ಹೊಟೇಲ್‌ ಕಾರ್ಮಿಕರ ಸಮಸ್ಯೆಗೆ ಸ್ಪಂದಿಸೋಣ: ಉದಯ ಶೆಟ್ಟಿ ಪೆಲತ್ತೂರು

ದಿಲೀಪ್‌ ಡೊಳೆ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

Team Udayavani, Jul 12, 2021, 12:35 PM IST

ಹೊಟೇಲ್‌ ಕಾರ್ಮಿಕರ ಸಮಸ್ಯೆಗೆ ಸ್ಪಂದಿಸೋಣ: ಉದಯ ಶೆಟ್ಟಿ ಪೆಲತ್ತೂರು

ಮುಂಬಯಿ, ಜು. 11: ಹೊಟೇಲ್‌ ಉದ್ಯಮದ ಯಶಸ್ಸಿನಲ್ಲಿ ಹೊಟೇಲ್‌ ಕಾರ್ಮಿಕರ ಸಹಕಾರ ಬಹಳ ಮಹತ್ತ ರವಾಗಿದೆ. ಆದರೆ ಇಂದು ವಿಶ್ವದಲ್ಲಿ ಭೀತಿ ಉಂಟು ಮಾಡಿರುವ ಕೋವಿಡ್ ಮಹಾಮಾರಿಯು ಹೊಟೇಲ್‌ ಉದ್ಯಮದಲ್ಲಿ ತಲ್ಲಣ ಸೃಷ್ಟಿಸಿದೆ. ದಿನದಿಂದ ದಿನಕ್ಕೆ ಪರಿಸ್ಥಿತಿ ಹದಗೆಡುತ್ತಿದೆ. ಇದರಿಂದ ಹೊಟೇಲ್‌ ಮಾಲಕರು ಮತ್ತು ಕಾರ್ಮಿಕರು ಯಾವುದೇ ಆತಂಕಕ್ಕೆ ಒಳಗಾಗದೆ ಆತ್ಮವಿಶ್ವಾಸದಿಂದ ಮುನ್ನಡೆ ಯೋಣ. ಹೊಟೇಲ್‌ ಕಾರ್ಮಿಕರ ಸಮಸ್ಯೆಗಳಿಗೆ ಸಾಧ್ಯವಾದಷ್ಟು ಮಟ್ಟಿಗೆ ಸಹಕರಿಸೋಣ ಎಂದು ಬಂಟರ ಸಂಘ ಮೀರಾ – ಭಾಯಂದರ್‌ ಪ್ರಾದೇಶಿಕ ಸಮಿತಿಯ ಉಪಕಾರ್ಯಾಧ್ಯಕ್ಷ, ಕಾಶೀ ಮೀರಾ ಹಾಸ್ಪಿಟಾಲಿಟಿ ಮತ್ತು ಎಂಟರ್‌ ಟೈನ್ಮೆಂಟ್‌ ಅಸೋಸಿಯೇಶನ್‌ ಇದರ ಗೌರವ ಪ್ರಧಾನ ಕಾರ್ಯದರ್ಶಿ ಉದಯ ಶೆಟ್ಟಿ ಪೆಲತ್ತೂರು ತಿಳಿಸಿದರು.

ಜು. 7ರಂದು ಕಾಶಿಮೀರಾ ಹಾಸ್ಪಿಟಾಲಿಟಿ ಮತ್ತು ಎಂಟರ್‌ಟೈನ್ಮೆಂಟ್‌ ಅಸೋಸಿಯೇಶನ್‌ ಹಾಗೂ ಮೀರಾ-ಭಾಯಂದರ್‌ ನಗರಪಾಲಿಕೆಯ ಆಶ್ರಯದಲ್ಲಿ ಸೆವೆನ್‌ ಸ್ಕ್ವೇರ್‌ ಅಕಾಡೆಮಿ ಶಾಲೆಯಲ್ಲಿ ಮೀರಾ-ಭಾಯಂದರ್‌ ಪರಿಸರದ ಹೊಟೇಲ್‌ ಕಾರ್ಮಿಕರಿಗೆ ಆಯೋಜಿಸಿದ ಉಚಿತ ಕೋವಿಡ್‌ ಲಸಿಕೆ ಶಿಬಿರದ ಮುಂದಾಳತ್ವ ವಹಿಸಿ ಮಾತನಾಡಿದ ಅವರು, ಹೊಟೇಲ್‌ ಕಾರ್ಮಿಕರ ಸಮಸ್ಯೆಗೆ ಸ್ಪಂದಿಸಿ ಅವರಲ್ಲಿ ಇರುವ ಆತಂಕ ದೂರ ಮಾಡೋಣ. ನಾವು ನನಗಾಗಿ ಬದುಕುವುದಕ್ಕಿಂತ ನಮಗಾಗಿ ಅಂದರೆ ಸಮಾಜಕ್ಕಾಗಿ ಬದುಕಿದಾಗ ಸಮಾಜ ನಮ್ಮನ್ನು ಸದಾ ನೆನೆಯುತ್ತದೆ.

ಈ ಹಿನ್ನೆಲೆಯಲ್ಲಿ ಜಾಗತಿಕವಾಗಿ ಆತಂಕ ಸೃಷ್ಟಿಸಿರುವ ಕೊರೊನಾ ವಿರುದ್ಧ ಜಾಗೃತಿ ಮೂಡಿಸುವ ಕಾರ್ಯ ಆಗಲಿ ಎಂದರು. ವ್ಯಾಕ್ಸಿನೇಶನ್‌ ಶಿಬಿರವನ್ನು ಮೀರಾ- ಭಾಯಂದರ್‌ ನಗರಪಾಲಿಕೆಯ ಮೇಯರ್‌ ಜೋಸ್ನಾ ಹಾಸ್ನಾಲೆ ಹಾಗೂ ಮೀರಾ ಭಾಯಂದರ್‌ ನಗರ ಪಾಲಿಕೆ ಆಯುಕ್ತ ದಿಲೀಪ್‌ ಡೊಳೆ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಮೀರಾರೋಡ್‌ ಮಾಜಿ ಶಾಸಕ ನರೇಂದ್ರ ಮೆಹ್ತಾ, ನಗರ ಸೇವಕ ಅರವಿಂದ ಶೆಟ್ಟಿ, ಮೀರಾ -ಭಾಯಂದರ್‌ ನಗರ ಪಾಲಿಕೆ ಆಯುಕ್ತ ದಿಲೀಪ್‌ ಡೊಳೆ, ಮೀರಾ- ಭಾಯಂದರ್‌ ಪಾಲಿಕೆಯ ಸಭಾಗೃಹ ನೇತಾರ ಪ್ರಶಾಂತ್‌ ದಲ್ವಿ, ಡೆಪ್ಯುಟಿ ಮೇಯರ್‌ ಹಸ್ಮುಖ್‌ ಗೆಲೇಟ್‌, ನಗರ ಸೇವಕ ಗಣೇಶ್‌ ಶೆಟ್ಟಿ, ಡಾ| ಅಂಜಲಿ ಪಾಟೀಲ್‌, ಬಂಟರ ಸಂಘ ಮುಂಬಯಿ ಮೀರಾ ಭಾಯಂದರ್‌ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ
ಶಿವಪ್ರಸಾದ್‌ ಆರ್‌. ಶೆಟ್ಟಿ ಮಾಣಿಗುತ್ತು ಹಾಗೂ ಕಾರ್ಯದರ್ಶಿ ರವೀಂದ್ರ ಶೆಟ್ಟಿ ಕೊಟ್ರಪಾಡಿಗುತ್ತು, ಬಂಟರ ಸಂಘ ಮುಂಬಯಿ ಉನ್ನತ ಶಿಕ್ಷಣ ಸಮಿತಿಯ ಉಪಕಾರ್ಯಾಧ್ಯಕ್ಷ ಕಿಶೋರ್‌ ಕುಮಾರ್‌ ಶೆಟ್ಟಿ ಕುತ್ಯಾರು, ಸೆವೆನ್‌ ಸ್ಕ್ವೇರ್‌ ಅಕಾಡೆಮಿ ಸ್ಕೂಲ್‌ ಪ್ರಾಂಶುಪಾಲೆ ಕವಿತಾ ಹೆಗ್ಡೆ ಕಾರ್ಯಕ್ರಮದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಆಗಮಿಸಿದ ಗಣ್ಯರನ್ನು ಕಾಶಿಮೀರಾ ಹಾಸ್ಪಿಟಾಲಿಟಿ ಮತ್ತು ಎಂಟರ್‌ಟೈನ್ಮೆಂಟ್‌ ಅಸೋಸಿಯೇಶನ್‌ ಅಧ್ಯಕ್ಷ ಸಂತೋಷ್‌ ಪುತ್ರನ್‌ ಹಾಗೂ ಪದಾಧಿಕಾರಿಗಳು ಗೌರವಿ ಸಿದರು. ಬೆಳಗ್ಗೆಯಿಂದಲೇ ಸುಮಾರು 600 ಮಂದಿ ಹೊಟೇಲ್‌ ಕಾರ್ಮಿಕರಿಗೆ ಹಾಗೂ ಅವರ ಪರಿವಾರದ ಸದಸ್ಯರಿಗೆ ಕೊರೊನಾ ಲಸಿಕೆಯನ್ನು ನಗರ ಪಾಲಿಕೆಯ ಸಹಕಾರದೊಂದಿಗೆ ಹಾಗೂ ಕಾಶಿಮೀರಾ ಹಾಸ್ಪಿಟಾಲಿಟಿ ಮತ್ತು ಎಂಟರ್‌ಟೈನ್ಮೆಂಟ್‌ ಅಸೋಸಿಯೇಶನ್‌ ಅಧ್ಯಕ್ಷ ಸಂತೋಷ್‌ ಪುತ್ರನ್‌ ಮತ್ತು ಉದಯ ಶೆಟ್ಟಿ ಪೆಲತ್ತೂರು ಮುಂದಾಳ ತ್ವದಲ್ಲಿ ನೀಡಲಾಯಿತು. ಕಾಶಿಮೀರಾ ಹಾಸ್ಪಿಟಾಲಿಟಿ ಮತ್ತು ಎಂಟರ್‌ಟೈನ್ಮೆಂಟ್‌ ಅಸೋಸಿಯೇಶನ್‌ ಕೋಶಾಧಿಕಾರಿ ಗಣೇಶ್‌ ಶೆಟ್ಟಿ, ಜತೆ ಕಾರ್ಯದರ್ಶಿ ಸಾಯಿ ಪ್ರಸಾದ್‌ ಪೂಂಜ, ಸುರೇಶ್‌ ಶೆಟ್ಟಿ, ರಾಜೇಶ್‌ ಕುಂದರ್‌ ಮತ್ತಿತರರು ಸಹಕಾರ ನೀಡಿದರು.

ಕೊರೊನಾ ರೋಗ ಹರಡದಂತೆ ತಡೆಯಲು ಲಸಿಕೆಯೊಂದೇ ರಾಮಬಾಣ ಆಗಿದೆ. ಇದರ ಬಗ್ಗೆ ನಿರ್ಲಕ್ಷ್ಯ ಬೇಡ. ನಾವು ಈಗಾಗಲೇ 500ಕ್ಕೂ ಹೆಚ್ಚು ಆಹಾರದ ಕಿಟ್‌ಗಳನ್ನು ಹೊಟೇಲ್‌ ಕಾರ್ಮಿಕರ ಬಂಧುಗಳಿಗೆ ನೀಡಿದ್ದೇವೆ. ಮುಂದೆಯೂ ನಮ್ಮಿಂದಾಗುವ ಸಹಕಾರ ಖಂಡಿತ ಮಾಡುತ್ತೇವೆ.
-ಸಂತೋಷ್‌ ಪುತ್ರನ್‌, ಅಧ್ಯಕ್ಷರು,
ಕಾಶಿಮೀರಾ ಹಾಸ್ಪಿಟಾಲಿಟಿ ಮತ್ತು
ಎಂಟರ್‌ಟೈನ್ಮೆಂಟ್‌ ಅಸೋಸಿಯೇಶನ್‌
ಮೀರಾರೋಡ್‌

ಟಾಪ್ ನ್ಯೂಸ್

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.