ಕರ್ನಾಟಕ ಸಂಘದಿಂದ ಲಾತೂರ್ ಜಿಲ್ಲಾಧಿಕಾರಿ ಶ್ರೀಕಾಂತ್ರವರ ಭೇಟಿ
Team Udayavani, Feb 24, 2019, 2:10 AM IST
ಮುಂಬಯಿ: ಮಹಾರಾಷ್ಟ್ರ ರಾಜ್ಯದ ಲಾತೂರ್ ಜಿಲ್ಲೆಯ ಯುವ ಜಿಲ್ಲಾಧಿಕಾರಿ ಕನ್ನಡಿಗ ಜಿ. ಶ್ರೀಕಾಂತ್ ಐಎಎಸ್ ಅವರನ್ನು ಕರ್ನಾಟಕ ಸಂಘ ಮುಂಬಯಿ ಇದರ ವತಿಯಿಂದ ಫೆ. 10ರಂದು ಸಂಘದ ನೂತನ ಕಟ್ಟಡದ ಭೂಮಿಪೂಜೆ ಕಾರ್ಯಕ್ರಮಕ್ಕೆ ಆಹ್ವಾನ ಪತ್ರವನ್ನಿತ್ತು ಅಭಿನಂದಿಸಿ ಗೌರವಿಸಲಾಯಿತು.
ಕರ್ನಾಟಕ ಸಂಘ ಮುಂಬಯಿ ಪ್ರತಿನಿಧಿಗಳಾದ ಉಪಾಧ್ಯಕ್ಷ ಡಾ| ಈಶ್ವರ ಅಲೆವೂರು, ಗೌರವ ಪ್ರಧಾನ ಕಾರ್ಯದರ್ಶಿ ಡಾ| ಭರತ್ ಕುಮಾರ್ ಪೊಲಿಪು, ಕಟ್ಟಡ ನಿರ್ಮಾಣ ಸಮಿತಿಯ ಸಂಚಾಲಕ ಓಂದಾಸ್ ಕಣ್ಣಂಗಾರ್, ಕತೆಗಾರ ರಾಜೀವ್ ನಾಯಕ್ ಹಾಗೂ ಖ್ಯಾತ ಹಿಂದೂಸ್ತಾನಿ ಗಾಯಕ ಡಾ| ರಾಮ್ ಬೋರ್ಗಾಂವ್ಕರ್ ಅವರೊಂದಿಗೆ ಇತ್ತೀಚೆಗೆ ಅವರ ಕಚೇರಿಗೆ ಭೇಟಿ ನೀಡಿ ಸಂಘದ ನೂತನ ಸಾಂಸ್ಕೃತಿಕ ಸಮುಚ್ಚಯದ ಭೂಮಿಪೂಜೆ ಮತ್ತು ಶಿಲಾನ್ಯಾಸ ಕಾರ್ಯಕ್ರಮಕ್ಕೆ ಗೌರವ ಅತಿಥಿಯಾಗಿ ಆಗಮಿಸುವಂತೆ ಆಹ್ವಾನಪತ್ರವನ್ನಿತ್ತು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಅವರಿಗೆ ಸಂಘದ ಪರವಾಗಿ ಪುಷ್ಪಗೌರವ ಅರ್ಪಿಸಿ, ಸಂಘದ ನೂತನ ಸಾಂಸ್ಕೃತಿಕ ಸಮುಚ್ಚಯದ ಕಿರುಹೊತ್ತಿಗೆಯನ್ನು ನೀಡಲಾಯಿತು. ಕಲೆ ಮತ್ತು ಸಂಸ್ಕೃತಿಯ ಬಗ್ಗೆ ಅಪಾರ ಪ್ರೀತಿಯುಳ್ಳ ಜನಪ್ರಿಯ ಜಿಲ್ಲಾಧಿಕಾರಿ ಯಾಗಿರುವ ಶ್ರೀಕಾಂತ್ ಮುಂಬಯಿ ಕರ್ನಾಟಕ ಸಂಘದ ನಾಡು-ನುಡಿಯನ್ನು ಬಿಂಬಿ ಸುವ ಹಾಗೂ ಸಾಮಾಜಿಕ, ಶೈಕ್ಷಣಿಕ ಕಾರ್ಯಚಟುವಟಿಕೆಗಳ ಬಗ್ಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿ ತಮ್ಮಿಂದಾದ ಸಹಕಾರ ಸದಾ ನೀಡುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ