ಶ್ರೀ ಆದಿಶಕ್ತಿ ಕನ್ನಡ ಶಾಲೆಯಲ್ಲಿ ಮಹಾರಾಷ್ಟ್ರ ದಿನಾಚರಣೆ
Team Udayavani, May 7, 2019, 12:46 PM IST
ಥಾಣೆ:ಶ್ರೀ ಆದಿಶಕ್ತಿ ಕನ್ನಡ ಸಂಘ ಸಂಚಾಲಿತ ಶ್ರೀ ಆದಿಶಕ್ತಿ ಕನ್ನಡ ಶಾಲೆಯಲ್ಲಿ ಮಹಾರಾಷ್ಟ್ರ ದಿನಾಚರಣೆಯು ಮೇ 1ರಂದು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಶಾಲಾ ಸಭಾಂಗಣದಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಆದಿಶಕ್ತಿ ಕನ್ನಡ ಸಂಘ ಮತ್ತು ರಾತ್ರಿ ಶಾಲೆಗಳ ಅಧ್ಯಕ್ಷರಾದ ಭಾಸ್ಕರ್ ಎಂ. ಶೆಟ್ಟಿ ಅವರು ಮಾತನಾಡಿ, ಮಹಾರಾಷ್ಟÅದ ಏಳ್ಗೆಗಾಗಿ ಹುತಾತ್ಮರಾದ ಛತ್ರಪತಿ ಶಿವಾಜಿ ಮಹಾರಾಜ್, ಗೋಪಾಲ್ಕೃಷ್ಣ ಗೋಖಲೆ ಹಾಗೂ ಲೋಕಮಾನ್ಯ ತಿಲಕರಂತಹ ಮಹಾನೀಯ ರನ್ನು ಸ್ಮರಿಸಿದರು. ಈ ನಾಡು ನುಡಿಯ ಕುರಿತು ವಿದ್ಯಾರ್ಥಿಗಳಿಗೆ ಬಾಲ್ಯದಲ್ಲಿಯೇ ಅಭಿಮಾನವನ್ನು ಬೆಳೆಸಬೇಕು. ನಮ್ಮೆಲ್ಲರ ಕರ್ಮ ಭೂಮಿಯಾದ ಮಹಾರಾಷ್ಟ್ರವನ್ನು ನಾವು ಎಂದೂ ಮರೆಯಬಾರದು. ಈ ಮಣ್ಣಿನ ಋಣವನ್ನು ತೀರಿಸಲು ನಾವು ಯಾವಾಗಲೂ ಸಿದ್ಧರಾಗಿರಬೇಕು. ಮಹಾರಾಷ್ಟ್ರ ದಿನ ಮತ್ತು ಕಾರ್ಮಿಕ ದಿನದ ಮಹತ್ವವನ್ನು ಹೇಳಿ ಮಹಾ ರಾಷ್ಟ್ರ ದಿನದ ಬಗ್ಗೆ ಎಲ್ಲರಿಗೂ ಶುಭ ಹಾರೈಸಿದರು.
ವೇದಿಕೆಯಲ್ಲಿ ಸಂಘದ ಕಾರ್ಯದರ್ಶಿ ವಾದಿರಾಜ ಶೆಟ್ಟಿ, ಕೋಶಾಧಿಕಾರಿ ಮನೋಹರ ಅಂಚನ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಪುಷ್ಪಾ ಕುಂಬಳೆ ಮೊದಲಾದವರು ಉಪಸ್ಥಿತರಿದ್ದರು. ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವು ಚಾಲನೆಗೊಂಡಿತು. ಮಾಧ್ಯಮಿಕ ವಿಭಾಗದ ಮುಖ್ಯ ಶಿಕ್ಷಕಿ ವಿಮಲಾ ಕರ್ಕೇರ ಸ್ವಾಗತಿಸಿದರು.
ಮಹಾರಾಷ್ಟ್ರ ದಿನ ಮತ್ತು ಕಾರ್ಮಿಕರ ದಿನಾಚರಣೆಯ ಕುರಿತು
ಶಾಲಾ ವಿದ್ಯಾರ್ಥಿಗಳಾದ ರಾಜು ಬಜಂತ್ರಿ ಮತ್ತು ರಾಹುಲ್ ರಾಠೊಡ್ ಮಾತನಾಡಿದರು. ಶಿಲ್ಪಾ ಹತ್ತರಕಿ ಹಾಗೂ ರಾಹುಲ್ ರಾಠೊಡ್ ಮಹಾರಾಷ್ಟ್ರ ಗೀತೆಯನ್ನು ಹಾಡಿದರು. ಮಾಧ್ಯಮಿಕ ವಿಭಾಗದ ಶಾಲಾ ಶಿಕ್ಷಕ ವೆಂಕಟರಮಣ ಶೆಣೈ ಅವರು ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕ ಸಂತೋಷ್ ದೊಡ್ಡಮನಿ ಅವರು ವಂದಿಸಿದರು. ವಿದ್ಯಾರ್ಥಿ ಗಳಿಗೆ ಸಿಹಿ-ತಿಂಡಿಯನ್ನು ವಿತರಿಸಲಾಯಿತು. ಶ್ರೀ ಆದಿಶಕ್ತಿ ಕನ್ನಡ ಸಂಘದ ಪದಾಧಿಕಾರಿಗಳು, ಸದಸ್ಯರು ವಿದ್ಯಾರ್ಥಿಗಳಿಗೆ ಪಾಲಕ- ಪೋಷಕರು, ಶಿಕ್ಷಕವೃಂದದವರು, ಶಿಕ್ಷಕೇತರ ಸಿಬಂದಿ ಅಧಿಕ ಸಂಖ್ಯೆ ಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ