ಕಾಪು ಮೊಗವೀರ ಮಹಾಸಭಾ ಮುಂಬಯಿ: ವಾರ್ಷಿಕ ಮಹಾಸಭೆ


Team Udayavani, Feb 13, 2018, 3:35 PM IST

1101mum10.jpg

ಮುಂಬಯಿ: ನಾವು ಹುಟ್ಟಿ ಬೆಳೆದು ಪ್ರಾಥಮಿಕ ಶಿಕ್ಷಣ ಪಡೆದ ಗ್ರಾಮ ಹಾಗೂ ಶಾಲೆಯನ್ನು ಮರೆಯದೆ ಅದರ ಏಳ್ಗೆಗಾಗಿ ಎಲ್ಲರೂ ಕೈಜೋಡಿಸಬೇಕು. ನಾವೆಲ್ಲ ದೇವತಾ ಕಾರ್ಯಗಳಿಗೆ ಉದಾರ ದಾನ ಮಾಡುತ್ತಿದ್ದರೂ ಸಾಮಾಜಿಕ ಕಾರ್ಯಗಳಿಗೂ ದಾನ ಮಾಡುವಾಗ ಅದೇ ಉದಾರತೆಯನ್ನು ತೋರಿಸಬೇಕು ಎಂದು ಕಾಪು ಮೊಗವೀರ ಮಹಾಸಭಾ ಮುಂಬಯಿ ಇದರ ಅಧ್ಯಕ್ಷ ಸತೀಶ್‌ ಕುಮಾರ್‌ ಎನ್‌. ಕರ್ಕೇರ ನುಡಿದರು.

ಜ. 21 ರಂದು ಸಾಕಿನಾಕಾದಲ್ಲಿರುವ ಸಭಾದ ಕಾರ್ಯಾಲಯದಲ್ಲಿ ಜರಗಿದ ಕಾಪು ಮೊಗವೀರ ಮಹಾಸಭಾ ಇದರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಇವರು, ಸಭಾದ ವತಿಯಿಂದ ಕಾಪು ಪಡುಗ್ರಾಮದಲ್ಲಿನ ಶಾಲಾ ಮಕ್ಕಳಿಗೆ ಪ್ರತೀ ವರ್ಷವೂ ವಿದ್ಯಾರ್ಥಿ ವೇತನ, ರೇನ್‌ಕೋಟ್‌ಗಳ ವಿತರಣೆ, ಶಾಲೆಯಲ್ಲಿನ ಓರ್ವ ಶಿಕ್ಷಕಿಗೆ ಪ್ರತಿ ತಿಂಗಳು ವೇತನ ನೀಡುವುದು, ಸದಸ್ಯರ ಕುಟುಂಬಸ್ಥರಿಗೆ ಆರೋಗ್ಯ ವಿಮೆ ಕಂತುಗಳನ್ನು ಮರುಪಾವತಿಸುವುದು ಮೊದಲಾದ ಅನೇಕ ಸಮಾಜಪರ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದ್ದು, ಈ ಪುಣ್ಯ ಕಾರ್ಯಗಳಿಗೆ ಸದಸ್ಯರು ಮತ್ತು ದಾನಿಗಳು ತಮ್ಮ ಸಹಾಯಹಸ್ತವನ್ನು ನೀಡಬೇಕು ಎಂದು ಸದಸ್ಯರಲ್ಲಿ ವಿನಂತಿಸಿದರು.

ಆರಂಭದಲ್ಲಿ ಗತ ವರ್ಷದಲ್ಲಿ ನಿಧನರಾದ ಸದಸ್ಯರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಜತೆ  ಕಾರ್ಯದರ್ಶಿ ರೂಪೇಶ್‌ ಸುವರ್ಣ ಸ್ವಾಗತಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ಬಿ. ಎಸ್‌. ಸಾಲ್ಯಾನ್‌ ಅವರು ಕಳೆದ ವರ್ಷದಲ್ಲಿ ನಡೆಸಲಾದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಜತೆ ಕಾರ್ಯದರ್ಶಿ ರೋಹನ್‌ ನಾಯ್ಕ ಅವರು ಗತ ವಾರ್ಷಿಕ ವರದಿ ಮಂಡಿಸಿದರು.

ಗೌರವ ಕೋಶಾಧಿಕಾರಿ ಕುಮಾರ್‌ ಕರ್ಕೇರ ಅವರು ಕಾಪು ಮೊಗವೀರ ಮಹಾಸಭಾ ಮುಂಬಯಿ ಮತ್ತು ಅದರ ಸಂಚಾಲಕತ್ವದಲ್ಲಿರುವ ಕಾಪು ಮೊಗವೀರ ಪರಸ್ಪರ ಸಹಾಯಕ ಸಂಘದ ಲೆಕ್ಕ ಪತ್ರವನ್ನು ಮಂಡಿಸಿದರು. ಸದಸ್ಯರ ಪ್ರಶ್ನೆಗಳಿಗೆ ಕುಮಾರ್‌ ಕರ್ಕೇರ ಮತ್ತು ಉಮೇಶ್‌ ಕರ್ಕೇರ ಸೂಕ್ತ ಉತ್ತರಗಳನ್ನ ನೀಡಿದರು. ಸದಸ್ಯರು ಹಾಗೂ ಕುಟುಂಬದ ಸದಸ್ಯರಿಂದ ಬಂದ ಬೇಡಿಕೆಯಂತೆ ಸಭೆಯು ಮಹಿಳಾ ವಿಭಾಗವನ್ನು ಆರಂಭಿಸುವ ಬಗ್ಗೆ ಮಹಾಸಭೆಯಲ್ಲಿ ಚರ್ಚಿಸಲಾಯಿತು. ಇದರ ಅಂಗವಾಗಿ ಶೀಘ್ರದಲ್ಲೇ ಸದಸ್ಯರು ಹಾಗೂ ಅವರ ಕುಟುಂಬಸ್ಥರ ವಿಹಾರಕೂಟವನ್ನು ಆಯೋಜಿಸಿ ಅಲ್ಲಿ ಕೂಲಂಕುಷವಾಗಿ ಚರ್ಚಿಸಿ ನಿರ್ಧಾರಕ್ಕೆ ಬರಲು ಸಭೆಯಲ್ಲಿ ನಿರ್ಧರಿಸಲಾಯಿತು. ಸಭೆಯಲ್ಲಿ ಹಲವಾರು ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ಸಭಿಕರ ಪರವಾಗಿ ಕೃಷ್ಣಪ್ಪ ಎಂ. ಕರ್ಕೇರ, ರಮೇಶ್‌ ಎಂ. ಬಂಗೇರ, ನೀಲಾಧರ ಎಂ. ಸಾಲ್ಯಾನ್‌, ವಸಂತ ಆರ್‌. ಕುಂದರ್‌, ಲೋಕೇಶ್‌ ಎಂ. ಕರ್ಕೇರ, ಸೋಮನಾಥ ಎಸ್‌. ಕರ್ಕೇರ, ರಮೇಶ್‌ ಟಿ. ಮೆಂಡನ್‌, ರಾಮ ಎ. ಪುತ್ರನ್‌, ಮೋಹನ್‌ ಮೆಂಡನ್‌, ಪುರುಷೋತ್ತಮ ಎಲ್‌. ಪುತ್ರನ್‌, ರಮೇಶ್‌ ಎಚ್‌. ಕರ್ಕೇರ, ಆನಂದ ಕೋಟ್ಯಾನ್‌ ಮೊದಲಾದವರು ಉಪಯುಕ್ತ ಸಲಹೆ ನೀಡಿದರು. ರೂಪೇಶ್‌ ಸುವರ್ಣ ವಂದಿಸಿದರು. ಸದಸ್ಯ ಬಾಂಧವರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.