ಪೇಜಾವರ ಮಠದಲ್ಲಿ ಎಡನೀರು ಶ್ರೀಗಳಿಂದ ದಾಸವಾಣಿ
Team Udayavani, Aug 22, 2017, 12:39 PM IST
ಮುಂಬಯಿ: ಜಗದ್ಗುರು ಶ್ರೀ ಮಧ್ವಾಚಾರ್ಯ ಮಹಾ ಸಂಸ್ಥಾನದ ಉಡುಪಿ ಶ್ರೀ ಪೇಜಾವರ ಅಧೋಕ್ಷಜ ಮಠಾಧೀಶ ಪರಮಪೂಜ್ಯ ಶ್ರೀ ವಿಶ್ವೇಶತೀರ್ಥ ಶ್ರೀ ಪಾದಂಗಳವರ ಮತ್ತು ಕಿರಿಯ ಯತಿಗಳಾದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳ ಆಶೀರ್ವಾದಗಳೊಂದಿಗೆ ಆ. 19ರಂದು ಸಂಜೆ ಸಾಂತಾಕ್ರೂಜ್ ಪೂರ್ವದ ಪೇಜಾವರ ಮಠ ಮುಂಬಯಿ ಶಾಖೆಯಲ್ಲಿ ಎಡನೀರು ಮಠಾಧೀಶ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಅವರಿಂದ ದಾಸವಾಣಿ ಕಾರ್ಯಕ್ರಮ ನಡೆಯಿತು.
ಮುಂಬಯಿ ಚಾತುರ್ಮಾಸ್ಯದಲ್ಲಿರುವ ಸಂಗೀತ ವಿದ್ವಾಂಸರು, ಸಾಹಿತಿಗಳು ಹಾಗೂ ಯಕ್ಷಗಾನ ತಾಳಮದ್ದಳೆಯ ಒಳ್ಳೆಯ ಅರ್ಧದಾರಿಗಳಾಗಿರುವ ಎಡನೀರು ಮಠಾಧೀಶ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿ ಅವರು ಪ್ರಾರಂಭದಲ್ಲಿ ಶ್ರೀ ಕೃಷ್ಣ ದೇವರಿಗೆ ಮಂಗಳಾರತಿಯನ್ನು ಬೆಳಗಿಸಿ ಭಕ್ತರಿಗೆ ಮಂತ್ರಾಕ್ಷತೆಯನ್ನು ನೀಡಿ ಆಶೀರ್ವದಿಸಿದರು.
ಪೇಜಾವರ ಮಠ ಮುಂಬಯಿ ಶಾಖೆಯ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಭಕ್ತಾದಿಗಳು, ಸಂಗಿತಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಪೇಜಾವರ ಮಠ ಮುಂಬಯಿ ಶಾಖೆಯ ಪ್ರಬಂಧಕರುಗಳಾದ ರಾಮದಾಸ ಉಪಾಧ್ಯಾಯ ರೆಂಜಾಳ, ಪ್ರಕಾಶ ಆಚಾರ್ಯ ರಾಮಕುಂಜ, ನಿರಂಜನ್ ಗೋಗೆr ಮೊದಲಾದವರು ಉಪಸ್ಥಿತರಿದ್ದು ಸಹಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು