ಲೋಕಕಲ್ಯಾಣಾರ್ಥ ಶತಚಂಡಿಕಾಯಾಗ ಆಯೋಜನೆ: ಪ್ರದೀಪ್ ಸಿ. ಶೆಟ್ಟಿ
ಬೊರಿವಲಿ ಜೈರಾಜ್ ನಗರದ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಶತಚಂಡಿಕಾಯಾಗ
Team Udayavani, Sep 24, 2021, 1:42 PM IST
ಬೊರಿವಲಿ: ಬೊರಿವಲಿ ಪಶ್ಚಿಮದ ಜಯರಾಜ್ ನಗರದ ಪುಣ್ಯಕ್ಷೇತ್ರ ಮಹಿಷಮರ್ದಿನಿ ದೇವಸ್ಥಾನದಲ್ಲಿ ಆಡಳಿತ ಮಂಡಳಿ ವತಿಯಿಂದ ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಯವರ ನೇತೃತ್ವದಲ್ಲಿ ಸಕಲ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶತ ಚಂಡಿಕಾಯಾಗವು ಸೋಮವಾರ ಜರಗಿತು.
ಆಡಳಿತ ಮೊಕ್ತೇಸರ ಕಣಂಜಾರು ಕೊಳಕೆಬೈಲು ಪ್ರದೀಪ್ ಸಿ. ಶೆಟ್ಟಿ ಮಾತನಾಡಿ, ಸುವಾಸಿನಿ ಪೂಜೆ, ದಂಪತಿ ಪೂಜೆ, ಬ್ರಾಹ್ಮಣರಿಗೆ ಅನ್ನಸಂತರ್ಪಣೆ ಹಾಗೂ ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ಶತಚಂಡಿಕಾಯಾ ಗದ ವಿಶೇಷತೆಯಾಗಿದ್ದು, ಪ್ರಕೃತಿಯನ್ನು ಶುದ್ಧೀ ಕರಿಸುವ ಈ ಶತಚಂಡಿಕಾಯಾಗವು ಕ್ರಿಮಿ ಕೀಟಗಳನ್ನು ದೂರ ಮಾಡುವ ದೈವೀ ಸ್ವರೂಪ ಹೊಂದಿದೆ. ಕಳೆದ ಒಂದೂವರೆ ವರ್ಷದಿಂದ ದೇಶಾದ್ಯಂತ ಕೊರೊನಾ ಸಾಂಕ್ರಾಮಿಕದಿಂದ ಜನರು ಕಂಗೆಟ್ಟಿದ್ದು, ಅಪಾರ ಸಾವು-ನೋವು ಸಂಭವಿಸಿದೆ. ಜತೆಗೆ ಹಲವಾರು ಮಂದಿ ಉದ್ಯೋಗ-ವ್ಯವಹಾರ ಕಳೆದುಕೊಂಡಿದ್ದು, ಹಲವೆಡೆ ಆಮೆಗತಿಯಲ್ಲಿ ಸಾಗುತ್ತಿದೆ.
ಈ ನಿಟ್ಟಿನಲ್ಲಿ ಲೋಕಕಲ್ಯಾಣಾರ್ಥಕವಾಗಿ ಈ ಚಂಡಿಕಾ ಯಾಗವನ್ನು ಆಯೋಜಿಸಲಾಗಿದೆ. ದೇವಸ್ಥಾನದ ಆಡಳಿತ ಮಂಡಳಿ ಕಳೆದ ಒಂದೂವರೆ ವರ್ಷಗಳ ಹಿಂದೆ ಹರಕೆಯ ರೂಪದಲ್ಲಿ ಸಲ್ಲಿಸಲಾದ ಈ ಶತಚಂಡಿಕಾಯಾ ಗದ ಸಂಕಲ್ಪವು ಇಂದು ನೆರವೇರಿತು. ಕೋವಿಡ್ ಸಾಂಕ್ರಾಮಿಕ ದಿಂದ ಜನರು ಹಲವಾರು ರೀತಿಯ ತೊಂದರೆ ಅನುಭವಿಸಿದ್ದು, ಲಸಿಕೆ ಪಡೆದ ಎಲ್ಲ ಜನರಿಗೆ ಯಾವುದೇ ತೊಂದರೆಯಾಗದಂತೆ ಮತ್ತು ಎಲ್ಲರೂ ಯಥಾಸ್ಥಿತಿಯಲ್ಲಿ ಕಾರ್ಯ ನಿರ್ವಹಿಸುವಂತೆ ದೇವಿ ಮಹಿಷಮರ್ದಿ ನಿಯಲ್ಲಿ ಪ್ರಾರ್ಥಿಸಿ ದೃಢ ಸಂಕಲ್ಪದೊಂದಿಗೆ ಈ ಮಹಾ ಶತಚಂಡಿಕಾಯಾಗ ಆಯೋಜಿಸಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ:ತಂದೆಯಾದ ಖುಷಿಯಲ್ಲಿ ನಿಖಿಲ್| ಹೆಚ್ಡಿಕೆ ಮನೆಗೆ ಹೊಸ ಅತಿಥಿ ಆಗಮನ
ಮಂದಿರದ ಸ್ಥಾಪಕ ವಂಶಸ್ಥ ಮೋಕ್ತೇಸರ ಕಲ್ಲಮುಂಡ್ಕೂರು ಹರಿಯಾಲ ಗುತ್ತು ಜಯರಾಜ ಶ್ರೀಧರ ಶೆಟ್ಟಿ ದಂಪತಿ, ಶಾಲಿನಿ ಪ್ರದೀಪ್ ಶೆಟ್ಟಿ, ಮೋಕ್ತೇಸರರಾದ ಜಯಪಾಲಿ ಅಶೋಕ್ ಶೆಟ್ಟಿ ಹಾಗೂ ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ, ಪ್ರಸ್ತುತ ಸಮಿತಿ ಜತೆ ಕೋಶಾಧಿಕಾರಿ ಮುಂಡಪ್ಪ ಎಸ್. ಪಯ್ಯಡೆ, ಸಮಾಜ ಸೇವಕ ಡಾ| ವಿರಾರ್ ಶಂಕರ್ ಶೆಟ್ಟಿ , ಬಾಲಕೃಷ್ಣ ರೈ, ಬಂಟರ ಸಂಘ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯ ಸಂಚಾಲಕ ವಿಜಯ್ ಆರ್. ಭಂಡಾರಿ, ಕಾರ್ಯಾಧ್ಯಕ್ಷ ನಿಟ್ಟೆ ಎಂ. ಜಿ. ಶೆಟ್ಟಿ , ಉಪಕಾರ್ಯಾಧ್ಯಕ್ಷ ಕೊಂಡಾಡಿ ಪ್ರೇಮ್ನಾಥ್ ಶೆಟ್ಟಿ, ನಿಕಟಪೂರ್ವ ಕಾರ್ಯಾಧ್ಯಕ್ಷ ರವೀಂದ್ರ ಎಸ್. ಶೆಟ್ಟಿ, ಜಗದೀಶ್ ಶೆಟ್ಟಿ, ಸುರೇಶ್ ಚೌಟ, ರವಿ ಶೆಟ್ಟಿ ವೆಜ್ ಸ್ಟ್ರೀಟ್, ಮಾಜಿ ನಗರ ಸೇವಕ ಶಿವಾನಂದ ಶೆಟ್ಟಿ , ದಿವಾಕರ್ ಮಾತ್ರೆ ಮತ್ತಿತರ ಗಣ್ಯರು ಹಾಗೂ ಪರಿಸರದ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಭಕ್ತರು ಉಪಸ್ಥಿತರಿದ್ದರು.
ದೇವಸ್ಥಾನದ ಅರ್ಚಕ ವೃಂದ ಹಾಗೂ ಬಿ. ವೆಂಕಟರಮಣ ತಂತ್ರಿ, ಮಹಿಷಮರ್ದಿನಿ ಆಡಳಿತ ಮಂಡಳಿ ಸದಸ್ಯರು ಮತ್ತು ಮಹಿಷಮರ್ದಿನಿ ಭಜನ ಮಂಡಳಿಯ ಸದಸ್ಯರು ಉಪಸ್ಥಿತಿಯಲ್ಲಿ ಕಾರ್ಯಕ್ರಮವು ಸರಕಾರದ ಕೋವಿಡ್ ನಿಯಮದ ಕಟ್ಟುನಿಟ್ಟಿನ ಪಾಲನೆಯೊಂದಿಗೆ ಜರಗಿತು. ಕಾರ್ಯಯಕ್ರಮದಲ್ಲಿ ಭಕ್ತರಿಗೆ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು.
ಚಿತ್ರ-ವರದಿ: ರಮೇಶ್ ಉದ್ಯಾವರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ
Neha ಹತ್ಯೆ ಪ್ರಕರಣ; ಎನ್ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್ಪಿ ಆಗ್ರಹ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?