ಎಂ. ವೈ. ಪುತ್ರನ್‌ ಅವರ ಪ್ರಾಮಾಣಿಕ ಸೇವೆ ಮಾದರಿ: ಕೃಷ್ಣ ಕುಮಾರ್‌ ಬಂಗೇರ

ಮೊಗವೀರ ವ್ಯವಸ್ಥಾಪಕ ಮಂಡಳಿಯಿಂದ ಮಾಜಿ ಟ್ರಸ್ಟಿ ಎಂ. ವೈ. ಪುತ್ರನ್‌ರಿಗೆ ಸಂತಾಪ ಸಭೆ

Team Udayavani, Sep 8, 2021, 2:45 PM IST

ಎಂ. ವೈ. ಪುತ್ರನ್‌ ಅವರ ಪ್ರಾಮಾಣಿಕ ಸೇವೆ ಮಾದರಿ: ಕೃಷ್ಣ ಕುಮಾರ್‌ ಬಂಗೇರ

ಮುಂಬಯಿ: ಮೊಗವೀರ ವ್ಯವಸ್ಥಾಪಕ ಮಂಡಳಿಯ ಮಾಜಿ ಟ್ರಸ್ಟಿ ಎಂ. ವೈ. ಪುತ್ರನ್‌ ಅವರ ಸಂತಾಪ ಸೂಚಕ ಸಭೆ ಸೆ. 1ರಂದು ಅಂಧೇರಿಯ ಮೊಗವೀರ ಭವನದಲ್ಲಿ ಸಂಜೆ 6ರಿಂದ ನಡೆಯಿತು. ಮೊಗವೀರ ವ್ಯವಸ್ಥಾಪಕ ಮಂಡಳಿ, ದೊಡ್ಡಕೊಪ್ಪಲ ಮೊಗವೀರ ಸಭಾ ಮತ್ತು ಮೊಗವೀರ ರಾತ್ರಿ ಶಾಲಾ ಹಳೆ ವಿದ್ಯಾರ್ಥಿ ಸಂಘ ಸಂಯುಕ್ತವಾಗಿ ಆಯೋಜಿಸಿದ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಡಳಿಯ ಅಧ್ಯಕ್ಷ ಕೃಷ್ಣ ಕುಮಾರ್‌ ಎಲ್‌. ಬಂಗೇರ ಅವರು ವಹಿಸಿದ್ದರು.

ಆ. 21ರಂದು ನಿಧನ ಹೊಂದಿದ ಎಂ. ವೈ. ಪುತ್ರನ್‌ ಮೊಗವೀರ ರಾತ್ರಿ ಶಾಲೆಯ ವಿದ್ಯಾರ್ಥಿಗಳ ಕ್ರೀಡೆ, ಪ್ರತಿಭಾ ಸ್ಪರ್ಧೆ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಯಶಸ್ಸಿಗೆ ಸಲ್ಲಿಸಿದ ಅಮೋಘ ಸೇವೆಯನ್ನು ಹಳೆ ವಿದ್ಯಾರ್ಥಿ ಹಾಗೂ ದೊಡ್ಡ ಕೊಪ್ಪಲ ಮೊಗವೀರ ಸಭಾದ ಹಿರಿಯ ಕಾರ್ಯಕರ್ತ ಅರವಿಂದ್‌ ಕಾಂಚನ್‌ ಸಭೆಗೆ ತಿಳಿಸಿದರು. ಪುತ್ರನ್‌ ಅವರ ಶಿಸ್ತುಬದ್ಧವಾಗಿ ಶಾಲಾಡಳಿತ ನಿರ್ವಹಿಸುತ್ತಿದ್ದ ರೀತಿ ಆದರ್ಶವಾದುದು ಎಂದು ಹೇಳಿ ಶ್ರದ್ಧಾಂಜಲಿ ಅರ್ಪಿಸಿದರು.

ಮೊಗವೀರ ರಾತ್ರಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ಪರವಾಗಿ ಹಳೆ ವಿದ್ಯಾರ್ಥಿ, ಉದ್ಯಮಿ ಶ್ರೀನಿವಾಸ್‌ ಕಾಂಚನ್‌ ಅವರು, ಎಂ. ವೈ. ಪುತ್ರನ್‌ ಫುಟ್ಬಾಲ್‌ ಕ್ರೀಡಾ ಸ್ಪರ್ಧೆಗಾಗಿ ರಾತ್ರಿ ಶಾಲೆಯ ವಿದ್ಯಾರ್ಥಿಗಳಿಗೆ ಕಠಿನ ತರಬೇತಿ ನೀಡಿ ಶಾಲಾ ತಂಡವು ಜಯಶಾಲಿಯಾಗುವಂತೆ ಪ್ರತೀ ವರ್ಷ ಮಾಡುತ್ತಿದ್ದ ಪರಿಶ್ರಮ, ತ್ಯಾಗ ಮರೆಯುವಂತಿಲ್ಲ. ಅವರಿಂದಾಗಿ ಅನೇಕ ಯುವಕರಿಗೆ ಬ್ಯಾಂಕ್‌, ಇನ್ಶೂರೆನ್ಸ್‌ ಕಂಪೆನಿ, ಟಾಟಾ, ಬಿರ್ಲಾ ಹಾಗೂ ಇನ್ನಿತರ ಬೃಹತ್‌ ಸಂಸ್ಥೆಗಳಲ್ಲಿ ಹುದ್ದೆ ಪಡೆಯುವ ಅವಕಾಶ ದೊರೆತಿದೆ. ಪುತ್ರನ್‌ ಅವರ ಅಮೂಲ್ಯ ಸೇವೆ ಸದಾ ಸ್ಮರಣೀಯ ಎಂದು ನುಡಿನಮನ ಸಲ್ಲಿಸಿದರು.

ಇದನ್ನೂ ಓದಿ:ರ್‍ಯಾಂಬೊ ಗೆಲುವಿಗೆ ಕಾರಣಕರ್ತರ ಸ್ಮರಿಸಿದ ಶರಣ್‌

ಮಂಡಳಿಯ ಟ್ರಸ್ಟಿ ಅಜಿತ್‌ ಸುವರ್ಣ ಅವರು ಎಂ. ವೈ ಪುತ್ರನ್‌ ಅವರ ಸ್ನೇಹಮಯ ನಡವಳಿಕೆ, ನಿಷ್ಪಕ್ಷ ಧೋರಣೆ ಯುವಕರನ್ನು ಹುರಿದುಂಬಿಸುವ ರೀತಿ ಅನನ್ಯ ವಾದುದು ಎಂದು ಹೇಳಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದರು.

ಮಂಡಳಿಯ ಹಿರಿಯ ಕಾರ್ಯಕರ್ತ ಬಿ. ಕೆ. ಪ್ರಕಾಶ್‌ ಅವರು, ಎಂ. ವೈ. ಅವರ ನಿಷ್ಕಲ್ಮಶ ವ್ಯಕ್ತಿತ್ವ, ಹಾಸ್ಯ ಪ್ರವೃತ್ತಿ ಎಲ್ಲರೂ ಮೆಚ್ಚುವಂತಹದು. ರಾತ್ರಿ ಶಾಲೆಗೆ ಅವರು ಸಲ್ಲಿಸಿದ ನಿಸ್ವಾರ್ಥ ಸೇವೆಯನ್ನು ಮಂಡಳಿಯ ಹಿರಿಯರು ಸದಾ ಶ್ಲಾಘನೆ ಮಾಡುತ್ತಿದ್ದರು ಎಂದು ಹೇಳಿ ಪುಷ್ಪಾಂಜಲಿ ಅರ್ಪಿಸಿದರು.

ಅಧ್ಯಕ್ಷ ಕೆ ಎಲ್‌. ಬಂಗೇರ ಅವರು, ಮಂಡಳಿಯ ಪರಂಪರೆ, ಧೋರಣೆಗಳಿಗೆ ಬದ್ಧವಾಗಿ ಪ್ರಾಮಾಣಿಕ ಸೇವೆಯ ಎಂ. ವೈ. ಪುತ್ರನ್‌ ಅವರು ಸದಾ ವಂದನೀಯರು ಎಂದು ಹೇಳಿ ಸಂತಾಪ ಠರಾವು ಮಂಡಿಸಿ, ಎರಡು ನಿಮಿಷಗಳ ಮೌನ ಪ್ರಾರ್ಥನೆಗೆ ಸಭೆಯನ್ನು ವಿನಂತಿಸಿದರು.

ಸಭೆಯಲ್ಲಿ ಉದ್ಯಮಿಗಳಾದ ವೇದ್‌ ಪ್ರಕಾಶ್‌ ಶ್ರೀಯಾನ್‌ ಮತ್ತು ಸುರೇಶ್‌ ಕಾಂಚನ್‌, ಮಂಡಳಿಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್‌ ಸಾಲ್ಯಾನ್‌, ಟ್ರಸ್ಟಿಗಳಾದ ವಿಕಾಸ್‌ ಪುತ್ರನ್‌, ದಯಾನಂದ್‌ ಬಂಗೇರ, ಹರೀಶ್‌ ಪುತ್ರನ್‌, ಲಕ್ಷ್ಮಣ್‌ ಶ್ರೀಯಾನ್‌, ಮಂಡಳಿಯ ಸಮಿತಿ ಸದಸ್ಯರು, ಎಂ. ವೈ. ಪುತ್ರನ್‌ ಅವರ ಮಕ್ಕಳು, ಸಂಬಂಧಿಕರು ಅಭಿಮಾನಿಗಳು ಉಪಸ್ಥಿತರಿದ್ದರು.

ಮೊಗವೀರ ಮಾಸಿಕದ ಸಂಪಾದಕ ಅಶೋಕ್‌ ಸುವರ್ಣ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.