ಆನ್‌ಲೈನ್‌ ಶಿಕ್ಷಣ: ಶೇ. 16ರಷ್ಟು ವಿದ್ಯಾರ್ಥಿಗಳಿಗೆ ಸೌಲಭ್ಯವಿಲ್ಲ


Team Udayavani, Jun 21, 2020, 10:52 AM IST

ಆನ್‌ಲೈನ್‌ ಶಿಕ್ಷಣ: ಶೇ. 16ರಷ್ಟು  ವಿದ್ಯಾರ್ಥಿಗಳಿಗೆ ಸೌಲಭ್ಯವಿಲ್ಲ

ಮುಂಬಯಿ, ಜೂ. 20: ದೂರದರ್ಶನ ಮತ್ತು ರೇಡಿಯೊದಂತಹ ಮಾಧ್ಯಮಗಳ ಸಹಾಯದಿಂದ ಡಿಜಿಟಲ್‌ ಕಲಿಕೆಯೊಂದಿಗೆ ಶೈಕ್ಷಣಿಕ ವರ್ಷವನ್ನು ಪ್ರಾರಂಭಿಸುವ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಶಿಕ್ಷಣ ಇಲಾಖೆಯು ಹೊಂದಿದ್ದು, ಆದರೆ ರಾಜ್ಯದಲ್ಲಿ ಸುಮಾರು ಶೇ. 16ರಷ್ಟು ವಿದ್ಯಾರ್ಥಿಗಳು ಯಾವುದೇ ಸಂವಹನ ಮಾಧ್ಯಮದ ಸೌಲಭ್ಯ ಹೊಂದಿಲ್ಲ ಎಂದು ಸರಕಾರದ ವರದಿ ತಿಳಿಸಿದೆ.

ವಾಸ್ತವವಾಗಿ ಮುಂಬಯಿ ಮತ್ತು ಪುಣೆಯಂತಹ ನಗರಗಳಲ್ಲಿಯೂ ಸಹ ಶೇ. 5ರಿಂದ ಶೇ. 10ರಷ್ಟು ವಿದ್ಯಾರ್ಥಿಗಳಿಗೆ ದೂರದರ್ಶನ ಮತ್ತು ರೇಡಿಯೋ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎನ್ನಲಾಗಿದೆ. ರಾಜ್ಯ ಸರಕಾರದ ಶಿಕ್ಷಣ ಇಲಾಖೆಯು ಒಟ್ಟುಗೂಡಿಸಿದ ದತ್ತಾಂಶವು ಇದನ್ನು ಬಹಿರಂಗಪಡಿಸಿದ್ದು, ಇದರಿಂದ ಡಿಜಿಟಲ್‌ ಕಲಿಕೆಯನ್ನು ಕಾರ್ಯಗತಗೊಳಿಸುವುದು ಕಷ್ಟವಾಗಲಿದೆ ಎಂದು ಮೂಲಗಳು ತಿಳಿಸಿವೆ.

ಅಂಕಿಅಂಶಗಳ ಪ್ರಕಾರ, ಮುಂಬಯಿಯಲ್ಲಿ ಒಟ್ಟು ಶೇ. 70.33ರಷ್ಟು ವಿದ್ಯಾರ್ಥಿಗಳು ವಾಟ್ಸಾಪ್‌ ಸೌಲಭ್ಯವನ್ನು ಹೊಂದಿದ್ದರೆ, ಶೇ. 17.16ರಷ್ಟು ವಿದ್ಯಾರ್ಥಿಗಳು ಎಸ್‌ ಎಂಎಸ್‌ ಮೂಲಕ ಸಂವಹನ ನಡೆಸುತ್ತಾರೆ. ರಾಜ್ಯದಲ್ಲಿ ಶೇ. 79.74ರಷ್ಟು ವಿದ್ಯಾರ್ಥಿಗಳು ದೂರದರ್ಶನ ಸೌಲಭ್ಯ ಹೊಂದಿದ್ದಾರೆ. ಶೇ. 12.51ರಷ್ಟು ಮಂದಿ ಮೊಬೈಲ್‌ ಫೋನ್‌ ಹೊಂದಿಲ್ಲ, ಶೇ. 3.58 ವಿದ್ಯಾರ್ಥಿಗಳು ಯಾವುದೇ ಸೌಲಭ್ಯವನ್ನು ಹೊಂದಿಲ್ಲ ಎಂದು ದತ್ತಾಂಶ ಹೇಳುತ್ತದೆ. ಮಹಾರಾಷ್ಟ್ರಾದ್ಯಂತ ಒಟ್ಟು ಶೇ. 15.60ರಷ್ಟು ವಿದ್ಯಾರ್ಥಿಗಳು ಯಾವುದೇ ಸೌಲಭ್ಯವನ್ನು ಹೊಂದಿಲ್ಲ ಎನ್ನಲಾಗುತ್ತಿದೆ. ಆನ್‌ಲೈನ್‌ ಶಿಕ್ಷಣದ ರೀತಿಯಲ್ಲಿ ಖಾಸಗಿ ಟೆಲಿವಿಷನ್‌ ಚಾನೆಲ್‌ಗ‌ಳನ್ನು ಸಹ ಶಿಕ್ಷಣ ನೀಡಲು ಬಳಸಲಾಗುತ್ತದೆ ಎಂದು ರಾಜ್ಯ ಶಿಕ್ಷಣ ಸಚಿವ ಉದಯ್‌ ಸಮಂತ್‌ ಹೇಳಿದ್ದಾರೆ.

ಅಸಾಂಪ್ರದಾಯಿಕ ಮಾರ್ಗಗಳ ಮೂಲಕ ಶಿಕ್ಷಣವನ್ನು ನೀಡುವ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಕಾರ್ಯಗತಗೊಳಿಸಲು ರಾಜ್ಯ ಸರಕಾರವು ಎಷ್ಟು ಕಷ್ಟಕರವಾಗಿದೆ ಎಂದು ಡೇಟಾ ಬಹಿರಂಗಪಡಿಸಿದರೆ, ಕೆಂಪು ವಲಯದ ಶಾಲೆಗಳಿಗೆ ಎಸ್‌ಒಪಿ ಘೋಷಿಸುವಲ್ಲಿನ ವಿಳಂಬವು ಹಲವಾರು ನಗರಗಳಲ್ಲಿ ದೊಡ್ಡ ಗೊಂದಲವನ್ನು ಉಂಟುಮಾಡುತ್ತಿದೆ.

ಪೋಷಕರಲ್ಲಿ ಗೊಂದಲ :  ಈ ವಾರದ ಆರಂಭದಲ್ಲಿ, ಹೊಸ ಶೈಕ್ಷಣಿಕ ವರ್ಷಗಳಲ್ಲಿ ಶಾಲೆಗಳನ್ನು ಪುನಃ ತೆರೆಯಲು ರಾಜ್ಯ ಸರಕಾರ ಎಸ್‌ಒಪಿಗಳನ್ನು ಘೋಷಿಸಿತು. ವಿಶೇಷವಾಗಿ ಕಳೆದ ಒಂದು ತಿಂಗಳಲ್ಲಿ ಯಾವುದೇ ಕೋವಿಡ್‌ -19 ಪ್ರಕರಣಗಳು ವರದಿಯಾಗದ ಪ್ರದೇಶಗಳ ಮೇಲೆ ಕೇಂದ್ರೀಕರಿಸಿದ್ದು, ಮುಂಬಯಿಯಲ್ಲಿ ಕೆಂಪು ವಲಯಗಳಿಗೆ ಪ್ರತ್ಯೇಕ ಎಸ್‌ಒಪಿ ಇರುತ್ತದೆ ಎಂದು ಹೇಳಲಾಗಿದೆ. ಸುತ್ತೋಲೆ ಬಿಡುಗಡೆ ಮಾಡದಿರುವುದರಿಂದ ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವ ಬಗ್ಗೆ ಆತಂಕದಲ್ಲಿರುವ ಪೋಷಕರು ಸೇರಿದಂತೆ ಶಾಲೆಗಳು ಮತ್ತು ಶಿಕ್ಷಕರಲ್ಲಿ ದೊಡ್ಡ ಗೊಂದಲ ಉಂಟಾದಂತಾಗಿದೆ. ಈ ಮಧ್ಯೆ ಶಿಕ್ಷಣ ಆಯುಕ್ತ ವಿಶಾಲ್‌ ಸೋಲಂಕಿ, ಕೆಂಪು ವಲಯಗಳಿಗೆ ಪ್ರತ್ಯೇಕ ಎಸ್‌ಒಪಿಗಳನ್ನು ಶೀಘ್ರದಲ್ಲೇ ನೀಡಲಾಗುವುದು ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.