ಲಾಕ್ಡೌನ್ ಉಲ್ಲಂಘನೆ : ಮುಂಬಯಿಯಲ್ಲಿ 5,600 ಜನರ ವಿರುದ್ಧ ಪ್ರಕರಣ ದಾಖಲು
Team Udayavani, Apr 16, 2020, 6:46 PM IST
ಮುಂಬಯಿ, ಎ. 15: ಕೋವಿಡ್ -19 ಲಾಕ್ ಡೌನ್ ಅವಧಿಯಲ್ಲಿ ಮಾ. 20ರಿಂದ ಎ. 14ರವರೆಗೆ ನಿಷೇಧಿತ ಆದೇಶಗಳನ್ನು ಉಲ್ಲಂಘಿಸಿದ ಆರೋಪದಮೇಲೆ ಮುಂಬಯಿ ಪೊಲೀಸರು ಕನಿಷ್ಠ 3,131 ಅಪರಾಧಗಳನ್ನು ದಾಖಲಿಸಿದ್ದು, 5,600 ಜನರ ವಿರುದ್ಧ ಕೇಸು ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ. ಮಾ. 20 ರಿಂದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 188 (ಸಾರ್ವಜನಿಕ ಸೇವಕರ ಆದೇಶಕ್ಕೆ ಅಸಹಕಾರ) ಅಡಿಯಲ್ಲಿ 4,220 ಜನರನ್ನು ಬಂಧಿಸಲಾಗಿದೆ, ಆದರೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.
ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದ ಅನಂತರ 1,130 ಕ್ಕೂ ಹೆಚ್ಚು ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದ್ದು, 259 ಆರೋಪಿಗಳು ಇನ್ನೂ ಜೈಲಿನಲ್ಲಿದ್ದಾರೆ ಎಂದವರು ತಿಳಿಸಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ದಾಖಲಾದ 3,131 ಅಪರಾಧಗಳಲ್ಲಿ 2,271 ಸಾರ್ವಜನಿಕ ಸ್ಥಳಗಳಲ್ಲಿ ಕಾನೂನುಬಾಹಿರ ಸಭೆಗಾಗಿ ನೋಂದಾಯಿಸಲಾಗಿದ್ದು, 10 ಪ್ರಕರಣಗಳು ಕ್ವಾರೆಂಟೈನ್ ಕ್ರಮ ಉಲ್ಲಂಘನೆಗೆಸಂಬಂಧಿಸಿವೆ ಮತ್ತು 629 ಅಪರಾಧಗಳು ವಾಹನಗಳ ಅಕ್ರಮ ಸಂಚಾರಕ್ಕೆ ಸಂಬಂಧಿಸಿವೆ ಎಂದರು.
ಉಳಿದ ಅಪರಾಧಗಳು ಲಾಕ್ ಡೌನ್ ಹೊರತಾಗಿಯೂಅಂಗಡಿಗಳು ಮತ್ತು ಸಂಸ್ಥೆಗಳನ್ನು ತೆರೆದಿರುವುದಕ್ಕೆ ಸಂಬಂಧಿಸಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.ಮುಂಬಯಿಯ ಪೂರ್ವ ಉಪನಗರಗಳಲ್ಲಿ 801ಅಪರಾಧಗಳೊಂದಿಗೆ ಅತಿ ಹೆಚ್ಚು ಪ್ರಕರಣಗಳುದಾಖಲಾಗಿವೆ, ಉತ್ತರ ಮುಂಬಯಿಯಲ್ಲಿ 790 ಅಪರಾಧಗಳಿವೆ ಎಂದು ಅಧಿಕಾರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Kannada Cinema; ಹೊಸ ಚಿತ್ರದಲ್ಲಿ ಖಡಕ್ ಪೊಲೀಸ್ ಆದ ನೆನಪಿರಲಿ ಪ್ರೇಮ್
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ