ಬಂಟ್ಸ್ ಸೆಂಟರ್: ಸಂಗೀತ ಕಲಾವಿದ ಕಿಶೋರ್ ಕುಮಾರ್ ಜನ್ಮದಿನಾಚರಣೆ
Team Udayavani, Aug 12, 2018, 2:47 PM IST
ಮುಂಬಯಿ: ದ ಪೀಪಲ್ಸ್ ಆರ್ಟ್ ಸೆಂಟರ್ ಮುಂಬಯಿ ಸಂಸ್ಥೆಯು ನವಿ ಮುಂಬಯಿ ಜೂಯಿ ನಗರದ ಬಂಟ್ಸ್ ಸೆಂಟರ್ನ ಸೌಮ್ಯಲತಾ ಸದಾನಂದ ಶೆಟ್ಟಿ ಸಭಾಗೃಹದಲ್ಲಿ ಸಂಗೀತಕಾರ ಸ್ವರ್ಗೀಯ ಕಿಶೋರ್ ಕುಮಾರ್ ಅವರ 89ನೇ ಜನ್ಮೋತ್ಸವದ ಪ್ರಯುಕ್ತ “ಚಿರಂತನ ಕಿಶೋರ್ ಕುಮಾರ್’ ಸಂಗೀತ ಕಾರ್ಯಕ್ರಮ ಆಯೋಜಿಸಿತ್ತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಫೆಡರೇಶನ್ ಆಫ್ ಹೊಟೇಲ್ ಆ್ಯಂಡ್ ರೆಸ್ಟೋರೆಂಟ್ ಅಸೋಸಿಯೇಶನ್ಸ್ ಮಹಾರಾಷ್ಟ್ರ ಇದರ ಉಪಾಧ್ಯಕ್ಷ, ಮಹಾರಾಷ್ಟ್ರ ರಾಜ್ಯ ಸರಕಾರದ ವಿಶೇಷ ಕಾರ್ಯನಿರ್ವಹಣಾ ಅಧಿಕಾರಿ ವಿರಾರ್ ಶಂಕರ್ ಬಿ. ಶೆಟ್ಟಿ ಉಪಸ್ಥಿತರಿದ್ದು ಪ್ರಧಾನ ಅಭ್ಯಾಗತರಾಗಿದ್ದ ನವಿ ಮುಂಬಯಿ ಮಹಾನಗರ ಪಾಲಿಕೆಯ ಆಯುಕ್ತ ಐಎಎಸ್ ಅಧಿಕಾರಿ ಡಾ| ರಾಮಸ್ವಾಮಿ ಎನ್. ಅವರನ್ನು ಸಮ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭ ವೇದಿಕೆಯಲ್ಲಿ ಅಖೀಲ ಭಾರತ ಮರಾಠಿ ಚಿತ್ರಪದ್ ಮಹಾ ಮಂಡಲದ ಮಾಜಿ ಅಧ್ಯಕ್ಷ ವಿಜಯ್ ಕೋಂಡೆR ಉಪಸ್ಥಿತರಿದ್ದರು. ಪೀಪಲ್ಸ್ ಆರ್ಟ್ ಸೆಂಟರ್ ಇದರ ಕಾರ್ಯದರ್ಶಿ ಗೋಪ್ಕುಮಾರ್ ಕೃಷ್ಣ ಪಿಳ್ಳೈ ಸ್ವಾಗತಿಸಿದರು. ಡಾ| ಕೆ. ಸತೀಶನ್ ಪುರಸ್ಕೃತರನ್ನು ಪರಿಚಯಿಸಿ, ಕಾರ್ಯಕ್ರಮ ನಿರೂಪಿಸಿ, ಕಿಶೋರ್ ಕುಮಾರ್ ಅವರ ಸಿದ್ಧಿ-ಸಾಧನೆಗಳನ್ನು ವಿವರಿಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ