ಕುಲಾಲ ಸಂಘ ಮುಂಬಯಿ ಇದರ  87ನೇ ವಾರ್ಷಿಕ ಮಹಾಸಭೆ


Team Udayavani, Oct 15, 2017, 2:39 PM IST

5887.jpg

ಮುಂಬಯಿ: ನಮ್ಮ ಹಿರಿಯರು ಉತ್ತಮ ಧ್ಯೇಯೊದ್ದೇಶವನ್ನಿಟ್ಟುಕೊಂಡು  ಸ್ಥಾಪಿಸಿದ ಈ ಸಂಘಟನೆಯನ್ನು ಮತ್ತಷ್ಟೂ ಬಲಪಡಿಸುವಲ್ಲಿ ನಾವೆಲ್ಲರೂ ಹೆಚ್ಚಿನ ಮಟ್ಟದಲ್ಲಿ  ಕ್ರಿಯಾಶೀಲರಾಗಬೇಕು. ಬಹುಕೋಟಿ ರೂಪಾಯಿಯ  ಮಂಗಳೂರಿನ   ಕುಲಾಲ ಭವನದ ಯೋಜನೆಗೆ ನಿಮ್ಮೆಲ್ಲರ ಸಹಕಾರ ಸಿಗುತ್ತಿದ್ದು,  ಈ ಯೋಜನೆಯನ್ನು ಸಮಾಜ ಬಾಂಧವರ ಸಹಕಾರದಿಂದ ಆದಷ್ಟು ಬೇಗನೆ ಪೂರ್ಣಗೊಳಿಸಲಿರುವೆವು. ಸಮಾಜದ ಯುವಕರು ಮುಂದೆ ಬಂದು ಸಮಾಜ ಸೇವೆಯಲ್ಲಿ ನಿರತರಾಗಬೇಕು. ಇದರಿಂದ ಅವರಲ್ಲಿ ನಾಯಕತ್ವದ ಗುಣ ಬೆಳೆಯುತ್ತದೆ ಎಂದು ಕುಲಾಲ ಸಂಘ ಮುಂಬಯಿ ಅಧ್ಯಕ್ಷ ಗಿರೀಶ್‌ ಬಿ. ಸಾಲ್ಯಾನ್‌ ಅವರು ನುಡಿದರು.

ಕುಲಾಲ ಸಂಘ ಮುಂಬಯಿ ಇದರ 87 ನೇ ವಾರ್ಷಿಕ ಮಹಾಸಭೆಯು ಸಂಘದ ವಡಾಲದ ಎನ್‌ಕೆಇಎಸ್‌ ಹೈಸ್ಕೂಲ್‌ ಸಭಾಂಗಣದಲ್ಲಿ ಜರಗಿದ್ದು, ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಘದ ಸಮಾಜಪರ ಯೋಜನೆಗಳ ಸದುಪಯೋಗವನ್ನು ಸಮಾಜ ಬಾಂಧವರು ಪಡೆದುಕೊಳ್ಳುವಂತೆ ವಿನಂತಿಸಿದರು.

ಸಭೆಯಲ್ಲಿ ಗೌರವ ಪ್ರಧಾನ ಕಾರ್ಯದರ್ಶಿ ಡಿ. ಐ. ಮೂಲ್ಯ ಅವರು ವಾರ್ಷಿಕ ವರದಿಯನ್ನು ಹಾಗೂ ಕೋಶಾಧಿಕಾರಿ ಜಯ ಅಂಚನ್‌ ಅವರು ಗತವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು. ಚುನಾವಣಾಧಿಕಾರಿ ಬಿ. ಜಿ. ಅಂಚನ್‌ ಅವರು 2017- 2019ನೇ ಸಾಲಿನ ನೂತನ ಸದಸ್ಯರ ಹೆಸರನ್ನು ಮಂಡಿಸಿದರು.

ಕುಲಾಲ ಸಂಘದ ಉಪಾಧ್ಯಕ್ಷ ದೇವದಾಸ್‌ ಕುಲಾಲ್‌ ಅವರು ಮಾತನಾಡಿ, ಈ ಬಾರಿ ಮಹಾಸಭೆಯಲ್ಲಿ ಯುವ ಜನಾಂಗದ ಕೊರತೆ ಕಂಡು ಬರುತ್ತಿದ್ದು ಯುವ ಜನಾಂಗ ಹೆಚ್ಚಿನ ಸಂಖ್ಯೆಯಲ್ಲಿ ಕ್ರಿಯಾಶೀಲರಾಗುವಂತಾಗಬೇಕು.  ಜ್ಯೋತಿ ಕ್ರೆಡಿಟ್‌ ಸೊಸೈಟಿಯ ಪ್ರಯೋಜನವನ್ನು ಸಮಾಜ ಬಾಂಧವರು ಎಲ್ಲರೂ ಪಡೆಯುವಂತಾಗಬೇಕು ಎಂದರು.

ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷ ಮಮತಾ ಗುಜರನ್‌ ಅವರು ಮಾತನಾಡಿ, ಸಂಘದ ಆಡಳಿತ ಸಮಿತಿಯಲ್ಲಿ ಮಹಿಳೆಯರು ಸಕ್ರಿಯರಾಗಬೇಕು. ಎಲ್ಲಾ ಸ್ಥಳೀಯ ಸಮಿತಿಯ ಮಹಿಳಾ ವಿಭಾಗಗಳು ಸಮಾಜದ ಬಹುಕೋಟಿ ಯೋಜನೆಗೆ ಸ್ಪಂದಿಸುತ್ತಿರುವುದು ಅಭಿನಂದನೀಯ ಎಂದರು.

ಕಟ್ಟಡ ನಿರ್ಮಾಣ ಸಮಿತಿಯ ಕಾರ್ಯಾಧ್ಯಕ್ಷ ಕಲ್ಲಮಾರು ಗೋಪಾಲ್‌ ಬಂಗೇರ ಅವರು ಮಾತನಾಡಿ, ಸಂಘದ ಥಾಣೆಯಲ್ಲಿರುವ ಜಾಗದಲ್ಲಿ ಸಮಾಜಕ್ಕೆ ಉಪಯೋಗವಾಗುವ ರೀತಿಯಲ್ಲಿ ಯೋಜನೆ ನಿರ್ಮಾಣವಾಗಲಿದೆ. ಮಂಗಳೂರಿನ ಕುಲಾಲ ಭವನ ಶೀಘ್ರಗತಿಯಲ್ಲಿ ಕೆಲಸ ನಡೆಯುತ್ತಿದ್ದು, ಸಮಾಜ ಬಾಂಧವರು ಸಮಾನತೆಯ ಮನಸ್ಸಿನಿಂದ ಸಂಘದ ಯೋಜನೆಗೆ ಸಹಕರಿಸಬೇಕು ಎಂದು ನುಡಿದರು.

ಅಮೂಲ್ಯ ತ್ತೈಮಾಸಿಕದ ಉಪಸಂಪಾದಕ ಶಂಕರ ವೈ. ಮೂಲ್ಯ ಅವರು ಮಾತನಾಡಿ, ಸಂಘದ ಮುಖವಾಣಿ ಅಮೂಲ್ಯ ತ್ತೈಮಾಸಿಕವು ಹಲವಾರು ವಿಶೇಷತೆಗಳಿಂದ ಕೂಡಿದ್ದು, ಹೆಚ್ಚಿನ ಸದಸ್ಯರ ವಿಳಾಸ ಸರಿಯಿಲ್ಲದೆ ವಾಪಾಸಾಗುತ್ತಿದೆ. ಸದಸ್ಯರು ಸಂಘದ ಕಚೇರಿಯಲ್ಲಿ ಸರಿಯಾದ ವಿಳಾಸವನ್ನು ನೀಡಬೇಕು. ಅಮೂಲ್ಯ ತ್ತೈಮಾಸಿಕದ ಸದಸ್ಯತನವನ್ನು ಎಲ್ಲರೂ ಪಡೆದುಕೊಳ್ಳುವಂತೆ ವಿನಂತಿಸಿದರು.

ಸಭಿಕರ ಪರವಾಗಿ ಲಕ್ಷಣ್‌ ಪಿ. ಮೂಲ್ಯ ಮತ್ತು ಮಮತಾ ಜಿ. ಸಾಲ್ಯಾನ್‌  ಮಾತನಾಡಿ ಸಲಹೆ-ಸೂಚನೆಗಳನ್ನು ನೀಡಿದರು. ವೇದಿಕೆಯಲ್ಲಿ ಸಂಘದ ಇತರ ಪದಾಧಿಕಾರಿಗಳಾದ ಸುನೀಲ… ಕುಲಾಲ್‌, ರಾಘು ಬಿ. ಮೂಲ್ಯ, ಚಂದ್ರಹಾಸ ಎನ್‌. ಸಾಲ್ಯಾನ್‌,  ಸದಸ್ಯರಾದ ಪಿ. ಶೇಖರ ಮೂಲ್ಯ, ಕೆ. ಗೋಪಾಲ… ಬಂಗೇರ, ರಾಘು ಮೂಲ್ಯ,  ಪಿ. ಉಮೇಶ್‌ ಬಂಗೇರ, ಜಗದೀಶ್‌ ಆರ್‌. ಬಂಜನ್‌, ಹರೀಶ್‌  ಜಿ. ಬಂಗೇರ, ಆಶೀಶ್‌  ವಿ. ಕರ್ಕೇರ, ಶಂಕರ್‌ ವೈ. ಮೂಲ್ಯ, ಕರುಣಾಕರ ಬಿ. ಸಾಲ್ಯಾನ್‌, ಬಿ. ಅಣ್ಣಿ ಮೂಲ್ಯ, ಸುರೇಶ್‌ ಕೆ. ಕುಲಾಲ್‌, ಶೀನ ಮೂಲ್ಯ, ನ್ಯಾಯವಾದಿ ಉಮಾನಾಥ್‌ ಕೆ. ಮೂಲ್ಯ, ಅಶ್ವಿ‌ನ್‌ ಎ. ಬಂಗೇರ, ಸ್ಥಳೀಯ ಸಮಿತಿಗಳ ಕಾರ್ಯಾಧ್ಯಕ್ಷರುಗಳಾದ ಸುಂದರ್‌ ಮೂಲ್ಯ, ಆನಂದ ಬಿ. ಮೂಲ್ಯ, ಪಿ. ಶೇಖರ್‌  ಮೂಲ್ಯ, ರಘು ಆರ್‌. ಮೂಲ್ಯ, ಶೇಖರ ಬಿ. ಮೂಲ್ಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಮಮತಾ ಎಸ್‌. ಗುಜರನ್‌, ಉಪಕಾರ್ಯಾಧ್ಯಕ್ಷೆ  ಸುಚೇತಾ ಬಂಜನ್‌, ಕಾರ್ಯದರ್ಶಿ ಮಾಲತಿ ಜಯ ಅಂಚನ್‌ ಮೊದಲಾದವರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಡಿ. ಐ. ಮೂಲ್ಯ ಅವರು ವಂದಿಸಿದರು.

ಸಂಘಕ್ಕೆ ದೀರ್ಘ‌ ಕಾಲದಿಂದ ಸೇವೆ ಸಲ್ಲಿಸುತ್ತಿರುವ ಹಿರಿಯ ಸದಸ್ಯರಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಕೊಡಮಾಡುವ ಸ್ಮಾರಕ ಪ್ರಶಸ್ತಿಗಳಾದ ದಿ| ಡಾ. ಎಚ್‌. ಎಂ. ಸುಬ್ಬಯ್ಯ ಸ್ಮರಣಾರ್ಥ ಟ್ರೋಫಿ, ದಿ| ಬಂಟ್ವಾಳ ಬಾಬು ಸಾಲ್ಯಾನ್‌  ಸ್ಮರಣಾರ್ಥ ರೋಲಿಂಗ್‌ ಟ್ರೋಫಿ, ದಿ|  ಸುಂದರ ಕರ್ಮರನ್‌ ಸ್ಮರಣಾರ್ಥ  ಟ್ರೋಫಿ, ದಿ| ಪಿ. ಕೆ. ಸಾಲ್ಯಾನ್‌ ಸ್ಮರಣಾರ್ಥ ಟ್ರೊಫಿಯನ್ನು ಕ್ರಮವಾಗಿ ಸೀನ ಜಿ. ಮೂಲ್ಯ, ಮಾಲತಿ ಜೆ. ಅಂಚನ್‌, ಶ್ರುತಿ ಜಯ ಅಂಚನ್‌  ಮತ್ತು ದಯಿತ ಹರೀಶ್‌ ಬಂಗೇರ ಇವರಿಗೆ ನೀಡಿ ಗೌರವಿಸಲಾಯಿತು. ಸಂಘದ ಹಿರಿಯರಾದ ಭೋಜ ಬಂಗೇರ, ಪನ್ವೇಲ್‌ ಶೀನ ಮೂಲ್ಯ ದಂಪತಿಯನ್ನು, ಜಯಲಕ್ಷ್ಮಿ, ಪದ್ಮನಾಭ ಮತ್ತು ಹೇಮಲತಾ ಕರುಣಾಕರ ಮೂಲ್ಯ ಇವರನ್ನೂ ಸಮ್ಮಾನಿಸಲಾಯಿತು. ದೇವದಾಸ್‌ ಕುಲಾÇ, ರಾಘು ಡಿ. ಮೂಲ್ಯ ಸಮ್ಮಾನಿತರನ್ನು ಪರಿಚಯಿಸಿದರು.

ಟಾಪ್ ನ್ಯೂಸ್

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.