ಕಾತ್ರಜ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ: ಸಮ್ಮಾನ
Team Udayavani, Jan 25, 2019, 5:21 PM IST
ಪುಣೆ: ಕಾತ್ರಜ್ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಮಕರ ಸಂಕ್ರಮಣ ಆಚರಣೆಯು ದೇವಸ್ಥಾನದ ಪ್ರದಾನ ಅರ್ಚಕ ವೇದಮೂರ್ತಿ ಹರೀಶ್ ಭಟ್ ಅವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬಹಳ ಅದ್ದೂರಿಯಾಗಿ ನಡೆಯಿತು.
ಈ ಸಂದರ್ಭದಲ್ಲಿ ಕಾತ್ರಜ್ ಶ್ರೀ ಅಯ್ಯಪ್ಪ ಸೇವಾ ಸಂಘದ ವಿಶ್ವಸ್ತ ಮಂಡಳಿ, ಕಾರ್ಯಕಾರಿ ಸಮಿತಿ ಮತ್ತು ಮಹಿಳಾ ಸಮಿತಿಗಳ ವತಿಯಿಂದ ಪುಣೆಯ ವಿವಿಧ ಸಂಘ ಸಂಸ್ಥೆಗಳ ನೂತನವಾಗಿ ಆಯ್ಕೆಯಾದ ಅಧ್ಯಕ್ಷರುಗಳಿಗೆ ಶಾಲುಹಾಕಿ ಪುಷ್ಪಗುಚ್ಛ ನೀಡಿ ಗೌರವ ಸಲ್ಲಿಸಲಾಯಿತು.
ವಿಶ್ವಸ್ತ ಮಂಡಳಿಯ ಅಧ್ಯಕ್ಷ ಸುಭಾಷ್ ಶೆಟ್ಟಿಯವರು ಪುಣೆ ಬಂಟರ ಸಂಘದ ದಕ್ಷಿಣ ಪ್ರಾದೇಶಿಕ ಸಮಿತಿಯ ನೂತನ ಕಾರ್ಯಾಧ್ಯಕ್ಷ ರವಿ ಶೆಟ್ಟಿ, ಪುಣೆ ಬಿಲ್ಲವ ಸಂಘದ ನೂತನ ಅಧ್ಯಕ್ಷ ವಿಶ್ವನಾಥ್ ಪೂಜಾರಿ ಕಡ್ತಲ ಅವರನ್ನು ಗೌರವಿಸಿದರು. ಹಾಗೆಯೇ ಮಹಿಳಾ ಮಂಡಲದ ಅಧ್ಯಕ್ಷೆಯಾದ ವಿನೋದಾ ಶೆಟ್ಟಿ ಅವರು ಪುಣೆ ಬಂಟರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಸುಲತಾ ಶೆಟ್ಟಿ, ಪುಣೆ ಬಂಟರ ಸಂಘದ ದಕ್ಷಿಣ ಪ್ರಾದೇಶಿಕ ಸಮಿತಿಯ ಮಹಿಳಾ ಕಾರ್ಯಾಧ್ಯಕ್ಷೆ ಅಂಬಿಕಾ ಶೆಟ್ಟಿ, ದಕ್ಷಿಣ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷೆ ಪ್ರಮಿಳಾ ಶೆಟ್ಟಿ ಅವರನ್ನು ಗೌರವಿಸಿದರು.
ಇದೇ ಸಂದರ್ಭದಲ್ಲಿ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಅಯ್ಯಪ್ಪ ಸ್ವಾಮೀ ಸೇವಾ ಸಂಘದ ಗೌರವ ಕಾರ್ಯದರ್ಶಿ ರಘುರಾಮ ರೈ, ಕೋಶಾಧಿಕಾರಿ ಜಗದೀಶ್ ಶೆಟ್ಟಿ, ಉಪಾಧ್ಯಕ್ಷ ಸುಧಾಕರ ಶೆಟ್ಟಿ, ಮಾಜಿ ಅಧ್ಯಕ್ಷ ಶೇಖರ ಪೂಜಾರಿ ಮತ್ತು ಸರ್ವ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಕಾರ್ಯಾಧ್ಯಕ್ಷ ಪ್ರಕಾಶ ಹೆಗ್ಡೆ ಮಟ್ಟಾರು ಮತ್ತು ಪದಾಧಿಕಾರಿಗಳು ಮಹಿಳಾ ಮಂಡಲದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪುಷ್ಪರಾಜ್ ಶೆಟ್ಟಿ ಅವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಚಿತ್ರ-ವರದಿ : ಹರೀಶ್ಮೂಡಬಿದ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ