“ಮಕ್ಕಳು ಹೆತ್ತವರಿಗೂ ಸಮಾಜಕ್ಕೂ ಹೆಸರು ತರಲಿ’ : ಐಕಳ ಹರೀಶ್ ಶೆಟ್ಟಿ
Team Udayavani, Jan 19, 2021, 2:31 PM IST
ಮುಂಬಯಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಕುಂದಾಪುರ ಬಂಟರ ಸಂಘದ ಸಭಾಭವನದಲ್ಲಿ ನಡೆದ
ಕಾರ್ಯಕ್ರಮದಲ್ಲಿ ಸಹಾಯಧನವನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ವಿತರಿಸಿದರು.
ಇದೇ ಸಂದರ್ಭ ಐಕಳ ಹರೀಶ್ ಶೆಟ್ಟಿ ಅವರು ಮಾತನಾಡಿ, ನಮ್ಮ ದಾನಿಗಳು ನೀಡಿದ ಸಹಕಾರ ನಮಗೆ ನಮ್ಮ ಸಮಾಜದ ನೊಂದವರ ಬಗ್ಗೆ ಕಾಳಜಿ ವಹಿಸಲು ಸಾಧ್ಯವಾಯಿತು. ನಾವು ಸಮಾಜದಲ್ಲಿ ಒಳ್ಳೆ ಕೆಲಸ ಮಾಡಿದರೆ ಸಮಾಜ ನಮ್ಮನ್ನು ಗುರುತಿಸುತ್ತದೆ. ನಮ್ಮ ಮಕ್ಕಳು ಒಳ್ಳೆಯ ವಿದ್ಯಾಭ್ಯಾಸ ಮಾಡಿ ಹೆತ್ತವರಿಗೂ ಸಮಾಜಕ್ಕೂ ಹೆಸರು ತರಬೇಕು. ಸಮಾಜ ಕಲ್ಯಾಣ ಯೋಜನೆಯ ಹೊಸ ಮನೆ ನಿರ್ಮಾಣ ಯೋಜನೆಯ ಅಡಿಯಲ್ಲಿ ಶೇ. 80ರಷ್ಟು ಮನೆಗಳು ಸಂಪೂರ್ಣ ಗೊಂಡಿದ್ದು,
ಇನ್ನುಳಿದ ಮನೆಗಳನ್ನು ಅತೀ ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು. ಕಷ್ಟದಲ್ಲಿರು ವವರು ಚಿಂತಿಸುವ ಅಗತ್ಯವಿಲ್ಲ.
ನಿಮೆಲ್ಲರ ಕಷ್ಟದಲ್ಲಿ ನಿಮ್ಮ ಜತೆ ಒಕ್ಕೂಟ ಇದೆ ಎಂದರು. ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಮಾತನಾಡಿ, ಒಕ್ಕೂಟ ಈ ವರೆಗೆ 6 ಕೋ. ರೂ.ಗಳ ಸಹಾಯಧನ ವಿತರಣೆ ಮಾಡಿದೆ. ಮಕ್ಕಳು ಒಳ್ಳೆಯ ಗುಣ ನಡತೆಯಿಂದ ಉತ್ತಮ ಅಂಕ ಪಡೆದು ಕೀರ್ತಿ ತನ್ನಿ, ಒಕ್ಕೂಟದಿಂದ ನಿಮಗೆ ಸಹಕಾರ ನೀಡುತ್ತೇವೆ. ಮನೆ ಇಲ್ಲದವರಿಗೆ ಮನೆ ಕೊಡುವ ಕೆಲಸ ಒಕ್ಕೂಟದಿಂದ ನಡೆಯುತ್ತಿದೆ ಎಂದರು. ಒಕ್ಕೂಟದ ಕಾರ್ಯದರ್ಶಿ ಇಂದ್ರಾಳಿ ಜಯಕರ ಶೆಟ್ಟಿ ಅವರು ಒಕ್ಕೂಟದ ಕಾರ್ಯಕ್ರಮಗಳ ವಿವರ ನೀಡಿ ಪ್ರಸ್ತಾವಿಸಿದರು.
ಇದನ್ನೂ ಓದಿ:ಭಾಯಂದರ್ ಶ್ರೀ ಅಯ್ಯಪ್ಪ ಆರಾಧನಾ ಭಕ್ತ ಮಂಡಲ : 15ನೇ ವಾರ್ಷಿಕ ಮಹಾಪೂಜೆ ಸಂಪನ್ನ
ಕುಂದಾಪುರ ಬಂಟರ ಸಂಘದ ಸಂಚಾಲಕ ಸುಧಾಕರ ಶೆಟ್ಟಿ ಅವರ್ಸೆ ಯುವ ಬಂಟರ ಸಂಘದ ಅಧ್ಯಕ್ಷ ಸುನಿಲ್ ಶೆಟ್ಟಿ ಅವರ
ಉಪಸ್ಥಿತಿಯಲ್ಲಿ ಸಹಾಯಧನವನ್ನು ವಿತರಣೆ ಮಾಡಿದರು. ಇದೇ ಸಂದರ್ಭದಲ್ಲಿ ಆರ್ಥಿಕವಾಗಿ ಹಿಂದುಳಿದ ಸಮಾಜದ ನೂರಾರು ಮಂದಿಗೆ ಆರ್ಥಿಕ ನೆರವು ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ