ಸಂಕಷ ಸಮಯ ಸಂಘ-ಸಂಸ್ಥೆ ಗಳು ನೆರವಾಗಲಿ: ಎಂ. ಕೃಷ್ಣ ಎನ್‌. ಶೆಟ್ಟಿ

ಸಂಕಷ್ಟದಲ್ಲಿದ್ದ ಎಲ್ಲ ಸಮಾಜ ಬಾಂಧವರಿಗೆ ಸಹಕರಿಸಿದ್ದೇವೆ.

Team Udayavani, Aug 17, 2021, 10:17 AM IST

“ಸಂಕಷ ಸಮಯ ಸಂಘ-ಸಂಸ್ಥೆ ಗಳು ನೆರವಾಗಲಿ’

ಕಾಂದಿವಲಿ, ಆ. 16. ಸಮಸ್ಯೆಗಳು ಎದುರಾದಾಗ ಕರ್ತವ್ಯದ ನಿಟ್ಟಿನಲ್ಲಿ ಸಂಘ-ಸಂಸ್ಥೆಗಳು ಸಹಾಯಹಸ್ತ ಚಾಚುವ ಮನೋಭಾವ ಬೆಳೆಸಿಕೊಳ್ಳಬೇಕು. ಚಾರ್ಕೋಪ್‌ ಕನ್ನಡಿಗರ ಬಳಗ ಅದಿದೇವತೆ ವಿದ್ಯಾಮಾತೆ ಶಾರದೆಯ ಆರಾಧನಾ ಸಂಸ್ಥೆಯಾಗಿದ್ದು, ಆ ಮೂಲಕ ಪ್ರಸಕ್ತ ವರ್ಷದಲ್ಲಿಯೂ ಕೋವಿಡ್‌ ಸಂಕಷ್ಟ ದಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ಸಮಸ್ಯೆ ಬರಬಾರದೆಂಬ ದೃಷ್ಟಿಯಿಂದ ಬಳಗದ ವತಿ ಯಿಂದ ಕೊಡಮಾಡಿದ ಈ ಸಹಾಯವನ್ನು ಶಾರದಮಾತೆಯ ವಿದ್ಯಾದಾನದ ಪ್ರಸಾದವೆಂದು ಸ್ವೀಕರಿಸಬೇಕು ಎಂದು ಬಳಗದ ಅಧ್ಯಕ್ಷ ಎಂ. ಕೃಷ್ಣ ಎನ್‌. ಶೆಟ್ಟಿ ತಿಳಿಸಿದರು.

ಆ. 14ರಂದು ಚಾರ್ಕೋಪ್‌ ಕನ್ನಡಿಗರ ಬಳಗದ ವತಿಯಿಂದ ಸಂಸ್ಥೆಯ ಕನ್ನಡ ಭವನ ಕಿರು ಸಭಾಗೃಹದಲ್ಲಿ ಆಯೋಜಿಸಿದ್ದ ವಾರ್ಷಿಕ ಶೈಕ್ಷಣಿಕ ನೆರವು ವಿತರಣೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅವರು ಧನಸಹಾಯ ವಿತರಿಸಿ ಮಾತನಾಡಿ, ಬಳಗವು ನೀಡಿದ ಈ ಸಹಾಯವು ವಿದ್ಯಾಭ್ಯಾಸದ ಸಂಪೂರ್ಣ ವೆಚ್ಚವಾಗಿರದೆ, ಸಂಕಷ್ಟ ಸಮಯದಲ್ಲಿ ವಿದ್ಯಾರ್ಥಿಗಳ ಶಾಲಾ ಖರ್ಚು-ವೆಚ್ಚವನ್ನು ನಿಭಾಯಿಸುವ ಉದ್ದೇಶದಿಂದ ವಿತರಿಸಲಾಗಿದೆ. ಶಾರದಾ ಮಾತೆಯ ಅನುಗ್ರಹದಿಂದ ನಿಮ್ಮ ಶಿಕ್ಷಣವು ಯಶಸ್ವಿಯಾಗಲಿ ಎಂದು ಶುಭ ಹಾರೈಸಿದರು.

ಸಂಘದ ವಿಶ್ವಸ್ತ ಜಯ ಸಿ. ಶೆಟ್ಟಿ ಮಾತನಾಡಿ, ಚಾರ್‌ಕೋಪ್‌ ಕನ್ನಡಿಗರ ಬಳಗವು ಚಾರ್ಕೋಪ್‌, ಕಾಂದಿವಲಿ ಪರಿಸರದಲ್ಲಿ ಸದಾ ಕನ್ನಡ ಕಾರ್ಯಕ್ರಮ ಹಾಗೂ ಸಾಮಾಜಿಕ ಚಟು ವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆ ಯಾಗಿದೆ. ಕಳೆದ ಒಂದೂವರೆ ವರ್ಷದಿಂದ ಕೋವಿಡ್‌ ಸಮಸ್ಯೆ ಯಿಂದ ಬಳಗದ ಕಾರ್ಯಕ್ರಮವು ನಿಂತ ನೀರಾಗಿರಲಿಲ್ಲ. ಸಂಕಷ್ಟದಲ್ಲಿದ್ದ ಎಲ್ಲ ಸಮಾಜ ಬಾಂಧವರಿಗೆ ಸಹಕರಿಸಿದ್ದೇವೆ.

ಆದರೂ ಬಳಗವು ಹನಿಗೂಡಿದರೆ ಹಳ್ಳ ಎಂಬ ಮಾತಿನ ಹಿನ್ನೆಲೆಯಲ್ಲಿ ಪರಿಸರದ ಹಲವು ವಿದ್ಯಾರ್ಥಿಗಳಿಗೆ ಕೈಲಾದಷ್ಟು ಶೈಕ್ಷಣಿಕ ಸಹಾಯ ಮಾಡುತ್ತಿದೆ. ಇದರ ಪ್ರಯೋಜನ ಮುಂದಿನ ಪೀಳಿಗೆಗೆ ದೊರೆಯಬೇಕೆಂಬ ಉದ್ದೇಶ ಬಳಗದ್ದಾಗಿದೆ. ಜಗನ್ಮಾತೆ ಶಾರದೆ ಎಲ್ಲರನ್ನು ಕಾಪಾಡಲಿ ಎಂದು ಹಾರೈಸಿದರು. ಬಳಗದ ಗೌರವ ಪ್ರಧಾನ ಕಾರ್ಯದರ್ಶಿ ರಘುನಾಥ ಎನ್‌. ಶೆಟ್ಟಿ ಸ್ವಾಗತಿಸಿ, ಪ್ರಸ್ತಾವಿಸಿ, ಇಂದು ಸಂಘ-ಸಂಸ್ಥೆಗಳು ಆರ್ಥಿಕ ಸಂಕಷ್ಟದಲ್ಲಿವೆ.

ನಿರಂತರ ಕಾರ್ಯಕ್ರಮ ನೀಡುತ್ತಾ ಬಳಗವು ಚಾರ್ಕೋಪ್‌ ಪರಿಸರದ ಎಲ್ಲ ವರ್ಗಗಳ ತುಳು-ಕನ್ನಡಿಗರ ವೇದಿಕೆ ಯಾಗಿದೆ. ಪರಿಸರದ ದಾನಿಗಳು, ಹಿತೈಷಿ ಗಳಿಂದ ಪಡೆದ ಧನ ಸಹಾಯದಿಂದ ಕಾರ್ಯಕ್ರಮವನ್ನು ನಡೆಸುತ್ತಿದ್ದೇವು. ಈಗ ಸಮಿತಿಯು ಯಾರಲ್ಲಿಯೂ ದೇಣಿಗೆ ಕೇಳುವ ಪರಿಸ್ಥಿತಿಯಲ್ಲಿ ಇಲ್ಲ. ಸಂಕಷ್ಟ ಎದುರಾದರೂ ಬಳಗದ ವತಿಯಿಂದ ಅಳಿಲ ಸೇವೆಯಾಗಿ ನಮ್ಮವರಿಗೆ ಶಾರದಾ ಮಾತೆಯ ಅನುಗ್ರಹದ ಪ್ರಸಾದದ ರೂಪದಲ್ಲಿ ಈ ಧನಸಹಾಯವನ್ನು
ನೀಡಿದ್ದೇವೆ. ಈ ಸಹಾಯ ವಿದ್ಯಾರ್ಥಿಗಳ ಜೀವನದಲ್ಲಿ ನೆನಪಾಗಿ ಉಳಿಯುವಂತಾಗಲಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಚೆಕ್‌ ರೂಪದಲ್ಲಿ ಧನಸಹಾಯ ವಿತರಿಸಲಾಯಿತು. ಬಳಗದ ಗೌರವ ಕೋಶಾಧಿಕಾರಿ ಗೌರಿ ಡಿ. ಪಣಿಯಾಡಿ, ಜತೆ ಕೋಶಾಧಿಕಾರಿ ರಮೇಶ್‌ ಕೋಟ್ಯಾನ್‌, ಜತೆ ಕೋಶಾಧಿಕಾರಿ ವಸಂತಿ ಯು. ಸಾಲ್ಯಾನ್‌, ವಾರ್ಷಿಕೋತ್ಸವ ಮತ್ತು ಪೂಜಾ ಉಪಸಮಿತಿಯ ಕಾರ್ಯಾಧ್ಯಕ್ಷ ಹರೀಶ್‌ ಚೇವಾರ್‌, ಸಮಿತಿಯ ಸದಸ್ಯರಾದ ವನಜಾ ಡಿ. ಶೆಟ್ಟಿ, ಮಹೇಂದ್ರ ಕಾಂಚನ್‌ ಮತ್ತಿತರ ಸದಸ್ಯರು ಉಪಸ್ಥಿತರಿದ್ದರು.

*ಚಿತ್ರ-ವರದಿ: ರಮೇಶ್‌ ಉದ್ಯಾವರ್‌

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.