ಲಾಕ್‌ಡೌನ್‌ ಕೂಲಿಗಳ ಜೀವನ ದುಸ್ತರ


Team Udayavani, Jun 10, 2020, 8:49 AM IST

ಲಾಕ್‌ಡೌನ್‌ ಕೂಲಿಗಳ ಜೀವನ ದುಸ್ತರ

ಸಾಂದರ್ಭಿಕ ಚಿತ್ರ

ಔರಂಗಾಬಾದ್‌, ಜೂ. 9: ಅತ್ಯಲ್ಪ ಶುಲ್ಕಕ್ಕಾಗಿ ಪ್ರಯಾಣಿಕರ ಭಾರವಾದ ಲಗೇಜುಗಳನ್ನು ಸಾಗಿಸಲು ಯಾವಾಗಲೂ ಸಿದ್ಧರಿರುವ ಕೂಲಿಗಳು ಇದೀಗ ಲಾಕ್‌ ಡೌನ್‌ ಕಾರಣದಿಂದಾಗಿ ಆದಾಯದ ಮೂಲವಿಲ್ಲದೆ ಸಾಲಗಳ ಹೊರೆಯಿಂದ ಬಳಲುತ್ತಿದ್ದು, ಒಂದೊತ್ತಿನ ಊಟಕ್ಕೂ ಹೆಣಗಾಡುತ್ತಿದ್ದಾರೆ.

ಕೆಂಪು ಸಮವಸ್ತ್ರಧಾರಿ ಕೂಲಿಗಳು ರೈಲ್ವೇ ಜೀವನದ ಅವಿಭಾಜ್ಯ ಅಂಗವಾಗಿದ್ದು, ಕೆಲವು ಬಾಲಿವುಡ್‌ ಚಲನಚಿತ್ರಗಳಿಗೂ ಸ್ಫೂರ್ತಿ ನೀಡಿದ್ದಾರೆ. ಆದರೆ ಈಗ ಅವರು ತಮ್ಮ ಬದುಕನ್ನು ಹೇಗೆ ಉಳಿಸಿಕೊಳ್ಳಬೇಕು ಎಂಬ ದೊಡ್ಡ ಸವಾಲನ್ನು ಎದುರಿಸುತ್ತಿದ್ದಾರೆ. ವ್ಯವಹಾರದ ಭರವಸೆಯೊಂದಿಗೆ ನಾನು ಪ್ರತಿದಿನ ನಿರ್ಜನ ಪ್ಲಾಟ್‌ಫಾರ್ಮ್ಗಳು ಮತ್ತು ರೈಲು ಹಳಿಗಳನ್ನು ನೋಡುತ್ತಿದ್ದೇನೆ, ಆದರೆ ಪ್ರತಿ ಬಾರಿಯೂ ಖಾಲಿ ಕೈಯಿಂದ ಮನೆಗೆ ಮರಳುತ್ತಿದ್ದೇನೆ ಎಂದು ಔರಂಗಾಬಾದ್‌ ರೈಲ್ವೇ ನಿಲ್ದಾಣದ ಕೂಲಿ ಯೂಸುಫ್ ಶಾಹ್‌ ತಮ್ಮ ಸಂಕಷ್ಟ ಹೇಳಿಕೊಂಡಿದ್ದಾರೆ. ಆರು ಹೆಣ್ಣು ಮಕ್ಕಳ ದೊಡ್ಡ ಕುಟುಂಬವನ್ನು ನೋಡಿಕೊಳ್ಳುವ ಜವಾಬ್ದಾರಿಯನ್ನು ಹೊಂದಿರುವ ಕೂಲಿ ಯೂಸುಫ‌ ಈಗ ತಮ್ಮ ಜೀವನೋಪಾಯವನ್ನು ಹೇಗೆ ಉಳಿಸಿಕೊಳ್ಳಬೇಕು ಮತ್ತು ಮಾಡಿರುವ ಸಾಲವನ್ನು ಹೇಗೆ ಮರುಪಾವತಿಸಬೇಕು ಎಂಬ ಆತಂಕದಲ್ಲಿದ್ದಾರೆ. ಆರ್ಥಿಕತೆ ಮತ್ತು ಸಾರ್ವಜನಿಕ ಚಟುವಟಿಕೆಗಳ ಹಂತವಾರು ಪುನರಾರಂಭಕ್ಕಾಗಿ ಮಹಾರಾಷ್ಟ್ರ ಸರಕಾರದ “ಮಿಷನ್‌ ಬಿಗಿನ್‌ ಎಗೈನ್‌’ ಘೋಷಣೆಯ ಅನಂತರ ಅವರು ತಮ್ಮ ಗಳಿಕೆಯನ್ನು ಪ್ರಾರಂಭಿಸುವ ನಿರೀಕ್ಷೆಯಲ್ಲಿದ್ದರೂ ಕಳೆದ ಎರಡೂವರೆ ತಿಂಗಳ ಸುದೀರ್ಘ‌ ಲಾಕ್‌ಡೌನ್‌ನ ಕಹಿ-ನೆನಪುಗಳಿಂದ ಹೊರಬರಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಔರಂಗಾಬಾದ್‌ ರೈಲ್ವೇ ನಿಲ್ದಾಣದ 14 ಕೂಲಿಗಳು ಲಾಕ್‌ಡೌನ್‌ಗೆ ಮುಂಚಿತವಾಗಿ ಪ್ರತಿದಿನ 300 ರಿಂದ 400 ರೂ. ಗಳಿಸುತ್ತಿದ್ದರು. ಆದರೆ ರೈಲುಗಳು ಸ್ಥಗಿತಗೊಂಡ ಅನಂತರ, ಈ ಅಲ್ಪ ಆದಾಯವೂ ನಿಂತುಹೋಗಿದೆ ಎಂದು ಶಾಹ್‌ ಪಿಟಿಐಗೆ ತಿಳಿಸಿದ್ದಾರೆ. ಸುಮಾರು ಎರಡು ತಿಂಗಳಿನಿಂದ ನಾನು ಒಂದೇ ಒಂದು ರೂಪಾಯಿ ಆದಾಯ ಗಳಿಸಿಲ್ಲ ಎಂದರು. ಇಲ್ಲಿರುವ ಪ್ರತಿಯೊಬ್ಬ ಕೂಲಿಯ ಕಥೆಯೂ ಇದೇ ಆಗಿದೆ ಎಂದವರು ಹೇಳಿದ್ದಾರೆ. ವಲಸೆ ಕಾರ್ಮಿಕರನ್ನು ಸಾಗಿಸಲು ಕಳೆದ ತಿಂಗಳು ಶ್ರಮಿಕ ವಿಶೇಷ ರೈಲುಗಳ ಘೋಷಣೆಯಾದಾಗ ನಾವು ರೈಲು ಪ್ರಯಾಣಿಕರಿಂದ ಸ್ವಲ್ಪ ಆದಾಯವನ್ನು ನಿರೀಕ್ಷಿಸಿದ್ದೆವು ಆದರೆ ಏನೂ ಆಗಲಿಲ್ಲ. ಪ್ರಯಾಣಿಕರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು ಮತ್ತು ನಮಗೂ ಕೋವಿಡ್ ವೈರಸ್‌ ಸೋಂಕಿಗೆ ತುತ್ತಾಗುವ ಭಯ ಹುಟ್ಟಿಕೊಂಡಿತು ಎಂದವರು ಹೇಳಿದ್ದಾರೆ. ಪ್ರಸ್ತುತ ಔರಂಗಾಬಾದ್‌ನಿಂದ ಕೇವಲ ಒಂದು ರೈಲು ಮಾತ್ರ ಕಾರ್ಯನಿರ್ವಹಿಸುತ್ತಿದೆ ಎಂದು ಶಾಹ್‌ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.