ಸಾರ್ವಜನಿಕರಿಗೆ ಸ್ಥಳೀಯ ರೈಲುಗಳಲ್ಲಿ ಪ್ರಯಾಣ ಸದ್ಯಕ್ಕಿಲ್ಲ


Team Udayavani, Nov 23, 2020, 9:15 PM IST

ಸಾರ್ವಜನಿಕರಿಗೆ ಸ್ಥಳೀಯ ರೈಲುಗಳಲ್ಲಿ ಪ್ರಯಾಣ ಸದ್ಯಕ್ಕಿಲ್ಲ

ಮುಂಬಯಿ, ನ. 22: ಸ್ಥಳೀಯ ರೈಲಿನಲ್ಲಿ ಪ್ರಯಾಣಿಸಲು ಸಾರ್ವಜನಿಕರು ಇನ್ನೂ ಕೆಲವು ಕಾಲ ಕಾಯಬೇಕಾಗುತ್ತದೆ. ಈ ಬಗ್ಗೆ ಮಾಹಿತಿ ನೀಡಿದ ಆಯುಕ್ತ ಇಕ್ಬಾಲ್‌ ಚಹಲ್‌, ನಾವು ಸ್ಥಳೀಯ ರೈಲುಗಳು, ಈಜುಕೊಳಗಳು ಮತ್ತು ಶಾಲೆಗಳನ್ನು ತೆರೆಯಲು ಯೋಜಿಸಿದ್ದೆವು, ಆದರೆ ಮುಂಬಯಿಯಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಇವುಗಳನ್ನು ಸದ್ಯ ತೆರೆಯದಿರುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ದೀಪಾವಳಿಯ ಅನಂತರ ಸ್ಥಳೀಯ ರೈಲು ಸೇವೆಗಳು ಪ್ರಾರಂಭವಾಗುವ ನಿರೀಕ್ಷೆಯಿತ್ತು. ಆದರೆ ಮಾರುಕಟ್ಟೆಯಲ್ಲಿ ಜನಸಂದಣಿ, ಸಂಬಂಧಿಕರ ಮನೆಗೆ ಭೇಟಿಯಿಂದ ಕೋವಿಡ್ ಮತ್ತೆ ಹೆಚ್ಚಾಗಿದೆ. ಕಳೆದ ಐದು ದಿನಗಳಲ್ಲಿ ಮುಂಬಯಿಯಲ್ಲಿ ರೋಗಿಗಳ ಸಂಖ್ಯೆ ದ್ವಿಗುಣಗೊಂಡಿದೆ. ಆದ್ದರಿಂದ ಮನಪಾ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ. ಮೂರು ನಾಲ್ಕು ವಾರಗಳ ಅನಂತರ ಮುಂಬಯಿಯ ಕೊರೊನಾ ಪರಿಸ್ಥಿತಿಯನ್ನು ಗಮನಿಸಿದ ಅನಂತರವೇ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು.

ಸಾರ್ವಜನಿಕರಿಗೆ ಮುಂಬಯಿ ಲೋಕಲ್‌ ಸೇವೆಯನ್ನು ತೆರೆಯಲು ರಾಜ್ಯ ಸರಕಾರ ಈ ಹಿಂದೆ ರೈಲ್ವೆಗೆ ಪತ್ರ ಬರೆದಿತ್ತು. ದೀಪಾವಳಿಯ ಅನಂತರ ರೈಲಿನಲ್ಲಿ ಪ್ರಯಾಣಿಸಲು ಅವಕಾಶ ದೊರೆಯುವುದು ಎಂದು ಸಾರ್ವಜನಿಕರು ಆಶಿಸಿದರು. ಆದರೆ ಈಗ ಬಿಎಂಸಿ ಆಯುಕ್ತ ಇಕ್ಬಾಲ್‌ ಚಹಲ್‌ ಅವರ ಹೇಳಿಕೆಯ ಅನಂತರ ಮತ್ತೆ ಕಾಯಬೇಕಾಗಿದೆ. ರಾಜ್ಯ ಸರಕಾರದ ಕೋರಿಕೆಯ ಮೇರೆಗೆ ತುರ್ತು ಸೇವೆಗಳಲ್ಲಿ ತೊಡಗಿರುವ ನೌಕರರು, ಬ್ಯಾಂಕ್‌ ನೌಕರರು, ವಕೀಲರು, ಡಬ್ಟಾವಾಲಾಗಳು, ಶಿಕ್ಷಕರು ಮತ್ತು ಮಹಿಳೆಯರಿಗೆ ಮಾತ್ರ ಸ್ಥಳೀಯ ರೈಲಿನಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ಮುಂಬರುವ ದಿನಗಳಲ್ಲಿ ಮುಂಬಯಿಯಲ್ಲಿ ಹೊಸ ನಿಷೇಧ ಹೇರುವುದಿಲ್ಲ ಎಂದು ಆಯುಕ್ತ ಚಹಲ್‌ ಸ್ಪಷ್ಟಪಡಿಸಿದ್ದಾರೆ. ಮುಂಬಯಿ ಅನಾÉಕ್‌ನಲ್ಲಿ ಯಾವುದೇ ಬದಲಾವಣೆ ಅಥವಾ ನಿರ್ಬಂಧವಿಲ್ಲ, ಅದು ಹಾಗೆಯೇ ಉಳಿಯಲಿದೆ. ಮುಂಬಯಿಯಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಬಹಳ ಮಟ್ಟಿಗೆ ನಿಯಂತ್ರಿಸಲಾಗಿದೆ. ಇದರ ದೃಷ್ಟಿಯಿಂದ, ನಾವು ಇಲ್ಲಿ ಈಜುಕೊಳಗಳು, ಶಾಲೆಗಳು ಮತ್ತು ರೈಲುಗಳನ್ನು ತೆರೆಯಲು ಯೋಜಿಸಿದ್ದೆವು, ಆದರೆ ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ದೃಷ್ಟಿಯಿಂದ, ಈ ಎಲ್ಲದರ ಬಗ್ಗೆ ನಾವು ಈಗ ನಿರ್ಧಾರವನ್ನು ಮುಂದೂಡಿದ್ದೇವೆ.

ಕೋವಿಡ್ ಪ್ರಕರಣಗಳು ಹೆಚ್ಚಾದರೆ ಮುಂಬಯಿಯಲ್ಲಿ ಮತ್ತೆ ಲಾಕ್‌ಡೌನ್‌ ಅಥವಾ ರಾತ್ರಿ ಕರ್ಫ್ಯೂ ವಿಧಿಸಬಹುದೆಂಬ ಎಂಬ ಹೇಳಿಕೆಗೆ ಉತ್ತರಿಸಿ ಆಯುಕ್ತ ಚಹಲ್‌ ಅವರು, ಯಾವುದೇ ಕಫ್ಯೂ ವಿಧಿಸುವುದಿಲ್ಲ ಎಂದು ಹೇಳಿದ್ದಾರೆ. ಮಕ್ಕಳಿಗೆ ಅಪಾಯ ಉಂಟಾಗಬಾರದು ಎಂಬ ಕಾರಣಕ್ಕೆ ಡಿ. 31 ರ ವರೆಗೆ ಶಾಲೆಗಳನ್ನು ಮುಚ್ಚುವ ನಿರ್ಧಾರ ತೆಗೆದುಕೊಂಡಿದೆ ಆಯುಕ್ತ ಇಕ್ಬಾಲ್‌ ಚಹಲ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.