ಕುರ್ಲಾ ಬಂಟರ ಭವನದ ಶ್ರೀ ಮಹಾವಿಷ್ಣು ದೇಗುಲದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ
Team Udayavani, Aug 21, 2022, 12:03 PM IST
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಜ್ಞಾನ ಮಂದಿರ ಸಮಿತಿಯ ವತಿಯಿಂದ ಕುರ್ಲಾ ಪೂರ್ವದ ಬಂಟರ ಭವನದ ಸಂಕೀರ್ಣದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯು ಆ. 18ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಿತು.
ಸಂಘದ ಅಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ ಅವರ ಮಾರ್ಗದರ್ಶನ ಹಾಗೂ ಬಂಟರ ಸಂಘದ ಉನ್ನತ ಶಿಕ್ಷಣ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿತು.
ಉನ್ನತ ಶಿಕ್ಷಣ ಸಮಿತಿಯ ಕಾರ್ಯಾಧ್ಯಕ್ಷ ಸಿಎ ಐ. ಆರ್. ಶೆಟ್ಟಿ ಮತ್ತು ಕವಿತಾ ಆರ್. ಶೆಟ್ಟಿ ದಂಪತಿಯ ಉಪಸ್ಥಿತಿಯಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆಯಿತು. ಧಾರ್ಮಿಕ ಕಾರ್ಯಕ್ರಮವಾಗಿ ಶ್ರೀ ಕೃಷ್ಣ ದೇವರಿಗೆ ತೊಟ್ಟಲು ಪೂಜೆ, ಶ್ರೀ ಮಹಾವಿಷ್ಣು ದೇವರಿಗೆ ಮಹಾಪೂಜೆಯು ದೇವಸ್ಥಾನದ ಪ್ರಧಾನ ಅರ್ಚಕ ವಿದ್ವಾನ್ ಅರವಿಂದ ಬನ್ನಿಂತ್ತಾಯ ಅವರ ಪೌರೋಹಿತ್ಯದಲ್ಲಿ ನಡೆಯಿತು.
ವಿವಿಧ ಸ್ಪರ್ಧೆಗಳು :
ಇದೇ ಸಂದರ್ಭದಲ್ಲಿ ಮಹಿಳಾ ಸದಸ್ಯೆಯರಿಂದ ಭಜನೆ, ಸುರೇಶ್ ಶೆಟ್ಟಿ ಶಿಬರೂರು ಮತ್ತು ಅಶೋಕ್ ಪಕ್ಕಳ ಬಳಗದಿಂದ ಭಕ್ತಿಗಾನ ಅರ್ಥ ವೈಭವವನ್ನು ಆಯೋಜಿಸಲಾಗಿತ್ತು. ಅಲ್ಲದೆ ಮಹಿಳೆಯರಿಗೆ ಹೂ ಕಟ್ಟುವ ಸ್ಪರ್ಧೆ, ಪುರುಷರಿಗೆ ತೆಂಗಿನಕಾಯಿ ಕುಟ್ಟುವ ಸ್ಪರ್ದೆ, ಮೊಸರು ಕುಡಿಕೆ, ಕೃಷ್ಣ ವೇಷ, ಮುದ್ದುಕೃಷ್ಣ ವೇಷ ಹಾಗೂ ರಾಧಾಕೃಷ್ಣ ವೇಷ ಸ್ಪರ್ಧೆ ಇನ್ನಿತರ ಕಾರ್ಯಕ್ರಮಗಳು ಅದ್ದೂರಿಯಾಗಿ ನೆರವೇರಿತು.
ಬಂಟರ ಸಂಘದ ಉಪಾಧ್ಯಕ್ಷ ಉಳ್ತೂರು ಮೋಹನ್ದಾಸ್ ಶೆಟ್ಟಿ, ಜತೆ ಕಾರ್ಯದರ್ಶಿ ದಿವಾಕರ್ ಶೆಟ್ಟಿ ಇಂದ್ರಾಳಿ, ಜತೆ ಕೋಶಾಧಿಕಾರಿ ಮುಂಡಪ್ಪ ಎಸ್. ಪಯ್ಯಡೆ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಮಾ ಕೃಷ್ಣ ಶೆಟ್ಟಿ, ಜ್ಞಾನ ಮಂದಿರ ಸಮಿತಿಯ ಕಾರ್ಯಾಧ್ಯಕ್ಷ ಕೃಷ್ಣ ವಿ. ಶೆಟ್ಟಿ, ಉಪ ಕಾರ್ಯಾಧ್ಯಕ್ಷ ದಿವಾಕರ ಶೆಟ್ಟಿ ಕುರ್ಲಾ, ಕಾರ್ಯದರ್ಶಿ ಸುರೇಶ್ ಶೆಟ್ಟಿ ಶಿಬರೂರು, ಕೋಶಾಧಿಕಾರಿ ಅಶೋಕ್ ಪಕ್ಕಳ, ಎಸ್ಎಂ ಶೆಟ್ಟಿ ಶೈಕ್ಷಣಿಕ ಸಂಸ್ಥೆಯ ಕಾರ್ಯಾಧ್ಯಕ್ಷ ಬಿ. ಆರ್. ಶೆಟ್ಟಿ ಅವರು ಸೇರಿದಂತೆ ಅಪಾರ ಸಂಖ್ಯೆಯ ಸದಸ್ಯರು ಪಾಲ್ಗೊಂಡಿದ್ದರು. ಕೊನೆಯಲ್ಲಿ ಸಂಘದ ಅಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಜರಗಿತು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಿ ಅಭಿನಂದಿಸಲಾಯಿತು.
-ಚಿತ್ರ-ವರದಿ: ರೋನ್ಸ್ ಬಂಟ್ವಾಳ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್