ಕುಲಾಲ ಸಂಘ ನವಿಮುಂಬಯಿ:ಯಕ್ಷಗಾನ,ಸಮ್ಮಾನ


Team Udayavani, Oct 14, 2017, 11:59 AM IST

69.jpg

ನವಿಮುಂಬಯಿ: ಕುಲಾಲ ಸಂಘ ಮುಂಬಯಿ ಇದರ ನವಿ ಮುಂಬಯಿ ಸ್ಥಳೀಯ ಸಮಿತಿ ಮತ್ತು ಕುಲಾಲ ಸಂಘ ಮುಂಬಯಿ ಇದರ ಅಧ್ಯಕ್ಷ ಗಿರೀಶ್‌  ಬಿ. ಸಾಲ್ಯಾನ್‌ ಅವರ ಜಂಟಿ ಆಯೋಜನೆಯಲ್ಲಿ ಶ್ರೀ  ವಿನಾಯಕ ಯಕ್ಷಕಲಾ ತಂಡ ಮಕ್ಕಳ ಮೇಳ ಕೆರೆಕಾಡು ಮೂಲ್ಕಿ ಇದರ ಕಲಾವಿದರಿಂದ  ಮಹಿಷಮರ್ದಿನಿ  ಯಕ್ಷಗಾನ ಪ್ರದರ್ಶನವು ಇತ್ತೀಚೆಗೆ ನೆರೂಲ್‌ ಶ್ರೀ ಶನೀಶ್ವರ ಮಂದಿರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಪ್ರಾಯೋಜಕರ ಪರವಾಗಿ ತಂಡದ ಭಾಗವತರಾದ ಕು| ಕಾವ್ಯಶ್ರೀ, ಮೇಳದ ಸಂಚಾಲಕರಾದ ಜಯಂತ್‌ ಅಮೀನ್‌ ಮತ್ತು ಮುಂಬಯಿ ವ್ಯವಸ್ಥಾಪಕರಾದ ಪ್ರಭಾಕರ್‌ ಎಸ್‌. ಹೆಗ್ಡೆ ಇವರನ್ನು ಸತ್ಕರಿಸಲಾಯಿತು. ಮೇಳದ ಪರವಾಗಿ ಪ್ರಾಯೋಜಕರಾದ ಗಿರೀಶ್‌ ಬಿ. ಸಾಲ್ಯಾನ್‌ ಮತ್ತು ಕುಲಾಲ ಸಂಘ ನವಿಮುಂಬಯಿ ಸ್ಥಳೀಯ ಸಮಿತಿಯ ಪರವಾಗಿ ಕಾರ್ಯಾಧ್ಯಕ್ಷರಾದ  ಪಿ. ಶೇಖರ್‌ ಮೂಲ್ಯ ಇವರನ್ನು ಗೌರವಿಸಲಾಯಿತು.

ಗೌರವ ಸ್ವೀಕರಿಸಿ ಮಾತನಾಡಿದ ಗಿರೀಶ್‌  ಬಿ. ಸಾಲ್ಯಾನ್‌ ಅವರು ಮಾತನಾಡಿ, ಮಕ್ಕಳನ್ನು ಯಕ್ಷಗಾನದಂತಹ  ಕಲೆಯಲ್ಲಿ ಹುರಿದುಂಬಿಸುತ್ತಾ, ಶಿಕ್ಷಣದೊಂದಿಗೆ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಂತಹ ಕಾರ್ಯ ಮಾಡುತ್ತಿರುವ ಈ ತಂಡದ ಕಾರ್ಯ ಶ್ಲಾಘನೀಯ. ಈ ಮೇಳದಲ್ಲಿರುವ ಮಕ್ಕಳ ಪ್ರತಿಭೆ ಇತರ  ಮಕ್ಕಳಿಗೆ ಮಾದರಿಯಾಗಿದೆ. ಕುಮಾರಿ ಕಾವ್ಯಶ್ರೀಯ ಭಾಗವತಿಕೆಯನ್ನು ಶ್ಲಾಘಿಸಲು ಶಬ್ದಗಳೇ ಸಾಲದು. ಕನ್ನಡದೊಂದಿಗೆ ತುಳುವಿನಲ್ಲಿಯೂ ಪ್ರಸಂಗಗಳನ್ನು ಪ್ರದರ್ಶಿಸಿದರೆ ಮುಂಬಯಿಯಲ್ಲಿರುವ ಯುವಪೀಳಿಗೆ ಇನ್ನೂ ಹೆಚ್ಚು ಯಕ್ಷಗಾನದೊಂದಿಗೆ ಆಕರ್ಷಿತರಾಗಲು ಸಾಧ್ಯವಾಗಬಹುದು ಎಂದರು. ಸಂಸ್ಥೆಯು ಇನ್ನಷ್ಟು ಬೆಳಗಲಿ ಎಂದು ಶುಭಹಾರೈಸಿದರು.

ಮುಂಬಯಿ ವ್ಯವಸ್ಥಾಪಕರಾದ ಪ್ರಭಾಕರ್‌ ಎಸ್‌. ಹೆಗ್ಡೆ ಅವರು ಮಾತನಾಡಿ, ಈ ಮೇಳದಲ್ಲಿ ಪ್ರತಿ ದಿನದ  ಪ್ರಸಂಗದಲ್ಲಿ ಬೇರೆ ಬೇರೆ ಪಾತ್ರಗಳನ್ನು ಕಲಾವಿದರಿಗೆ ನೀಡಿ, ಎಲ್ಲಾ ಕಲಾವಿದರೂ ಪ್ರತಿಯೊಂದು ಪಾತ್ರದಲ್ಲಿ ಅಭಿನಯಿಸಲು ಅವಕಾಶ ನೀಡುವುದೇ ಈ ಮೇಳದ ವೈಶಿಷ್ಟé ವಾಗಿದೆ. ನಿರಂತರ ಒಂದೇ ಶೀರ್ಷಿಕೆಯ ಪ್ರಸಂಗ ಇದ್ದರೂ ಪ್ರತಿ ಪ್ರಸಂಗದಲ್ಲಿ ಪಾತ್ರಧಾರಿಗಳ ಪಾತ್ರ ಬದಲಾವಣೆ ಮಾಡಲಾಗುತ್ತದೆ.  ಕಲಾ ವಿದರೂ ಕೂಡ ಪಾತ್ರವನ್ನು ಸವಾಲಾಗಿ ಸ್ವೀಕರಿಸಿ  ಪ್ರದರ್ಶನ ನೀಡುತ್ತಿದ್ದಾರೆ.   ಮಕ್ಕಳನ್ನು ಯಕ್ಷಗಾನದೊಂದಿಗೆ ಪ್ರೋತ್ಸಾಹಿಸಿ ಅವರ ಶಿಕ್ಷಣಕ್ಕೂ ಸಹಾಯ ಮಾಡುತ್ತಿರುವುದು ಈ ತಂಡದ ಮತ್ತೂಂದು ವೈಶಿಷ್ಟé. ಇಂತಹ ತಂಡದ ಪ್ರದರ್ಶನದಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು  ಎಂದರು.

ವೇದಿಕೆಯಲ್ಲಿ ಶನೀಶ್ವರ ಮಂದಿರದ ಅಧ್ಯಕ್ಷರಾದ  ಧರ್ಮದರ್ಶಿ  ರಮೇಶ್‌ ಎಂ.  ಪೂಜಾರಿ, ಶನೀಶ್ವರ ಮಂದಿರದ ಟ್ರಸ್ಟಿ ಕರುಣಾಕರ ಆಳ್ವ,   ಮೇಳದ ಮುಂಬಯಿ ವ್ಯವಸ್ಥಾಪಕರಾದ ವಿ. ಕೆ. ಸುವರ್ಣ , ಕುಲಾಲ ಸಂಘದ ಉಪಾಧ್ಯಕ್ಷರಾದ ಪಿ. ದೇವದಾಸ್‌ ಎಲ್‌. ಕುಲಾಲ್‌, ಗೌರವ ಕೋಶಾಧಿಕಾರಿ ಜಯ ಎಸ್‌. ಅಂಚನ್‌, ರಂಗಭೂಮಿ ಫೈನ್‌ ಆರ್ಟ್ಸ್ನ ಅಧ್ಯಕ್ಷರಾದ ತಾರಾನಾಥ್‌ ಶೆಟ್ಟಿ ಪುತ್ತೂರು  ಮತ್ತು ಕೃಷ್ಣ ಪೂಜಾರಿ  ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಅದ್ಯಪಾಡಿ ಬಾಲಕೃಷ್ಣ ಶೆಟ್ಟಿ ನಿರೂಪಿಸಿ ವಂದಿಸಿದರು. ಪ್ರದರ್ಶನದ ಯಶಸ್ಸಿನಲ್ಲಿ ಕುಲಾಲ ಸಂಘ ನವಿಮುಂಬಯಿ ಸ್ಥಳೀಯ ಸಮಿತಿಯ ಎಲ್ಲ ಪದಾಧಿಕಾರಿಗಳು ಮತ್ತು ಸದಸ್ಯರು ಸಹಕರಿಸದರು.  ಅಪಾರ ಸಂಖ್ಯೆಯಲ್ಲಿ ಸೇರಿದ್ದ ಯಕ್ಷಗಾನ ಪ್ರೇಮಿಗಳು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.