ಕರ್ನಿರೆ ಜಾರಂದಾಯ ದೈವಸ್ಥಾನದ ಅಭಿವೃದ್ಧಿ: ಪೂರ್ವಭಾವಿ ಸಭೆ


Team Udayavani, Mar 13, 2018, 3:33 PM IST

666.jpg

ಮುಂಬಯಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ಸೀಮೆಯ ಕರ್ನಿರೆ ಗ್ರಾಮದಲ್ಲಿ ಗ್ರಾಮಸ್ಥರು ಆರಾಧಿಸಿಕೊಂಡು ಬಂದಿರುವ ಜಾರಂದಾಯ ದೈವಸ್ಥಾನದ ಸಮಗ್ರ ಅಭಿವೃದ್ಧಿಯ ಬಗ್ಗೆ ಚರ್ಚಿಸಲು ಪೂರ್ವಭಾವಿ ಸಭೆಯು ಮಾ.7ರಂದು ಗೋರೆಗಾಂವ್‌ ಪೂರ್ವದ ದಿಂಡೋಶಿ ಸನಿಹದ ಬೋಂಬೆ 63 ಹೊಟೇಲಿನ ಬ್ಯಾಂಕ್ವೆಟ್‌ ಹಾಲ್‌ನಲ್ಲಿ  ನಡೆಯಿತು.

ಸಭೆಯಲ್ಲಿ ಉಪಸ್ಥಿತರಿದ್ದ ದೈವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಹರಿಶ್ಚಂದ್ರ ಶೆಟ್ಟಿ ಅವರು, ಗ್ರಾಮದ ಮತ್ತು ದೈವಸ್ಥಾನದ ಸಮಗ್ರ ಮಾಹಿತಿ ನೀಡುತ್ತ ಜಾರಂದಾಯ ದೈವವನ್ನು ನಂಬಿದ ಎಲ್ಲ ಗ್ರಾಮಸ್ಥರಿಗೆ ದೈವದ ಅನುಗ್ರಹ ಲಭಿಸಿರುವುದು ಎಲ್ಲರಿಗೂ ತಿಳಿದ ವಿಚಾರ. ಈ ಬಾರಿಯ ನೇಮೋತ್ಸವದಂದು ಒಂದು ಕೆ.ಜಿ. ತೂಕದ ಚಿನ್ನದ ಖಡ್ಸಲೆಯನ್ನು ನೀಡುವುದಾಗಿ ಗ್ರಾಮಸ್ಥರೆಲ್ಲರೂ ತೀರ್ಮಾನಿಸಿದ್ದೇವೆ. ಈ ಪುಣ್ಯ ಕಾರ್ಯಕ್ಕೆ ಮುಂಬಯಿಯಲ್ಲಿ ನೆಲೆಸಿರುವ ಕರ್ನಿರೆ ಗ್ರಾಮಸ್ಥರು ತಮ್ಮ ಶಕ್ತಿಯ ಅನುಸಾರ ಬಂಗಾರ ಅಥವಾ ಬಂಗಾರದ ಮೊಬಲಗನ್ನು ನೀಡಿ ಜಾರಂದಾಯ ದೈವಕ್ಕೆ ನೀಡಿದ  ವಾಗ್ಧಾನ ಪೂರೈಸಿಕೊಡಬೇಕು ಎಂದರು.

ಆಡಳಿತ ಸಮಿತಿಯ ಕೋಶಾಧಿಕಾರಿ ಮೋಹನ್‌ ಶೆಟ್ಟಿ ಕಳೆದ ವರ್ಷದ ಉತ್ಸವದ ಲೆಕ್ಕ ಪತ್ರಗಳನ್ನು ವಿವರಿಸುತ್ತಾ, ದೈವಸ್ಥಾನದ ಅಭಿವೃದ್ಧಿಯಲ್ಲಿ ಗ್ರಾಮಸ್ಥರು ಒಗ್ಗಟ್ಟಿನಿಂದ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲಿಯ ಅಭಿವೃದ್ಧಿ ಕಾರ್ಯದಲ್ಲಿ ಮುಂಬಯಿಯಲ್ಲಿ ನೆಲೆಸಿರುವ ಗ್ರಾಮಸ್ಥರು ವಿವಿಧ ರೀತಿಯ ಸೇವೆ ನೀಡಿ ದೈವ ಕಾರ್ಯ ಉತ್ತಮ ರೀತಿಯಲ್ಲಿ ನಡೆಯುವಂತೆ ಪ್ರೋತ್ಸಾಹ ನೀಡಿದ್ದಾರೆ. ಪ್ರತಿ ವರ್ಷ ವಿವಿಧ ಸೇವೆಗಳ ಜವಾಬ್ದಾರಿಯನ್ನು ಭಕ್ತರು ವಹಿಸಿಕೊಂಡಿರುವುದರಿಂದ ಯಾವುದೇ ರೀತಿಯ ಆರ್ಥಿಕ ತೊಂದರೆ ಸಂಭವಿಸಿಲ್ಲ. ಬಂಗಾರದ ಖಡ್ಸಲೆ ಒಪ್ಪಿಸುವುದಕ್ಕೆ ದೇಣಿಗೆಯನ್ನು ಇಚ್ಛಾನುಸಾರ ಸಮರ್ಪಿಸಿ ಎಂದರು.

ಗ್ರಾಮದ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರವಹಿಸಿದ ಮುಂಬಯಿ ಬಂಟರ ಸಂಘದ ಮಾಜಿ ಅಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಮಾತನಾಡುತ್ತ, ನಮ್ಮೆಲ್ಲರ ಕಾರ್ಯ ಚಟುವಟಿಕೆಗಳ ಹಿಂದೆ ಜಾರಂದಾಯ ದೈವದ ಶಕ್ತಿಯಿದೆ ಎಂದು ನಂಬಿದವರು ನಾವು. ದೈವದ ಮೇಲೆ ನಂಬಿಕೆಯಿರಿಸಿ ನಾವೆಲ್ಲರೂ ಒಗ್ಗಟ್ಟಿನಲ್ಲಿ ಕರ್ನಿರೆ ಗ್ರಾಮದ ಸೇವೆ ಮಾಡಬೇಕು. ದೈವಕ್ಕೆ ಬಂಗಾರದ ಖಡ್ಸಲೆ ಒಪ್ಪಿಸಲು ಮಂಗಳೂರಿನ ಕೆನರಾ ಜ್ಯುವೆಲ್ಲರ್ನಲ್ಲಿ ಈಗಾಗಲೇ ಬಂಗಾರದ ಕುಸುರಿ ಕೆಲಸ ನಡೆಯುತ್ತಿದೆ. ಕರ್ನಿರೆ ಗ್ರಾಮಸ್ಥರಾದ ನಾವೆಲ್ಲರೂ ಶ್ರದ್ಧೆ, ಭಕ್ತಿಯಿಂದ ಸಹಕಾರ ನೀಡೋಣ ಎಂದು ತಿಳಿಸಿದರು.

ದೈವಸ್ಥಾನದ ಅಭಿವೃದ್ಧಿಗೆ ವಿಶೇಷ ಸಹಕಾರ ನೀಡುತ್ತಿರುವ ಬಿಲ್ಲವ ಚೇಂಬರ್‌ ಆಫ್‌ ಕಾಮರ್ಸ್‌ನ ನಿರ್ದೇಶಕ, ಉದ್ಯಮಿ ಗಂಗಾಧರ್‌ ಎನ್‌. ಅಮೀನ್‌ ಕರ್ನಿರೆ ಮಾತನಾಡುತ್ತ, ದೈವಸ್ಥಾನದ ಪುಣ್ಯದ ಕಾರ್ಯಕ್ಕೆ ಮುಂಬಯಿಯಲ್ಲಿ ನೆಲೆಸಿರುವ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿರುವುದು ಸಂತಸ ತಂದಿದೆ. ದೈವಕ್ಕೆ ಅರ್ಪಿಸುವ ಬಂಗಾರದ ಖಡ್ಸಲೆಗೂ ಎಲ್ಲರೂ ದೇಣಿಗೆ ನೀಡಿ, ದೈವದ ಅನುಗ್ರಹಕ್ಕೆ ಪಾತ್ರರಾಗಬೇಕು ಎಂದರು.

ದಹಿಸರ್‌ ರವೀಂದ್ರ ಹೊಟೇಲ್‌ನ ಮಾಲಕ ದಿ| ಕರ್ನಿರೆ ಸಾಧು ಶೆಟ್ಟಿ ಅವರ ಪುತ್ರ, ಬಂಟರ ಸಂಘ ಜೋಗೇಶ್ವರಿ-ದಹಿಸರ್‌ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರ ಎಸ್‌. ಶೆಟ್ಟಿ ಮಾತನಾಡುತ್ತ,  ತಂದೆಯವರು ನೀಡುತ್ತಿದ್ದ ಸಹಕಾರದಂತೆ ಮುಂದಿನ ದಿನಗಳಲ್ಲೂ ಗ್ರಾಮದ ಮತ್ತು ದೈವಸ್ಥಾನದ ಸೇವಾ ಕಾರ್ಯಗಳಲ್ಲಿ ನಮ್ಮ ಕುಟುಂಬ ಭಾಗಿಯಾಗುತ್ತದೆ. ಗ್ರಾಮಸ್ಥರೆಲ್ಲರೂ ಒಗ್ಗಟ್ಟಿನಿಂದ ಸೇವೆಗೈಯುವುದು ನಿಜಕ್ಕೂ ಸಂತಸದ ವಿಷಯ ಎಂದರು. ಪ್ರಭಾಕರ ಶೆಟ್ಟಿ (ಅಣ್ಣು) ಬೈಲುಮನೆ ಕರ್ನಿರೆ ಉಪಸ್ಥಿತರಿದ್ದರು. ಸಭೆಯಲ್ಲಿ ಕರ್ನಿರೆ ಗ್ರಾಮದ ಗ್ರಾಮಸ್ಥರು ಸೇರಿ ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.