ಕುಲಾಲ ಸಂಘ ಮುಂಬಯಿ: ವಿಶಾಖಾ ಅವರಿಗೆ ಕಂಕಣ ಭಾಗ್ಯ
Team Udayavani, Jun 12, 2021, 12:54 PM IST
ಮುಂಬಯಿ: ಕುಲಾಲ ಸಂಘ ಮುಂಬಯಿ ಇದರ ಕಾರ್ಯಕಾರಿ ಮಂಡಳಿ ಸದಸ್ಯರು ಮತ್ತು ಸಹೃದಯಿ ದಾನಿಗಳ ಸಹಕಾರದಿಂದ ಆರ್ಥಿಕವಾಗಿ ಹಿಂದು ಳಿದ ಕಲಿನ ಪೈಪ್ಲೈನ್ ನಿವಾಸಿ ವಿಶಾಖಾ ಅವರ ವಿವಾಹವು ಮೇ 30ರಂದು ಗೋರೆಗಾವ್ ಪೂರ್ವದ ನಿತ್ಯಾನಂದ ಆಶ್ರಮದ ಸಭಾಗೃಹದಲ್ಲಿ ಜರಗಿತು.
ರಾಜ್ಯ ಸರಕಾರದ ಕೊರೊನಾ ಮಾರ್ಗಸೂಚಿಗಳಿಗೆ ಅನುಗುಣವಾಗಿ ಸರಳ ರೀತಿಯಲ್ಲಿ ಕಂಕಣ ಭಾಗ್ಯ ನೆರವೇರಿತು. ಸಂಘದ ಅಧ್ಯಕ್ಷ ದೇವದಾಸ್ ಕುಲಾಲ್, ಉಪ ಕಾರ್ಯಾಧ್ಯಕ್ಷ ರಘು ಮೂಲ್ಯ, ಕಾರ್ಯದರ್ಶಿ ಕರುಣಾಕರ ಸಾಲ್ಯಾನ್, ಕೋಶಾಧಿಕಾರಿ ಜಯ ಅಂಚನ್, ಜ್ಯೋತಿ ಸಹಕಾರಿ ಸೊಸೈಟಿಯ ಕಾರ್ಯಾಧ್ಯಕ್ಷ ಗಿರೀಶ್ ಸಾಲ್ಯಾನ್, ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಡಿ. ಐ. ಮೂಲ್ಯ, ಕುಲಾಲ ಮಹಿಳಾ ವಿಭಾಗದ ಕಾರ್ಯದರ್ಶಿ ಮಾಲತಿ ಅಂಚನ್, ಮದುವೆಗೆ ದೊಡ್ಡ ಮಟ್ಟದ ದೇಣಿಗೆ ನೀಡಿದ ಸುನಿಲ್ ಸಾಲ್ಯಾನ್ ಮತ್ತು ದೇವಕಿ ಸಾಲ್ಯಾನ್, ಸ್ಥಳೀಯ ಸಮಿತಿಯ ಮಾಜಿ ಕಾರ್ಯಾಧ್ಯಕ್ಷ ರಘು ಮೂಲ್ಯ, ಸದಸ್ಯ ಜಯ ಬಂಗೇರ, ಮದುವೆಗೆ ಹೆಚ್ಚಿನ ಪ್ರೋತ್ಸಾಹವನ್ನಿತ್ತ ಪ್ರಮೀಳಾ ಬಂಗೇರ ಹಾಗೂ ಇತರ ಸಹೃದಯ ಬಂಧು ಮಿತ್ರರು ಉಪಸ್ಥಿತರಿದ್ದರು. ಡಿ. ಐ. ಮೂಲ್ಯ ಮತ್ತು ಕುಸುಮಾ ಡಿ. ಮೂಲ್ಯ ಅವರು ಕನ್ಯಾದಾನ ಮಾಡಿ ಶುಭ ಹಾರೈಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
SS Rajamouli: ಬರಲಿದೆಯಾ ʼRRRʼ ಸೀಕ್ವೆಲ್?: ಜಪಾನ್ನಲ್ಲಿ ಸುಳಿವು ಕೊಟ್ಟ ರಾಜಮೌಳಿ
Yadgiri: ಜೆಡಿಎಸ್ ಪಕ್ಷಕ್ಕೆ ಅಂಗಲಾಚುವ ಸ್ಥಿತಿ ಬಂದಿಲ್ಲ… ಶಾಸಕ ಕಂದಕೂರು
ಇಂಡಿಯನ್ ಆಯಿಲ್ ಕಂಪನಿಗೆ ನಿರ್ದೇಶಕರಾಗಿ (ಎಚ್ಆರ್) ರಶ್ಮಿ ಗೋವಿಲ್ ಅಧಿಕಾರ ಸ್ವೀಕಾರ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!