ಕುಲಾಲ ಸಂಘ ನವಿಮುಂಬಯಿ ಸ್ಥಳೀಯ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನ
Team Udayavani, Oct 25, 2018, 4:42 PM IST
ನವಿ ಮುಂಬಯಿ: ಕುಲಾಲ ಸಂಘ ಮುಂಬಯಿ ನವಿಮುಂಬಯಿ ಸ್ಥಳೀಯ ಸಮಿತಿಯ ವಾರ್ಷಿಕ ಸ್ನೇಹ ಸಮ್ಮಿಲನವು ಅ. 21ರಂದು ವಾಶಿಯ ಕನ್ನಡ ಸಂಘದ ಸಭಾಗೃಹ ದಲ್ಲಿ ಜರಗಿತು.
ಅಧ್ಯಕ್ಷತೆಯನ್ನು ಕುಲಾಲ ಸಂಘ ಮುಂಬಯಿ ಉಪಾಧ್ಯಕ್ಷ ರಘು ಎ. ಮೂಲ್ಯ ಅವರು ವಹಿಸಿ ಮಾತನಾಡಿ, ಕುಲಾಲ ಸಮಾಜದ ಅಭಿವೃದ್ಧಿಯಲ್ಲಿ ಎಲ್ಲರೂ ಒಟ್ಟಿಗೆ ಚಿಂತನೆ ಮಾಡುವ ಅಗತ್ಯವಿದೆ. ಸ್ಥಳೀಯ ಯುವಕರು ಸ್ವಯಂ ಇಚ್ಛೆಯಿಂದ ನಮ್ಮೊಂದಿಗೆ ಸಾಮಾಜಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿ¨ªಾರೆ ಎನ್ನಲು ಹರ್ಷವಾಗುತ್ತಿದೆ. ಈ ವರ್ಷ ಯುವಕರೇ ಮಕ್ಕಳನ್ನು ದತ್ತು ಪಡೆದು ಇತರರಿಗೆ ಮಾದರಿಯಾಗಿ¨ªಾರೆ. ಇದೇ ರೀತಿ ತಮ್ಮ ವಿದ್ಯಾಭ್ಯಾಸ ಪೂರ್ಣಗೊಂಡು ಕೆಲಸಕ್ಕೆ ಸೇರಿದ ಯುವಕರು ಸಮಾಜದ ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡಬೇಕು ಎಂಬುದನ್ನು ತೋರಿಸಿ ಕೊಟ್ಟಿ¨ªಾರೆ. ಅವರಿಗೆ ಅಭಿನಂದನೆಗಳು. ಕುಲಾಲ ಸಮಾಜ ಧರ್ಮ, ಸಂಸ್ಕೃತಿ, ಆಚಾರ ವಿಚಾರಗಳನ್ನು ಗೌರವಿಸುವ ಸಮಾಜವಾಗಿದೆ. ಯುವಕರು ಹಿರಿಯರಿಗೆ ಗೌರವ ಕೊಡುತ್ತಾ ಅವರ ಮಾರ್ಗದರ್ಶನದಲ್ಲಿ ತಮ್ಮ ಲಕ್ಷÂದತ್ತ ಸಾಗಬೇಕು. ಮಹಿಳಾ ವಿಭಾಗದ ವೈದ್ಯಕೀಯ ಧನಸಹಾಯ ವಿತರಣೆ ಅಭಿನಂದನೀಯವಾಗಿದೆ. ಎಲ್ಲ ಸ್ಥಳೀಯ ಸಮಿತಿಗಳು ಇತರರಿಗೆ ಮಾದರಿಯಾಗುವಂತಹ ಕೆಲಸಗಳನ್ನು ಮಾಡಬೇಕು. ಆಗ ಮಾತ್ರ ಸಂಘಟನೆ ಬಲಿಷ್ಠವಾಗಲು ಸಾಧ್ಯ ಎಂದರು.
ಪಾಲಕರ ಕರ್ತವ್ಯ
ಕುಲಾಲ ಸಂಘದ ಗೌರವ ಪ್ರಧಾನ ಕಾರ್ಯ ದರ್ಶಿ ಕರುಣಾಕರ ಬಿ. ಸಾಲ್ಯಾನ್ ಮಾತನಾಡಿ, ಸ್ಥಾಪಕ ಸದಸ್ಯರು ಒಳ್ಳೆಯ ಉದ್ದೇಶವಿಟ್ಟು ರಚಿಸಿದ ಈ ಸ್ಥಳೀಯ ಸಮಿತಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಸಮಾಜಪರ ಕಾರ್ಯಗಳು ಜನರ ಮನೆ, ಮನಕ್ಕೆ ತಲುಪುವಲ್ಲಿ ಯಶಸ್ವಿಯಾಗಿದೆ. ನಮ್ಮ ಧರ್ಮ-ಸಂಸ್ಕೃತಿಯ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವುದು ಪಾಲಕರ ಕರ್ತವ್ಯ. ಯುವಪೀಳಿಗೆ ಸಂಘದ ಎÇÉಾ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದೆ ಇದು ಉತ್ತಮ ಬೆಳವಣಿಗೆ. ಮಂಗಳೂರಿನ ಕುಲಾಲ ಭವನ ಕೆಲಸ ವೇಗವಾಗಿ ಸಾಗುತ್ತಿದೆ. ಆದಷ್ಟು ಬೇಗ ಲೋಕಾರ್ಪಣೆಗೊಳ್ಳಲು ಎಲ್ಲರ ಸಹಕಾರ ಅಗತ್ಯ. ಸಂಘದ ವಿದ್ಯಾರ್ಥಿ ಸಹಾಯಧನದ ಪ್ರಯೋಜನ ಪಡೆದುಕೊಳ್ಳಿ ಎಂದರು.
ಸಂಘದ ಗೌರವ ಕೋಶಾಧಿಕಾರಿ ಜಯ ಎಸ್. ಅಂಚನ್ ಅವರು ಮಾತನಾಡಿ, ನವಿ ಮುಂಬಯಿ ಸ್ಥಳೀಯ ಯುವಕರು ನೀಡಿದ ದತ್ತು ಸ್ವೀಕಾರ ಎಲ್ಲರಿಗೆ ಮಾದರಿ. ಕುಲಾಲ ಭವನದ ಧನಸಹಾಯದಲ್ಲಿ ಸ್ಥಳೀಯ ಸಮಿತಿ ಹೆಚ್ಚು ಮುತುವರ್ಜಿಯಲ್ಲಿ ಕೆಲಸಮಾಡುತ್ತಿದೆ. ಸಮಾಜ ಬಾಂಧವರು ಇನ್ನಷ್ಟು ಸಹಾಯಧನ ನೀಡಿ ಮಂಗಳೂರು ಕುಲಾಲ ಭವನದ ಕಾರ್ಯದಲ್ಲಿ ಕೈಜೋಡಿಸಿ ಎಂದರು.
ಮಹಿಳಾ ವಿಭಾಗದ ಉಪಕಾರ್ಯಾಧ್ಯಕ್ಷೆ ಸುಚಿತ್ರಾ ಡಿ. ಬಂಜನ್, ಅಮೂಲ್ಯ ಸಂಪಾದಕ ಶಂಕರ್ ವೈ. ಮೂಲ್ಯ, ಸಂಘದ ಠಾಣೆ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಡಿ. ಐ. ಮೂಲ್ಯ, ಚರ್ಚ್ಗೇಟ್ – ದಹಿಸರ್ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಗಣೇಶ್ ಸಾಲ್ಯಾನ್, ಸಿಎಸ್ಟಿ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ಶೇಖರ್ ಎಸ್. ಮೂಲ್ಯ, ಮೀರಾ-ವಿರಾರ್ ಸ್ಥಳೀಯ ಸಮಿತಿಯ ಕಾರ್ಯದರ್ಶಿ ಮೋಹನ್ ಬಂಜನ್ ಅವರು ಮಾತನಾಡಿ ಶುಭಹಾರೈಸಿದರು.
ಸಮ್ಮಾನ
ಈ ಸಂದರ್ಭದಲ್ಲಿ ಹಿರಿಯ ಕಾರ್ಯ ಕರ್ತರಾದ ಕೃಷ್ಣ ಕೆ. ಮೂಲ್ಯ ಖಾರ್ಘರ್ ಮತ್ತು ಸುಮಿತ್ರಾ ರಾಜು ಸಾಲ್ಯಾನ್ ಇವರನ್ನು ಗಣ್ಯರ ಉಪಸ್ಥಿತಿಯಲ್ಲಿ ಸಮ್ಮಾನಿಸಲಾಯಿತು. ಅಲ್ಲದೆ ಸಮಾಜದ ಅರು ಮಕ್ಕಳನ್ನು ಶೈಕ್ಷಣಿಕವಾಗಿ ದತ್ತು ಸ್ವೀಕರಿಸಲಾಯಿತು. ನಾನಿಲ್ತಾರ್ ಕುಲಾಲ ಅಭಿಮಾನಿ ಬಳಗದ ವತಿಯಿಂದ ಮಂಗಳೂರು ಕುಲಾಲ ಭವನಕ್ಕೆ ಒಂದು ಲಕ್ಷ ರೂ.ದೇಣಿಗೆ ಹಸ್ತಾಂತರಿಸಲಾಯಿತು.
ನವಿಮುಂಬಯಿ ಸ್ಥಳೀಯ ಮಹಿಳಾ ವಿಭಾಗದ ವತಿಯಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮೂಡಬಿದಿರೆಯ ರಕ್ಷಿತಾ ಕುಲಾಲ್ ಅವರಿಗೆ 20,000 ರೂ. ಧನಸಹಾಯ ಹಸ್ತಾಂತರಿಸಲಾಯಿತು. ಸ್ಥಳೀಯ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸತ್ಕರಿಸಲಾಯಿತು.
ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ವಾಸು ಎಸ್. ಬಂಗೇರ ಸ್ವಾಗತಿಸಿದರು. ಬೇಬಿ ವಿ. ಬಂಗೇರ, ಪದ್ಮಾ ಎಲ್. ಮೂಲ್ಯ ಮತ್ತು ಉಷಾ ಆರ್. ಮೂಲ್ಯ ಪ್ರಾರ್ಥನೆಗೈದರು. ಚಿತ್ರಕಲಾ ಸ್ಪರ್ಧೆಯ ತೀರ್ಪುಗಾರರಾಗಿ ರಮೇಶ್ ಬಂಜನ್ ಥಾಣೆ ಮತ್ತು ಶ್ರುತಿ ಜೆ. ಅಂಚನ್ ಸಹಕರಿಸಿದರು. ಸಮ್ಮಾನಿತರನ್ನು ಮಾಲತಿ ಜೆ. ಅಂಚನ್ ಮತ್ತು ಕೃಪೇಶ್ ಕುಲಾಲ್ ಅವರು ಪರಿಚಯಿಸಿದರು. ಸಭಾ ಕಾರ್ಯಕ್ರಮವನ್ನು ಎಲ್ ಆರ್. ಮೂಲ್ಯ ಮತ್ತು ಪಿ. ಶೇಖರ್ ಮೂಲ್ಯ ನಿರೂಪಿಸಿದರು. ಸುರೇಶ್ ಕೆ. ಕುಲಾಲ್ ವಂದಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮವನ್ನು ಶಶಿಕುಮಾರ್ ವಿ. ಕುಲಾಲ್ ಮತ್ತು ಸೂರಜ್ ಎಸ್ ಕುಲಾಲ್ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಮಕ್ಕಳಿಂದ ಮತ್ತು ಸದಸ್ಯರಿಂದ ವಿವಿಧ ಮನೋರಂಜನ ಕಾರ್ಯಕ್ರಮ ನಡೆಯಿತು. ಶಶಿಕುಮಾರ್ ವಿ. ಕುಲಾಲ್ ರಚಿಸಿ ನಿರ್ದೇಶಿಸಿದ ಸ್ಥಳೀಯ ಸಮಿತಿಯ ಮಕ್ಕಳ ಅಭಿನಯದ ಬಲೀಂದ್ರೆ ಪೌರಾಣಿಕ ತುಳು ಕಿರುನಾಟಕ ಮತ್ತು ಸ್ಥಳೀಯ ಸದಸ್ಯರಿಂದ ಕಲ್ಜಿಗದ ಕರ್ಣೆ ಎಂಬ ತುಳು ಸಾಮಾಜಿಕ ನಾಟಕ ಪ್ರದರ್ಶನಗೊಂಡಿತು.
ಸಂಘಟನೆಯನ್ನು ಬಲಿಷ್ಠ ಮಾಡುವುದೇ ಸ್ಥಳೀಯ ಸಮಿತಿಯ ಉದ್ದೇಶ. ಯುವ ಪೀಳಿಗೆ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದೆೆ. ಮಕ್ಕಳನ್ನು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಹೆಚ್ಚು ಪ್ರೋತ್ಸಾಹಿಸಬೇಕು. ಮಂಗಳೂರು ಭವನ ಆದಷ್ಟು ಬೇಗ ಲೋಕಾರ್ಪಣೆಗೊಳ್ಳುವತ್ತ ನಾವು ಪ್ರಯತ್ನಿಸುತ್ತಿದ್ದೇವೆ. ಸದ್ಯದÇÉೇ ಜ್ಯೋತಿ ಕ್ರೆಡಿಟ್ ಸೊಸೈಟಿಯ ಪುಣೆ ಶಾಖೆಯನ್ನು ಸ್ಥಾಪಿಸಲಾಗುವುದು. ಸಮಾಜ ಬಾಂಧವರು ಸ್ವಂತ ವ್ಯಾಪಾರದತ್ತ ಹೆಚ್ಚು ಒಲವು ತೋರಿಸಿ ಅದಕ್ಕೆ ಬೇಕಾಗುವ ಬಂಡವಾಳವನ್ನು ಜ್ಯೋತಿ ಕ್ರೆಡಿಟ್ ಸೊಸೈಟಿಯಿಂದ ಸಾಲದ ಸವಲತ್ತಿನ ಮುಖಾಂತರ ಪಡೆದು ಅಭಿವೃದ್ಧಿ ಹೊಂದಿ ಸಮಾಜಕ್ಕೆ ಮಾದರಿಯಾಗಬೇಕು. ನಾನಿಲ್ತಾರ್ ಕುಲಾಲ ಅಭಿಮಾನಿ ಬಳಗದ ದೇಣಿಗೆಗೆ ನಾವು ಚಿರಋಣಿ.
-ಗಿರೀಶ್ ಬಿ. ಸಾಲ್ಯಾನ್, ಕಾರ್ಯಾಧ್ಯಕ್ಷರು, ಜ್ಯೋತಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ
ಚಿತ್ರ : ವರದಿ : ಈಶ್ವರ ಎಂ.ಐಲ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ