ಮಾತೃಭೂಮಿ ಕ್ರೆಡಿಟ್ ಸೊಸೈಟಿ ವಾರ್ಷಿಕ ಮಹಾ ಸಭೆ
Team Udayavani, Aug 9, 2017, 2:29 PM IST
ಮುಂಬಯಿ: ಬಂಟರ ಸಂಘ ಮುಂಬಯಿ ಸಂಚಾಲಕತ್ವದ ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಲಿಮಿಟೆಡ್ ಇದರ 20ನೇ ವಾರ್ಷಿಕ ಮಹಾಸಭೆಯು ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಜರಗಿತು.
ಇದೇ ಸಂದರ್ಭದಲ್ಲಿ ಮಾತೃ ಭೂಮಿ ಸೊಸೈಟಿಯ ರತ್ನಗಿರಿ ಬ್ಯಾಂಕ್ ಜೊತೆ ವಿಲೀನಗೊಳಿಸುವಲ್ಲಿ ಮಹತ್ತರ ಪಾತ್ರ ವಹಿಸಿದ ಬಂಟ್ಸ್ ಸಂಘ ಮುಂಬಯಿ ಇದರ ಜತೆ ಕಾರ್ಯದರ್ಶಿ ಕಿಶೋರ್ ಕುಮಾರ್ ಶೆಟ್ಟಿ ಕುತ್ಯಾರ್, ಉದ್ಯಮಿ ಜಗದೀಶ್ ಶೆಟ್ಟಿ ಮುಲುಂಡ್ ಇವರಿಗೆ ಹಾಗೂ ಹಿರಿಯ ಧುರೀಣರು, ವಿವಿಧ ಬಂಟರ ಸಂಸ್ಥೆಗಳ ಮುಖ್ಯಸ್ಥರನ್ನು ಕಾರ್ಯಾಧ್ಯಕ್ಷ ಸಿಎ ಶಂಕರ ಬಿ. ಶೆಟ್ಟಿ ಪುಷ್ಪಗುತ್ಛವನ್ನಿತ್ತು ಗೌರವಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ರತ್ನಗಿರಿ ಬ್ಯಾಂಕ್ ಕಾರ್ಯಾಧ್ಯಕ್ಷ ಸುಜೀತ್ ಝಿಮನ್, ಮಾತೃಭೂಮಿ ಕ್ರೆಡಿಟ್ ಸೊಸೈಟಿ ಉಪ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್ದಾಸ್ ಶೆಟ್ಟಿ, ಗೌರವ ಕಾರ್ಯದರ್ಶಿ ಸಿಎ ರಮೇಶ್ ಎ. ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್ ಬಿ. ಶೆಟ್ಟಿ, ನಿರ್ದೇಶಕರಾದ ಶಿವರಾಮ ಜಿ. ಶೆಟ್ಟಿ, ಉಮಾ ಕೆ. ಶೆಟ್ಟಿ, ಕರ್ನಿರೆ ವಿಶ್ವನಾಥ ಶೆಟ್ಟಿ, ರತ್ನಾಕರ ಶೆಟ್ಟಿ ಮುಂಡ್ಕೂರು, ಸುಜಾತಾ ಜಿ. ಶೆಟ್ಟಿ, ಸಂತೋಷ ಎಂ. ಜಾವಂದಲೆ, ಬಾಂಬೇ ಬಂಟ್ಸ್ ಅಸೋಸಿಯೇಶನ್ನ ಅಧ್ಯಕ್ಷ ಉಪ್ಪೂರು ಶೇಖರ್ ಶೆಟ್ಟಿ, ಸೊಸೈಟಿಯ ಹಿರಿಯ ವ್ಯವಸ್ಥಾಪಕಿ ಮಲ್ಲಿಕಾ ಪಿ. ಶೆಟ್ಟಿ, ಹಣಕಾಸು ಪ್ರಬಂಧಕಿ ಶಶಿಕಲಾ ಎಸ್. ಶೆಟ್ಟಿ, ಪ್ರಬಂಧಕರಾದ ಕಿಶೋರ್ ಎಂ. ಪಾಟೀಲ್, ಶಂಕರ್ ಬಿ. ಶೆಟ್ಟಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಚಿತ್ರ-ವರದಿ: ರೋನ್ಸ್ ಬಂಟ್ವಾಳ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು