ಕೈಗಾರಿಕೆಗಳಲ್ಲಿ ಆಮ್ಲಜನಕದ ಕೊರತೆ


Team Udayavani, Sep 20, 2020, 7:45 PM IST

Mumbai-tdy-1

ಪುಣೆ, ಸೆ. 19: ಕೈಗಾರಿಕಾ ಉದ್ದೇಶಕ್ಕಾಗಿ ಕೇವಲ ಶೇ. 20ರಷ್ಟನ್ನು ಆಮ್ಲಜನಕ ಮೀಸಲಿಟ್ಟು ಆಸ್ಪತ್ರೆಗಳಿಗೆ ಶೇ. 80ರಷ್ಟು ಆಮ್ಲಜನಕ ಪೂರೈಕೆ ಮಾಡುವ ರಾಜ್ಯ ಸರಕಾರದ ನಿರ್ಧಾರವು ಪಿಂಪ್ರಿ-ಚಿಂಚ್ವಾಡ್‌ ಮತ್ತು ಚಾಕನ್‌ ಪ್ರದೇಶಗಳಲ್ಲಿನ ಕೈಗಾರಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ.

ಉದ್ಯಮದ ಪ್ರತಿನಿಧಿಗಳ ಪ್ರಕಾರ, ಆಮ್ಲಜನಕದ ಪೂರೈಕೆಯಲ್ಲಿನ ಕುಸಿತವು ಉತ್ಪಾದನೆಯನ್ನು ಶೇ. 25ರಷ್ಟು ಇಳಿಸಿದೆ ಎಂದಿದ್ದಾರೆ. ಕೈಗಾರಿಕಾ ಆಮ್ಲಜನಕವನ್ನು ಫ್ಯಾಬ್ರಿಕೇಶನ್‌, ಪ್ಲಾಸ್ಮಾ ಕತ್ತರಿಸುವುದು, ರಬ್ಬರ್‌ ಮತ್ತು ಪ್ಲಾಸ್ಟಿಕ್‌ ಕತ್ತರಿಸುವ ಕಾರ್ಖಾನೆಗಳಲ್ಲಿ ಬಳಸಲಾಗುತ್ತದೆ. ಕೋವಿಡ್‌ ಪರಿಸ್ಥಿತಿಯಲ್ಲಿ ವೈದ್ಯಕೀಯ ಉದ್ದೇಶಗಳಿಗಾಗಿ ಹೆಚ್ಚುತ್ತಿರುವ ಆಮ್ಲಜನಕದ ಬೇಡಿಕೆಯನ್ನು ಪರಿಹರಿಸಲು, ಸರಕಾರವು ಸೆ. 7ರಂದು ಅಧಿಸೂಚನೆಯನ್ನು ಹೊರಡಿಸಿ, ವೈದ್ಯಕೀಯ ಆಮ್ಲಜನಕದ ಪ್ರಮಾಣವು ಹೆಚ್ಚಾದ ರೂ ಅಗತ್ಯವಿದ್ದಲ್ಲಿ ಆಸ್ಪತ್ರೆಯ ಅಥವಾ ಕೈಗಾರಿಕೆಗಳ ಸರಬರಾಜಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದೆ. ಸರಕಾರದ ಸುತ್ತೋಲೆಯಲ್ಲಿ ಆಮ್ಲಜನಕದ ಬೆಲೆಯೂ ಹೆಚ್ಚಾಗಿದೆ. ಕೈಗಾರಿಕಾ ಆಮ್ಲಜನಕಕ್ಕೆ ಈ ಹಿಂದೆ ಒಂದು ಘನ ಮೀಟರ್‌ಗೆ 20 ರೂ. ಗಳಾಗಿತ್ತು, ಆದರೆ ಪ್ರಸ್ತುತ ಇದರ ದರ 60 ರೂ. ಗಳಿಗೆ ಏರಿಕೆಯಾಗಿದೆ. ಪ್ರತಿದಿನ ಆಮ್ಲಜನಕವನ್ನು ಬಳಸುವ ಹಲವಾರು ಘಟಕಗಳನ್ನು ಹೊಂದಿರುವ ಪಿಂಪ್ರಿ ಮತ್ತು ಚಿಂಚ್‌ ವಾಡ್‌ ಸಣ್ಣ ಪ್ರಮಾಣದ ಕೈಗಾರಿಕೆಗಳು ಸೆ. 8ರಂದು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರಿಗೆ ಉದ್ಯಮಕ್ಕೆ ಸಹಾಯ ಕೋರಿ ಪತ್ರ ಬರೆದಿದ್ದಾರೆ.

ಪಿಂಪ್ರಿ-ಚಿಂಚ್ವಾಡ್‌ ಸಣ್ಣ-ಪ್ರಮಾಣದ ಕೈಗಾರಿಕೆಗಳ ಸಂಘದ ಅಧ್ಯಕ್ಷ ಸಂದೀಪ್‌ ಬೆಲ್ಸಾರೆ ಮಾತನಾಡಿ, ಸಣ್ಣ ಪ್ರಮಾಣದ ಕೈಗಾರಿಕೆಗಳಲ್ಲಿ ಸುಮಾರು ಶೇ. 25ರಷ್ಟು ಕೆಲಸಗಳು ಪ್ರಭಾವಿತವಾಗಿವೆ. ಆಮ್ಲಜನಕದ ಮೂಲಕ ವಿವಿಧ ವಸ್ತುಗಳನ್ನು ಕತ್ತರಿಸುವ ಕಾರ್ಯಾಗಾರಗಳನ್ನು ಮಾತ್ರ ನಡೆಸುವವರಿಗೆ ಯಾವುದೇ ಕೆಲಸವನ್ನು ಪ್ರಕ್ರಿಯೆಗೊಳಿಸಲು ಸಾಧ್ಯವಾಗುವುದಿಲ್ಲ. ಕೋವಿಡ್ ಸೋಂಕಿತರಿಗೆ ಆಮ್ಲಜನಕ ಸೌಲಭ್ಯದ ಅಗತ್ಯವಿದೆ ಎಂದು ನಾವು ಸಂಪೂರ್ಣವಾಗಿ ಒಪ್ಪುತ್ತೇವೆ. ಆದರೆ ಅನೇಕ ಕೈಗಾರಿಕೆಗಳು ಶೇ. 20ರಷ್ಟು ಹಂಚಿದ ಆಮ್ಲಜನಕ ಕೋಟಾವನ್ನು ಸಹ ಪಡೆಯುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೈಗಾರಿಕಾ ಸಂಘ ಮುಖ್ಯಮಂತ್ರಿಗೆ ಕಳುಹಿಸಿದ ಪತ್ರದಲ್ಲಿ, ಆಮ್ಲಜನಕ ಸಿಲಿಂಡರ್‌ಗಳ ಬ್ಲ್ಯಾಕ್‌ ಮಾರಾಟವನ್ನು ಪರಿಶೀಲಿಸಲು, ಆಮ್ಲಜನಕದ ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ಅದರ ವೆಚ್ಚವನ್ನು ಕಡಿಮೆ ಮಾಡಲು ಆಡಳಿತವನ್ನು ಕೋರುತ್ತದೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.