಷರು : ಬಂಟರ ಸಂಘ ಮುಂಬಯಿ).

 ಚಿತ್ರ-ವರದಿ : ಸುಭಾಷ್‌ ಶಿರಿಯಾ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.