ಇಂಗ್ಲಿಷ್‌ ವ್ಯಾಮೋಹ ಭಾಷೆಯ ಅಳಿವಿಗೆ ಪ್ರಮುಖ ಕಾರಣ: ನ್ಯಾಯವಾದಿ ಪ್ರಕಾಶ್‌ ಎಲ್‌. ಶೆಟ್ಟಿ


Team Udayavani, Nov 30, 2021, 1:12 PM IST

ಇಂಗ್ಲಿಷ್‌ ವ್ಯಾಮೋಹ ಭಾಷೆಯ ಅಳಿವಿಗೆ ಪ್ರಮುಖ ಕಾರಣ: ನ್ಯಾಯವಾದಿ ಪ್ರಕಾಶ್‌ ಎಲ್‌. ಶೆಟ್ಟಿ

ಮುಂಬಯಿ: ಕರ್ನಾಟಕ ಹಾಗೂ ಮಹಾರಾಷ್ಟ್ರದ ಸಂಬಂಧ ಸಾಂಸ್ಕೃತಿಕವಾಗಿ ಗಟ್ಟಿಯಾಗಿದೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ. ಆದರೆ ರಾಜಕೀಯ ನಾಯಕರು ಚುನಾವಣೆ ಸಮಯದಲ್ಲಿ  ಇಂತಹ ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಮುಂಬಯಿ ಯಂತಹ ಮಹಾನಗರದಲ್ಲಿ  ಕನ್ನಡಪರ ಸಂಘಟನೆಗಳು ಸಕ್ರಿಯವಾಗಿ ಕಾರ್ಯ ಚಟುವಟಿಕೆಗಳನ್ನು ಮಾಡುತ್ತಿರುವುದೇ ಇದಕ್ಕೆ ಸಾಕ್ಷಿಯಾಗಿದೆ. ಇಂದಿನ ಶಿಕ್ಷಣ ದಲ್ಲಿ ನಾವು ಇಂಗ್ಲಿಷ್‌ಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿರುವುದು ಭಾಷೆಯ ಅಳಿವಿಗೆ ಪ್ರಮುಖ ಕಾರಣವಾಗಿದೆ. ಇದು ಮುಂಬಯಿಗೆ ಮಾತ್ರ ಸೀಮಿತ ವಾಗಿರದೆ ಕರ್ನಾಟಕದಲ್ಲೂ ಕನ್ನಡ ಶಾಲೆಗಳಲ್ಲಿ ವಿದ್ಯಾರ್ಥಿಗಳ ಕೊರತೆ ಎದುರಾಗಿರುವುದು ವಿಷಾಧನೀಯ ಎಂದು ನಗರದ ಖ್ಯಾತ ನ್ಯಾಯವಾದಿ ಪ್ರಕಾಶ್‌ ಎಲ್‌. ಶೆಟ್ಟಿ ತಿಳಿಸಿದರು.

ನವಿಮುಂಬಯಿ ಕನ್ನಡ ಸಂಘದ ಎಂ. ಬಿ. ಕುಕ್ಯಾನ್‌ ಸಭಾಗೃಹದಲ್ಲಿ  ನ.28 ರಂದು ನಡೆದ ನವಿಮುಂಬಯಿ ಕನ್ನಡ ಸಂಘದ ಕರ್ನಾಟಕ ರಾಜ್ಯೋತ್ಸವ ಸಂಭ್ರಮದಲ್ಲಿ  ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಸಾಹಿತ್ಯ ಕ್ಷೇತ್ರ ಸಹಿತ ಇತರ ಯಾವುದೇ ಕ್ಷೇತ್ರಗಳಲ್ಲಿ ಮುಂಬಯಿ ಮಹಾನಗರದಲ್ಲಿ ಕನ್ನಡಿ ಗರು ಸಕ್ರಿಯರಾಗಿದ್ದಾರೆ. ಇಂಥವರ ಕಾರ್ಯವನ್ನು ಗುರುತಿಸಿ ಈ ಬಾರಿ ಕರ್ನಾಟಕ ಸರಕಾರವು ಮುಂಬಯಿ ಮಹಾನಗರದ ಮೂವರು ಕನ್ನಡಿಗರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿರುವುದು ನಿಜ ವಾಗಿ ಅಭಿನಂದನೆಯವಾಗಿದೆ. ಇದು ಮುಂಬ ಯಿಯ ಸಮಸ್ತ ಕನ್ನಡಿಗರಿಗೆ ದೊರೆತ ಗೌರವವಾಗಿದೆ ಎಂದು ತಿಳಿಸಿದರು.

ಇನ್ನೋರ್ವ ಅತಿಥಿ, ಉದ್ಯಮಿ ಸಮಾಜ ಸೇವಕ, ಬಾಂಬೆ ಬಂಟ್ಸ್‌ ಅಸೋಸಿಯೇಶನ್‌ ಮಾಜಿ ಅಧ್ಯಕ್ಷ ಶ್ಯಾಮ್‌ ಎನ್‌. ಶೆಟ್ಟಿ  ಮಾತನಾಡಿ, ಮುಂಬಯಿಯಲ್ಲಿ ಕನ್ನಡಪರ ಚಟುವಟಿಕೆಗಳು ಅತೀ

ಹೆಚ್ಚು ನಡೆಯುತ್ತಿವೆ. ಇಲ್ಲಿಯ ಕನ್ನಡಪರ ಸಂಘಟನೆಗಳು ಸದಾ ಕ್ರಿಯಾಶೀಲ ವಾಗಿರುತ್ತವೆ. ಸಾಹಿತಿಗಳು, ಲೇಖಕರು ಮಹಾನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಸದಾ ಬರವಣಿಗೆಯಲ್ಲಿ ನಿರತರಾಗಿದ್ದಾರೆ. ಇಲ್ಲಿ ಪುಸ್ತಕಗಳ ಪ್ರಕಟನೆಗಳು ನಿರಂತರ ನಡೆಯುತ್ತಿವೆ. ಇದೀಗ ಮುಂಬಯಿ ಕನ್ನಡಿಗರನ್ನು ಹಾಗೂ ಸಂಘ-ಸಂಸ್ಥೆಗಳನ್ನು ಕರ್ನಾಟಕ ಸರಕಾರ ಗುರುತಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಾಗಿದೆ ಎಂದರು.

ಈ ಸಂದರ್ಭ ವಿಶೇಷ ಆಮಂತ್ರಿತರಾಗಿದ್ದ ಕನ್ನಡಪರ ಲೇಖಕಿಯರಾದ ಡಾ| ಜೆ. ಪಿ. ಕುಸುಮಾ, ನಳಿನಾ ಪ್ರಸಾದ್‌, ಕಲಾ ಭಾಗÌತ್‌ ಅವರನ್ನು ಗಣ್ಯರು ಶಾಲು ಹೊದೆಸಿ, ಸ್ಮರಣಿಕೆ ನೀಡಿ ಗೌರವಿಸಿದರು. ಸಮ್ಮಾನಿತರು ಕನ್ನಡದ ಸಾಹಿತ್ಯ, ಸಂಸ್ಕೃತಿ, ಮುಂಬಯಿ ಮಹಾನಗರದಲ್ಲಿ ಕನ್ನಡ ಪರ ಕಾರ್ಯಚಟುವಟಿಕೆಗಳು, ಮುಂ ಬಯಿ ವಿಶ್ವವಿದ್ಯಾನಿಲಯದಲ್ಲಿ ಕನ್ನಡ  ವಿಭಾಗವು ನಡೆಸುತ್ತಿರುವ ಕನ್ನಡದ  ಶೈಕ್ಷಣಿಕ ಕಾರ್ಯಕ್ರಮಗಳ ಬಗ್ಗೆ  ಉಪನ್ಯಾಸ ನೀಡಿದರು.

ನವಿಮುಂಬಯಿ ಕನ್ನಡ ಸಂಘದ ಅಧ್ಯಕ್ಷ ಗೋಪಾಲ ವೈ. ಶೆಟ್ಟಿ  ಅಧ್ಯಕ್ಷತೆಯಲ್ಲಿ  ನಡೆದ ಸಮಾರಂಭದಲ್ಲಿ ಸಂಘದ ಗೌರವಾಧ್ಯಕ್ಷ ಬಿ. ಎಚ್‌. ಕಟ್ಟಿ ಅವರು ಸಂಘದ ಬಗ್ಗೆ ಹಾಗೂ ಸಂಘ ನಡೆದು ಬಂದ ದಾರಿ ಬಗ್ಗೆ ವಿವರಿಸಿದರು.

ನಾಡಗೀತೆಯೊಂದಿಗೆ ಕಾರ್ಯಕ್ರಮವನ್ನು  ಉದ್ಘಾಟಿಸಲಾಯಿತು. ನವಿಮುಂಬಯಿ ಕನ್ನಡ ಸಂಘದ ಸದಸ್ಯರಿಂದ ಹಾಗೂ ಮಕ್ಕಳಿಂದ ವಿವಿಧ ಮನೋರಂಜನ ಕಾರ್ಯಕ್ರಮಗಳು ಜರಗಿದವು. ಇತ್ತೀಚೆಗೆ ನಿಧನ ಹೊಂದಿದ ನಟ, ಸಮಾಜ ಸೇವಕ ಪುನೀತ್‌ ರಾಜಕುಮಾರ್‌ ಅವರ ಸಂಸ್ಮರಣೆ ನಡೆಯಿತು. ಕಿರು ಹಾಸ್ಯ ನಾಟಕ, ರಂಗ ನಿರ್ದೇಶಕ ಸಾದಯಾ ಅವರ ನಿರ್ದೇಶನದಲ್ಲಿ ಅಂಬಿಕಾತನಯದತ್ತ ಒಂದು ರೂಪಕ ಪ್ರದರ್ಶನಗೊಂಡಿತು.

ಲೈಬ್ರೆರಿ ವ್ಯವಸ್ಥಾಪಕರಾದ ವೈ. ವೈ. ಕೆಂಭಾವಿ, ಜಯರಾಮ್‌ ಶೆಟ್ಟಿ ಹಾಗೂ ಜ್ಯೋತಿ ಪ್ರಸಾದ್‌ ಉಪಸ್ಥಿತರಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಪರಿಸರದ ತುಳು-ಕನ್ನಡಿಗರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಾಂಸ್ಕೃತಿಕ ಸಮಿತಿಯ ಸಂಯೋ ಜಕ ರಘು ಮೂಲ್ಯ ಅತಿಥಿಗಳನ್ನು ಪರಿಚಯಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ಜಗದೀಶ್‌ ಡಿ. ರೈ ಸ್ವಾಗತಿಸಿದರು. ಪ್ರತಿಭಾ ಅವರು ವಿಶೇಷ ಆಮಂತ್ರಿ ತರನ್ನು ಪರಿಚಯಿಸಿದರು. ಜತೆ ಕಾರ್ಯದರ್ಶಿ ಅದ್ಯಪಾಡಿ ಬಾಲಕೃಷ್ಣ ಶೆಟ್ಟಿ  ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರ ಮವನ್ನು ಉಪಾಧ್ಯಕ್ಷ ಮಧುಸೂದನ್‌ ಟಿ. ರಾವ್‌ನಿರ್ವಹಿಸಿದರು.

ಶ್ರೀಮಂತ ಇತಿಹಾಸ ಹೊಂದಿರುವ ನಾಡು ನಮ್ಮದು. ಕನ್ನಡದ ಸಂಸ್ಕೃತಿ, ಸಾಹಿತ್ಯಗಳು ಎಂದೆಂದಿಗೂ ಮಹತ್ವವನ್ನು ಪಡೆಯುತ್ತವೆ. ಕನ್ನಡ ಭಾಷೆಯನ್ನು ಉಳಿಸಿ-ಬೆಳೆಸುವುದಕ್ಕಾಗಿ ನವಿಮುಂಬಯಿ ಕನ್ನಡ ಸಂಘವು ಸದಾ ಸಕ್ರಿಯವಾಗಿ ಕೆಲಸ ಮಾಡುತ್ತಿದ್ದು, ನಾಡು-ನುಡಿಯ ಅಭಿವೃದ್ಧಿಗೆ ನಿರಂತರ ಪ್ರೋತ್ಸಾಹ ನೀಡುತ್ತಾ ಬಂದಿದೆ. ಇನ್ನು ಮುಂದೆಯೂ ನಾವು ಕನ್ನಡದ ಸೇವೆಗಾಗಿ ಸದಾ ಕೆಲಸ ಮಾಡುತ್ತೇವೆ. ಇನ್ನು ಮುಂದೆಯೂ ಎಲ್ಲರ ಸಂಪೂರ್ಣ ಸಹಕಾರದಿಂದ ಮಹಾರಾಷ್ಟ್ರದ ಮಣ್ಣಿನಲ್ಲಿ ನಾವು ಒಂದಾಗಿ ಕನ್ನಡದ ಸೇವೆ ಮಾಡೋಣ.-ಗೋಪಾಲ್‌ ವೈ. ಶೆಟ್ಟಿ ಅಧ್ಯಕ್ಷರು, ನವಿಮುಂಬಯಿ ಕನ್ನಡ ಸಂಘ ವಾಶಿ

-ಚಿತ್ರ-ವರದಿ: ಸುಭಾಷ್‌ ಶಿರಿಯ

ಟಾಪ್ ನ್ಯೂಸ್

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?

10-uv-fusion

Challenges of Life: ಬದುಕಿನ ಸವಾಲುಗಳ ಎದುರಿಸಿ ಮುನ್ನಡೆಯೋಣ…

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.