ಸ್ಥಳೀಯ ಕಚೇರಿಗಳ ಕಾರ್ಯಕ್ರಮಗಳು ಶ್ಲಾಘನೀಯ: ಹರೀಶ್‌ ಜಿ. ಅಮೀನ್‌

ಬಿಲ್ಲವರ ಅಸೋಸಿಯೇಶನ್‌ ಬೊರಿವಲಿ-ದಹಿಸರ್‌ ಸಮಿತಿಯಿಂದ ಆಟಿಡೊಂಜಿ ಕೂಟ

Team Udayavani, Aug 22, 2021, 2:01 PM IST

ಸ್ಥಳೀಯ ಕಚೇರಿಗಳ ಕಾರ್ಯಕ್ರಮಗಳು ಶ್ಲಾಘನೀಯ: ಹರೀಶ್‌ ಜಿ. ಅಮೀನ್‌

ಬೊರಿವಲಿ: ಕೋವಿಡ್‌ ಕಠಿನ ಪರಿಸ್ಥಿತಿಯಲ್ಲೂ ಸಮಯೋಚಿತವಾಗಿ ತುಳುನಾಡಿನ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಆಟಿಡೊಂಜಿ ಕೂಟ ಕಾರ್ಯಕ್ರಮವನ್ನು ಆಯೋಜಿಸಿದ ಬೊರಿವಲಿ-ದಹಿಸರ್‌ ಸ್ಥಳೀಯ ಕಚೇರಿಯ ಕಾರ್ಯಾಧ್ಯಕ್ಷ ಮೋಹನ್‌ ಬಿ. ಅಮೀನ್‌ ಹಾಗೂ ಅವರ ಎಲ್ಲ ಕಾರ್ಯಕಾರಿ ಸಮಿತಿಯ ಶ್ರಮ ಇಲ್ಲಿ ಅನಾವರಣವಾಗಿದೆ. ನಮ್ಮ ತುಳುನಾಡಿನ ಸಂಸ್ಕೃತಿಯ ದ್ಯೋತಕವನ್ನು ಮುಂಬಯಿ ತುಳುವರಿಗೂ ಮನದಟ್ಟು ಮಾಡುವಂತಹ ಇಂತಹ ಕಾರ್ಯಕ್ರಮಗಳು ಸದಾ ನಡೆಯುತ್ತಿರಲಿ ಎಂದು ಬಿಲ್ಲವರ ಅಸೋಸಿಯೇಶನ್‌ ಅಧ್ಯಕ್ಷ ಹರೀಶ್‌ ಜಿ. ಅಮೀನ್‌ ಅವರು ನುಡಿದರು.

ಆ. 8ರಂದು ಪ್ಲಾಟ್‌ 134, ಗುರುಸನ್ನಿದಿ, ಬಿಎಂಸಿ ಗ್ಯಾರೇಜ್‌ ಶಿಂಪೋಲಿ ರೋಡ್‌ ಗೊರೈ ಬೊರಿವಲಿ ಪಶ್ಚಿಮದಲ್ಲಿರುವ ಸ್ಥಳೀಯ ಸಮಿತಿಯ ಕಚೇರಿಯಲ್ಲಿ ನಡೆದ ಆಟಿಡೊಂಜಿ ಕೂಟ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಂಕಷ್ಟದಲ್ಲಿರುವ ಸಮಾಜ ಬಾಂಧವರಿಗೆ ಅಸೋಸಿಯೇಶನ್‌ ಮೂಲಕ ದಾನಿಗಳ ಸಹಕಾರದಿಂದ ಪಡಿತರವನ್ನು ವಿತರಿಸಲಾಗುತ್ತಿದೆ. ಜಯ ಸುವರ್ಣರ ದೂರದೃಷ್ಟಿಯ ಚಿಂತನೆ, ಔದಾರ್ಯವು ಇಂದು ಬಿಲ್ಲವರ ಅಸೋಸಿಯೇಶನ್‌ ಮುಖಾಂತರ ಸಮಾಜ ಬಾಂಧವರಿಗೆ ದೊರೆಯುತ್ತಿದೆ. ಕೋವಿಡ್‌ ಸಂದರ್ಭದಲ್ಲಿ ಸ್ಥಳೀಯ ಕಚೇರಿಯ ಮಹಿಳೆಯರ ಸಾಧನೆ ಸಹಕಾರ ಮೆಚ್ಚುವಂಥದ್ದಾಗಿದೆ ಎಂದರು.

ಇದನ್ನೂ ಓದಿ:ಬಿಡುಗಡೆ ವೇಳೆ ಕೋವಿಡ್‌ ನಿಯಮ ಉಲ್ಲಂಘನೆ| ವಿನಯ್ ಸೇರಿ 400 ಮಂದಿ ವಿರುದ್ಧ ದೂರು

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಬಿಲ್ಲವರ ಅಸೋಸಿಯೇಶನ್‌ ಗೌರವ ಕಾರ್ಯದರ್ಶಿ ಧನಂಜಯ ಶಾಂತಿ ಅವರು ಮಾತನಾಡಿ, ಯಾವುದೇ ಕಾರ್ಯಕ್ರಮ ಯಶಸ್ವಿಯಾಗಲು ಮಹಿಳೆಯರ ಕೊಡುಗೆ ಅನಿವಾರ್ಯ. ಪುರಾತನ ಕಾಲದಿಂದಲೂ ಮಹಿಳೆಯರಿಗೆ ವಿಶೇಷ ಸ್ಥಾನ ಗೌರವ ನೀಡಿದ ದೇಶ ನಮ್ಮದು. ಸ್ತ್ರೀಯರು ಭಾಗವಹಿಸುವ ಕಾರ್ಯಕ್ರಮ ವಿಶೇಷವಾಗಿದ್ದು ಕಾಟ್ಯಕ್ರಮಕ್ಕೆ ಅವರು ಶೋಭೆಯಾ ಗಿರುತ್ತಾರೆ. ಬಿಲ್ಲವರ ಅಸೋಸಿಯೇಶನ್‌ ಅಮೃತನಿಧಿ ವಿದ್ಯಾ ಯೋಜನಾ ಕಾರ್ಯಕ್ರಮಕ್ಕೆ ತಾವೆಲ್ಲಾ ತಮ್ಮ ಸಹಾಯ ನೀಡಿ ಸಹಕರಿಸುವಂತೆ ವಿನಂತಿಸಿದರು.

ಕಾರ್ಯಕ್ರಮದ ಪ್ರಾರಂಭದಲ್ಲಿ ಅಧ್ಯಕ್ಷರಾದ ಹರೀಶ್‌ ಜಿ. ಅಮೀನ್‌ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರತಿಬಿಂಬ ಮೂರ್ತಿಗೆ ಹಾರಾರ್ಪಣೆಗೈದು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸ್ಥಳೀಯ ಕಚೇರಿಯ ಮಹಿಳಾ ಸದಸ್ಯೆ ನ್ಯಾಯವಾದಿ ಸೌಮ್ಯಾ ಪೂಜಾರಿ ಕಲಾವಿದೆ ಹರಿಣಿ ನಿಲೇಶ್‌ ಪೂಜಾರಿ ಅವರನ್ನು ಪರಿಚಯಿಸಿದರು. ಸಮಿತಿಯ ಕಾರ್ಯಾಧ್ಯಕ್ಷ ಮೋಹನ್‌ ಸ್ವಾಗತಿಸಿ, ಆಟಿಡೊಂಜಿ ಕೂಟ ತುಳು ಸಂಪ್ರದಾಯ ಕಾರ್ಯಕ್ರಮ ಸ್ಥಳೀಯ ಕಚೇರಿಯಲ್ಲಿ ಆಷಾಢ ತಿಂಗಳಲ್ಲಿ ವಿಶೇಷ ಕಾರ್ಯಕ್ರಮವಾಗಿದ್ದು, ಪ್ರತಿ ವರ್ಷವೂ ಸ್ಥಳೀಯ ಕಚೇರಿಯ ವತಿಯಿಂದ ವೆಶಿಷ್ಟ್ಯಪೂರ್ಣ ಕಾರ್ಯಕ್ರಮವಾಗಿ ಜರಗುತ್ತಿದೆ ಎಂದು ನುಡಿದರು.

ಉಪ ಕಾರ್ಯಾಧ್ಯಕ್ಷ ರಜಿತ್‌ ಎಲ್‌. ಸುವರ್ಣ ಕಾರ್ಯಕ್ರಮ ನಿರೂಪಿಸಿದರು. ಗೌರವ ಕಾರ್ಯದರ್ಶಿ ಶೇಖರ್‌ ಅಮೀನ್‌ ವಂದಿಸಿದರು. ವೇದಿಕೆಯಲ್ಲಿ ಭಾರತ್‌ ಬ್ಯಾಂಕ್‌ನ ನಿರ್ದೇಶಕ ಪ್ರೇಮನಾಥ್‌ ಪಿ. ಕೋಟ್ಯಾನ್‌, ಸ್ಥಳೀಯ ಕಚೇರಿಯ ಮಾಜಿ ಕಾರ್ಯಾಧ್ಯಕ್ಷ ಜಿ. ಎಂ. ಕೋಟ್ಯಾನ್‌, ಕೇಂದ್ರ ಕಚೇರಿಯ ಸದಸ್ಯ ನೀಲೇಶ್‌ ಪೂಜಾರಿ ಪಲಿಮಾರು ಉಪಸ್ಥಿತರಿದ್ದರು.

ಜತೆ ಕಾರ್ಯದರ್ಶಿ ವತ್ಸಲಾ ಕೆ. ಪೂಜಾರಿ, ಜತೆ ಕೋಶಾಧಿಕಾರಿ ಉಮೇಶ್‌ ಜಿ. ಕೋಟ್ಯಾನ್‌, ಕೇಶರಂಜನ್‌ ಮುಲ್ಕಿ, ಜಯರಾಮ ಪೂಜಾರಿ, ರಾಘು ಪೂಜಾರಿ, ಆರ್‌. ಡಿ. ಕೋಟ್ಯಾನ್‌, ರವಿ ಪೂಜಾ,ಕರುಣಾಕರ ಪೂಜಾರಿ, ಕೃಷ್ಣರಾಜ್‌ ಸುವರ್ಣ, ಸುಂದರಿ ಪೂಜಾರಿ, ವಾರಿಜಾ ಸನೀಲ್‌, ಪ್ರೀತಿ ಅಮೀನ್‌, ಸುಜಾತಾ ಪೂಜಾರಿ, ಕುಸುಮಾ ಅಮೀನ್‌, ಸುಮತಿ ಅಮೀನ್‌, ದಯಾನಂದ ಪೂಜಾರಿ ಉಪಸ್ಥಿತರಿದ್ದರು. ಶಾಂತಾ ಅಮೀನ್‌, ಸುಗುಣಾ ಹರೀಶ್‌ ಪೂಜಾರಿ, ಇಂದಿರಾ ರಾಘು ಪೂಜಾರಿ, ರೋಹಿಣಿ ಟಿ. ಕೋಟ್ಯಾನ್‌, ಲಕ್ಷ್ಮೀ ದೇವಾಡಿಗ, ಶೋಭಾ
ಬಿ. ಪೂಜಾರಿ, ಗೀತಾ ರಜಿತ್‌ ಸುವರ್ಣ, ಶೋಭಾ ಪೂಜಾರಿ, ಲೀಲಾ ಪೂಜಾರಿ, ಸಂಪಾ ಪೂಜಾರಿ, ಸವಿತಾ ಪೂಜಾರಿ ಅವರು ಆಟಿಡೊಂಜಿ ಕೂಟದಲ್ಲಿ ಸಾಂಪ್ರಾದಾಯಿಕ ಖಾದ್ಯವನ್ನು ತಯಾರಿಸಿ ಪ್ರದರ್ಶಿಸಿದರು. ಸದಸ್ಯರನ್ನು ಅಧ್ಯಕ್ಷರಾದ ಹರೀಶ್‌ ಜಿ. ಅಮೀನ್‌ ಅಭಿನಂದಿಸಿದರು.

ಹಿರಿಯರಿಂದ ಬಳುವಳಿಯಾಗಿ ಬಂದ ಪರಂಪರೆ ನಮ್ಮ ತುಳುನಾಡಿನ ಸಾಂಸ್ಕೃತಿಕ ಇಂದು ಇಲ್ಲಿ ಅನಾವರಣಗೊಂಡಿದೆ. ತಿಂಡಿ ತಿನಸುಗಳ ವಿಶೇಷತೆಯ ಕಾರ್ಯಕ್ರಮಗಳು ಆಯೋಜಿಸುವ ಈ ಸಂದರ್ಭದಲ್ಲಿ ತಾಂತ್ರಿಕ ತಿಳುವಳಿಕೆಯನ್ನು ನೀಡುವ ಆವಶ್ಯಕತೆ ಇರಬೇಕು. ಅವಿಭಜಿತ ದಕ್ಷಿಣ ಕನ್ನಡಿಗರು ಭಾಷಾ ಪ್ರೇಮಿಗಳಾಗಿದ್ದು ತುಳುಭಾಷೆಗೆ ನಾವೆಲ್ಲರೂ ವಿಶೇಷವಾದ ಸ್ಥಾನಮಾನ ಗೌರವ ನೀಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು.
-ಹರಿಣಿ ನಿಲೇಶ್‌ ಪೂಜಾರಿ ಪಲಿಮಾರು, ಧಾರಾವಾಹಿ ಕಲಾವಿದೆ

ಮಹಾನಗರದಲ್ಲಿ ಸದ್ಯ ಕೋವಿಡ್‌ ಮಹಾಮಾರಿಯಿಂದ ಉದರ ಪೋಷಣೆಗೆ ಸಮಸ್ಯೆಯುಂಟಾಗಿದ್ದು, ಆಂತರಿಕ ಬದುಕಿಗೆ ಬಹುದೊಡ್ಡ ಹೊಡೆತ ಬಿದ್ದಿದೆ. ಆದರೂ ತುಳುನಾಡಿನ ನಾವು ದೈವದೇವರು ಕಟ್ಟುಕಟ್ಟಲೆ ನಮ್ಮ ಧಾರ್ಮಿಕ ಚಿಂತನೆಯ ಮೂಲಕ ಬಲಿಷ್ಠಗೊಳಿಸಿದ್ದೇವೆ. ಬದಲಾವಣೆ ಯ ಕಾಲಘಟ್ಟದಲ್ಲಿ ಪ್ರಕೃತಿಯಲ್ಲಿನ ಬದಲಾವಣೆಯನ್ನು ಕಾಣುವುದು ಮಾನವನ ಸಹಜ ಧರ್ಮವಾಗಿದೆ.
-ಸನ್ನಿಧ್‌ ಪೂಜಾರಿ, ಮೋಡೆಲ್‌, ದೈವಪಾತ್ರಿ

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.