ಕಾಪು ಮೊಗವೀರ ಮಹಾಸಭಾ ಮುಂಬಯಿ: ಲಾಲಾಜಿ ಮೆಂಡನ್ ಭೇಟಿ
Team Udayavani, May 22, 2019, 4:33 PM IST
ಮುಂಬಯಿ: ತಮ್ಮ ಖಾಸಗಿ ಕೆಲಸ ನಿಮಿತ್ತ ಮುಂಬಯಿಗೆ ಆಗಮಿಸಿರುವ ಕಾಪು ಶಾಸಕರಾದ ಲಾಲಾಜಿ ಆರ್. ಮೆಂಡನ್ ಅವರು ಮೇ 19ರಂದು ಸಂಜೆ ಸಾಕಿನಾಕಾದಲ್ಲಿರುವ ಕಾಪು ಮೊಗವೀರ ಮಹಾಸಭಾ ಮುಂಬಯಿ ಇದರ ಕಚೇರಿಗೆ ಭೇಟಿ ನೀಡಿದರು. ಶಾಸಕರೊಂದಿಗೆ ಕಾಪು ಪಡುಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಗೀತಾ ರಾಜ್ ಕೂಡ ಇದ್ದರು. ಸಭೆಯ ಕಾರ್ಯಕಾರಿ ಸಮಿತಿಯ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಮೊದಲಿಗೆ ಕಾರ್ಯದರ್ಶಿ ಬಾಲಕೃಷ್ಣ ಎಸ್. ಸಾಲ್ಯಾನ್ ಅವರು ಇಬ್ಬರೂ ಅತಿಥಿಗಳನ್ನು ಸಭೆಯ ಪರವಾಗಿ ಆತ್ಮೀಯವಾಗಿ ಸ್ವಾಗತಿಸಿದರು. ಅಧ್ಯಕ್ಷರಾದ ಸತೀಶ್ ಎನ್. ಕರ್ಕೇರ ಅವರು ಲಾಲಾಜಿ ಮೆಂಡನ್ ಅವರಿಗೆ ಫಲ ಪುಷ್ಪಗಳನ್ನು ನೀಡಿದರಲ್ಲದೆ ಉಪಾಧ್ಯಕ್ಷರುಗಳಾದ ವಸಂತ್ ಆರ್. ಕುಂದರ್ ಮತ್ತು ನೀಲಾಧರ ಎಂ. ಸಾಲ್ಯಾನ್ ಶಾಲು ಹೊದಿಸಿ ಶಾಸಕರನ್ನು ಸಮ್ಮಾನಿಸಿದರು. ಶಿಕ್ಷಕಿ ಗೀತಾ ರಾಜ್ ಅವರನ್ನೂ ಪುಷ್ಪ ಗುತ್ಛ ನೀಡಿ ಗೌರವಿಸಲಾಯಿತು.
ಕಾಪು ವಿಧಾನ ಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ತನ್ನ ಮೇಲೆ ಪ್ರೀತಿ ವಿಶ್ವಾಸವಿರಿಸಿ ಈತನಕ ಈ ಕ್ಷೇತ್ರದಿಂದ ಸ್ಪರ್ಧಿಸಿರುವವರಿಗಿಂತ ಅತ್ಯಧಿಕ ದಾಖಲೆಯ ಮತಗಳಿಂದ ತನ್ನನ್ನು ವಿಧಾನಸಭೆಗೆ ಆರಿಸಿ ಕಳುಹಿಸಿದ ಕ್ಷೇತ್ರದ ಮತದಾರರಿಗೆ ಕೃತಜ್ಞತೆಯನ್ನು ಹೇಳಿದ ಮೆಂಡನ್ ಅವರು ಯಾವುದೇ ಸಂದರ್ಭದಲ್ಲಿ ಜನರ ಸುಖ ಕಷ್ಟಗಳಿಗೆ ಸ್ಪಂದಿಸುತ್ತ ಬಂದಿದ್ದೇನೆ. ಇಂದಿನ ಪರಿಸ್ಥಿತಿಯಲ್ಲಿ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಸುಲಭವೇನಲ್ಲ. ಎಷ್ಟೇ ಉತ್ತಮ ಕೆಲಸ ಮಾಡಿದರೂ ಜನರ ಟೀಕೆ ಟಿಪ್ಪಣಿಗಳನ್ನು ಕೇಳಿಸಿಕೊಳ್ಳಬೇಕಾಗುತ್ತದೆ. ಇದರಿಂದ ಕೆಲವೊಮ್ಮೆ ಮಾನಸಿಕ ಹಿಂಸೆಯಾಗುತ್ತಿದೆ ಎಂದರು.
ಹೆಜಮಾಡಿ ಮೀನುಗಾರಿಕಾ ಬಂದರು ನಿರ್ಮಾಣದ ಬಗ್ಗೆ ಪ್ರಸ್ತಾಪಿಸಿದ ಮೆಂಡನ್ ಅವರು ಇದಕ್ಕಾಗಿ ಈಗಾಗಲೇ ಕೇಂದ್ರ ಸರಕಾರವು 12 ಕೋಟಿ ರೂ.ಗಳನ್ನು ಬಿಡುಗಡೆ ಮಾಡಿದೆ. ಈ ಬಂದರಿನ ಕನಸು ನನಸಾಗುವ ತನಕ ತಾನು ವಿರಮಿಸಲಾರೆ ಎಂದರು.
ಇದೇ ಸಂದರ್ಭದಲ್ಲಿ ಲಾಲಾಜಿ ಮೆಂಡನ್ ಅವರೊಂದಿಗಿದ್ದ ಮುಂಬಯಿ ಲೇಖಕ ಸೋಮನಾಥ ಎಸ್. ಕರ್ಕೇರ ಮಾತನಾಡುತ್ತ, ಇಂದು ರಾಜಕೀಯ ರಂಗವು ಅತ್ಯಂತ ಹೊಲಸಾಗಿದ್ದರೂ ಇಲ್ಲಿ ಲಾಲಾಜಿ ಮೆಂಡನ್ ಅವರಂತಹ ಸಚ್ಚಾರಿತ್ರÂವುಳ್ಳ ಬೆರಳೆಣಿಕೆಯಷ್ಟು ರಾಜಕಾರಣಿಗಳು ಇರುವುದು ಸಮಾಧಾನದ ಸಂಗತಿಯಾಗಿದೆ ಎಂದರಲ್ಲದೆ ಮೆಂಡನ್ ಅವರಿಗೆ ಮಂತ್ರಿಯಾಗುವ ಯೋಗ ಲಭಿಸಲಿ ಎಂದು ಹಾರೈಸಿದರು.
ಅನಂತರ ಮಾತನಾಡಿದ ಶಿಕ್ಷಕಿ ಗೀತಾ ರಾಜ್, ಕಾಪು ಮೊಗವೀರ ಮಹಾಸಭಾ ಮುಂಬಯಿ ಹಾಗೂ ಕಾಪು ಮೊಗವೀರ ಪರಸ್ಪರ ಸಹಾಯಕ ಸಂಘ ಮುಂಬಯಿ ತನಗೆ ನೀಡುತ್ತಿರುವ ಪ್ರೋತ್ಸಾಹಕ್ಕಾಗಿ ಇವೆರಡೂ ಸಂಸ್ಥೆಗಳಿಗೆ ತಾನು ಋಣಿಯಾಗಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ವಸಂತ್ ಆರ್. ಕುಂದರ್, ನೀಲಾಧರ ಎಂ. ಬಂಗೇರ, ಮಾಜಿ ಅಧ್ಯಕ್ಷರಾದ ರಮೇಶ ಎಂ. ಬಂಗೇರ, ಸಮಿತಿ ಸದಸ್ಯರಾದ ಮೋಹನ್ ಒ. ಮೆಂಡನ್ ಮಾತನಾಡಿ ಇಬ್ಬರೂ ಅತಿಥಿಗಳಿಗೆ ಶುಭ ಹಾರೈಸಿದರು.
ಮಹಾಸಭಾದ ಅಧ್ಯಕ್ಷರಾದ ಸತೀಶ್ ಎನ್. ಕರ್ಕೇರ ಮಾತನಾಡುತ್ತ, ಹಾಲಿ ಶಾಸಕರಾಗಿರುವ ಲಾಲಾಜಿ ಮೆಂಡನ್ ಅವರು ಭವಿಷ್ಯದಲ್ಲಿ ಸಂಸದರಾಗಿ, ಮಂತ್ರಿಯಾಗಿ ಇನ್ನಷ್ಟು ಜನಸೇವೆ ಮಾಡುವಂತಾಗಲಿ ಎಂದು ಶುಭ ಹಾರೈಸಿದರು. ಕೊನೆಯಲ್ಲಿ ಕಾರ್ಯದರ್ಶಿ ಬಾಲಕೃಷ್ಣ ಎಸ್. ಸಾಲ್ಯಾನ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ