“ಬೆಲೆ ನಿಯಂತ್ರಣಕ್ಕೆ ಕೇಂದ್ರ ಸರಕಾರ ಕ್ರಮ ಕೈಗೊಳ್ಳಲಿ’
Team Udayavani, Mar 6, 2021, 7:27 PM IST
ಮುಂಬಯಿ: ಒಂದು ಲೀಟರ್ ಪೆಟ್ರೋಲ್ ಮೇಲಿನ ತೆರಿಗೆಗಳು ಅದರ ಮೂಲ ವೆಚ್ಚಕ್ಕಿಂತ ಹೆಚ್ಚಾಗಿದೆ ಎಂದು ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಧಾನಸಭೆಯಲ್ಲಿ ಹೇಳಿದ್ದಾರೆ.
ಕಳೆದ ಕೆಲವು ತಿಂಗಳುಗಳಿಂದ ಅಡುಗೆ ಅನಿಲದ ಬೆಲೆಯೂ ಹೆಚ್ಚಾಗಿದ್ದು, ಕೇಂದ್ರವು ತತ್ಕ್ಷಣವೇ ಬೆಲೆಗಳನ್ನು ಕಡಿಮೆ ಮಾಡಲು ಮತ್ತು ಹಣದುಬ್ಬರದಿಂದ ಪರಿಹಾರ ಒದಗಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಪವಾರ್ ಆಗ್ರಹಿಸಿದ್ದಾರೆ. ಪೆಟ್ರೋಲ್ನ ಮೂಲ ವೆಚ್ಚ, ಅದರ ಸಂಸ್ಕರಣಾ ವೆಚ್ಚದ ಬಳಿಕ 32.82 ರೂ. ಗಳಾದರೆ, 32.90 ರೂ. ಗಳನ್ನು ಕೇಂದ್ರವು ವಿವಿಧ ತೆರಿಗೆಗಳ ಮೂಲಕ ವಿಧಿಸುತ್ತದೆ. ಈ ತೆರಿಗೆಗಳು ಮೂಲ ಬೆಲೆಗಿಂತ ಹೆಚ್ಚಾಗಿವೆ. ರಾಜ್ಯ ಸರಕಾರವೂ ಪೆಟ್ರೋಲ್ಗೆ ತೆರಿಗೆ ವಿಧಿಸಿದೆ. ನಮ್ಮ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ, ನಾವು ತೆರಿಗೆ ಹೆಚ್ಚಿಸುವ ಬಗ್ಗೆ ಯೋಚಿಸಿಲ್ಲ. ಹಿಂದಿನ ಸರಕಾರವು ವಿಧಿಸಿದ್ದನ್ನು ನಾವು ಮುಂದುವರಿಸಿದ್ದೇವೆ ಎಂದು ರಾಜ್ಯ ಹಣಕಾಸು ಸಚಿವ ಅಜಿತ್ ಪವಾರ್ ಹೇಳಿದ್ದಾರೆ.
ವಿಶೇಷವಾಗಿ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಕೇಂದ್ರವು ಹಣದುಬ್ಬರಕ್ಕೆ ತತ್ಕ್ಷಣ ಪರಿಹಾರ ಒದಗಿಸಬೇಕು. ಕೋವಿಡ್ ಕಾಲದಲ್ಲಿ ಜನರು ಬದುಕುವುದು ಕಷ್ಟಕರವಾಗಿದೆ. ಈ ರೀತಿಯಾಗಿ ಬೆಲೆಗಳು ಹೆಚ್ಚಾದರೆ ಜನರು ಸಹಾಯಕ್ಕಾಗಿ ಎಲ್ಲಿ ಹೋಗಬೇಕು ಎಂದು ಪವಾರ್ ಪ್ರಶ್ನಿಸಿದ್ದಾರೆ. ಡಾ| ಮನಮೋಹನ್ ಸಿಂಗ್ ಪ್ರಧಾನಿಯಾಗಿ¨ªಾಗ ಕಚ್ಚಾ ತೈಲ ಬೆಲೆ ಬ್ಯಾರೆಲ್ಗೆ 106.85 ರೂ.ಗಳಿದ್ದರೂ ಪೆಟ್ರೋಲ್ಗೆ 70 ರೂ. ಗಳಿತ್ತು. ಇಂದು ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್ಗೆ 63 ರೂ. ಗಳಾದರೂ ಪೆಟ್ರೋಲ್ ಬೆಲೆ ಲೀಟರ್ಗೆ ಸುಮಾರು 100 ರೂ. ಗಳಿಗೆ ತಲುಪಿದೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!
Kushtagi:ವಿದ್ಯುತ್ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ
Festivals: ಹಬ್ಬಗಳು ಮರೆಯಾಗುತ್ತಿವೆಯೇ?