ಕುಲಾಲ ಸಂಘ ಚರ್ಚ್ಗೇಟ್-ದಹಿಸರ್ ಸಮಿತಿ: ಕ್ರೀಡೋತ್ಸವ
Team Udayavani, Feb 1, 2018, 10:41 AM IST
ಮುಂಬಯಿ: ಸಮಾಜ ಬಾಂಧವರು ಹುಮ್ಮಸ್ಸಿನಿಂದ ಭಾವನಾತ್ಮಕ ವಾಗಿ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಇದೊಂದು ಸಂಪೂರ್ಣ ಯಶಸ್ವಿ ಕ್ರೀಡಾ ಉತ್ಸವವಾಗಿ ವಿಜೃಂಭಿಸಿದೆ. ಎಲ್ಲ ಪ್ರಾದೇಶಿಕ ಸಮಿತಿಯ ಕಾರ್ಯಕಾರಿ ಹಾಗೂ ಸಮಿತಿಯ ಸದಸ್ಯರ ಹುರುಪು, ಉತ್ಸಾಹ ಕ್ರೀಡೋತ್ಸವವನ್ನು ಯಶಸ್ಸುಗೊಳಿಸುವಲ್ಲಿ ಸಹಭಾಗಿಯಾಗಿ ದುಡಿದಿದ್ದಾರೆ. ಬೆಳಗ್ಗಿನಿಂದ ಪ್ರಾರಂಭಗೊಂಡ ಕ್ರೀಡಾ ಕಾರ್ಯಕ್ರಮದಲ್ಲಿ ಪ್ರತಿಯೊಂದು ಸ್ಪರ್ಧೆ ಯಲ್ಲಿ ಸ್ನೇಹ, ಸೌಹಾರ್ದ ಪೂರಕವಾಗಿ ಮೂಡಿ ಬಂದಿದೆ ಎಂದು ಕುಲಾಲ ಸಂಘ ಮುಂಬಯಿ ಅಧ್ಯಕ್ಷ ದೇವದಾಸ್ ಪಿ. ಕುಲಾಲ್ ನುಡಿದರು.
ಜ. 28ರಂದು ಕುಲಾಲ ಸಂಘ ಚರ್ಚ್ಗೇಟ್-ದಹಿಸರ್ ಪ್ರಾದೇಶಿಕ ಸಮಿತಿ ಕಾಂದಿವಲಿ ಪಶ್ಚಿಮದ ಎಕ್ಸ್ಪ್ರೆಸ್ ಹೈವೇ ಸಮೀಪದ ಸಾಯಿಗ್ರೌಂಡ್ನಲ್ಲಿ ಆಯೋಜಿಸಲಾದ ಕ್ರೀಡೋತ್ಸವದ ಸಮಾರೋಪ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಮುಂದೆಯೂ ಸಂಘದ ವತಿಯಿಂದ ಪ್ರಾದೇಶಿಕ ಸಮಿತಿಗಳಿಂದ ನಡೆಯುವ ಎಲ್ಲ ಕಾರ್ಯಕ್ರಮಗಳಿಗೆ ನಿಮ್ಮೆಲ್ಲರ ಸಹಕಾರ ಮನೋಭಾವ, ಒಗ್ಗಟ್ಟು ಎಲ್ಲರಿಗೆ ಸ್ಫೂರ್ತಿಯಾಗಲಿ ಎಂದು ಹಾರೈಸಿದರು.
ಗೌರವ ಅತಿಥಿಯಾಗಿ ಪಾಲ್ಗೊಂಡ ಉದ್ಯಮಿ, ಜ್ಯೋತಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯಾಧ್ಯಕ್ಷ ಗಿರೀಶ್ ಬಿ. ಸಾಲ್ಯಾನ್ ಅವರು ಮಾತನಾಡಿ, ಯಾವುದೇ ಕಾರ್ಯಕ್ರಮದ ಯಶಸ್ಸಿಗೆ ಸದಸ್ಯರ ಉತ್ಸುಕತೆ, ಆತ್ಮಾಭಿಮಾನ ಮುಖ್ಯ. ಅತ್ಯುತ್ಸಾಹದಿಂದ ದಿನಪೂರ್ತಿ ಕ್ರೀಡೆಯಲ್ಲಿ ಭಾಗವಹಿಸುವ ಜತೆಗೆ ಇತರರಿಗೆ ಪ್ರೋತ್ಸಾಹ ನೀಡಿ ಯಶಸ್ವಿ ಕ್ರೀಡೋತ್ಸವಕ್ಕೆ ಕಾರಣೀಭೂತರಾಗಿದ್ದಾರೆ. ಮುಂದೆಯೂ ಈ ಯಶಸ್ವಿ ಸಂಘಟನೆ ಸಮಾಜದ ಏಳ್ಗೆಗೆ ಸಹಕಾರಿಯಾಗಬೇಕು. ಸಂಘಕ್ಕೆ ಎಲ್ಲರ ಸಹಾಯ ದೊರೆತಾಗ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಾಧ್ಯವಾಗುತ್ತದೆ. ಸಂಸ್ಥೆಯ ಹಿರಿಯರಾದ ಪಿ. ಕೆ. ಸಾಲ್ಯಾನ್ ಮೊದಲಾದವರ ಕನಸಾಗಿರುವ ಊರಿನ ಕುಲಾಲ ಭವನವನ್ನು ಸಂಪೂರ್ಣಗೊಳಿಸುವಲ್ಲಿ ಕೈಜೋಡಿಸಬೇಕು ಎಂದರು.
ಪ್ರಾದೇಶಿಕ ಸಮಿತಿಯ ಉಪಕಾರ್ಯಾಧ್ಯಕ್ಷ ರಾಘು ಪಿ. ಮೂಲ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಒಟ್ಟು ಆರು ಪ್ರಾದೇಶಿಕ ಸಮಿತಿಗಳ ಈ ಕ್ರೀಡಾಕೂಟವು ಎಲ್ಲಾ ಸದಸ್ಯರ ಹಾಗೂ ಕಾರ್ಯಕಾರಿ ಸಮಿತಿಯ ಕಾರ್ಯತತ್ಪರತೆಯಿಂದ ಯಶಸ್ವಿಯಾಗಿರುವುದು ಸಂತೋಷದ ಸಂಗತಿಯಾಗಿದೆ. ಸಮಾಜದ ಉನ್ನತಿಗಾಗಿ ಮುಂದೆಯೂ ಸದಸ್ಯರ ಮನೋಬಲದ ಧನಾತ್ಮಕ ಚಿಂತನೆ ಇದೇ ರೀತಿ ಮುಂದುವರಿಯುತ್ತಿರಲಿ ಎಂದು ಹೇಳಿದರು.
ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ದಾನಿಗಳಾದ ಐತು ಮೂಲ್ಯ, ಚೇತನಾ ಕುಂದರ್, ಜಗದೀಶ್ ಬಂಜನ್, ಸುಕುಮಾರ್ ಸಾಲ್ಯಾನ್, ವಿಜಯ ಸಾಲ್ಯಾನ್, ನರೇಂದ್ರ ಬಂಗೇರ ಹಾಗೂ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ದಿನೇಶ್ ಬಿ. ಕುಲಾಲ್ ಹಾಗೂ ಇತರ ಗಣ್ಯರನ್ನು ಶಾಲು ಹೊದೆಸಿ, ಸ್ಮರಣಿಕೆಯನ್ನಿತ್ತು ಸತ್ಕರಿಸಲಾಯಿತು.
ವೇದಿಕೆಯಲ್ಲಿ ಆರ್ಬಿಐ ಫುಟ್ಬಾಲ್ ತರಬೇತುದಾರ ಸುರೇಶ್ ಬ ಂಜನ್, ಉದ್ಯಮಿ ಐ. ಆರ್. ಮೂಲ್ಯ, ಸುನಿಲ್ ಆರ್. ಸಾಲ್ಯಾನ್, ಉದ್ಯಮಿ ಎ. ಬಾಲಕೃಷ್ಣ ಸಾಲ್ಯಾನ್, ಅಶೋಕ್ ಸಾಲ್ಯಾನ್, ವಿಠಲ ಎಸ್. ಕುಲಾಲ್, ಕುಲಾಲ ಕೇಂದ್ರ ಸಮಿತಿಯ ಉಪ ಕಾರ್ಯಾಧ್ಯಕ್ಷ, ಸಮಿತಿಯ ಗೌರವ ಕಾರ್ಯದರ್ಶಿ ಕರುಣಾಕರ ಬಿ. ಸಾಲ್ಯಾನ್, ಗೌರವ ಕೋಶಾಧಿಕಾರಿ ಜಯ ಅಂಚನ್, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮಮತಾ ಎಸ್. ಗುಜರನ್ ಉಪಸ್ಥಿತರಿದ್ದರು. ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ರಾಘು ಆರ್. ಮೂಲ್ಯ, ಉಪ ಕಾರ್ಯಾಧ್ಯಕ್ಷ ಗಣೇಶ್ ಬಿ. ಸಾಲ್ಯಾನ್, ಕಾರ್ಯದರ್ಶಿ ಅರುಣ್ ಡಿ. ಬಂಗೇರ, ಕೋಶಾಧಿಕಾರಿ ಸತೀಶ್ ಬಂಗೇರ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪುಷ್ಪಲತಾ ವಿ. ಸಾಲ್ಯಾನ್, ಕ್ರೀಡಾ ಸಮಿತಿಯ ಕಾರ್ಯಾಧ್ಯಕ್ಷ ಆನಂದ ಕೆ. ಕುಲಾಲ್, ಕಾರ್ಯದರ್ಶಿ ಅಶ್ವಿನಿ ಎ. ಬಂಗೇರ, ಸಮನ್ವಯಕ ಹರೀಶ್ ಜಿ. ಬಂಗೇರ, ಕ್ರೀಡಾ ಸಮಿತಿಯ ಯುವ ವಿಭಾಗದ ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.
ಕ್ರೀಡಾಕೂಟದಲ್ಲಿ ಪುರುಷರಿಗಾಗಿ ಕ್ರಿಕೆಟ್, ಯುವತಿಯರಿಗೆ ಬಾಕ್ಸ್ ಕ್ರಿಕೆಟ್, ಮಹಿಳೆಯರಿಗೆ ತ್ರೋಬಾಲ್, ಹದಿನೇಳು ವರ್ಷದೊಳಗಿನ ಯುವಕರಿಗೆ ರಿಂಕ್ ಫುಟ್ಬಾಲ್, ಮಹಿಳೆಯರಿಗೆ ಮತ್ತು ಪುರುಷರಿಗೆ ಹಗ್ಗ-ಜಗ್ಗಾಟ, ಮಕ್ಕಳಿಂದ ಹಿಡಿದು ಹಿರಿಯರ ವರೆಗೆ ವಯೋಮಿತಿಗೆ ಅನುಗುಣವಾಗಿ ರನ್ನಿಂಗ್ ರೇಸ್ ಇನ್ನಿತರ ವೈವಿಧ್ಯಮಯ ಸ್ಪರ್ಧೆಗಳು ನಡೆದವು. ಸಮಾಜ ಬಾಂಧವರು ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಸಮಾರೋಪ ಸಮಾರಂಭದಲ್ಲಿ ವಿಜೇತ ತಂಡಗಳಿಗೆ ಗಣ್ಯರು ಪ್ರಶಸ್ತಿ ಪ್ರದಾನಿಸಿದರು. ಮನೋಜ್ ಸಾಲ್ಯಾನ್ ಅವರು ಕಾರ್ಯಕ್ರಮ ನಿರ್ವಹಿಸಿದರು.
ಸಂಘದ ಪದಾಧಿಕಾರಿಗಳು, ವಿವಿಧ ಉಪಸಮಿತಿಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಸಮಾರಂಭದ ಯಶಸ್ಸಿಗೆ ಸಹಕರಿಸಿದರು.
ಇಂದಿನ ಕಾರ್ಯಕ್ರಮದಲ್ಲಿ ಕಬಡ್ಡಿ ಪಂದ್ಯವನ್ನು ಆಯೋಜಿ ಸುವ ನನ್ನ ಉದ್ಧೇಶ ಸಾರ್ಥಕಗೊಂಡಿದೆ. ಪ್ರೊ ಕಬಡ್ಡಿಯನ್ನು ಹತ್ತಿರಲ್ಲಿದ್ದು ಕಂಡ ನನಗೆ ಇದನ್ನು ಸಂಯೋಜಿಸುವ ಆಸೆ ಇಟ್ಟುಕೊಂಡಿದ್ದೆ. ಅದು ಯಶಸ್ವಿಯಾಗಿದೆ. ಮುಂದೆ ದೇಶಾದ್ಯಂತ ಸಮಾಜದ ಗಣ್ಯರನ್ನು ಪರಿಚಯಿಸುವ ಮುಖ್ಯ ಕಾರ್ಯಕ್ರಮ ನೃತ್ಯ ಪರ್ವವನ್ನು ಆಯೋಜಿಸುವ ಯೋಜನೆ ಯಿದೆ. ಅದಕ್ಕಾಗಿ ಎಲ್ಲರ ಸಹಕಾರವಿರಲಿ.
-ದಿನೇಶ್ ಬಿ. ಕುಲಾಲ್, ಕಾರ್ಯಕರ್ತ, ಸಮಾಜ ಸೇವಕರು
ಯಾವುದೇ ಕಾರ್ಯಕ್ರಮ ಯಶಸ್ವಿಯಾದಗ ನಮಗೆ ದೊರ ಕುವ ಸಂತೋಷವೇ ಬಹುದೊಡ್ಡ ದೇಣಿಗೆ. ಕುಲಾಲ ಸಂಘದ ಹಾಗೂ ಮುಂಬಯಿ ತುಳು-ಕನ್ನಡಿಗರು ನನ್ನ ಚಲನಚಿತ್ರದ ಯಶಸ್ಸಿಗೆ ಕಾರಣೀ ಭೂತರಾಗಿದ್ದಾರೆ. ಸಂಸ್ಥೆಯ ಉನ್ನತಿಗೆ ನನ್ನ ಸಹಕಾರ ಸದಾಯಿದೆ.
-ವೇಣುಗೋಪಾಲ್ ಶೆಟ್ಟಿ, ಉದ್ಯಮಿ, ಚಲನಚಿತ್ರ ನಟ, ಸಮಾಜ ಸೇವಕ
ಚಿತ್ರ ವರದಿ: ರಮೇಶ್ ಉದ್ಯಾವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ