ಮಲಾಡ್ ಇರಾನಿ ಕಾಲನಿ: ಶನಿಜಯಂತಿ ಆಚರಣೆ
Team Udayavani, Jun 6, 2019, 4:56 PM IST
ಮುಂಬಯಿ: ಮಲಾಡ್ ಪೂರ್ವದ ಇರಾನಿ ಕಾಲನಿಯ ಶ್ರೀ ಶನಿಮಹಾತ್ಮ ಪೂಜಾ ಸಮಿತಿಯ ವತಿಯಿಂದ ಶ್ರೀ ಶನಿಜಯಂತಿ ಆಚರಣೆಯು ಜೂ. 3 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.
ವೇದಮೂರ್ತಿ ಕೆ. ಗೋವಿಂದ ಮೂರ್ತಿ ಭಟ್ ಇವರ ಮಾರ್ಗದರ್ಶನದಲ್ಲಿ ಧಾರ್ಮಿಕ ಕಾರ್ಯಕ್ರಮ ವಾಗಿ ಬೆಳಗ್ಗೆ 7ರಿಂದ ಗಣಹೋಮ, ಪಂಚಾಮೃತ ಅಭಿಷೇಕ, ನವಕ ಕಲಶ ಅಭಿಷೇಕ ಜರಗಿತು. ಬಳಿಕ ಸಾಮೂಹಿಕ ಶನಿಶಾಂತಿ ಹೋಮ ನೆರವೇರಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಮಸ್ತ ಭಕ್ತಾದಿಗಳು ಹೋಮಕುಂಡಕ್ಕೆ ತಿಲ, ಎಳ್ಳೆಣ್ಣೆ ಸುರಿಯುವ ಮೂಲಕ ಶನಿಜಯಂತಿಯನ್ನು ಆಚರಿಸಿದರು.
ಮಧ್ಯಾಹ್ನ 12ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸಂಜೆ 4ರಿಂದ ಕಲಶ ಮುಹೂರ್ತ, ಶನಿ ಗ್ರಂಥ ಪಾರಾಯಣ, ಸಮಿತಿಯ ಸದಸ್ಯರಿಂದ ಭಜನೆ ಹಾಗೂ ರಾತ್ರಿ 8.30ರಿಂದ ಮಂಗಳಾರತಿ, ಪ್ರಸಾದ ವಿತರಣೆಯನ್ನು ಆಯೋಜಿಸಲಾಗಿತ್ತು. ಸುಮಾರು 63 ವರ್ಷಗಳ ಹಿಂದೆ ಸಮಾನ ಮನಸ್ಕ ಆಧ್ಯಾತ್ಮಿಕ ಚಿಂತಕರಿಂದ ಭಜನೆಯ ಮೂಲಕ ಪ್ರಾರಂಭಗೊಂಡ ಮಲಾಡ್ ಪೂರ್ವದ ಇರಾನಿ ಕಾಲನಿಯಲ್ಲಿ ಸ್ಥಾಪನೆಗೊಂಡ ಪೂಜಾ ಸಮಿತಿಯು ಇದೀಗ ನಗರದಲ್ಲಿ ಆರಾಧನಾ ಮಂದಿರವಾಗಿ ಪ್ರಸಿದ್ಧಿ ಪಡೆದಿದೆ.
1963ರಲ್ಲಿ ಪೂಜಾ ಕೊಠಡಿಯನ್ನು ಖರೀದಿಸಿ ಅಲ್ಲಿಂದ ನಿರಂತರವಾಗಿ ಪೂಜಾ ವಿಧಿ-ವಿಧಾನಗಳನ್ನು ನೆರವೇರಿಸುತ್ತಾ ಬಂದಿದ್ದು, ದಿನೇ ದಿನೇ ಭಕ್ತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ 1965 ರಲ್ಲಿ ಶ್ರೀ ಶನಿದೇವರ ರಜತ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.
2005ರಲ್ಲಿ ಸುವರ್ಣ ಮಹೋತ್ಸವವನ್ನು ಆಚರಿಸಿದ ಸಮಿತಿಯು ಬ್ರಹ್ಮಕಲಶೋತ್ಸವವು ವಿಜೃಂಭಣೆಯಿಂದ ನೆರವೇರಿ
ಸಿತು. ಜತೆಗೆ ಸಾಮಾಜಿಕ, ವೈದ್ಯಕೀಯ, ಶೈಕ್ಷಣಿಕ ಸಹಾಯ, ಪ್ರತಿಭಾ ಪುರಸ್ಕಾರಗಳನ್ನು ನೀಡಿ ವಿದ್ಯಾರ್ಥಿಗಳಿಗೆ ಸಹಕರಿಸುತ್ತಿದೆ. ವಾರ್ಷಿಕ ಹಬ್ಬ ಹರಿದಿನಗಳನ್ನು ಆಚರಿಸುವುದರ ಜತೆಗೆ ರಾಷ್ಟ್ರೀಯ ಹಬ್ಬಗಳನ್ನು ಆಚರಿಸುವುದು ಈ ಸಮಿತಿಯ ವಾಡಿಕೆ. ಸಾಂಸ್ಕೃತಿಕವಾಗಿ ಕರಾವಳಿಯ ಸಮಗ್ರ ಕಲೆ ಯಕ್ಷಗಾನಕ್ಕೆ ಸದಾ ಪ್ರೋತ್ಸಾಹ ನೀಡುತ್ತಾ, ಸಮಾಜಪರ ಕಾರ್ಯಕ್ರಮಗಳೊಂದಿಗೆ ಎಲ್ಲರ ಪ್ರಶಂಸೆಗೆ ಪಾತ್ರವಾಗಿದೆ.
ಭವಿಷ್ಯದಲ್ಲಿ ಜೀರ್ಣೋದ್ಧಾರದ ಆಶಯವನ್ನು ಸಮಿತಿಯು ಹೊಂದಿದ್ದು, ಇಂದಿನ ಧಾರ್ಮಿಕ ಕಾರ್ಯಕ್ರಮವನ್ನು ಯಶಸ್ವಿಯಾಗಿ ಮುನ್ನಡೆಸುವಲ್ಲಿ ಸಮಿತಿಯ ಅಧ್ಯಕ್ಷ ಬಿ. ದಿವಾಕರ ಡಿ. ಶೆಟ್ಟಿ, ಕಾರ್ಯದರ್ಶಿ
ಗಳಾದ ಎಚ್. ಎಸ್. ಕರ್ಕೇರ, ಎಂ. ಎನ್. ಸುವರ್ಣ, ಗೌರವ ಕೋಶಾಧಿಕಾರಿಗಳಾದ ಎಂ. ಜಿ. ಬಂಗೇರ, ಕೆ. ಎನ್. ಸಾಲ್ಯಾನ್, ಸಮಿತಿಯ ಸದಸ್ಯ
ರಾದ ಎಸ್. ಪಿ. ದೇವಾಡಿಗ, ಎಸ್. ಯು. ಬಂಗೇರ, ಕೆ. ಎನ್. ಸಾಲ್ಯಾನ್, ಎಸ್. ಎ. ಸಾಲ್ಯಾನ್, ಎಂ. ಎನ್.
ಕೋಟ್ಯಾನ್, ಪಿ. ಆರ್. ಸಾಲ್ಯಾನ್, ಬಿ. ಎಚ್. ಹೆಜ್ಮಾಡಿ, ಜಯಾ ಎಂ. ಬಂಗೇರ, ಅತುಲ್ ಓಜಾ, ಅರ್ಚಕರಾದ ಸುಧಾಕರ ಎಂ. ಶೆಟ್ಟಿ, ಭುವಾಜಿ ಯು. ಎಸ್. ಬಂಗೇರ ಅವರು ಸಹಕರಿಸಿದರು.
ಚಿತ್ರ-ವರದಿ: ರಮೇಶ್ ಉದ್ಯಾವರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ