ಕುರ್ಲಾ ಮಹಾಮ್ಮಾಯಿ ಮಂದಿರ: ವಾರ್ಷಿಕ ಮಹೋತ್ಸವ
Team Udayavani, Mar 30, 2019, 8:46 PM IST
ಮುಂಬಯಿ: ಕುರ್ಲಾ ಪಶ್ಚಿಮದ ಸೋನಾಪುರ ಲೇನ್ನಲ್ಲಿರುವ ನಾರಾಯಣ ಬಿ. ಮೂಲ್ಯ ಇವರಿಂದ ಸ್ಥಾಪಿಸಲ್ಪಟ್ಟ ಶ್ರೀ ಮಹಮ್ಮಾಯಿ ಮಂದಿರದಲ್ಲಿ 47ನೇ
ವಾರ್ಷಿಕ ಮಹೋತ್ಸವು ಮಾ. 26ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ದಿನಪೂರ್ತಿ ನಡೆಯಿತು.
ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ ಸಾಮೂಹಿಕ ಪ್ರಾರ್ಥನೆ, ಆದ್ಯ ಗಣಪತಿ ಯಾಗ, ನವಕ ಪ್ರಧಾನ ಹೋಮ, ಕಲಶಾಭಿಷೇಕ, ಮಧ್ಯಾಹ್ನ ಅಲಂಕಾರ ಪೂಜೆ, ಪ್ರಸನ್ನ ಪೂಜೆಯು ವಿದ್ಯಾವಿಹಾರ್ ಶ್ರೀ ಅಂಬಿಕಾ ಮಂದಿರದ ವಿದ್ವಾನ್ ಪೆರ್ಣಂಕಿಲ ಹರಿದಾಸ್ ಭಟ್ ಇವರ ಪೌರೋಹಿತ್ಯದಲ್ಲಿ ಜರಗಿತು.
ರಾತ್ರಿ ದೇವಿಗೆ ವಿಶೇಷ ಪೂಜೆಯು ಮಂದಿರದ ಪ್ರಧಾನ ಅರ್ಚಕ ಕೃಷ್ಣಾನಂದ ಭಟ್ ಇವರಿಂದ ನಡೆಯಿತು. ಬಳಿಕ ನಾರಾಯಣ ಮೂಲ್ಯ ಅವರಿಂದ ದೇವಿ ಆವೇಶ, ಅಭಯದ ನುಡಿ ಜರಗಿತು. ವಾಲಗ ಸೇವೆಯನ್ನು ಜರಿಮೆರಿಯ ದಿನೇಶ್ ಕೋಟ್ಯಾನ್ ಮತ್ತು ಬಳಗದವರಿಂದ ಆಯೋಜಿಸಲಾಗಿತ್ತು.
ಪೂಜೆಯಲ್ಲಿ ನಾರಾಯಣ ಮೂಲ್ಯ ಪರಿವಾರ, ಸ್ಥಳೀಯ ರಾಜಕೀಯ ಧುರೀಣರು, ಸಮಾಜ ಸೇವಕರಾದ ಕುಲಾಲ ಸಂಘ ಮುಂಬಯಿ ಅಧ್ಯಕ್ಷ ದೇವದಾಸ್ ಎಲ್. ಕುಲಾಲ್, ಕುಲಾಲ ಸಂಘ ಸಂಚಾಲಕತ್ವದ ಜ್ಯೋತಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯಾಧ್ಯಕ್ಷ ಗಿರೀಶ್ ಬಿ. ಸಾಲ್ಯಾನ್ ಮತ್ತಿತರ ಪದಾಧಿಕಾರಿಗಳು, ಸಮಾಜ ಸೇವಕ ಬಾಲಕೃಷ್ಣ ಬೆಳ್ಳಂಪಳ್ಳಿ ಹಾಗೂ ನಗರದ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಪ್ರತಿನಿಧಿಗಳು, ಸ್ಥಳೀಯ ಉದ್ಯಮಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಮತ್ತು ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ
Desi Swara: ಟ್ರೆಂಟ್ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …
Desi Swara: ಬಸ್ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ
Desi Swara: ಕನ್ನಡಿಗಾಸ್ ಸ್ಟಾರ್ ಅವಾರ್ಡ್ 2024 ಪ್ರದಾನ
Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ